AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Russia Ukraine War: ರಷ್ಯಾದ 50-ಉಕ್ರೇನ್​ನ 40 ಸೈನಿಕರು ಸಾವು; ಯುದ್ಧದ ನಾಡಲ್ಲಿ ಇಲ್ಲಿಯವರೆಗೆ ಆಗಿದ್ದೇನು?

ಉಕ್ರೇನ್​​ನ ವಾಯುಮಾರ್ಗ ಬಂದ್​ ಆಗಿದ್ದು, ವಿಮಾನಯಾನ ದುಸ್ತರವಾಗಿದೆ. ಹಾಗಿದ್ದಾಗ್ಯೂ ಉಕ್ರೇನ್​ನಲ್ಲಿರುವ 18 ಸಾವಿರ ಭಾರತೀಯರನ್ನು (ವಿದ್ಯಾರ್ಥಿಗಳೂ ಸೇರಿ) ಕರೆತರಲು ಭಾರತ ಸರ್ಕಾರ ಕ್ರಮ ಕೈಗೊಳ್ಳುತ್ತಿದೆ.

Russia Ukraine War: ರಷ್ಯಾದ 50-ಉಕ್ರೇನ್​ನ 40 ಸೈನಿಕರು ಸಾವು; ಯುದ್ಧದ ನಾಡಲ್ಲಿ ಇಲ್ಲಿಯವರೆಗೆ ಆಗಿದ್ದೇನು?
ಕೈವ್​​ನಲ್ಲಿ ಏಳುತ್ತಿರುವ ಬೆಂಕಿ
TV9 Web
| Edited By: |

Updated on:Feb 24, 2022 | 5:39 PM

Share

ಉಕ್ರೇನ್​ ಮೇಲೆ ರಷ್ಯಾ ಸೇನಾ ಕಾರ್ಯಾಚರಣೆ (Russia-Ukraine) ನಡೆಸಿ ಕೆಲವು ತಾಸುಗಳೇ ಕಳೆದುಹೋಗಿವೆ. ನಮಗೆ ಉಕ್ರೇನ್ ಮೇಲೆ ಯುದ್ಧ ಮಾಡುವ ಇರಾದೆಯಿಲ್ಲ ಎಂದು ಹೇಳುತ್ತಲೇ ಬಂದ ರಷ್ಯಾ ಅಧ್ಯಕ್ಷ ವ್ಲಾಡಿಮಿರ್​ ಪುತಿನ್ (Vladimir Putin) ಇಂದು ದೂರದರ್ಶನದ ಮೂಲಕ ಮಾತನಾಡಿ, ಉಕ್ರೇನ್ ಮೇಲೆ ಸೇನಾ ಕಾರ್ಯಾಚರಣೆಗೆ ಸೂಚನೆ ನೀಡಿದ್ದಾರೆ. ಪುತಿನ್​ ಆದೇಶ ಹೊರಬೀಳುತ್ತಿದ್ದಂತೆ ಉಕ್ರೇನ್​ ಗಡಿ ದಾಟಿದ ರಷ್ಯಾ ಸೇನೆ ಶೆಲ್​, ಕ್ಷಿಪಣಿ ದಾಳಿಯನ್ನು ನಡೆಸುತ್ತಿದೆ. ಇದೆಲ್ಲದ ಮಧ್ಯೆ ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ (Volodymyr Zelenskyy) ಸುದ್ದಿಗೋಷ್ಠಿ ನಡೆಸಿ, ನಾವು ಯಾವುದೇ ಕಾರಣಕ್ಕೂ ರಷ್ಯಾಕ್ಕೆ ತಲೆಬಾಗುವುದಿಲ್ಲ. ನಾವು ಬಲಿಷ್ಠವಾಗಿದ್ದೇವೆ ಎಂದು ಹೇಳಿದ್ದಾರೆ. ಅಲ್ಲಿಂದ ಇಲ್ಲಿಯವರೆಗೆ ನಡೆದ ಪ್ರಮುಖ ಬೆಳವಣಿಗೆಗಳು ಹೀಗಿವೆ.

  1. ರಷ್ಯಾ ಸೇನೆಯ ಆಕ್ರಮಣಕ್ಕೆ ಉಕ್ರೇನ್​ನ 40 ಸೈನಿಕರು ಮೃತಪಟ್ಟಿದ್ದಾರೆಂದು ಉಕ್ರೇನ್​ ಅಧ್ಯಕ್ಷರ ಸಲಹೆಗಾರ ತಿಳಿಸಿದ್ದಾರೆ. ಹಾಗೇ, ರಷ್ಯಾದ ಸುಮಾರು 50 ಯೋಧರನ್ನು ಕೊಂದಿದ್ದೇವೆ, ಇದುವರೆಗೆ ಏಳು ವಿಮಾನಗಳನ್ನು ಹೊಡೆದುರುಳಿಸಿದ್ದೇವೆ ಎಂದು ಉಕ್ರೇನ್ ಮಿಲಿಟರಿ ಪಡೆ ಹೇಳಿದೆ.
  2. ಉದ್ವಿಗ್ನತೆ ಹೆಚ್ಚುತ್ತಿರುವ ಬೆನ್ನಲ್ಲೇ ಉಕ್ರೇನ್​ ಅಧ್ಯಕ್ಷ ಟ್ವೀಟ್ ಮಾಡಿ, ದಾಳಿ ಮಾಡಿರುವ ರಷ್ಯಾ ವಿರುದ್ಧ ಹೋರಾಡಲು ಕೈಯಲ್ಲಿ ಶಸ್ತ್ರ ಹಿಡಿದು ಬಂದು ಸೈನಿಕರನ್ನು ಸೇರಿಕೊಳ್ಳುವ ನಾಗರಿಕರಿಗೆ ಸ್ವಾಗತ. ಅಗತ್ಯವಿದ್ದರೇ ಅಂಥವರಿಗೆ ನಾವೇ ಶಸ್ತ್ರವನ್ನೂ ನೀಡುತ್ತೇವೆ ಎಂದಿದ್ದಾರೆ.
  3. ಉಕ್ರೇನ್​ ಮೇಲೆ ರಷ್ಯಾದ ಆಕ್ರಮಣವನ್ನು ನ್ಯಾಟೋ (NATO) ತೀವ್ರವಾಗಿ ಖಂಡಿಸಿದೆ. ರಷ್ಯಾ ಕೂಡಲೇ ಉಕ್ರೇನ್​​ನಿಂದ ಮಿಲಿಟರಿ ಪಡೆಯನ್ನು ಹಿಂಪಡೆದು, ಆಕ್ರಮಣವನ್ನು ನಿಲ್ಲಿಸಬೇಕು ಎಂದು ನ್ಯಾಟೋ ಪ್ರಧಾನಕಾರ್ಯದರ್ಶಿ ಜೆನ್ಸ್​ ಸ್ಟೋಲ್ಟನ್​ಬರ್ಗ್​ ಆಗ್ರಹಿಸಿದ್ದಾರೆ.
  4. ಉಕ್ರೇನ್​​ನಲ್ಲಿ ಯುದ್ಧಾಂತಕ ಶುರುವಾದ ಬೆನ್ನಲ್ಲೇ ಕೈವ್​ನಲ್ಲಿರುವ ಭಾರತೀಯ ರಾಯಭಾರಿ ಕಚೇರಿ, ಅಲ್ಲಿರುವ ಭಾರತೀಯರಿಗಾಗಿ ಒಂದು ಅಡ್ವೈಸರಿ ಬಿಡುಗಡೆ ಮಾಡಿದೆ. ಉಕ್ರೇನ್​​ನಲ್ಲಿರುವ ಭಾರತೀಯರು ಎಲ್ಲೆಲ್ಲಿದ್ದೀರೋ, ಅಲ್ಲೇ ಸುರಕ್ಷಿತವಾಗಿರಿ. ಯಾರಾದರೂ ಕೈವ್​ಗೆ ಆಗಮಿಸುತ್ತಿದ್ದರೆ, ದಯವಿಟ್ಟು ವಾಪಸ್ ಹೋಗಿಬಿಡಿ ಎಂದು ಹೇಳಿದೆ.
  5. ಸದ್ಯ ಉಕ್ರೇನ್​​ನ ವಾಯುಮಾರ್ಗ ಬಂದ್​ ಆಗಿದ್ದು, ವಿಮಾನಯಾನ ದುಸ್ತರವಾಗಿದೆ. ಹಾಗಿದ್ದಾಗ್ಯೂ ಉಕ್ರೇನ್​ನಲ್ಲಿರುವ 18 ಸಾವಿರ ಭಾರತೀಯರನ್ನು (ವಿದ್ಯಾರ್ಥಿಗಳೂ ಸೇರಿ) ಕರೆತರಲು ಭಾರತ ಸರ್ಕಾರ ಕ್ರಮ ಕೈಗೊಳ್ಳುತ್ತಿದೆ. ಪರ್ಯಾಯ ಮಾರ್ಗದಲ್ಲಿ ಭಾರತೀಯರನ್ನು ಕರೆತರಲಾಗುವುದು ಎಂದು ಕೇಂದ್ರ ವಿದೇಶಾಂಗ ವ್ಯವಹಾರಗಳ ಇಲಾಖೆ ತಿಳಿಸಿದೆ.
  6. ಇನ್ನು ಅಮೆರಿಕ, ಯುಕೆ, ಜರ್ಮನಿ, ಪೋಲ್ಯಾಂಡ್​ ಸೇರಿ ಹಲವು ದೇಶಗಳು ಉಕ್ರೇನ್​ ಬೆಳವಣಿಗೆಯನ್ನು ಗಮನಿಸುತ್ತಿವೆ. ರಷ್ಯಾ ಕೂಡಲೇ ಸೇನೆಯನ್ನು ವಾಪಸ್​ ಪಡೆಯಬೇಕು ಎಂದು ಆಗ್ರಹಿಸುತ್ತಿವೆ. ಆಸ್ಟ್ರೇಲಿಯಾ ಮತ್ತು ಇಸ್ರೇಲ್​ ದೇಶಗಳು ರಷ್ಯಾ ನಡೆಯನ್ನು ಟೀಕಿಸಿದ್ದು, ಇನ್ನೊಂದೆಡೆ ಫ್ರಾನ್ಸ್, ತುರ್ತಾಗಿ ನ್ಯಾಟೋ ಶೃಂಗಸಭೆಗೆ ನಡೆಸುವಂತೆ ಒತ್ತಾಯಿಸುತ್ತಿದೆ.

ಇದನ್ನೂ ಓದಿ: Russia-Ukraine War: ರಷ್ಯಾ- ಉಕ್ರೇನ್ ಯುದ್ಧ ಹಿನ್ನೆಲೆ; ಸಚಿವರ ತುರ್ತು ಸಭೆ ಕರೆದ ಪ್ರಧಾನಿ ನರೇಂದ್ರ ಮೋದಿ

Published On - 5:38 pm, Thu, 24 February 22

ರಾಜಶೇಖರ್​​ ಕುಟುಂಬಕ್ಕೆ 25 ಲಕ್ಷ ರೂ ಪರಿಹಾರ: ಸಚಿವ ಜಮೀರ್ ವಿರುದ್ಧ ದೂರು
ರಾಜಶೇಖರ್​​ ಕುಟುಂಬಕ್ಕೆ 25 ಲಕ್ಷ ರೂ ಪರಿಹಾರ: ಸಚಿವ ಜಮೀರ್ ವಿರುದ್ಧ ದೂರು
ಸ್ಪಂದನಾ ಫ್ಯಾಮಿಲಿಗೆ ಗಿಲ್ಲಿ ಇಷ್ಟ ಆಗಿದ್ದೇ ಈ ಕಾರಣಕ್ಕೆ; ವಿವರಿಸಿದ ನಟಿ
ಸ್ಪಂದನಾ ಫ್ಯಾಮಿಲಿಗೆ ಗಿಲ್ಲಿ ಇಷ್ಟ ಆಗಿದ್ದೇ ಈ ಕಾರಣಕ್ಕೆ; ವಿವರಿಸಿದ ನಟಿ
ಪ್ರಸಿದ್ಧ ಆಭರಣ ಮಳಿಗೆಯಲ್ಲಿ 14 ಲಕ್ಷದ ಜ್ಯುವೆಲರಿ ಕದ್ದ ಮಹಿಳೆಯರು
ಪ್ರಸಿದ್ಧ ಆಭರಣ ಮಳಿಗೆಯಲ್ಲಿ 14 ಲಕ್ಷದ ಜ್ಯುವೆಲರಿ ಕದ್ದ ಮಹಿಳೆಯರು
ಗುಡ್ ಲಕ್; ಸಿದ್ದರಾಮಯ್ಯಗೆ ಡಿಸಿಎಂ ಡಿಕೆ ಶಿವಕುಮಾರ್ ಅಭಿನಂದನೆ
ಗುಡ್ ಲಕ್; ಸಿದ್ದರಾಮಯ್ಯಗೆ ಡಿಸಿಎಂ ಡಿಕೆ ಶಿವಕುಮಾರ್ ಅಭಿನಂದನೆ
ಅರ್ಧಶತಕ ಬಾರಿಸಿಯೂ ತಂಡವನ್ನು ಗೆಲ್ಲಿಸದ ವಾರ್ನರ್
ಅರ್ಧಶತಕ ಬಾರಿಸಿಯೂ ತಂಡವನ್ನು ಗೆಲ್ಲಿಸದ ವಾರ್ನರ್
ಸಾಕ್ಷಿ ನಾಶ ಹಿನ್ನೆಲೆ ರಾಜಶೇಖರ್​ ಶವ ಸುಟ್ಟು ಹಾಕಿದ್ದಾರೆ ಎಂದ ಶ್ರೀರಾಮುಲು
ಸಾಕ್ಷಿ ನಾಶ ಹಿನ್ನೆಲೆ ರಾಜಶೇಖರ್​ ಶವ ಸುಟ್ಟು ಹಾಕಿದ್ದಾರೆ ಎಂದ ಶ್ರೀರಾಮುಲು
ಕೊಡಗು ಜಿಲ್ಲೆಯ ನಂಬರ್ ಒನ್ ಟ್ಯಾಕ್ಸ್ ಪೇಯರ್ ರಶ್ಮಿಕಾ ಮಂದಣ್ಣ
ಕೊಡಗು ಜಿಲ್ಲೆಯ ನಂಬರ್ ಒನ್ ಟ್ಯಾಕ್ಸ್ ಪೇಯರ್ ರಶ್ಮಿಕಾ ಮಂದಣ್ಣ
ರಕ್ಷಿತಾ ಬೆಂಬಲಕ್ಕೆ ಬಂದ ಗಿಲ್ಲಿ, ರಾಶಿಕಾ ಜೊತೆ ಜಗಳ: ವಿಡಿಯೋ
ರಕ್ಷಿತಾ ಬೆಂಬಲಕ್ಕೆ ಬಂದ ಗಿಲ್ಲಿ, ರಾಶಿಕಾ ಜೊತೆ ಜಗಳ: ವಿಡಿಯೋ
ಸಿದ್ದರಾಮಯ್ಯ ಇಲ್ಲ ಅಂದ್ರೆ ಕಾಂಗ್ರೆಸ್ ಪಕ್ಷ ಇಲ್ಲ: ರಾಜಣ್ಣ ಖಡಕ್​​ ಮಾತು
ಸಿದ್ದರಾಮಯ್ಯ ಇಲ್ಲ ಅಂದ್ರೆ ಕಾಂಗ್ರೆಸ್ ಪಕ್ಷ ಇಲ್ಲ: ರಾಜಣ್ಣ ಖಡಕ್​​ ಮಾತು
ರಾಜಶೇಖರ್​ ತಾಯಿಗೆ ಡಿಕೆ ಶಿವಕುಮಾರ್​ ಸಾಂತ್ವನ: ಸರ್ಕಾರದಿಂದ ನೆರವು ಭರವಸೆ
ರಾಜಶೇಖರ್​ ತಾಯಿಗೆ ಡಿಕೆ ಶಿವಕುಮಾರ್​ ಸಾಂತ್ವನ: ಸರ್ಕಾರದಿಂದ ನೆರವು ಭರವಸೆ