ಯುರೋಪಿಯನ್​ ಸಂಸತ್ತಿನಲ್ಲಿ ಉಕ್ರೇನ್ ಅಧ್ಯಕ್ಷರಿಂದ ಭಾಷಣ; ಖಾರ್ಕೀವ್​ನಲ್ಲಿ ನಡೆಯುತ್ತಿರುವುದು ವಾರ್​ ಕ್ರೈಮ್​ ಎಂದ ಝೆಲೆನ್ಸ್ಕಿ

ಉಕ್ರೇನ್​ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ ವಿಡಿಯೋ ಮೂಲಕ ಮಾತನಾಡಿ, ಖಾರ್ಕೀವ್​​ನಲ್ಲಿ ರಷ್ಯಾ ನಡೆಸುತ್ತಿರುವುದು ಯುದ್ಧ ಅಪರಾಧ (ವಾರ್​ ಕ್ರೈಮ್​) ಎಂದು ಹೇಳಿದ್ದಾರೆ.

ಯುರೋಪಿಯನ್​ ಸಂಸತ್ತಿನಲ್ಲಿ ಉಕ್ರೇನ್ ಅಧ್ಯಕ್ಷರಿಂದ ಭಾಷಣ; ಖಾರ್ಕೀವ್​ನಲ್ಲಿ ನಡೆಯುತ್ತಿರುವುದು ವಾರ್​ ಕ್ರೈಮ್​ ಎಂದ ಝೆಲೆನ್ಸ್ಕಿ
ವೊಲಿಡಿಮಿರ್​ ಝೆಲೆನ್ಸ್ಕಿ
Follow us
| Updated By: Lakshmi Hegde

Updated on: Mar 01, 2022 | 6:33 PM

ಉಕ್ರೇನ್​ ಮೇಲೆ ರಷ್ಯಾ ಆಕ್ರಮಣ ಮಾಡಿ 6 ದಿನಗಳು ಕಳೆದಿದ್ದು, ಸಾವು-ನೋವು, ಹಾನಿಯ ಪ್ರಮಾಣ ಹೆಚ್ಚುತ್ತಲೇ ಇದೆ. ಈ ಮಧ್ಯೆ ಇಂದು ಉಕ್ರೇನ್​ ಅಧ್ಯಕ್ಷ ವೊಲೊಡಿಮಿರ್​ ಝೆಲೆನ್ಸ್ಕಿ (Volodymyr Zelensky) ಯುರೋಪಿಯನ್​ ಸಂಸತ್ತನ್ನು ಉದ್ದೇಶಿಸಿ ಮಾತನಾಡಿದ್ದಾರೆ. ಉಕ್ರೇನ್​ ಸಂಸತ್ತಿನ ಸ್ಪೀಕರ್​ ರುಸ್ಲಾನ್ ಸ್ಟೆಫಾಂಚುಕ್ ಕೂಡ ಮಾತನಾಡಿದ್ದಾರೆ. ಯುರೋಪಿಯನ್​ ಒಕ್ಕೂಟ ಉಕ್ರೇನ್​​ನೊಂದಿಗೆ ಇದೆ, ಉಕ್ರೇನ್​ಗೆ ಸದಾ ಬೆಂಬಲ ನೀಡುತ್ತದೆ ಎಂಬುದನ್ನು ಸಾಕ್ಷೀಕರಿಸಿ ಎಂದು ಝೆಲೆನ್ಸ್ಕಿ ಇಂದಿನ ಸೆಷನ್​ನಲ್ಲಿ ಹೇಳಿದ್ದಾರೆ. ಆಗ ಉಳಿದ ದೇಶಗಳ ನಾಯಕರು ಎದ್ದು ನಿಂತು ಚಪ್ಪಾಳೆ ಹೊಡೆಯುವ ಮೂಲಕ (ಸ್ಟ್ಯಾಂಡಿಗ್​ ಒವೇಶನ್​) ತಮ್ಮ ಬೆಂಬಲ ವ್ಯಕ್ತಪಡಿಸಿದ್ದಾರೆ ಎಂದು ಮಾಧ್ಯಮವೊಂದು ವರದಿ ಮಾಡಿದೆ.  

ಅಧಿವೇಶನಕ್ಕೂ ಮುನ್ನೆ ಟ್ವೀಟ್ ಮಾಡಿದ್ದ ಯುರೋಪಿಯನ್ ಪಾರ್ಲಿಮೆಂಟ್​ ಅಧ್ಯಕ್ಷರಾದ ರಾಬರ್ಟಾ ಮೆಟ್ಸೋಲಾ, ಇಂದು ಮಧ್ಯಾಹ್ನ 12.30ರ ಹೊತ್ತಿಗೆ, ಉಕ್ರೇನ್​ ಮೇಲೆ ರಷ್ಯಾದ ಆಕ್ರಮಣದ ಬಗ್ಗೆ ಚರ್ಚೆ ನಡೆಯಲಿದೆ. ಇದರಲ್ಲಿ ಉಕ್ರೇನ್ ಅಧ್ಯಕ್ಷ ಮತ್ತು ಅಲ್ಲಿನ ಸಂಸತ್ತಿನ ಸ್ಪೀಕರ್ ಪಾಲ್ಗೊಳ್ಳಲಿದ್ದಾರೆ ಎಂದು ಮಾಹಿತಿ ನೀಡಿದ್ದರು. ಹಾಗೇ, ಸೆಷನ್ಸ್​ ಮುಗಿದ ಬಳಿಕ ಟ್ವೀಟ್ ಮಾಡಿ ಮಾಹಿತಿ ನೀಡಿದ ಅವರು, ಒಂದು ದೇಶದ ಸ್ವಾತಂತ್ರ್ಯ ಮತ್ತು ಸಾರ್ವಭೌಮತ್ವದ ಮೇಲೆ ಆಕ್ರಮಣ ಆಗುತ್ತಿರುವುದನ್ನು ನೋಡುತ್ತಿದ್ದೇವೆ. ಇಂದು ಅಧಿವೇಶನದ ಉಕ್ರೇನ್​ ವಿರುದ್ಧ ರಷ್ಯಾ ಆಕ್ರಮಣದ ಬಗ್ಗೆ ಆಳವಾಗಿ ಚರ್ಚೆ ಮಾಡಲಾಯಿತು. ಶೀಘ್ರದಲ್ಲೇ ಯುರೋಪಿಯನ್ ಸಂಸತ್ತು ರಷ್ಯಾ ವಿರುದ್ಧ ನಿರ್ಣಯ ಕೈಗೊಳ್ಳಲಿದೆ ಎಂದು ತಿಳಿಸಿದ್ದಾರೆ.

ವಾರ್​ ಕ್ರೈಮ್​ ಎಂದ ಉಕ್ರೇನ್​ ಅಧ್ಯಕ್ಷ

ಉಕ್ರೇನ್​ನ ಖಾರ್ಕೀವ್​​ನಲ್ಲಿ ಇಂದು ರಷ್ಯಾ ತೀವ್ರ ದಾಳಿ ನಡೆಸುತ್ತಿದೆ. ಅಲ್ಲಿನ ಪ್ರಾದೇಶಿಕ ಆಡಳಿತ ಕಚೇರಿಯ ಕಟ್ಟಡದ ಮೇಲೆಯೂ ಕ್ಷಿಪಣಿ ದಾಳಿಯಾಗಿದೆ. ಇಲ್ಲಿ ನಡೆದ ಶೆಲ್​ ದಾಳಿಯಲ್ಲಿ ಕರ್ನಾಟಕದ ವಿದ್ಯಾರ್ಥಿ ನವೀನ್​ ಮೃತಪಟ್ಟಿದ್ದಾರೆ. ಈ ಮಧ್ಯೆ ಉಕ್ರೇನ್​ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ ವಿಡಿಯೋ ಮೂಲಕ ಮಾತನಾಡಿ, ಖಾರ್ಕೀವ್​​ನಲ್ಲಿ ರಷ್ಯಾ ನಡೆಸುತ್ತಿರುವುದು ಯುದ್ಧ ಅಪರಾಧ (ವಾರ್​ ಕ್ರೈಮ್​) ಎಂದು ಹೇಳಿದ್ದಾರೆ. ಅಂದರೆ ರಷ್ಯಾದ ಸೈನಿಕರು ಯುದ್ಧದ ಎಲ್ಲ ಕಾನೂನು-ನಿಯಮಗಳನ್ನೂ ಮೀರುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.

ಇದನ್ನೂ ಓದಿ: ನವೀನ್​ ಸಾವಿನ ಬೆನ್ನಲ್ಲೇ ಕೇಂದ್ರ ಸರ್ಕಾರ ಫುಲ್ ಅಲರ್ಟ್​; ರಷ್ಯಾ, ಉಕ್ರೇನ್​ ರಾಯಭಾರಿಗಳನ್ನು ಕರೆಸಿ ಚರ್ಚೆ

ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ