AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Ukraine Crisis: ಉಕ್ರೇನ್ ನಿರ್ಮಿತ ವಿಶ್ವದ ಬೃಹತ್​ ಸರಕು ಸಾಗಣೆ ವಿಮಾನ ಸುಟ್ಟು ಭಸ್ಮ

ಇತ್ತ ರಷ್ಯಾ-ಉಕ್ರೇನ್‌ ನಿಯೋಗದಿಂದ ಶಾಂತಿ ಮಾತುಕತೆ ಆರಂಭವಾಗಿದೆ. ಗೋಮೆಲ್ ಪ್ರದೇಶದಲ್ಲಿ ಶಾಂತಿ ಮಾತುಕತೆ ನಡೆಯುತ್ತಿದೆ. ಉಕ್ರೇನ್‌ ಹಾಗೂ ಬೆಲಾರಸ್​​ನ ಗಡಿ ಪ್ರದೇಶ ಗೋಮೆಲ್ ಎಂಬಲ್ಲಿ ಯುದ್ಧ ಆರಂಭ ಬಳಿಕ ಮೊದಲ ಬಾರಿಗೆ ಶಾಂತಿ ಮಾತುಕತೆ ನಡೆಸಲಾಗುತ್ತಿದೆ.

Ukraine Crisis: ಉಕ್ರೇನ್ ನಿರ್ಮಿತ ವಿಶ್ವದ ಬೃಹತ್​ ಸರಕು ಸಾಗಣೆ ವಿಮಾನ ಸುಟ್ಟು ಭಸ್ಮ
Antonove 225
TV9 Web
| Edited By: |

Updated on: Feb 27, 2022 | 11:15 PM

Share

ಉಕ್ರೇನ್: ಉಕ್ರೇನ್ ಮೇಲೆ ರಷ್ಯಾ ಸೇನೆ ಯುದ್ಧ ಮುಂದುವರಿಸಿದ್ದು ರಷ್ಯಾದ ಶೆಲ್ ದಾಳಿಯಲ್ಲಿ ಉಕ್ರೇನ್ ನಿರ್ಮಿತ ವಿಶ್ವದ ಬೃಹತ್​ ಸರಕು ಸಾಗಣೆ ವಿಮಾನ ಸುಟ್ಟು ಭಸ್ಮವಾಗಿದೆ. ಉಕ್ರೇನ್​ ನಿರ್ಮಿತ ಆಂಟೊನೊವ್-225 ಸುಟ್ಟು ಭಸ್ಮವಾಗಿದೆ. ವಿಶ್ವದ ಅತಿ ದೊಡ್ಡ ಸರಕು ಸಾಗಣೆ ವಿಮಾನ ರಷ್ಯಾ ದಾಳಿಗೆ ಭಸ್ಮವಾಗಿರುವ ಬಗ್ಗೆ ಉಕ್ರೇನ್ ತಿಳಿಸಿದೆ. ನಾವು ಈ ವಿಮಾನವನ್ನು ಮತ್ತೆ ತಯಾರಿಸುತ್ತೇವೆ. ನಾವು ಸದೃಢ, ಸ್ವತಂತ್ರ ಮತ್ತು ಪ್ರಜಾಪ್ರಸತ್ತಾತ್ಮಕ ಉಕ್ರೇನ್​ ಕನಸನ್ನು ನನಸು ಮಾಡುತ್ತೇವೆ ಎಂದು ಟ್ವೀಟ್ ಮಾಡಲಾಗಿದೆ.

ಉಕ್ರೇನ್ ಮೇಲೆ ಯುದ್ಧ ಮುಂದುವರಿಸಿರುವ ರಷ್ಯಾ ಸೇನೆ ಬಗ್ಗೆ ಹಾಗೂ ರಷ್ಯಾ ಅಧ್ಯಕ್ಷ ಪುಟಿನ್ ವಿರುದ್ಧ ನ್ಯಾಟೋ ಮುಖ್ಯಸ್ಥರು ಕಿಡಿ​ಕಾರಿದ್ದಾರೆ. ನ್ಯೂಕ್ಲೀಯರ್​ ಅಲರ್ಟ್ ಬೇಜವಾಬ್ದಾರಿತನದಿಂದ ಕೂಡಿದೆ. ಅಪಾಯಕಾರಿ ಹಾಗೂ ಬೇಜವಾಬ್ದಾರಿತನದಿಂದ ಕೂಡಿದೆ. ಇದು ಬೇಜವಾಬ್ದಾರಿತನದ ವಾರ್ನಿಂಗ್ ಎಂದು ನ್ಯಾಟೋ ಮುಖ್ಯಸ್ಥ ಹೇಳಿದ್ದಾರೆ. ಪರಮಾಣು ಪ್ರತಿಬಂಧಕ ಪಡೆಗೆ ಪುಟಿನ್ ಅಲರ್ಟ್​ ಹಿನ್ನೆಲೆ ರಷ್ಯಾ ಅಧ್ಯಕ್ಷ ಪುಟಿನ್​ ವಿರುದ್ಧ ಅಮೆರಿಕ ಕೂಡ ತೀವ್ರ ಆಕ್ರೋಶ ವ್ಯಕ್ತಪಡಿಸಿದೆ. ಬೆದರಿಕೆ ತಂತ್ರಗಾರಿಕೆ ಹೆಣೆಯುತ್ತಿದೆ ಎಂದು US ಆರೋಪ ಮಾಡಿದೆ.

ಉಕ್ರೇನ್​ಗೆ ಯುರೋಪಿಯನ್​ ಒಕ್ಕೂಟದಿಂದ ನೆರವು ಘೋಷಿಸಲಾಗಿದೆ. ಶಸ್ತ್ರಾಸ್ತ್ರ ಖರೀದಿಗಾಗಿ ಆರ್ಥಿಕ ನೆರವು ಘೋಷಣೆ ಮಾಡಲಾಗಿದೆ. ಉಕ್ರೇನ್ ಮೇಲೆ ಯುದ್ಧ ಮುಂದುವರಿಸಿರುವ ಹಿನ್ನೆಲೆ ರಷ್ಯಾದ ವಿಮಾನಗಳಿಗೆ ಯುರೋಪ್​ ಒಕ್ಕೂಟ ನಿರ್ಬಂಧ ವಿಧಿಸಿದೆ. ಈ ಮಧ್ಯೆ, ಉಕ್ರೇನ್ ಬಿಕ್ಕಟ್ಟಿನ ಬಗ್ಗೆ ನಾಳೆ ವಿಶ್ವಸಂಸ್ಥೆ ಭದ್ರತಾ ಮಂಡಳಿ ಸಭೆ ನಡೆಸಲಿದೆ ಎಂದು ಮಾಹಿತಿ ಲಭಿಸಿದೆ.

ಇತ್ತ ರಷ್ಯಾ-ಉಕ್ರೇನ್‌ ನಿಯೋಗದಿಂದ ಶಾಂತಿ ಮಾತುಕತೆ ಆರಂಭವಾಗಿದೆ. ಗೋಮೆಲ್ ಪ್ರದೇಶದಲ್ಲಿ ಶಾಂತಿ ಮಾತುಕತೆ ನಡೆಯುತ್ತಿದೆ. ಉಕ್ರೇನ್‌ ಹಾಗೂ ಬೆಲಾರಸ್​​ನ ಗಡಿ ಪ್ರದೇಶ ಗೋಮೆಲ್ ಎಂಬಲ್ಲಿ ಯುದ್ಧ ಆರಂಭ ಬಳಿಕ ಮೊದಲ ಬಾರಿಗೆ ಶಾಂತಿ ಮಾತುಕತೆ ನಡೆಸಲಾಗುತ್ತಿದೆ.

ಇದನ್ನೂ ಓದಿ: Ukraine Crisis: ಉಕ್ರೇನ್‌ನಿಂದ ಕನ್ನಡಿಗರ ಏರ್‌ಲಿಫ್ಟ್; ರಾತ್ರಿ 8 ಗಂಟೆಯವರೆಗೆ 30 ಕನ್ನಡಿಗ ವಿದ್ಯಾರ್ಥಿಗಳ ಆಗಮನ

ಇದನ್ನೂ ಓದಿ: Indians in Ukraine: ಆಶ್ರಯ ಕೊಟ್ಟ ಮನೆ ಮಾಲೀಕರನ್ನು ಕಾಪಾಡಲೆಂದು ಉಕ್ರೇನ್​ನಲ್ಲೇ ಉಳಿದ ಭಾರತದ ಹುಡುಗಿ

Follow Us
ರಾಜ್ಯದ ಜನತೆಗೆ ಶೀಘ್ರದಲ್ಲೇ ಕಾದಿದ್ಯಾ ಬಸ್ ಪ್ರಯಾಣ ದರ ಏರಿಕೆ ಶಾಕ್?
ರಾಜ್ಯದ ಜನತೆಗೆ ಶೀಘ್ರದಲ್ಲೇ ಕಾದಿದ್ಯಾ ಬಸ್ ಪ್ರಯಾಣ ದರ ಏರಿಕೆ ಶಾಕ್?
ರಾಹುಲ್ ಗಾಂಧಿ ಫೋಟೋಗೆ ಹಾಲಿನ ಅಭಿಷೇಕ ಮಾಡಿದ ಅಭಿಮಾನಿಗಳು!
ರಾಹುಲ್ ಗಾಂಧಿ ಫೋಟೋಗೆ ಹಾಲಿನ ಅಭಿಷೇಕ ಮಾಡಿದ ಅಭಿಮಾನಿಗಳು!
ಗ್ಯಾರಂಟಿ ಯೋಜನೆಗಳ ಬಗ್ಗೆ ಕಟ್ಟು ನಿಟ್ಟಿನ ಕ್ರಮ:ಸಿಎಂ ಕೊಟ್ಟ ಸೂಚನೆಗಳೇನು?
ಗ್ಯಾರಂಟಿ ಯೋಜನೆಗಳ ಬಗ್ಗೆ ಕಟ್ಟು ನಿಟ್ಟಿನ ಕ್ರಮ:ಸಿಎಂ ಕೊಟ್ಟ ಸೂಚನೆಗಳೇನು?
ಬಹು ನಿರೀಕ್ಷಿತ ‘ಕರಾವಳಿ’ ಸಿನಿಮಾ ಬಿಡುಗಡೆ ದಿನಾಂಕ ಘೋಷಣೆ
ಬಹು ನಿರೀಕ್ಷಿತ ‘ಕರಾವಳಿ’ ಸಿನಿಮಾ ಬಿಡುಗಡೆ ದಿನಾಂಕ ಘೋಷಣೆ
ಗ್ಯಾರಂಟಿ ಯೋಜನೆಗಳ ಪರಿಷ್ಕರಣೆ ಬಗ್ಗೆ ಬಿಗ್​​ ಅಪ್ಡೇಟ್​ ಕೊಟ್ಟ ರೇವಣ್ಣ
ಗ್ಯಾರಂಟಿ ಯೋಜನೆಗಳ ಪರಿಷ್ಕರಣೆ ಬಗ್ಗೆ ಬಿಗ್​​ ಅಪ್ಡೇಟ್​ ಕೊಟ್ಟ ರೇವಣ್ಣ
‘ಬಲರಾಮನ ದಿನಗಳು’ ಸಿನಿಮಾ ಬಗ್ಗೆ ಗೆಳೆಯರಾದ ವಿಜಯ್-ಬುಜ್ಜಿ ಮಾತು
‘ಬಲರಾಮನ ದಿನಗಳು’ ಸಿನಿಮಾ ಬಗ್ಗೆ ಗೆಳೆಯರಾದ ವಿಜಯ್-ಬುಜ್ಜಿ ಮಾತು
ಶಿಕ್ಷಕನ ಸಾವು: ಐವರು ಶಿಕ್ಷಕರು ಶಾಲೆಗೆ ಬರುವುದು ಬೇಡವೆಂದ ಗ್ರಾಮಸ್ಥರು
ಶಿಕ್ಷಕನ ಸಾವು: ಐವರು ಶಿಕ್ಷಕರು ಶಾಲೆಗೆ ಬರುವುದು ಬೇಡವೆಂದ ಗ್ರಾಮಸ್ಥರು
ಕೊಚ್ಚಿಹೋದ ದುಧಿಯಾ ಸೇತುವೆ; ಡಾರ್ಜಿಲಿಂಗ್-ಸಿಲಿಗುರಿ ಸಂಪರ್ಕ ಸಂಪೂರ್ಣ ಕಡಿತ
ಕೊಚ್ಚಿಹೋದ ದುಧಿಯಾ ಸೇತುವೆ; ಡಾರ್ಜಿಲಿಂಗ್-ಸಿಲಿಗುರಿ ಸಂಪರ್ಕ ಸಂಪೂರ್ಣ ಕಡಿತ
ಪರಿಷತ್​​ ಚುನಾವಣೆ: ಜೆಡಿಎಸ್​​ ಶಾಸಕರ ಅಡ್ಡ ಮತದಾನದ ಹಿಂದಿದೆ ಹಲವು ಕಾರಣ
ಪರಿಷತ್​​ ಚುನಾವಣೆ: ಜೆಡಿಎಸ್​​ ಶಾಸಕರ ಅಡ್ಡ ಮತದಾನದ ಹಿಂದಿದೆ ಹಲವು ಕಾರಣ
ಮೈತ್ರಿ ಕುಸ್ತಿ? ರೇವಣ್ಣಗೆ ಮಾತಾಡೋ ಅಧಿಕಾರವಿಲ್ಲ: ಅಶೋಕ್ ತಿರುಗೇಟು
ಮೈತ್ರಿ ಕುಸ್ತಿ? ರೇವಣ್ಣಗೆ ಮಾತಾಡೋ ಅಧಿಕಾರವಿಲ್ಲ: ಅಶೋಕ್ ತಿರುಗೇಟು