AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Ukraine Crisis: ಉಕ್ರೇನ್ ನಿರ್ಮಿತ ವಿಶ್ವದ ಬೃಹತ್​ ಸರಕು ಸಾಗಣೆ ವಿಮಾನ ಸುಟ್ಟು ಭಸ್ಮ

ಇತ್ತ ರಷ್ಯಾ-ಉಕ್ರೇನ್‌ ನಿಯೋಗದಿಂದ ಶಾಂತಿ ಮಾತುಕತೆ ಆರಂಭವಾಗಿದೆ. ಗೋಮೆಲ್ ಪ್ರದೇಶದಲ್ಲಿ ಶಾಂತಿ ಮಾತುಕತೆ ನಡೆಯುತ್ತಿದೆ. ಉಕ್ರೇನ್‌ ಹಾಗೂ ಬೆಲಾರಸ್​​ನ ಗಡಿ ಪ್ರದೇಶ ಗೋಮೆಲ್ ಎಂಬಲ್ಲಿ ಯುದ್ಧ ಆರಂಭ ಬಳಿಕ ಮೊದಲ ಬಾರಿಗೆ ಶಾಂತಿ ಮಾತುಕತೆ ನಡೆಸಲಾಗುತ್ತಿದೆ.

Ukraine Crisis: ಉಕ್ರೇನ್ ನಿರ್ಮಿತ ವಿಶ್ವದ ಬೃಹತ್​ ಸರಕು ಸಾಗಣೆ ವಿಮಾನ ಸುಟ್ಟು ಭಸ್ಮ
Antonove 225
TV9 Web
| Edited By: |

Updated on: Feb 27, 2022 | 11:15 PM

Share

ಉಕ್ರೇನ್: ಉಕ್ರೇನ್ ಮೇಲೆ ರಷ್ಯಾ ಸೇನೆ ಯುದ್ಧ ಮುಂದುವರಿಸಿದ್ದು ರಷ್ಯಾದ ಶೆಲ್ ದಾಳಿಯಲ್ಲಿ ಉಕ್ರೇನ್ ನಿರ್ಮಿತ ವಿಶ್ವದ ಬೃಹತ್​ ಸರಕು ಸಾಗಣೆ ವಿಮಾನ ಸುಟ್ಟು ಭಸ್ಮವಾಗಿದೆ. ಉಕ್ರೇನ್​ ನಿರ್ಮಿತ ಆಂಟೊನೊವ್-225 ಸುಟ್ಟು ಭಸ್ಮವಾಗಿದೆ. ವಿಶ್ವದ ಅತಿ ದೊಡ್ಡ ಸರಕು ಸಾಗಣೆ ವಿಮಾನ ರಷ್ಯಾ ದಾಳಿಗೆ ಭಸ್ಮವಾಗಿರುವ ಬಗ್ಗೆ ಉಕ್ರೇನ್ ತಿಳಿಸಿದೆ. ನಾವು ಈ ವಿಮಾನವನ್ನು ಮತ್ತೆ ತಯಾರಿಸುತ್ತೇವೆ. ನಾವು ಸದೃಢ, ಸ್ವತಂತ್ರ ಮತ್ತು ಪ್ರಜಾಪ್ರಸತ್ತಾತ್ಮಕ ಉಕ್ರೇನ್​ ಕನಸನ್ನು ನನಸು ಮಾಡುತ್ತೇವೆ ಎಂದು ಟ್ವೀಟ್ ಮಾಡಲಾಗಿದೆ.

ಉಕ್ರೇನ್ ಮೇಲೆ ಯುದ್ಧ ಮುಂದುವರಿಸಿರುವ ರಷ್ಯಾ ಸೇನೆ ಬಗ್ಗೆ ಹಾಗೂ ರಷ್ಯಾ ಅಧ್ಯಕ್ಷ ಪುಟಿನ್ ವಿರುದ್ಧ ನ್ಯಾಟೋ ಮುಖ್ಯಸ್ಥರು ಕಿಡಿ​ಕಾರಿದ್ದಾರೆ. ನ್ಯೂಕ್ಲೀಯರ್​ ಅಲರ್ಟ್ ಬೇಜವಾಬ್ದಾರಿತನದಿಂದ ಕೂಡಿದೆ. ಅಪಾಯಕಾರಿ ಹಾಗೂ ಬೇಜವಾಬ್ದಾರಿತನದಿಂದ ಕೂಡಿದೆ. ಇದು ಬೇಜವಾಬ್ದಾರಿತನದ ವಾರ್ನಿಂಗ್ ಎಂದು ನ್ಯಾಟೋ ಮುಖ್ಯಸ್ಥ ಹೇಳಿದ್ದಾರೆ. ಪರಮಾಣು ಪ್ರತಿಬಂಧಕ ಪಡೆಗೆ ಪುಟಿನ್ ಅಲರ್ಟ್​ ಹಿನ್ನೆಲೆ ರಷ್ಯಾ ಅಧ್ಯಕ್ಷ ಪುಟಿನ್​ ವಿರುದ್ಧ ಅಮೆರಿಕ ಕೂಡ ತೀವ್ರ ಆಕ್ರೋಶ ವ್ಯಕ್ತಪಡಿಸಿದೆ. ಬೆದರಿಕೆ ತಂತ್ರಗಾರಿಕೆ ಹೆಣೆಯುತ್ತಿದೆ ಎಂದು US ಆರೋಪ ಮಾಡಿದೆ.

ಉಕ್ರೇನ್​ಗೆ ಯುರೋಪಿಯನ್​ ಒಕ್ಕೂಟದಿಂದ ನೆರವು ಘೋಷಿಸಲಾಗಿದೆ. ಶಸ್ತ್ರಾಸ್ತ್ರ ಖರೀದಿಗಾಗಿ ಆರ್ಥಿಕ ನೆರವು ಘೋಷಣೆ ಮಾಡಲಾಗಿದೆ. ಉಕ್ರೇನ್ ಮೇಲೆ ಯುದ್ಧ ಮುಂದುವರಿಸಿರುವ ಹಿನ್ನೆಲೆ ರಷ್ಯಾದ ವಿಮಾನಗಳಿಗೆ ಯುರೋಪ್​ ಒಕ್ಕೂಟ ನಿರ್ಬಂಧ ವಿಧಿಸಿದೆ. ಈ ಮಧ್ಯೆ, ಉಕ್ರೇನ್ ಬಿಕ್ಕಟ್ಟಿನ ಬಗ್ಗೆ ನಾಳೆ ವಿಶ್ವಸಂಸ್ಥೆ ಭದ್ರತಾ ಮಂಡಳಿ ಸಭೆ ನಡೆಸಲಿದೆ ಎಂದು ಮಾಹಿತಿ ಲಭಿಸಿದೆ.

ಇತ್ತ ರಷ್ಯಾ-ಉಕ್ರೇನ್‌ ನಿಯೋಗದಿಂದ ಶಾಂತಿ ಮಾತುಕತೆ ಆರಂಭವಾಗಿದೆ. ಗೋಮೆಲ್ ಪ್ರದೇಶದಲ್ಲಿ ಶಾಂತಿ ಮಾತುಕತೆ ನಡೆಯುತ್ತಿದೆ. ಉಕ್ರೇನ್‌ ಹಾಗೂ ಬೆಲಾರಸ್​​ನ ಗಡಿ ಪ್ರದೇಶ ಗೋಮೆಲ್ ಎಂಬಲ್ಲಿ ಯುದ್ಧ ಆರಂಭ ಬಳಿಕ ಮೊದಲ ಬಾರಿಗೆ ಶಾಂತಿ ಮಾತುಕತೆ ನಡೆಸಲಾಗುತ್ತಿದೆ.

ಇದನ್ನೂ ಓದಿ: Ukraine Crisis: ಉಕ್ರೇನ್‌ನಿಂದ ಕನ್ನಡಿಗರ ಏರ್‌ಲಿಫ್ಟ್; ರಾತ್ರಿ 8 ಗಂಟೆಯವರೆಗೆ 30 ಕನ್ನಡಿಗ ವಿದ್ಯಾರ್ಥಿಗಳ ಆಗಮನ

ಇದನ್ನೂ ಓದಿ: Indians in Ukraine: ಆಶ್ರಯ ಕೊಟ್ಟ ಮನೆ ಮಾಲೀಕರನ್ನು ಕಾಪಾಡಲೆಂದು ಉಕ್ರೇನ್​ನಲ್ಲೇ ಉಳಿದ ಭಾರತದ ಹುಡುಗಿ

Follow Us
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?
ವಿಜಯ್​​ರನ್ನು ದೇವರೇ ಕಾಪಾಡಬೇಕು ಎಂದ ಹೆಚ್​​ಡಿಕೆ: ಕಾರಣ ಇಲ್ಲಿದೆ
ವಿಜಯ್​​ರನ್ನು ದೇವರೇ ಕಾಪಾಡಬೇಕು ಎಂದ ಹೆಚ್​​ಡಿಕೆ: ಕಾರಣ ಇಲ್ಲಿದೆ