AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Ukraine And Russia War: ಉಕ್ರೇನ್ ಮೇಲೆ ಒಂದೇ ದಿನ 70ಕ್ಕೂ ಹೆಚ್ಚು ಕ್ಷಿಪಣಿ ದಾಳಿ ನಡೆಸಿದ ರಷ್ಯಾ

ಯುದ್ಧದ ಆರಂಭದ ನಂತರ ಉಕ್ರೇನ್‌ನ ಮೇಲೆ ತನ್ನ ಅತಿದೊಡ್ಡ ದಾಳಿಯೊಂದರಲ್ಲಿ ಶುಕ್ರವಾರ ಬೆಳಿಗ್ಗೆ ರಶ್ ಅವರ್‌ನಲ್ಲಿ ರಷ್ಯಾ 70 ಕ್ಕೂ ಹೆಚ್ಚು ಕ್ಷಿಪಣಿಗಳನ್ನು ಹಾರಿಸಿದೆ.

Ukraine And Russia War: ಉಕ್ರೇನ್ ಮೇಲೆ ಒಂದೇ ದಿನ 70ಕ್ಕೂ ಹೆಚ್ಚು ಕ್ಷಿಪಣಿ ದಾಳಿ ನಡೆಸಿದ ರಷ್ಯಾ
ರಷ್ಯಾದ ಕ್ಷಿಪಣಿ ದಾಳಿಗೆ ಹಾನಿಗೊಂಡ ಉಕ್ರೇನ್​ನ ಕಟ್ಟಡImage Credit source: Reuters
TV9 Web
| Edited By: |

Updated on:Dec 17, 2022 | 7:06 AM

Share

ಕೈವ್: ಉಕ್ರೇನ್ ವಿರುದ್ಧ ಯುದ್ಧ ಸಾರಿದ ರಷ್ಯಾ (Ukraine And Russia War) ಶುಕ್ರವಾರ (ಡಿ.16) ಭೀಕರ ಕ್ಷಿಪಣಿ ದಾಳಿ (Missile attack) ನಡೆಸಿದೆ. ಬೆಳಗ್ಗೆಯಿಂದಲೇ 70ಕ್ಕೂ ಹೆಚ್ಚು ಕ್ಷಿಪಣಿಗಳನ್ನು ಉಕ್ರೇನ್ ಮೇಲೆ ಹಾರಿಸಲಾಗಿದೆ. ಇದು ಯುದ್ಧ ಆರಂಭಗೊಂಡ ನಂತರ ಉಕ್ರೇನ್ ಮೇಲೆ ರಷ್ಯಾ ನಡೆಸಿದ ಅತಿದೊಡ್ಡ ದಾಳಿಗಳಲ್ಲಿ ಒಂದಾಗಿದೆ. ಸೆಂಟ್ರಲ್ ಕ್ರಿವಿ ರಿಹ್‌ನಲ್ಲಿ ಅಪಾರ್ಟ್‌ಮೆಂಟ್ ಬ್ಲಾಕ್‌ಗೆ ಕ್ಷಿಪಣಿ ಅಪ್ಪಳಿಸಿ ಇಬ್ಬರು ಸಾವನ್ನಪ್ಪಿದರೆ, ಕ್ಷಿಣದ ಖರ್ಸನ್‌ನಲ್ಲಿ ಓರ್ವ ವ್ಯಕ್ತಿ ಸಾವನ್ನಪ್ಪಿದ್ದಾರೆ. ಆಕ್ರಮಿತ ಪೂರ್ವ ಉಕ್ರೇನ್‌ನಲ್ಲಿ 11 ಜನರು ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಗಳು ಹೇಳಿದ್ದಾರೆ.

ಸಂಜೆಯ ವೀಡಿಯೊ ಮೂಲಕ ಮಾತನಾಡಿದ ಉಕ್ರೇನಿಯನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ, ರಷ್ಯಾ ಇನ್ನೂ ಹಲವಾರು ಬೃಹತ್ ದಾಳಿಗಳಿಗೆ ಸಾಕಷ್ಟು ಕ್ಷಿಪಣಿಗಳನ್ನು ಹೊಂದಿದೆ. ಕೈವ್ ಅನ್ನು ಹೆಚ್ಚು ಮತ್ತು ಉತ್ತಮವಾದ ವಾಯು ರಕ್ಷಣಾ ವ್ಯವಸ್ಥೆಗಳನ್ನು ಪೂರೈಸಲು ಪಾಶ್ಚಿಮಾತ್ಯ ಮಿತ್ರರಾಷ್ಟ್ರಗಳಿಗೆ ಮನವಿ ಮಾಡಿದರು. ಇದೇ ವೇಳೆ, ಉಕ್ರೇನ್ ಪುಟಿದೇಳುವಷ್ಟು ಪ್ರಬಲವಾಗಿದೆ ಎಂದು ಝೆಲೆನ್ಸ್ಕಿ ಹೇಳಿದರು.

ಇದನ್ನೂ ಓದಿ: Indonesia Earthquake: ಇಂಡೋನೇಷ್ಯಾದಲ್ಲಿ ಸಂಭವಿಸಿದ ಭೂಕಂಪದಲ್ಲಿ 602ಕ್ಕೂ ಹೆಚ್ಚು ಜನ ಸಾವು: ವರದಿ

ರಷ್ಯಾವು ಮುಂದಿನ ವರ್ಷದ ಆರಂಭದಲ್ಲಿ ಹೊಸ ಸಂಪೂರ್ಣ ಆಕ್ರಮಣವನ್ನು ಯೋಜಿಸಿದೆ ಎಂದು ಕೈವ್ ಗುರುವಾರ ಎಚ್ಚರಿಸಿದೆ. ಉಕ್ರೇನ್‌ನ ವ್ಯಾಪಕ ಪ್ರದೇಶಗಳು ಕ್ಷಿಪಣಿಗಳು ಮತ್ತು ಫಿರಂಗಿ ದಾಳಿಗಳಿಂದ ಛಿದ್ರಗೊಂಡಿವೆ. ಆದರೆ ಅದರಲ್ಲಿ ಸ್ವಲ್ಪ ಭಾಗವನ್ನಷ್ಟೇ ರಷ್ಯಾದ ಪಡೆಗಳು ವಶಪಡಿಸಿಕೊಂಡವು. ಅಕ್ಟೋಬರ್ ಆರಂಭದಿಂದ ವಾರಕ್ಕೊಮ್ಮೆ ರಷ್ಯಾ ಉಕ್ರೇನಿಯನ್ ಶಕ್ತಿಯ ಮೂಲಸೌಕರ್ಯದ ಮೇಲೆ ಕ್ಷಿಪಣಿಗಳ ಮಳೆಗರೆದಿದೆ, ಆದರೆ ಶುಕ್ರವಾರದ ದಾಳಿಯು ಇತರ ದಾಳಿಗಿಂತ ಹೆಚ್ಚಿನ ಹಾನಿಯನ್ನುಂಟುಮಾಡಿದೆ.

ವಿದೇಶದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 7:05 am, Sat, 17 December 22

ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ