AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

US vs Russia: ಅಮೆರಿಕ ಸೆನೆಟ್​ನಲ್ಲಿ ಉಕ್ರೇನ್ ಅಧ್ಯಕ್ಷ ವೊಲೊಡ್ಮಿರ್ ಝೆಲೆನ್​ಸ್ಕಿ ಭಾಷಣ

ಉಕ್ರೇನ್​ನಲ್ಲಿ ಸಂಕಷ್ಟ ಪರಿಸ್ಥಿತಿ ಬಿಗಡಾಯಿಸುತ್ತಿರುವ ಹಿನ್ನೆಲೆಯಲ್ಲಿ ಅಮೆರಿಕದ ಕೆಲ ಜನಪ್ರತಿನಿಧಿಗಳು ಅಧ್ಯಕ್ಷ ಜೋ ಬಿಡೆನ್ ಅವರಿಗೆ ಗಟ್ಟಿ ನಿರ್ಧಾರ ತೆಗೆದುಕೊಳ್ಳಿ ಎಂದು ಒತ್ತಾಯ ಮಾಡಿದ್ದಾರೆ.

US vs Russia: ಅಮೆರಿಕ ಸೆನೆಟ್​ನಲ್ಲಿ ಉಕ್ರೇನ್ ಅಧ್ಯಕ್ಷ ವೊಲೊಡ್ಮಿರ್ ಝೆಲೆನ್​ಸ್ಕಿ ಭಾಷಣ
ಉಕ್ರೇನ್ ಅಧ್ಯಕ್ಷ ವೊಲೊಡ್ಮಿರ್ ಝೆಲೆನ್​ಸ್ಕಿ ಮತ್ತು ಅಮೆರಿಕ ಅಧ್ಯಕ್ಷ ಜೋ ಬೈಡೆನ್
TV9 Web
| Edited By: |

Updated on: Mar 05, 2022 | 11:08 AM

Share

ವಾಷಿಂಗ್​ಟನ್: ರಷ್ಯಾ ದಾಳಿಯನ್ನು ಹಿಮ್ಮೆಟ್ಟಿಸಲು ಅವಿರತ ಪ್ರಯತ್ನಿಸುತ್ತಿರುವ ಉಕ್ರೇನ್ ಅಧ್ಯಕ್ಷ ವೊಲೊಡ್ಮಿರ್ ಝೆಲೆನ್​ಸ್ಕಿ (Volodymyr Zelensky) ಅಮೆರಿಕದ ಸೆನೆಟ್​ ಸದಸ್ಯರನ್ನು ಉದ್ದೇಶಿಸಿ ಶನಿವಾರ (ಫೆ.5) ಭಾಷಣ ಮಾಡಲಿದ್ದಾರೆ. ಉಕ್ರೇನ್ (Ukraine) ಸರ್ಕಾರದ ವಿನಂತಿಯ ಮೇಲೆ ನಡೆಯಲಿರುವ ಝೂಂ ಮೀಟಿಂಗ್​ನಲ್ಲಿ ಈ ಸಂವಾದ ನಡೆಯಲಿದೆ. ಉಕ್ರೇನ್​ನಲ್ಲಿ ಸಂಕಷ್ಟ ಪರಿಸ್ಥಿತಿ ಬಿಗಡಾಯಿಸುತ್ತಿರುವ ಹಿನ್ನೆಲೆಯಲ್ಲಿ ಅಮೆರಿಕದ ಕೆಲ ಜನಪ್ರತಿನಿಧಿಗಳು ಅಧ್ಯಕ್ಷ ಜೋ ಬಿಡೆನ್ ಅವರಿಗೆ ಗಟ್ಟಿ ನಿರ್ಧಾರ ತೆಗೆದುಕೊಳ್ಳಿ ಎಂದು ಒತ್ತಾಯ ಮಾಡಿದ್ದಾರೆ. ರಷ್ಯಾದಿಂದ ಕಚ್ಚಾತೈಲ ಆಮದು ಮಾಡಿಕೊಳ್ಳುವುದನ್ನೂ ನಿಲ್ಲಿಸಬೇಕು ಎಂದು ಆಗ್ರಹಿಸಿದ್ದಾರೆ.

ಈ ಮನವಿಗಳನ್ನು ಅಧ್ಯಕ್ಷ ಜೋ ಬಿಡೆನ್ ಈವರೆಗೆ ತಳ್ಳಿ ಹಾಕುತ್ತಲೇ ಇದ್ದರು. ರಷ್ಯಾದಿಂದ ಕಚ್ಚಾ ತೈಲದ ಆಮದು ನಿರ್ಬಂಧಿಸಿದರೆ ಜಾಗತಿಕ ಮಟ್ಟದಲ್ಲಿ ಪೆಟ್ರೋಲಿಯಂ ಉತ್ಪನ್ನಗಳ ಬೆಲೆ ಹೆಚ್ಚಾಗಬಹುದು ಎಂಬ ಭೀತಿ ವ್ಯಕ್ತವಾಗಿದೆ. ಈಗಾಗಲೇ ಹಣದುಬ್ಬರದಿಂದ ನಲುಗಿರುವ ಅಮೆರಿಕದ ಜನರಿಗೆ ತೈಲಬೆಲೆ ಏರಿಕೆಯಿಂದ ಮತ್ತಷ್ಟು ಸಮಸ್ಯೆಗಳಾಗುತ್ತವೆ ಎಂದು ಬೈಡೆನ್ ಹೆದರಿದ್ದರು. ಉಕ್ರೇನ್ ಮೇಲೆ ದಾಳಿ ಮಾಡಿದ ನಂತರ ರಷ್ಯಾ ವಿರುದ್ಧ ತಿರುಗಿ ಬಿದ್ದಿರುವ ಅಮೆರಿಕದ ಜನರು ವ್ಯಾಪಕವಾಗಿ ಆಕ್ರೋಶ ವ್ಯಕ್ತಪಡಿಸುತ್ತಾರೆ. ವ್ಲಾದಿಮಿರ್ ಪುಟಿನ್ ಅವರನ್ನು ರಷ್ಯಾದಲ್ಲಿಯೇ ಹತ್ಯೆ ಮಾಡಬೇಕು ಎಂದು ರಿಪಬ್ಲಿಕನ್ ಪಕ್ಷದ ಸೆನೆಟರ್ ಲಿಂಡ್ಸೆ ಗ್ರಾಹಮ್ ಕರೆ ನೀಡಿದ್ದಾರೆ.

ಉಕ್ರೇನ್ ಮೇಲೆ ದಂಡೆತ್ತಿ ಬಂದಿರುವ ರಷ್ಯಾವನ್ನು ಹದ್ದುಬಸ್ತಿನಲ್ಲಿಡಲು ನ್ಯಾಟೊ ಮಿಲಿಟರಿ ಕಾರ್ಯಾಚರಣೆ ನಡೆಸಬೇಕು. ಉಕ್ರೇನ್ ದೇಶದ ವಾಯುಗಡಿಯಲ್ಲಿ ಕಟ್ಟುನಿಟ್ಟಾಗಿ ವಿಮಾನ ಹಾರಾಟ ನಿರ್ಬಂಧ ಹೇರಬೇಕು ಎಂದು ಉಕ್ರೇನ್ ಅಧ್ಯಕ್ಷ ಝೆಲೆನ್​ಸ್ಕಿ ಆಗ್ರಹಿಸಿದ್ದರು. ಆದರೆ ಹೀಗೆ ಮಾಡಿದರೆ ರಷ್ಯಾವನ್ನು ಇನ್ನಷ್ಟು ಕೆರಳಿಸಿದಂತೆ ಆಗುತ್ತದೆ. ಪಾಶ್ಚಿಮಾತ್ಯ ದೇಶಗಳು ರಷ್ಯಾ ವಿರುದ್ಧ ನೇರವಾಗಿ ಯುದ್ಧಕ್ಕೆ ನಿಲ್ಲಬೇಕಾಗಬಹುದು ಎಂದು ಬೈಡೆನ್ ಹೆದರಿದ್ದರು. ರಷ್ಯಾ ವಿರುದ್ಧ ಸೇನಾ ಕಾರ್ಯಾಚರಣೆ ನಡೆಸಬೇಕು ಎಂದು ಅಮೆರಿಕದ ಸೆನೆಟ್ ಕಾರ್ಯಕರ್ತರು ಇಂದಿಗೂ ಒತ್ತಾಯಿಸುತ್ತಲೇ ಇದ್ದಾರೆ.

ಇದನ್ನೂ ಓದಿ: ಉಕ್ರೇನ್​ ಮೇಲಿನ ಯುದ್ಧ ಖಂಡಿಸಿ ನೇರ ಪ್ರಸಾರದಲ್ಲಿ ರಾಜೀನಾಮೆ ನೀಡಿದ ರಷ್ಯಾದ ಟಿವಿ ಚಾನೆಲ್​ ಸಿಬ್ಬಂದಿ ವರ್ಗ: ಪ್ರಸಾರ ಸ್ಥಗಿತ

ಇದನ್ನೂ ಓದಿ: Ukraine Crisis: 9,000 ರಷ್ಯನ್ ಸೈನಿಕರನ್ನು ಕೊಂದಿರುವುದಾಗಿ ಹೇಳಿಕೊಂಡ ಉಕ್ರೇನ್; ಬೆಳವಣಿಗೆಯ 10 ಮುಖ್ಯಾಂಶಗಳು ಇಲ್ಲಿವೆ

Follow Us
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು