AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಷ್ಯಾ ಸೇನೆಗೆ ದಾರಿ ತಪ್ಪಿಸುತ್ತಿರುವ ಉಕ್ರೇನ್​ ಸರ್ಕಾರಿ ಕಂಪನಿ; ನರಕಕ್ಕೆ ಹೋಗಲು ಸಹಾಯ ಮಾಡುತ್ತಿರುವುದಾಗಿ ಫೇಸ್​​ಬುಕ್​ ಪೋಸ್ಟ್​​, ಅಶ್ಲೀಲ ಬೈಗುಳ

ರಷ್ಯಾ ಸೇನೆ ಸೀದಾ ನರಕಕ್ಕೆ ಹೋಗಲು ನಾವು ಸಹಾಯ ಮಾಡುತ್ತಿದ್ದೇವೆ. ನಾವು ಒಂದು ಕಡೆಯಿಂದ ಈ ಮಾರ್ಗಸೂಚಿಗಳನ್ನು ತೆಗೆದುಹಾಕುತ್ತಿದ್ದೇವೆ. ಹಾಗೇ ಈ ಕೆಲಸಕ್ಕೆ ನಮ್ಮೊಂದಿಗೆ ಸಾರ್ವಜನಿಕರು, ಸ್ಥಳೀಯ ಆಡಳಿತಗಳೂ ಕೈಜೋಡಿಸಬೇಕು ಎಂದು ಕಂಪನಿ ಹೇಳಿದೆ.

ರಷ್ಯಾ ಸೇನೆಗೆ ದಾರಿ ತಪ್ಪಿಸುತ್ತಿರುವ ಉಕ್ರೇನ್​ ಸರ್ಕಾರಿ ಕಂಪನಿ; ನರಕಕ್ಕೆ ಹೋಗಲು ಸಹಾಯ ಮಾಡುತ್ತಿರುವುದಾಗಿ ಫೇಸ್​​ಬುಕ್​ ಪೋಸ್ಟ್​​, ಅಶ್ಲೀಲ ಬೈಗುಳ
ಉಕ್ರೇನ್​ ರಸ್ತೆ ಸೂಚಕ ಬೋರ್ಡ್​ಗಳು
TV9 Web
| Edited By: |

Updated on:Feb 27, 2022 | 10:41 AM

Share

ಉಕ್ರೇನ್​ ಮೇಲೆ ರಷ್ಯಾ ಯುದ್ಧ (Russia-Ukraine War) ಸಾರಿ ನಾಲ್ಕು ದಿನಗಳಾಯಿತು. ರಷ್ಯಾಕ್ಕೆ ಹೋಲಿಸಿದರೆ ಉಕ್ರೇನ್​ ಸಾಮರ್ಥ್ಯ ಎಲ್ಲದರಲ್ಲೂ ಕಡಿಮೆ. ಹಾಗಿದ್ದಾಗ್ಯೂ ಉಕ್ರೇನ್​ (Ukraine) ರಷ್ಯಾ ಸೇನೆಯನ್ನು ಹಿಮ್ಮೆಟ್ಟಿಸಲು ಎಲ್ಲ ರೀತಿಯ ಪ್ರಯತ್ನಗಳನ್ನೂ ಮಾಡುತ್ತಿದೆ. ಬರೀ ಸೇನೆಯಷ್ಟೇ ಅಲ್ಲ, ನಾಗರಿಕರೂ ಕೈಯಲ್ಲಿ ಬಂದೂಕು ಹಿಡಿದು ಯುದ್ಧಭೂಮಿಗೆ ಇಳಿದಿದ್ದಾರೆ. ಹಲವು ದೇಶಗಳು ಉಕ್ರೇನ್​ಗೆ ಮಿಲಿಟರಿ ಉಪಕರಣಗಳನ್ನು ಒದಗಿಸುತ್ತಿವೆ. ಈ ಮಧ್ಯೆ ಉಕ್ರೇನ್​​ನ ಕಟ್ಟಡಗಳು ಮತ್ತು ರಸ್ತೆ ನಿರ್ವಹಣೆ ಉಸ್ತುವಾರಿ ಕಂಪನಿಯೊಂದು ವಿಭಿನ್ನವಾಗಿ ರಷ್ಯಾ ವಿರುದ್ಧ ಹೋರಾಡುತ್ತಿದೆ.

ಉಕ್ರಾವ್ಟೋಡರ್ ಎಂಬ ಸರ್ಕಾರಿ ಕಂಪನಿಯೊಂದು ಎಲ್ಲ ಕಡೆಗಳಲ್ಲಿರುವ ರಸ್ತೆ ಮಾರ್ಗ ತೋರುವ ಬೋರ್ಡ್​​ಗಳು, ಸಂಕೇತಗಳನ್ನು ತೆಗೆದುಹಾಕುತ್ತಿದೆ.  ಜನರಿಗೆ ಅನುಕೂಲವಾಗುವಂತೆ ರಸ್ತೆ ಬದಿಯಲ್ಲಿ ರಸ್ತೆ ಮಾರ್ಗ ಸಂಕೇತಗಳ ಬೋರ್ಡ್​​ಗಳನ್ನು ಹಾಕುವುದು ಸಾಮಾನ್ಯ. ಹೊಸದಾಗಿ ಆ ಪ್ರದೇಶಗಳಿಗೆ ಬರುವವರು ಚಿಹ್ನೆ (Signs) ಗಳನ್ನು ನೋಡಿಯೇ ದಾರಿ ಅರಿಯುತ್ತಾರೆ. ಹಾಗೇ, ಉಕ್ರೇನ್​​ನಲ್ಲೂ ಹಾಕಲಾಗಿದ್ದ ಮಾರ್ಗಸೂಚಿ ಸೈನ್​ ಬೋರ್ಡ್​ಗಳನ್ನು ಈ ಕಂಪನಿ ತೆಗೆದುಹಾಕುತ್ತಿದೆ. ರಷ್ಯಾದ ಸೈನಿಕರಿಗೆ ಉಕ್ರೇನ್​ನ ದಾರಿಗಳು ಸರಿಯಾಗಿ ಗೊತ್ತಿಲ್ಲ. ಅಲ್ಲದೆ ಅವರು ಅತ್ಯಂತ ಕಳಪೆ ಸಂವಹನ ಸಾಮರ್ಥ್ಯ ಹೊಂದಿದ್ದಾರೆ. ಹೀಗಾಗಿ ಇಲ್ಲಿನ ಭೂಪ್ರದೇಶಗಳನ್ನು ಸಂಕೇತಗಳ ಸಹಾಯವಿಲ್ಲದೆ ಪ್ರವೇಶಿಸಲಾರರು. ನಾವು ಶತ್ರುಗಳ ದಾರಿ ತಪ್ಪಿಸಲು ಆ ಬೋರ್ಡ್​ಗಳನ್ನೆಲ್ಲ ತೆಗೆದುಹಾಕುತ್ತಿದ್ದೇವೆ ಎಂದು ಫೇಸ್​ಬುಕ್ ಪೋಸ್ಟ್​ನಲ್ಲಿ ಹೇಳಿಕೊಂಡಿದೆ.

ಅಷ್ಟೇ ಅಲ್ಲ, ರಷ್ಯಾ ಸೇನೆ ಸೀದಾ ನರಕಕ್ಕೆ ಹೋಗಲು ನಾವು ಸಹಾಯ ಮಾಡುತ್ತಿದ್ದೇವೆ. ನಾವು ಒಂದು ಕಡೆಯಿಂದ ಈ ಮಾರ್ಗಸೂಚಿಗಳನ್ನು ತೆಗೆದುಹಾಕುತ್ತಿದ್ದೇವೆ. ಹಾಗೇ ಈ ಕೆಲಸಕ್ಕೆ ನಮ್ಮೊಂದಿಗೆ ಸಾರ್ವಜನಿಕರು, ಸ್ಥಳೀಯ ಆಡಳಿತಗಳೂ ಕೈಜೋಡಿಸಬೇಕು ಎಂದು ಕಂಪನಿ ಹೇಳಿದೆ. ಕೆಲವು ಕಡೆಗಳಲ್ಲಂತೂ ರಸ್ತೆ ತೋರುವ ಸಂಕೇತವನ್ನು ತಪ್ಪು ನಿರ್ದೇಶನದಲ್ಲಿ ಇಡುವ ಕೆಲಸವನ್ನೂ ಕಂಪನಿ ಮಾಡಿದೆ. ಮತ್ತು ಅಶ್ಲೀಲ ಭಾಷೆಯಲ್ಲಿ ರಷ್ಯಾಕ್ಕೆ ಬೈದು ಫೇಸ್​ಬುಕ್​ ಪೋಸ್ಟ್ ಹಾಕಿಕೊಂಡಿದೆ. ಪ್ರತಿರಸ್ತೆಯನ್ನೂ ಜನರು ಟೈಯರ್​​ಗಳನ್ನು ಸುಡಬೇಕು. ಒಣಮರಗಳಿಗೆ ಬೆಂಕಿ ಹಾಕಬೇಕು. ಬ್ಯಾರಿಕೇಡ್​ಗಳನ್ನು ಹಾಕಬೇಕು. ಈ ಮೂಲಕ ಶತ್ರುಗಳ ಪ್ರವೇಶವನ್ನು ನಿರ್ಬಂಧಿಸಬೇಕು.  ಎಲ್ಲೇ ಹೋದರೂ ಅವರಿಗೆ ತಾವಿಲ್ಲ ತಪ್ಪಾಗಿ ಬಂದಿದ್ದೇವೆ ಎನ್ನಿಸುವಷ್ಟು ಕಷ್ಟ ಕೊಡಬೇಕು ಎಂದೂ ಈ ಸರ್ಕಾರಿ ಕಂಪನಿ ಹೇಳಿದೆ.

ಉಕ್ರೇನ್​ ಯಾವ ಕಾರಣಕ್ಕೂ ರಷ್ಯಾಕ್ಕೆ ಮಣಿಯುವುದಿಲ್ಲ ಎಂದು ಉಕ್ರೇನಿಯನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ ಹೇಳಿಕೊಂಡಿದ್ದಾರೆ. ತಮಗೆ ಶಸ್ತ್ರಾಸ್ತ್ರಗಳನ್ನು ನೀಡಿ ಎಂದು ವಿಶ್ವನಾಯಕರನ್ನು ಕೇಳಿಕೊಳ್ಳುತ್ತಿದ್ದಾರೆ. ಅದರಂತೆ ಹಲವು ದೇಶಗಳು ಉಕ್ರೇನ್​ಗೆ ಮಿಲಿಟರಿ ಉಪಕರಣಗಳ ನೆರವು ನೀಡುತ್ತಿದ್ದಾರೆ. ಇನ್ನೊಂದೆಡೆ ರಷ್ಯಾ ತಾವು ಜನರನ್ನು ಕೊಲ್ಲುವುದಿಲ್ಲ, ಪ್ರದೇಶಗಳನ್ನು ಅತಿಕ್ರಮಣ ಮಾಡುವುದಿಲ್ಲ ಎಂದು ಹೇಳುತ್ತಲೇ ಈ ಎರಡೂ ಕೆಲಸಗಳನ್ನೂ ಮಾಡುತ್ತಿದೆ.

ಇದನ್ನೂ ಓದಿ:  Russia-Ukraine War: ರಷ್ಯಾದ ದಾಳಿಯ ನಡುವೆ ಶೆಲ್ಟರ್​​ನಲ್ಲೇ ಮಗುವಿಗೆ ಜನ್ಮ ನೀಡಿದ ಉಕ್ರೇನ್ ಮಹಿಳೆ

Published On - 10:40 am, Sun, 27 February 22

Follow Us
ಮುಂಗಾರಿನಲ್ಲೇ ಹೀಟ್ ವೇವ್! ಬೆಂಗಳೂರಿನಲ್ಲಿ ದಿನೇದಿನೆ ಹೆಚ್ಚಾಗುತ್ತಿದೆ ತಾಪ
ಮುಂಗಾರಿನಲ್ಲೇ ಹೀಟ್ ವೇವ್! ಬೆಂಗಳೂರಿನಲ್ಲಿ ದಿನೇದಿನೆ ಹೆಚ್ಚಾಗುತ್ತಿದೆ ತಾಪ
ಕಲಬುರಗಿ ಕೇಂದ್ರ ಕಾರಾಗೃಹದ ಮೇಲೆ ಪೊಲೀಸರ ದಾಳಿ: ಕೈದಿಯಿಂದ ಮೊಬೈಲ್​​ ವಶ
ಕಲಬುರಗಿ ಕೇಂದ್ರ ಕಾರಾಗೃಹದ ಮೇಲೆ ಪೊಲೀಸರ ದಾಳಿ: ಕೈದಿಯಿಂದ ಮೊಬೈಲ್​​ ವಶ
ಮಂಡ್ಯದ ವಸತಿಶಾಲೆಯಲ್ಲಿ ಮಕ್ಕಳಿಗೆ ಫುಡ್ ಪಾಯಿಸನ್
ಮಂಡ್ಯದ ವಸತಿಶಾಲೆಯಲ್ಲಿ ಮಕ್ಕಳಿಗೆ ಫುಡ್ ಪಾಯಿಸನ್
‘ಜೈಲಿನಲ್ಲಿ ಖುದ್ದು ಹಾಜರಿ ಬೇಕು’; ಹೈಕೋರ್ಟ್​​ನಲ್ಲಿ ದರ್ಶನ್ ಅರ್ಜಿ
‘ಜೈಲಿನಲ್ಲಿ ಖುದ್ದು ಹಾಜರಿ ಬೇಕು’; ಹೈಕೋರ್ಟ್​​ನಲ್ಲಿ ದರ್ಶನ್ ಅರ್ಜಿ
ಅಸಲಿ ಮುಖ ತೋರಿಸೋಕೆ ಆರಂಭಿಸಿದ ಸೌಂದರ್ಯಾ ಶೆಟ್ಟಿ; ಅಣಕಿಸಿದ ವಿಡಿಯೋ ವೈರಲ್
ಅಸಲಿ ಮುಖ ತೋರಿಸೋಕೆ ಆರಂಭಿಸಿದ ಸೌಂದರ್ಯಾ ಶೆಟ್ಟಿ; ಅಣಕಿಸಿದ ವಿಡಿಯೋ ವೈರಲ್
ಡಿಕೆಶಿ ಸರ್ಕಾರಕ್ಕೆ 100 ದಿನ: ಕೆಆರ್​ಎಸ್ ಡ್ಯಾಂಗೆ ಕಲರ್​ಫುಲ್​ ​ಲೈಟಿಂಗ್
ಡಿಕೆಶಿ ಸರ್ಕಾರಕ್ಕೆ 100 ದಿನ: ಕೆಆರ್​ಎಸ್ ಡ್ಯಾಂಗೆ ಕಲರ್​ಫುಲ್​ ​ಲೈಟಿಂಗ್
ಸತೀಶ್ ಜಾರಕಿಹೊಳಿ ನಿವಾಸದಲ್ಲಿ ತಡರಾತ್ರಿ 2 ಗಂಟೆವರೆಗೆ ಇಡಿ ಶೋಧ
ಸತೀಶ್ ಜಾರಕಿಹೊಳಿ ನಿವಾಸದಲ್ಲಿ ತಡರಾತ್ರಿ 2 ಗಂಟೆವರೆಗೆ ಇಡಿ ಶೋಧ
ಗುರುಗಳ ಲಹರಿ ಇರುವ ಶುಭ ದಿನ: ಸೆಪ್ಟೆಂಬರ್ 10 ರ ರಾಶಿ ಭವಿಷ್ಯ
ಗುರುಗಳ ಲಹರಿ ಇರುವ ಶುಭ ದಿನ: ಸೆಪ್ಟೆಂಬರ್ 10 ರ ರಾಶಿ ಭವಿಷ್ಯ
ಅತಿಯಾಗಿ ಮಾತನಾಡುವ ಬಿಗ್ ಬಾಸ್ ಸ್ಪರ್ಧಿಗಳಿಗೆ ವಾರ್ನಿಂಗ್ ಕೊಟ್ಟ ಅವಿನಾಶ್
ಅತಿಯಾಗಿ ಮಾತನಾಡುವ ಬಿಗ್ ಬಾಸ್ ಸ್ಪರ್ಧಿಗಳಿಗೆ ವಾರ್ನಿಂಗ್ ಕೊಟ್ಟ ಅವಿನಾಶ್
ಬಿಜೆಪಿಎಂಎಲ್​ಎಗೆ ಸಚಿವ ಮಲ್ಲಿಕಾರ್ಜುನ್ ಬೈದ ಬೈಗುಳ
ಬಿಜೆಪಿಎಂಎಲ್​ಎಗೆ ಸಚಿವ ಮಲ್ಲಿಕಾರ್ಜುನ್ ಬೈದ ಬೈಗುಳ