AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

US vs Russia: ಅಮೆರಿಕ ಸೆನೆಟ್​ನಲ್ಲಿ ಉಕ್ರೇನ್ ಅಧ್ಯಕ್ಷ ವೊಲೊಡ್ಮಿರ್ ಝೆಲೆನ್​ಸ್ಕಿ ಭಾಷಣ

ಉಕ್ರೇನ್​ನಲ್ಲಿ ಸಂಕಷ್ಟ ಪರಿಸ್ಥಿತಿ ಬಿಗಡಾಯಿಸುತ್ತಿರುವ ಹಿನ್ನೆಲೆಯಲ್ಲಿ ಅಮೆರಿಕದ ಕೆಲ ಜನಪ್ರತಿನಿಧಿಗಳು ಅಧ್ಯಕ್ಷ ಜೋ ಬಿಡೆನ್ ಅವರಿಗೆ ಗಟ್ಟಿ ನಿರ್ಧಾರ ತೆಗೆದುಕೊಳ್ಳಿ ಎಂದು ಒತ್ತಾಯ ಮಾಡಿದ್ದಾರೆ.

US vs Russia: ಅಮೆರಿಕ ಸೆನೆಟ್​ನಲ್ಲಿ ಉಕ್ರೇನ್ ಅಧ್ಯಕ್ಷ ವೊಲೊಡ್ಮಿರ್ ಝೆಲೆನ್​ಸ್ಕಿ ಭಾಷಣ
ಉಕ್ರೇನ್ ಅಧ್ಯಕ್ಷ ವೊಲೊಡ್ಮಿರ್ ಝೆಲೆನ್​ಸ್ಕಿ ಮತ್ತು ಅಮೆರಿಕ ಅಧ್ಯಕ್ಷ ಜೋ ಬೈಡೆನ್
TV9 Web
| Edited By: |

Updated on: Mar 05, 2022 | 11:08 AM

Share

ವಾಷಿಂಗ್​ಟನ್: ರಷ್ಯಾ ದಾಳಿಯನ್ನು ಹಿಮ್ಮೆಟ್ಟಿಸಲು ಅವಿರತ ಪ್ರಯತ್ನಿಸುತ್ತಿರುವ ಉಕ್ರೇನ್ ಅಧ್ಯಕ್ಷ ವೊಲೊಡ್ಮಿರ್ ಝೆಲೆನ್​ಸ್ಕಿ (Volodymyr Zelensky) ಅಮೆರಿಕದ ಸೆನೆಟ್​ ಸದಸ್ಯರನ್ನು ಉದ್ದೇಶಿಸಿ ಶನಿವಾರ (ಫೆ.5) ಭಾಷಣ ಮಾಡಲಿದ್ದಾರೆ. ಉಕ್ರೇನ್ (Ukraine) ಸರ್ಕಾರದ ವಿನಂತಿಯ ಮೇಲೆ ನಡೆಯಲಿರುವ ಝೂಂ ಮೀಟಿಂಗ್​ನಲ್ಲಿ ಈ ಸಂವಾದ ನಡೆಯಲಿದೆ. ಉಕ್ರೇನ್​ನಲ್ಲಿ ಸಂಕಷ್ಟ ಪರಿಸ್ಥಿತಿ ಬಿಗಡಾಯಿಸುತ್ತಿರುವ ಹಿನ್ನೆಲೆಯಲ್ಲಿ ಅಮೆರಿಕದ ಕೆಲ ಜನಪ್ರತಿನಿಧಿಗಳು ಅಧ್ಯಕ್ಷ ಜೋ ಬಿಡೆನ್ ಅವರಿಗೆ ಗಟ್ಟಿ ನಿರ್ಧಾರ ತೆಗೆದುಕೊಳ್ಳಿ ಎಂದು ಒತ್ತಾಯ ಮಾಡಿದ್ದಾರೆ. ರಷ್ಯಾದಿಂದ ಕಚ್ಚಾತೈಲ ಆಮದು ಮಾಡಿಕೊಳ್ಳುವುದನ್ನೂ ನಿಲ್ಲಿಸಬೇಕು ಎಂದು ಆಗ್ರಹಿಸಿದ್ದಾರೆ.

ಈ ಮನವಿಗಳನ್ನು ಅಧ್ಯಕ್ಷ ಜೋ ಬಿಡೆನ್ ಈವರೆಗೆ ತಳ್ಳಿ ಹಾಕುತ್ತಲೇ ಇದ್ದರು. ರಷ್ಯಾದಿಂದ ಕಚ್ಚಾ ತೈಲದ ಆಮದು ನಿರ್ಬಂಧಿಸಿದರೆ ಜಾಗತಿಕ ಮಟ್ಟದಲ್ಲಿ ಪೆಟ್ರೋಲಿಯಂ ಉತ್ಪನ್ನಗಳ ಬೆಲೆ ಹೆಚ್ಚಾಗಬಹುದು ಎಂಬ ಭೀತಿ ವ್ಯಕ್ತವಾಗಿದೆ. ಈಗಾಗಲೇ ಹಣದುಬ್ಬರದಿಂದ ನಲುಗಿರುವ ಅಮೆರಿಕದ ಜನರಿಗೆ ತೈಲಬೆಲೆ ಏರಿಕೆಯಿಂದ ಮತ್ತಷ್ಟು ಸಮಸ್ಯೆಗಳಾಗುತ್ತವೆ ಎಂದು ಬೈಡೆನ್ ಹೆದರಿದ್ದರು. ಉಕ್ರೇನ್ ಮೇಲೆ ದಾಳಿ ಮಾಡಿದ ನಂತರ ರಷ್ಯಾ ವಿರುದ್ಧ ತಿರುಗಿ ಬಿದ್ದಿರುವ ಅಮೆರಿಕದ ಜನರು ವ್ಯಾಪಕವಾಗಿ ಆಕ್ರೋಶ ವ್ಯಕ್ತಪಡಿಸುತ್ತಾರೆ. ವ್ಲಾದಿಮಿರ್ ಪುಟಿನ್ ಅವರನ್ನು ರಷ್ಯಾದಲ್ಲಿಯೇ ಹತ್ಯೆ ಮಾಡಬೇಕು ಎಂದು ರಿಪಬ್ಲಿಕನ್ ಪಕ್ಷದ ಸೆನೆಟರ್ ಲಿಂಡ್ಸೆ ಗ್ರಾಹಮ್ ಕರೆ ನೀಡಿದ್ದಾರೆ.

ಉಕ್ರೇನ್ ಮೇಲೆ ದಂಡೆತ್ತಿ ಬಂದಿರುವ ರಷ್ಯಾವನ್ನು ಹದ್ದುಬಸ್ತಿನಲ್ಲಿಡಲು ನ್ಯಾಟೊ ಮಿಲಿಟರಿ ಕಾರ್ಯಾಚರಣೆ ನಡೆಸಬೇಕು. ಉಕ್ರೇನ್ ದೇಶದ ವಾಯುಗಡಿಯಲ್ಲಿ ಕಟ್ಟುನಿಟ್ಟಾಗಿ ವಿಮಾನ ಹಾರಾಟ ನಿರ್ಬಂಧ ಹೇರಬೇಕು ಎಂದು ಉಕ್ರೇನ್ ಅಧ್ಯಕ್ಷ ಝೆಲೆನ್​ಸ್ಕಿ ಆಗ್ರಹಿಸಿದ್ದರು. ಆದರೆ ಹೀಗೆ ಮಾಡಿದರೆ ರಷ್ಯಾವನ್ನು ಇನ್ನಷ್ಟು ಕೆರಳಿಸಿದಂತೆ ಆಗುತ್ತದೆ. ಪಾಶ್ಚಿಮಾತ್ಯ ದೇಶಗಳು ರಷ್ಯಾ ವಿರುದ್ಧ ನೇರವಾಗಿ ಯುದ್ಧಕ್ಕೆ ನಿಲ್ಲಬೇಕಾಗಬಹುದು ಎಂದು ಬೈಡೆನ್ ಹೆದರಿದ್ದರು. ರಷ್ಯಾ ವಿರುದ್ಧ ಸೇನಾ ಕಾರ್ಯಾಚರಣೆ ನಡೆಸಬೇಕು ಎಂದು ಅಮೆರಿಕದ ಸೆನೆಟ್ ಕಾರ್ಯಕರ್ತರು ಇಂದಿಗೂ ಒತ್ತಾಯಿಸುತ್ತಲೇ ಇದ್ದಾರೆ.

ಇದನ್ನೂ ಓದಿ: ಉಕ್ರೇನ್​ ಮೇಲಿನ ಯುದ್ಧ ಖಂಡಿಸಿ ನೇರ ಪ್ರಸಾರದಲ್ಲಿ ರಾಜೀನಾಮೆ ನೀಡಿದ ರಷ್ಯಾದ ಟಿವಿ ಚಾನೆಲ್​ ಸಿಬ್ಬಂದಿ ವರ್ಗ: ಪ್ರಸಾರ ಸ್ಥಗಿತ

ಇದನ್ನೂ ಓದಿ: Ukraine Crisis: 9,000 ರಷ್ಯನ್ ಸೈನಿಕರನ್ನು ಕೊಂದಿರುವುದಾಗಿ ಹೇಳಿಕೊಂಡ ಉಕ್ರೇನ್; ಬೆಳವಣಿಗೆಯ 10 ಮುಖ್ಯಾಂಶಗಳು ಇಲ್ಲಿವೆ

Follow Us
ಹಗಲು ರಾತ್ರಿ ಹಣದ ಚಿಂತೆ ಮಾಡುತ್ತಿದ್ದೀರಾ? ಇದರಿಂದ ಯಾವ ದೋಷ ಬರುತ್ತೆ?
ಹಗಲು ರಾತ್ರಿ ಹಣದ ಚಿಂತೆ ಮಾಡುತ್ತಿದ್ದೀರಾ? ಇದರಿಂದ ಯಾವ ದೋಷ ಬರುತ್ತೆ?
ಇಂದು ಈ ರಾಶಿಯವರು ಅತಿಯಾದ ಕೋಪವನ್ನು ಕೈಬಿಡಿ
ಇಂದು ಈ ರಾಶಿಯವರು ಅತಿಯಾದ ಕೋಪವನ್ನು ಕೈಬಿಡಿ
ಬೆಳಗಾವಿಯಲ್ಲಿ ಭಾರಿ ಗಾಳಿ ಮಳೆಗೆ ಧರೆಗುರುಳಿದ ಮರಗಳು: ಸಂಚಾರ ಅಸ್ತವ್ಯಸ್ತ
ಬೆಳಗಾವಿಯಲ್ಲಿ ಭಾರಿ ಗಾಳಿ ಮಳೆಗೆ ಧರೆಗುರುಳಿದ ಮರಗಳು: ಸಂಚಾರ ಅಸ್ತವ್ಯಸ್ತ
ಪ್ರಧಾನಿ ಮೋದಿ ಹಾಸನದ ಮೆಗಾ ಡೇರಿ ಉದ್ಘಾಟನೆ ಮಾಡುತ್ತಾರೆ; ಹೆಚ್​ಡಿ ದೇವೇಗೌಡ
ಪ್ರಧಾನಿ ಮೋದಿ ಹಾಸನದ ಮೆಗಾ ಡೇರಿ ಉದ್ಘಾಟನೆ ಮಾಡುತ್ತಾರೆ; ಹೆಚ್​ಡಿ ದೇವೇಗೌಡ
ಸರ್ಕಾರಿ ನ್ಯಾಯಬೆಲೆ ಅಂಗಡಿ ಸಿನಿಮಾ: ಸಿಎಂ ಸಹಕಾರ ನೆನೆದ ಕುಮಾರ್ ಬಂಗಾರಪ್ಪ
ಸರ್ಕಾರಿ ನ್ಯಾಯಬೆಲೆ ಅಂಗಡಿ ಸಿನಿಮಾ: ಸಿಎಂ ಸಹಕಾರ ನೆನೆದ ಕುಮಾರ್ ಬಂಗಾರಪ್ಪ
ಮಳೆ ಕೊರತೆ ಮಧ್ಯೆ ತೀವ್ರ ಬಿಸಿಲು: ಬರಿದಾಗುತ್ತಿದೆ ಜೀವನಾಡಿ ಕೆಆರ್‌ಎಸ್
ಮಳೆ ಕೊರತೆ ಮಧ್ಯೆ ತೀವ್ರ ಬಿಸಿಲು: ಬರಿದಾಗುತ್ತಿದೆ ಜೀವನಾಡಿ ಕೆಆರ್‌ಎಸ್
ತಾಂಡಾ, ಹಾಡಿ ನಿವಾಸಿಗಳ ದಶಕಗಳ ಕನಸು ನನಸು
ತಾಂಡಾ, ಹಾಡಿ ನಿವಾಸಿಗಳ ದಶಕಗಳ ಕನಸು ನನಸು
ಮತ್ತೆ ಸನಾತನ ನಿರ್ಮೂಲನೆಯ ಹೇಳಿಕೆ ನೀಡಿ ವಿವಾದಕ್ಕೀಡಾದ ಉದಯನಿಧಿ ಸ್ಟಾಲಿನ್
ಮತ್ತೆ ಸನಾತನ ನಿರ್ಮೂಲನೆಯ ಹೇಳಿಕೆ ನೀಡಿ ವಿವಾದಕ್ಕೀಡಾದ ಉದಯನಿಧಿ ಸ್ಟಾಲಿನ್
ಬೆಂಗಳೂರಿನಲ್ಲಿ ಎಲೆಕ್ಟ್ರಿಕ್ ಬೈಕ್ ಬ್ಯಾಟರಿ ಸ್ಫೋಟಗೊಂಡು ವೃದ್ಧ ಸಾವು!
ಬೆಂಗಳೂರಿನಲ್ಲಿ ಎಲೆಕ್ಟ್ರಿಕ್ ಬೈಕ್ ಬ್ಯಾಟರಿ ಸ್ಫೋಟಗೊಂಡು ವೃದ್ಧ ಸಾವು!
ಬಹುಮತ ಸಾಬೀತಿಗೂ ಮುನ್ನ ಎಐಎಡಿಎಂಕೆ ರೆಬೆಲ್ ನಾಯಕರನ್ನು ಭೇಟಿಯಾದ ವಿಜಯ್
ಬಹುಮತ ಸಾಬೀತಿಗೂ ಮುನ್ನ ಎಐಎಡಿಎಂಕೆ ರೆಬೆಲ್ ನಾಯಕರನ್ನು ಭೇಟಿಯಾದ ವಿಜಯ್