AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಯುರೋಪಿಯನ್​ ಸಂಸತ್ತಿನಲ್ಲಿ ಉಕ್ರೇನ್ ಅಧ್ಯಕ್ಷರಿಂದ ಭಾಷಣ; ಖಾರ್ಕೀವ್​ನಲ್ಲಿ ನಡೆಯುತ್ತಿರುವುದು ವಾರ್​ ಕ್ರೈಮ್​ ಎಂದ ಝೆಲೆನ್ಸ್ಕಿ

ಉಕ್ರೇನ್​ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ ವಿಡಿಯೋ ಮೂಲಕ ಮಾತನಾಡಿ, ಖಾರ್ಕೀವ್​​ನಲ್ಲಿ ರಷ್ಯಾ ನಡೆಸುತ್ತಿರುವುದು ಯುದ್ಧ ಅಪರಾಧ (ವಾರ್​ ಕ್ರೈಮ್​) ಎಂದು ಹೇಳಿದ್ದಾರೆ.

ಯುರೋಪಿಯನ್​ ಸಂಸತ್ತಿನಲ್ಲಿ ಉಕ್ರೇನ್ ಅಧ್ಯಕ್ಷರಿಂದ ಭಾಷಣ; ಖಾರ್ಕೀವ್​ನಲ್ಲಿ ನಡೆಯುತ್ತಿರುವುದು ವಾರ್​ ಕ್ರೈಮ್​ ಎಂದ ಝೆಲೆನ್ಸ್ಕಿ
ವೊಲಿಡಿಮಿರ್​ ಝೆಲೆನ್ಸ್ಕಿ
TV9 Web
| Edited By: |

Updated on: Mar 01, 2022 | 6:33 PM

Share

ಉಕ್ರೇನ್​ ಮೇಲೆ ರಷ್ಯಾ ಆಕ್ರಮಣ ಮಾಡಿ 6 ದಿನಗಳು ಕಳೆದಿದ್ದು, ಸಾವು-ನೋವು, ಹಾನಿಯ ಪ್ರಮಾಣ ಹೆಚ್ಚುತ್ತಲೇ ಇದೆ. ಈ ಮಧ್ಯೆ ಇಂದು ಉಕ್ರೇನ್​ ಅಧ್ಯಕ್ಷ ವೊಲೊಡಿಮಿರ್​ ಝೆಲೆನ್ಸ್ಕಿ (Volodymyr Zelensky) ಯುರೋಪಿಯನ್​ ಸಂಸತ್ತನ್ನು ಉದ್ದೇಶಿಸಿ ಮಾತನಾಡಿದ್ದಾರೆ. ಉಕ್ರೇನ್​ ಸಂಸತ್ತಿನ ಸ್ಪೀಕರ್​ ರುಸ್ಲಾನ್ ಸ್ಟೆಫಾಂಚುಕ್ ಕೂಡ ಮಾತನಾಡಿದ್ದಾರೆ. ಯುರೋಪಿಯನ್​ ಒಕ್ಕೂಟ ಉಕ್ರೇನ್​​ನೊಂದಿಗೆ ಇದೆ, ಉಕ್ರೇನ್​ಗೆ ಸದಾ ಬೆಂಬಲ ನೀಡುತ್ತದೆ ಎಂಬುದನ್ನು ಸಾಕ್ಷೀಕರಿಸಿ ಎಂದು ಝೆಲೆನ್ಸ್ಕಿ ಇಂದಿನ ಸೆಷನ್​ನಲ್ಲಿ ಹೇಳಿದ್ದಾರೆ. ಆಗ ಉಳಿದ ದೇಶಗಳ ನಾಯಕರು ಎದ್ದು ನಿಂತು ಚಪ್ಪಾಳೆ ಹೊಡೆಯುವ ಮೂಲಕ (ಸ್ಟ್ಯಾಂಡಿಗ್​ ಒವೇಶನ್​) ತಮ್ಮ ಬೆಂಬಲ ವ್ಯಕ್ತಪಡಿಸಿದ್ದಾರೆ ಎಂದು ಮಾಧ್ಯಮವೊಂದು ವರದಿ ಮಾಡಿದೆ.  

ಅಧಿವೇಶನಕ್ಕೂ ಮುನ್ನೆ ಟ್ವೀಟ್ ಮಾಡಿದ್ದ ಯುರೋಪಿಯನ್ ಪಾರ್ಲಿಮೆಂಟ್​ ಅಧ್ಯಕ್ಷರಾದ ರಾಬರ್ಟಾ ಮೆಟ್ಸೋಲಾ, ಇಂದು ಮಧ್ಯಾಹ್ನ 12.30ರ ಹೊತ್ತಿಗೆ, ಉಕ್ರೇನ್​ ಮೇಲೆ ರಷ್ಯಾದ ಆಕ್ರಮಣದ ಬಗ್ಗೆ ಚರ್ಚೆ ನಡೆಯಲಿದೆ. ಇದರಲ್ಲಿ ಉಕ್ರೇನ್ ಅಧ್ಯಕ್ಷ ಮತ್ತು ಅಲ್ಲಿನ ಸಂಸತ್ತಿನ ಸ್ಪೀಕರ್ ಪಾಲ್ಗೊಳ್ಳಲಿದ್ದಾರೆ ಎಂದು ಮಾಹಿತಿ ನೀಡಿದ್ದರು. ಹಾಗೇ, ಸೆಷನ್ಸ್​ ಮುಗಿದ ಬಳಿಕ ಟ್ವೀಟ್ ಮಾಡಿ ಮಾಹಿತಿ ನೀಡಿದ ಅವರು, ಒಂದು ದೇಶದ ಸ್ವಾತಂತ್ರ್ಯ ಮತ್ತು ಸಾರ್ವಭೌಮತ್ವದ ಮೇಲೆ ಆಕ್ರಮಣ ಆಗುತ್ತಿರುವುದನ್ನು ನೋಡುತ್ತಿದ್ದೇವೆ. ಇಂದು ಅಧಿವೇಶನದ ಉಕ್ರೇನ್​ ವಿರುದ್ಧ ರಷ್ಯಾ ಆಕ್ರಮಣದ ಬಗ್ಗೆ ಆಳವಾಗಿ ಚರ್ಚೆ ಮಾಡಲಾಯಿತು. ಶೀಘ್ರದಲ್ಲೇ ಯುರೋಪಿಯನ್ ಸಂಸತ್ತು ರಷ್ಯಾ ವಿರುದ್ಧ ನಿರ್ಣಯ ಕೈಗೊಳ್ಳಲಿದೆ ಎಂದು ತಿಳಿಸಿದ್ದಾರೆ.

ವಾರ್​ ಕ್ರೈಮ್​ ಎಂದ ಉಕ್ರೇನ್​ ಅಧ್ಯಕ್ಷ

ಉಕ್ರೇನ್​ನ ಖಾರ್ಕೀವ್​​ನಲ್ಲಿ ಇಂದು ರಷ್ಯಾ ತೀವ್ರ ದಾಳಿ ನಡೆಸುತ್ತಿದೆ. ಅಲ್ಲಿನ ಪ್ರಾದೇಶಿಕ ಆಡಳಿತ ಕಚೇರಿಯ ಕಟ್ಟಡದ ಮೇಲೆಯೂ ಕ್ಷಿಪಣಿ ದಾಳಿಯಾಗಿದೆ. ಇಲ್ಲಿ ನಡೆದ ಶೆಲ್​ ದಾಳಿಯಲ್ಲಿ ಕರ್ನಾಟಕದ ವಿದ್ಯಾರ್ಥಿ ನವೀನ್​ ಮೃತಪಟ್ಟಿದ್ದಾರೆ. ಈ ಮಧ್ಯೆ ಉಕ್ರೇನ್​ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ ವಿಡಿಯೋ ಮೂಲಕ ಮಾತನಾಡಿ, ಖಾರ್ಕೀವ್​​ನಲ್ಲಿ ರಷ್ಯಾ ನಡೆಸುತ್ತಿರುವುದು ಯುದ್ಧ ಅಪರಾಧ (ವಾರ್​ ಕ್ರೈಮ್​) ಎಂದು ಹೇಳಿದ್ದಾರೆ. ಅಂದರೆ ರಷ್ಯಾದ ಸೈನಿಕರು ಯುದ್ಧದ ಎಲ್ಲ ಕಾನೂನು-ನಿಯಮಗಳನ್ನೂ ಮೀರುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.

ಇದನ್ನೂ ಓದಿ: ನವೀನ್​ ಸಾವಿನ ಬೆನ್ನಲ್ಲೇ ಕೇಂದ್ರ ಸರ್ಕಾರ ಫುಲ್ ಅಲರ್ಟ್​; ರಷ್ಯಾ, ಉಕ್ರೇನ್​ ರಾಯಭಾರಿಗಳನ್ನು ಕರೆಸಿ ಚರ್ಚೆ

ಇದ್ದಕ್ಕಿದ್ದಂತೆ ಜನರು, ಹಸುಗಳ ಮೇಲೆ ಕಾಡು ಕರಡಿ ದಾಳಿ; ವಿಡಿಯೋ ವೈರಲ್
ಇದ್ದಕ್ಕಿದ್ದಂತೆ ಜನರು, ಹಸುಗಳ ಮೇಲೆ ಕಾಡು ಕರಡಿ ದಾಳಿ; ವಿಡಿಯೋ ವೈರಲ್
ಮೈಸೂರು ರಿಂಗ್ ರಸ್ತೆಯ ಪರಿಸ್ಥಿತಿ ಹೇಗಿದೆ? ವಿಡಿಯೋ ಮೂಲಕ ತಿಳಿಸಿದ ಅನಿರುದ್
ಮೈಸೂರು ರಿಂಗ್ ರಸ್ತೆಯ ಪರಿಸ್ಥಿತಿ ಹೇಗಿದೆ? ವಿಡಿಯೋ ಮೂಲಕ ತಿಳಿಸಿದ ಅನಿರುದ್
ನರಕ ಸದೃಶ್ಯವಾಗಿತ್ತು ಖಳನಟ ವಜ್ರಮುನಿ ಕೊನೆಯ ದಿನಗಳು
ನರಕ ಸದೃಶ್ಯವಾಗಿತ್ತು ಖಳನಟ ವಜ್ರಮುನಿ ಕೊನೆಯ ದಿನಗಳು
ಉತ್ತರಾಖಂಡದ ಜೋಶಿಮಠದಲ್ಲಿರುವ ಸೇನಾ ಶಿಬಿರದಲ್ಲಿ ಬೆಂಕಿ ಅವಘಡ
ಉತ್ತರಾಖಂಡದ ಜೋಶಿಮಠದಲ್ಲಿರುವ ಸೇನಾ ಶಿಬಿರದಲ್ಲಿ ಬೆಂಕಿ ಅವಘಡ
ಪತಿ ಮತ್ತು ಮಾವನಿಂದ ಚಿತ್ರಹಿಂಸೆ
ಪತಿ ಮತ್ತು ಮಾವನಿಂದ ಚಿತ್ರಹಿಂಸೆ
ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?