AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಯುರೋಪಿಯನ್​ ಸಂಸತ್ತಿನಲ್ಲಿ ಉಕ್ರೇನ್ ಅಧ್ಯಕ್ಷರಿಂದ ಭಾಷಣ; ಖಾರ್ಕೀವ್​ನಲ್ಲಿ ನಡೆಯುತ್ತಿರುವುದು ವಾರ್​ ಕ್ರೈಮ್​ ಎಂದ ಝೆಲೆನ್ಸ್ಕಿ

ಉಕ್ರೇನ್​ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ ವಿಡಿಯೋ ಮೂಲಕ ಮಾತನಾಡಿ, ಖಾರ್ಕೀವ್​​ನಲ್ಲಿ ರಷ್ಯಾ ನಡೆಸುತ್ತಿರುವುದು ಯುದ್ಧ ಅಪರಾಧ (ವಾರ್​ ಕ್ರೈಮ್​) ಎಂದು ಹೇಳಿದ್ದಾರೆ.

ಯುರೋಪಿಯನ್​ ಸಂಸತ್ತಿನಲ್ಲಿ ಉಕ್ರೇನ್ ಅಧ್ಯಕ್ಷರಿಂದ ಭಾಷಣ; ಖಾರ್ಕೀವ್​ನಲ್ಲಿ ನಡೆಯುತ್ತಿರುವುದು ವಾರ್​ ಕ್ರೈಮ್​ ಎಂದ ಝೆಲೆನ್ಸ್ಕಿ
ವೊಲಿಡಿಮಿರ್​ ಝೆಲೆನ್ಸ್ಕಿ
TV9 Web
| Edited By: |

Updated on: Mar 01, 2022 | 6:33 PM

Share

ಉಕ್ರೇನ್​ ಮೇಲೆ ರಷ್ಯಾ ಆಕ್ರಮಣ ಮಾಡಿ 6 ದಿನಗಳು ಕಳೆದಿದ್ದು, ಸಾವು-ನೋವು, ಹಾನಿಯ ಪ್ರಮಾಣ ಹೆಚ್ಚುತ್ತಲೇ ಇದೆ. ಈ ಮಧ್ಯೆ ಇಂದು ಉಕ್ರೇನ್​ ಅಧ್ಯಕ್ಷ ವೊಲೊಡಿಮಿರ್​ ಝೆಲೆನ್ಸ್ಕಿ (Volodymyr Zelensky) ಯುರೋಪಿಯನ್​ ಸಂಸತ್ತನ್ನು ಉದ್ದೇಶಿಸಿ ಮಾತನಾಡಿದ್ದಾರೆ. ಉಕ್ರೇನ್​ ಸಂಸತ್ತಿನ ಸ್ಪೀಕರ್​ ರುಸ್ಲಾನ್ ಸ್ಟೆಫಾಂಚುಕ್ ಕೂಡ ಮಾತನಾಡಿದ್ದಾರೆ. ಯುರೋಪಿಯನ್​ ಒಕ್ಕೂಟ ಉಕ್ರೇನ್​​ನೊಂದಿಗೆ ಇದೆ, ಉಕ್ರೇನ್​ಗೆ ಸದಾ ಬೆಂಬಲ ನೀಡುತ್ತದೆ ಎಂಬುದನ್ನು ಸಾಕ್ಷೀಕರಿಸಿ ಎಂದು ಝೆಲೆನ್ಸ್ಕಿ ಇಂದಿನ ಸೆಷನ್​ನಲ್ಲಿ ಹೇಳಿದ್ದಾರೆ. ಆಗ ಉಳಿದ ದೇಶಗಳ ನಾಯಕರು ಎದ್ದು ನಿಂತು ಚಪ್ಪಾಳೆ ಹೊಡೆಯುವ ಮೂಲಕ (ಸ್ಟ್ಯಾಂಡಿಗ್​ ಒವೇಶನ್​) ತಮ್ಮ ಬೆಂಬಲ ವ್ಯಕ್ತಪಡಿಸಿದ್ದಾರೆ ಎಂದು ಮಾಧ್ಯಮವೊಂದು ವರದಿ ಮಾಡಿದೆ.  

ಅಧಿವೇಶನಕ್ಕೂ ಮುನ್ನೆ ಟ್ವೀಟ್ ಮಾಡಿದ್ದ ಯುರೋಪಿಯನ್ ಪಾರ್ಲಿಮೆಂಟ್​ ಅಧ್ಯಕ್ಷರಾದ ರಾಬರ್ಟಾ ಮೆಟ್ಸೋಲಾ, ಇಂದು ಮಧ್ಯಾಹ್ನ 12.30ರ ಹೊತ್ತಿಗೆ, ಉಕ್ರೇನ್​ ಮೇಲೆ ರಷ್ಯಾದ ಆಕ್ರಮಣದ ಬಗ್ಗೆ ಚರ್ಚೆ ನಡೆಯಲಿದೆ. ಇದರಲ್ಲಿ ಉಕ್ರೇನ್ ಅಧ್ಯಕ್ಷ ಮತ್ತು ಅಲ್ಲಿನ ಸಂಸತ್ತಿನ ಸ್ಪೀಕರ್ ಪಾಲ್ಗೊಳ್ಳಲಿದ್ದಾರೆ ಎಂದು ಮಾಹಿತಿ ನೀಡಿದ್ದರು. ಹಾಗೇ, ಸೆಷನ್ಸ್​ ಮುಗಿದ ಬಳಿಕ ಟ್ವೀಟ್ ಮಾಡಿ ಮಾಹಿತಿ ನೀಡಿದ ಅವರು, ಒಂದು ದೇಶದ ಸ್ವಾತಂತ್ರ್ಯ ಮತ್ತು ಸಾರ್ವಭೌಮತ್ವದ ಮೇಲೆ ಆಕ್ರಮಣ ಆಗುತ್ತಿರುವುದನ್ನು ನೋಡುತ್ತಿದ್ದೇವೆ. ಇಂದು ಅಧಿವೇಶನದ ಉಕ್ರೇನ್​ ವಿರುದ್ಧ ರಷ್ಯಾ ಆಕ್ರಮಣದ ಬಗ್ಗೆ ಆಳವಾಗಿ ಚರ್ಚೆ ಮಾಡಲಾಯಿತು. ಶೀಘ್ರದಲ್ಲೇ ಯುರೋಪಿಯನ್ ಸಂಸತ್ತು ರಷ್ಯಾ ವಿರುದ್ಧ ನಿರ್ಣಯ ಕೈಗೊಳ್ಳಲಿದೆ ಎಂದು ತಿಳಿಸಿದ್ದಾರೆ.

ವಾರ್​ ಕ್ರೈಮ್​ ಎಂದ ಉಕ್ರೇನ್​ ಅಧ್ಯಕ್ಷ

ಉಕ್ರೇನ್​ನ ಖಾರ್ಕೀವ್​​ನಲ್ಲಿ ಇಂದು ರಷ್ಯಾ ತೀವ್ರ ದಾಳಿ ನಡೆಸುತ್ತಿದೆ. ಅಲ್ಲಿನ ಪ್ರಾದೇಶಿಕ ಆಡಳಿತ ಕಚೇರಿಯ ಕಟ್ಟಡದ ಮೇಲೆಯೂ ಕ್ಷಿಪಣಿ ದಾಳಿಯಾಗಿದೆ. ಇಲ್ಲಿ ನಡೆದ ಶೆಲ್​ ದಾಳಿಯಲ್ಲಿ ಕರ್ನಾಟಕದ ವಿದ್ಯಾರ್ಥಿ ನವೀನ್​ ಮೃತಪಟ್ಟಿದ್ದಾರೆ. ಈ ಮಧ್ಯೆ ಉಕ್ರೇನ್​ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ ವಿಡಿಯೋ ಮೂಲಕ ಮಾತನಾಡಿ, ಖಾರ್ಕೀವ್​​ನಲ್ಲಿ ರಷ್ಯಾ ನಡೆಸುತ್ತಿರುವುದು ಯುದ್ಧ ಅಪರಾಧ (ವಾರ್​ ಕ್ರೈಮ್​) ಎಂದು ಹೇಳಿದ್ದಾರೆ. ಅಂದರೆ ರಷ್ಯಾದ ಸೈನಿಕರು ಯುದ್ಧದ ಎಲ್ಲ ಕಾನೂನು-ನಿಯಮಗಳನ್ನೂ ಮೀರುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.

ಇದನ್ನೂ ಓದಿ: ನವೀನ್​ ಸಾವಿನ ಬೆನ್ನಲ್ಲೇ ಕೇಂದ್ರ ಸರ್ಕಾರ ಫುಲ್ ಅಲರ್ಟ್​; ರಷ್ಯಾ, ಉಕ್ರೇನ್​ ರಾಯಭಾರಿಗಳನ್ನು ಕರೆಸಿ ಚರ್ಚೆ

ಮಹದೇಶ್ವರ ಬೆಟ್ಟದ ಜಾತ್ರೆ ಹೊತ್ತಲೇ ಭೀಕರ ಅಪಘಾತ
ಮಹದೇಶ್ವರ ಬೆಟ್ಟದ ಜಾತ್ರೆ ಹೊತ್ತಲೇ ಭೀಕರ ಅಪಘಾತ
300ಕ್ಕೂ ಹೆಚ್ಚು ಬಾಳೆ ಗಿಡಗಳನ್ನ ಕಡಿದ ದುಷ್ಕರ್ಮಿಗಳು
300ಕ್ಕೂ ಹೆಚ್ಚು ಬಾಳೆ ಗಿಡಗಳನ್ನ ಕಡಿದ ದುಷ್ಕರ್ಮಿಗಳು
ಹಂಪಿ ಉತ್ಸವಕ್ಕೆ ಸಜ್ಜಾದ ಭವ್ಯ ವೇದಿಕೆ: 50 ಸಾವಿರ ಜನರಿಗೆ ಆಸನದ ವ್ಯವಸ್ಥೆ
ಹಂಪಿ ಉತ್ಸವಕ್ಕೆ ಸಜ್ಜಾದ ಭವ್ಯ ವೇದಿಕೆ: 50 ಸಾವಿರ ಜನರಿಗೆ ಆಸನದ ವ್ಯವಸ್ಥೆ
ಸಿಂಹ ರಾಶಿಯವರ ಮೇಲೆ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಸಿಂಹ ರಾಶಿಯವರ ಮೇಲೆ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಸೇವಾ ತೀರ್ಥ; ಪ್ರಧಾನಮಂತ್ರಿ ಕಚೇರಿಯ ನೂತನ ಹೆಸರು ಅನಾವರಣಗೊಳಿಸಿದ ಮೋದಿ
ಸೇವಾ ತೀರ್ಥ; ಪ್ರಧಾನಮಂತ್ರಿ ಕಚೇರಿಯ ನೂತನ ಹೆಸರು ಅನಾವರಣಗೊಳಿಸಿದ ಮೋದಿ
ಸರಣಿ ಅಪಘಾತದಲ್ಲಿ 7 ಜನ ದುರ್ಮರಣ: ಘಟನೆಯ ಭೀಕರತೆ ಬಿಚ್ಚಿಟ್ಟ ಚಾಲಕ
ಸರಣಿ ಅಪಘಾತದಲ್ಲಿ 7 ಜನ ದುರ್ಮರಣ: ಘಟನೆಯ ಭೀಕರತೆ ಬಿಚ್ಚಿಟ್ಟ ಚಾಲಕ
ವರ್ಷದ ಮೊದಲ ಸೂರ್ಯಗ್ರಹಣ ಕರ್ಕಾಟಕ ರಾಶಿಯವರಿಗೆ ಹೇಗಿರಲಿದೆ?
ವರ್ಷದ ಮೊದಲ ಸೂರ್ಯಗ್ರಹಣ ಕರ್ಕಾಟಕ ರಾಶಿಯವರಿಗೆ ಹೇಗಿರಲಿದೆ?
ಶಿಶುಗಳ ಕಳ್ಳತನ ತಡೆಯಲು ಹೊಸ ಪ್ಲಾನ್ ಮಾಡಿದ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆ
ಶಿಶುಗಳ ಕಳ್ಳತನ ತಡೆಯಲು ಹೊಸ ಪ್ಲಾನ್ ಮಾಡಿದ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆ
ತಮಿಳುನಾಡು ಚುನಾವಣೆ: ಯಾವ ಪಕ್ಷದ ಜತೆಯೂ ಮೈತ್ರಿ ಇಲ್ಲ: ವಿಜಯ್
ತಮಿಳುನಾಡು ಚುನಾವಣೆ: ಯಾವ ಪಕ್ಷದ ಜತೆಯೂ ಮೈತ್ರಿ ಇಲ್ಲ: ವಿಜಯ್
ಮಹಾ ಶಿವರಾತ್ರಿಯಂದು ಬೆಂಗಳೂರಿನಲ್ಲಿ ಮಾಂಸ ಮಾರಾಟ ನಿಷೇಧ: ಜಿಬಿಎ ಆದೇಶ
ಮಹಾ ಶಿವರಾತ್ರಿಯಂದು ಬೆಂಗಳೂರಿನಲ್ಲಿ ಮಾಂಸ ಮಾರಾಟ ನಿಷೇಧ: ಜಿಬಿಎ ಆದೇಶ