AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಯುರೋಪಿಯನ್​ ಸಂಸತ್ತಿನಲ್ಲಿ ಉಕ್ರೇನ್ ಅಧ್ಯಕ್ಷರಿಂದ ಭಾಷಣ; ಖಾರ್ಕೀವ್​ನಲ್ಲಿ ನಡೆಯುತ್ತಿರುವುದು ವಾರ್​ ಕ್ರೈಮ್​ ಎಂದ ಝೆಲೆನ್ಸ್ಕಿ

ಉಕ್ರೇನ್​ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ ವಿಡಿಯೋ ಮೂಲಕ ಮಾತನಾಡಿ, ಖಾರ್ಕೀವ್​​ನಲ್ಲಿ ರಷ್ಯಾ ನಡೆಸುತ್ತಿರುವುದು ಯುದ್ಧ ಅಪರಾಧ (ವಾರ್​ ಕ್ರೈಮ್​) ಎಂದು ಹೇಳಿದ್ದಾರೆ.

ಯುರೋಪಿಯನ್​ ಸಂಸತ್ತಿನಲ್ಲಿ ಉಕ್ರೇನ್ ಅಧ್ಯಕ್ಷರಿಂದ ಭಾಷಣ; ಖಾರ್ಕೀವ್​ನಲ್ಲಿ ನಡೆಯುತ್ತಿರುವುದು ವಾರ್​ ಕ್ರೈಮ್​ ಎಂದ ಝೆಲೆನ್ಸ್ಕಿ
ವೊಲಿಡಿಮಿರ್​ ಝೆಲೆನ್ಸ್ಕಿ
TV9 Web
| Updated By: Lakshmi Hegde|

Updated on: Mar 01, 2022 | 6:33 PM

Share

ಉಕ್ರೇನ್​ ಮೇಲೆ ರಷ್ಯಾ ಆಕ್ರಮಣ ಮಾಡಿ 6 ದಿನಗಳು ಕಳೆದಿದ್ದು, ಸಾವು-ನೋವು, ಹಾನಿಯ ಪ್ರಮಾಣ ಹೆಚ್ಚುತ್ತಲೇ ಇದೆ. ಈ ಮಧ್ಯೆ ಇಂದು ಉಕ್ರೇನ್​ ಅಧ್ಯಕ್ಷ ವೊಲೊಡಿಮಿರ್​ ಝೆಲೆನ್ಸ್ಕಿ (Volodymyr Zelensky) ಯುರೋಪಿಯನ್​ ಸಂಸತ್ತನ್ನು ಉದ್ದೇಶಿಸಿ ಮಾತನಾಡಿದ್ದಾರೆ. ಉಕ್ರೇನ್​ ಸಂಸತ್ತಿನ ಸ್ಪೀಕರ್​ ರುಸ್ಲಾನ್ ಸ್ಟೆಫಾಂಚುಕ್ ಕೂಡ ಮಾತನಾಡಿದ್ದಾರೆ. ಯುರೋಪಿಯನ್​ ಒಕ್ಕೂಟ ಉಕ್ರೇನ್​​ನೊಂದಿಗೆ ಇದೆ, ಉಕ್ರೇನ್​ಗೆ ಸದಾ ಬೆಂಬಲ ನೀಡುತ್ತದೆ ಎಂಬುದನ್ನು ಸಾಕ್ಷೀಕರಿಸಿ ಎಂದು ಝೆಲೆನ್ಸ್ಕಿ ಇಂದಿನ ಸೆಷನ್​ನಲ್ಲಿ ಹೇಳಿದ್ದಾರೆ. ಆಗ ಉಳಿದ ದೇಶಗಳ ನಾಯಕರು ಎದ್ದು ನಿಂತು ಚಪ್ಪಾಳೆ ಹೊಡೆಯುವ ಮೂಲಕ (ಸ್ಟ್ಯಾಂಡಿಗ್​ ಒವೇಶನ್​) ತಮ್ಮ ಬೆಂಬಲ ವ್ಯಕ್ತಪಡಿಸಿದ್ದಾರೆ ಎಂದು ಮಾಧ್ಯಮವೊಂದು ವರದಿ ಮಾಡಿದೆ.  

ಅಧಿವೇಶನಕ್ಕೂ ಮುನ್ನೆ ಟ್ವೀಟ್ ಮಾಡಿದ್ದ ಯುರೋಪಿಯನ್ ಪಾರ್ಲಿಮೆಂಟ್​ ಅಧ್ಯಕ್ಷರಾದ ರಾಬರ್ಟಾ ಮೆಟ್ಸೋಲಾ, ಇಂದು ಮಧ್ಯಾಹ್ನ 12.30ರ ಹೊತ್ತಿಗೆ, ಉಕ್ರೇನ್​ ಮೇಲೆ ರಷ್ಯಾದ ಆಕ್ರಮಣದ ಬಗ್ಗೆ ಚರ್ಚೆ ನಡೆಯಲಿದೆ. ಇದರಲ್ಲಿ ಉಕ್ರೇನ್ ಅಧ್ಯಕ್ಷ ಮತ್ತು ಅಲ್ಲಿನ ಸಂಸತ್ತಿನ ಸ್ಪೀಕರ್ ಪಾಲ್ಗೊಳ್ಳಲಿದ್ದಾರೆ ಎಂದು ಮಾಹಿತಿ ನೀಡಿದ್ದರು. ಹಾಗೇ, ಸೆಷನ್ಸ್​ ಮುಗಿದ ಬಳಿಕ ಟ್ವೀಟ್ ಮಾಡಿ ಮಾಹಿತಿ ನೀಡಿದ ಅವರು, ಒಂದು ದೇಶದ ಸ್ವಾತಂತ್ರ್ಯ ಮತ್ತು ಸಾರ್ವಭೌಮತ್ವದ ಮೇಲೆ ಆಕ್ರಮಣ ಆಗುತ್ತಿರುವುದನ್ನು ನೋಡುತ್ತಿದ್ದೇವೆ. ಇಂದು ಅಧಿವೇಶನದ ಉಕ್ರೇನ್​ ವಿರುದ್ಧ ರಷ್ಯಾ ಆಕ್ರಮಣದ ಬಗ್ಗೆ ಆಳವಾಗಿ ಚರ್ಚೆ ಮಾಡಲಾಯಿತು. ಶೀಘ್ರದಲ್ಲೇ ಯುರೋಪಿಯನ್ ಸಂಸತ್ತು ರಷ್ಯಾ ವಿರುದ್ಧ ನಿರ್ಣಯ ಕೈಗೊಳ್ಳಲಿದೆ ಎಂದು ತಿಳಿಸಿದ್ದಾರೆ.

ವಾರ್​ ಕ್ರೈಮ್​ ಎಂದ ಉಕ್ರೇನ್​ ಅಧ್ಯಕ್ಷ

ಉಕ್ರೇನ್​ನ ಖಾರ್ಕೀವ್​​ನಲ್ಲಿ ಇಂದು ರಷ್ಯಾ ತೀವ್ರ ದಾಳಿ ನಡೆಸುತ್ತಿದೆ. ಅಲ್ಲಿನ ಪ್ರಾದೇಶಿಕ ಆಡಳಿತ ಕಚೇರಿಯ ಕಟ್ಟಡದ ಮೇಲೆಯೂ ಕ್ಷಿಪಣಿ ದಾಳಿಯಾಗಿದೆ. ಇಲ್ಲಿ ನಡೆದ ಶೆಲ್​ ದಾಳಿಯಲ್ಲಿ ಕರ್ನಾಟಕದ ವಿದ್ಯಾರ್ಥಿ ನವೀನ್​ ಮೃತಪಟ್ಟಿದ್ದಾರೆ. ಈ ಮಧ್ಯೆ ಉಕ್ರೇನ್​ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ ವಿಡಿಯೋ ಮೂಲಕ ಮಾತನಾಡಿ, ಖಾರ್ಕೀವ್​​ನಲ್ಲಿ ರಷ್ಯಾ ನಡೆಸುತ್ತಿರುವುದು ಯುದ್ಧ ಅಪರಾಧ (ವಾರ್​ ಕ್ರೈಮ್​) ಎಂದು ಹೇಳಿದ್ದಾರೆ. ಅಂದರೆ ರಷ್ಯಾದ ಸೈನಿಕರು ಯುದ್ಧದ ಎಲ್ಲ ಕಾನೂನು-ನಿಯಮಗಳನ್ನೂ ಮೀರುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.

ಇದನ್ನೂ ಓದಿ: ನವೀನ್​ ಸಾವಿನ ಬೆನ್ನಲ್ಲೇ ಕೇಂದ್ರ ಸರ್ಕಾರ ಫುಲ್ ಅಲರ್ಟ್​; ರಷ್ಯಾ, ಉಕ್ರೇನ್​ ರಾಯಭಾರಿಗಳನ್ನು ಕರೆಸಿ ಚರ್ಚೆ

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ