AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Ukraine Crisis: ಉಕ್ರೇನ್ ನಿರ್ಮಿತ ವಿಶ್ವದ ಬೃಹತ್​ ಸರಕು ಸಾಗಣೆ ವಿಮಾನ ಸುಟ್ಟು ಭಸ್ಮ

ಇತ್ತ ರಷ್ಯಾ-ಉಕ್ರೇನ್‌ ನಿಯೋಗದಿಂದ ಶಾಂತಿ ಮಾತುಕತೆ ಆರಂಭವಾಗಿದೆ. ಗೋಮೆಲ್ ಪ್ರದೇಶದಲ್ಲಿ ಶಾಂತಿ ಮಾತುಕತೆ ನಡೆಯುತ್ತಿದೆ. ಉಕ್ರೇನ್‌ ಹಾಗೂ ಬೆಲಾರಸ್​​ನ ಗಡಿ ಪ್ರದೇಶ ಗೋಮೆಲ್ ಎಂಬಲ್ಲಿ ಯುದ್ಧ ಆರಂಭ ಬಳಿಕ ಮೊದಲ ಬಾರಿಗೆ ಶಾಂತಿ ಮಾತುಕತೆ ನಡೆಸಲಾಗುತ್ತಿದೆ.

Ukraine Crisis: ಉಕ್ರೇನ್ ನಿರ್ಮಿತ ವಿಶ್ವದ ಬೃಹತ್​ ಸರಕು ಸಾಗಣೆ ವಿಮಾನ ಸುಟ್ಟು ಭಸ್ಮ
Antonove 225
TV9 Web
| Edited By: |

Updated on: Feb 27, 2022 | 11:15 PM

Share

ಉಕ್ರೇನ್: ಉಕ್ರೇನ್ ಮೇಲೆ ರಷ್ಯಾ ಸೇನೆ ಯುದ್ಧ ಮುಂದುವರಿಸಿದ್ದು ರಷ್ಯಾದ ಶೆಲ್ ದಾಳಿಯಲ್ಲಿ ಉಕ್ರೇನ್ ನಿರ್ಮಿತ ವಿಶ್ವದ ಬೃಹತ್​ ಸರಕು ಸಾಗಣೆ ವಿಮಾನ ಸುಟ್ಟು ಭಸ್ಮವಾಗಿದೆ. ಉಕ್ರೇನ್​ ನಿರ್ಮಿತ ಆಂಟೊನೊವ್-225 ಸುಟ್ಟು ಭಸ್ಮವಾಗಿದೆ. ವಿಶ್ವದ ಅತಿ ದೊಡ್ಡ ಸರಕು ಸಾಗಣೆ ವಿಮಾನ ರಷ್ಯಾ ದಾಳಿಗೆ ಭಸ್ಮವಾಗಿರುವ ಬಗ್ಗೆ ಉಕ್ರೇನ್ ತಿಳಿಸಿದೆ. ನಾವು ಈ ವಿಮಾನವನ್ನು ಮತ್ತೆ ತಯಾರಿಸುತ್ತೇವೆ. ನಾವು ಸದೃಢ, ಸ್ವತಂತ್ರ ಮತ್ತು ಪ್ರಜಾಪ್ರಸತ್ತಾತ್ಮಕ ಉಕ್ರೇನ್​ ಕನಸನ್ನು ನನಸು ಮಾಡುತ್ತೇವೆ ಎಂದು ಟ್ವೀಟ್ ಮಾಡಲಾಗಿದೆ.

ಉಕ್ರೇನ್ ಮೇಲೆ ಯುದ್ಧ ಮುಂದುವರಿಸಿರುವ ರಷ್ಯಾ ಸೇನೆ ಬಗ್ಗೆ ಹಾಗೂ ರಷ್ಯಾ ಅಧ್ಯಕ್ಷ ಪುಟಿನ್ ವಿರುದ್ಧ ನ್ಯಾಟೋ ಮುಖ್ಯಸ್ಥರು ಕಿಡಿ​ಕಾರಿದ್ದಾರೆ. ನ್ಯೂಕ್ಲೀಯರ್​ ಅಲರ್ಟ್ ಬೇಜವಾಬ್ದಾರಿತನದಿಂದ ಕೂಡಿದೆ. ಅಪಾಯಕಾರಿ ಹಾಗೂ ಬೇಜವಾಬ್ದಾರಿತನದಿಂದ ಕೂಡಿದೆ. ಇದು ಬೇಜವಾಬ್ದಾರಿತನದ ವಾರ್ನಿಂಗ್ ಎಂದು ನ್ಯಾಟೋ ಮುಖ್ಯಸ್ಥ ಹೇಳಿದ್ದಾರೆ. ಪರಮಾಣು ಪ್ರತಿಬಂಧಕ ಪಡೆಗೆ ಪುಟಿನ್ ಅಲರ್ಟ್​ ಹಿನ್ನೆಲೆ ರಷ್ಯಾ ಅಧ್ಯಕ್ಷ ಪುಟಿನ್​ ವಿರುದ್ಧ ಅಮೆರಿಕ ಕೂಡ ತೀವ್ರ ಆಕ್ರೋಶ ವ್ಯಕ್ತಪಡಿಸಿದೆ. ಬೆದರಿಕೆ ತಂತ್ರಗಾರಿಕೆ ಹೆಣೆಯುತ್ತಿದೆ ಎಂದು US ಆರೋಪ ಮಾಡಿದೆ.

ಉಕ್ರೇನ್​ಗೆ ಯುರೋಪಿಯನ್​ ಒಕ್ಕೂಟದಿಂದ ನೆರವು ಘೋಷಿಸಲಾಗಿದೆ. ಶಸ್ತ್ರಾಸ್ತ್ರ ಖರೀದಿಗಾಗಿ ಆರ್ಥಿಕ ನೆರವು ಘೋಷಣೆ ಮಾಡಲಾಗಿದೆ. ಉಕ್ರೇನ್ ಮೇಲೆ ಯುದ್ಧ ಮುಂದುವರಿಸಿರುವ ಹಿನ್ನೆಲೆ ರಷ್ಯಾದ ವಿಮಾನಗಳಿಗೆ ಯುರೋಪ್​ ಒಕ್ಕೂಟ ನಿರ್ಬಂಧ ವಿಧಿಸಿದೆ. ಈ ಮಧ್ಯೆ, ಉಕ್ರೇನ್ ಬಿಕ್ಕಟ್ಟಿನ ಬಗ್ಗೆ ನಾಳೆ ವಿಶ್ವಸಂಸ್ಥೆ ಭದ್ರತಾ ಮಂಡಳಿ ಸಭೆ ನಡೆಸಲಿದೆ ಎಂದು ಮಾಹಿತಿ ಲಭಿಸಿದೆ.

ಇತ್ತ ರಷ್ಯಾ-ಉಕ್ರೇನ್‌ ನಿಯೋಗದಿಂದ ಶಾಂತಿ ಮಾತುಕತೆ ಆರಂಭವಾಗಿದೆ. ಗೋಮೆಲ್ ಪ್ರದೇಶದಲ್ಲಿ ಶಾಂತಿ ಮಾತುಕತೆ ನಡೆಯುತ್ತಿದೆ. ಉಕ್ರೇನ್‌ ಹಾಗೂ ಬೆಲಾರಸ್​​ನ ಗಡಿ ಪ್ರದೇಶ ಗೋಮೆಲ್ ಎಂಬಲ್ಲಿ ಯುದ್ಧ ಆರಂಭ ಬಳಿಕ ಮೊದಲ ಬಾರಿಗೆ ಶಾಂತಿ ಮಾತುಕತೆ ನಡೆಸಲಾಗುತ್ತಿದೆ.

ಇದನ್ನೂ ಓದಿ: Ukraine Crisis: ಉಕ್ರೇನ್‌ನಿಂದ ಕನ್ನಡಿಗರ ಏರ್‌ಲಿಫ್ಟ್; ರಾತ್ರಿ 8 ಗಂಟೆಯವರೆಗೆ 30 ಕನ್ನಡಿಗ ವಿದ್ಯಾರ್ಥಿಗಳ ಆಗಮನ

ಇದನ್ನೂ ಓದಿ: Indians in Ukraine: ಆಶ್ರಯ ಕೊಟ್ಟ ಮನೆ ಮಾಲೀಕರನ್ನು ಕಾಪಾಡಲೆಂದು ಉಕ್ರೇನ್​ನಲ್ಲೇ ಉಳಿದ ಭಾರತದ ಹುಡುಗಿ

ಪಾರ್ಶ್ವವಾಯು ಪೀಡಿತ ಮಹಿಳೆಯನ್ನು ಏರ್​​ಲಿಫ್ಟ್​ ಮಾಡಿದ ವಾಯುಪಡೆ
ಪಾರ್ಶ್ವವಾಯು ಪೀಡಿತ ಮಹಿಳೆಯನ್ನು ಏರ್​​ಲಿಫ್ಟ್​ ಮಾಡಿದ ವಾಯುಪಡೆ
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು