AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಗ್ ಟ್ವಿಸ್ಟ್..! ಆಕ್ರಮಿತ ಜಾಗ ರಷ್ಯಾಗೆ ಬಿಟ್ಟುಕೊಡಲು ಸಿದ್ಧ… ಆದರೆ… ಉಕ್ರೇನ್ ಅಧ್ಯಕ್ಷ ಜೆಲೆನ್ಸ್​ಕಿ ಷರುತ್ತು

Russia Ukraine war updates: ರಷ್ಯಾದಿಂದ ಆಕ್ರಮಿತವಾಗಿರುವ ಉಕ್ರೇನ್​ನ ಭೂಭಾಗವನ್ನು ರಷ್ಯಾಗೆ ಬಿಟ್ಟುಕೊಡಲು ಸಿದ್ಧ ಇರುವುದಾಗಿ ಉಕ್ರೇನ್ ಅಧ್ಯಕ್ಷ ಝೆಲೆನ್ಸ್​ಕಿ ಹೇಳಿದ್ದಾರೆ. ಆದರೆ, ಕೆಲ ಷರತ್ತುಗಳನ್ನೂ ಮುಂದಿಟ್ಟಿದ್ದಾರೆ. ರಷ್ಯಾಗೆ ಬಿಟ್ಟುಕೊಡುವುದು ತಾತ್ಕಾಲಿಕವಾಗಿ ಮಾತ್ರ ಎಂದಿದ್ದಾರೆ. ಹಾಗೆಯೇ, ಉಕ್ರೇನ್​ಗೆ ನ್ಯಾಟೋ ಸದಸ್ಯತ್ವ ನೀಡಬೇಕು ಎಂಬುದು ಅದರ ಪ್ರಮುಖ ಷರತ್ತು.

ಬಿಗ್ ಟ್ವಿಸ್ಟ್..! ಆಕ್ರಮಿತ ಜಾಗ ರಷ್ಯಾಗೆ ಬಿಟ್ಟುಕೊಡಲು ಸಿದ್ಧ... ಆದರೆ... ಉಕ್ರೇನ್ ಅಧ್ಯಕ್ಷ ಜೆಲೆನ್ಸ್​ಕಿ ಷರುತ್ತು
ವೊಲೋಡಿಮಿರ್ ಝೆಲೆನ್ಸ್​ಕಿ
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Dec 01, 2024 | 6:00 PM

Share

ನವದೆಹಲಿ, ಡಿಸೆಂಬರ್ 1: ಇಡೀ ವಿಶ್ವಕ್ಕೆ ತಲೆನೋವಾಗಿರುವ ರಷ್ಯಾ ಮತ್ತು ಉಕ್ರೇನ್ ನಡುವಿನ ಯುದ್ಧ ಅಂತ್ಯಗೊಳ್ಳುವ ಸಾಧ್ಯತೆ ತೋರತೊಡಗಿದೆ. ಈ ನಿಟ್ಟಿನಲ್ಲಿ ಉಕ್ರೇನ್ ಅಧ್ಯಕ್ಷ ವೊಲೋಡಿಮಿರ್ ಝೆಲೆನ್ಸ್​ಕಿ ಸುಳಿವು ನೀಡಿದ್ದಾರೆ. ಶಾಂತಿಗೋಸ್ಕರ ರಷ್ಯಾ ಆಕ್ರಮಿತ ಉಕ್ರೇನ್ ಜಾಗವನ್ನು ತ್ಯಾಗ ಮಾಡಲು ತಾನು ಸಿದ್ಧ ಇರುವುದಾಗಿ ಅವರು ಹೇಳಿರುವುದು ಕೆಲ ಮಾಧ್ಯಮಗಳಲ್ಲಿ ವರದಿಯಾಗಿದೆ. ಆದರೆ, ಒಂದು ಪ್ರಮುಖ ಷರತ್ತನ್ನೂ ಮುಂದಿಟ್ಟಿದ್ದಾರೆ. ಈ ಷರತ್ತು ರಷ್ಯಾಗೂ ಒಂದು ರೀತಿಯಲ್ಲಿ ನೆತ್ತಿಯ ಮೇಲಿನ ಕತ್ತಿಯಂತಾಗುವ ಸಾಧ್ಯತೆಯೂ ಇದೆ.

ಉಕ್ರೇನ್ ಅಧ್ಯಕ್ಷರು ಮುಂದಿಟ್ಟಿರುವ ಷರತ್ತೇನು?

ರಷ್ಯಾ ಆಕ್ರಮಿಸಿಕೊಂಡಿರುವ ಉಕ್ರೇನ್​ನ ಪ್ರದೇಶಗಳನ್ನು ತಾತ್ಕಾಲಿಕವಾಗಿ ರಷ್ಯಾಗೆ ಬಿಟ್ಟುಕೊಡುತ್ತೇವೆ. ಅದಕ್ಕೆ ಬದಲಾಗಿ ಉಕ್ರೇನ್ ದೇಶಕ್ಕೆ ನ್ಯಾಟೋ ಸದಸ್ಯತ್ವ ಸಿಗಬೇಕು ಎಂಬುದು ಅವರ ಷರುತ್ತು. ಇಲ್ಲಿ ಗಮನಿಸಬೇಕಾದ ಸಂಗತಿ ಎಂದರೆ, ಉಕ್ರೇನ್ ತಾತ್ಕಾಲಿಕವಾಗಿ ಮಾತ್ರ ರಷ್ಯಾಗೆ ಈ ಪ್ರದೇಶಗಳನ್ನು ನೀಡಲಿದೆ. ಮುಂದೆ ನ್ಯಾಟೋ ಭದ್ರತೆ ಸಿಕ್ಕ ಬಳಿಕ ರಾಜತಾಂತ್ರಿಕವಾಗಿ ಆ ಪ್ರದೇಶಗಳನ್ನು ವಾಪಸ್ ಪಡೆಯಲು ಪ್ರಯತ್ನಿಸಲಿದೆ ಎಂದೂ ಝೆಲೆನ್ಸ್​ಕಿ ಹೇಳಿದ್ದಾರೆ.

ಇದನ್ನೂ ಓದಿ: ಟ್ರಂಪ್ ಈಗ ಸುರಕ್ಷಿತವಾಗಿಲ್ಲ ಎಂದ ರಷ್ಯಾ ಅಧ್ಯಕ್ಷ ಪುಟಿನ್

2022ರಲ್ಲಿ ಉಕ್ರೇನ್ ಮೇಲೆ ರಷ್ಯಾ ಆಕ್ರಮಣ ಮಾಡಿದೆ. ಕಳೆದ 33 ತಿಂಗಳಿಂದ ನಿರಂತರವಾಗಿ ನಡೆಯುತ್ತಿರುವ ಈ ಯುದ್ಧದಲ್ಲಿ ಉಕ್ರೇನ್ ನಿರೀಕ್ಷೆಮೀರಿದ ರೀತಿಯಲ್ಲಿ ಪ್ರತಿರೋಧ ತೋರುತ್ತಿದೆ. ಈ ಆಕ್ರಮಣದಲ್ಲಿ ಉಕ್ರೇನ್​ನ ಡೋನೆಸ್ಕ್ ಮತ್ತು ಲುಹಾನ್ಸ್​ಕ್ ಪ್ರಾಂತ್ಯದ ಬಹುಭಾಗಗಳು ಈಗ ರಷ್ಯಾ ನಿಯಂತ್ರಣದಲ್ಲಿವೆ. ಇವು ಉಕ್ರೇನ್​ನ ಶೇ. 27 ಭೂಭಾಗದಷ್ಟಿದೆ.

2014ರಲ್ಲಿ ಉಕ್ರೇನ್​ನ ಕ್ರಿಮಿಯಾ ಪ್ರದೇಶವನ್ನು ರಷ್ಯಾ ಆಕ್ರಮಿಸಿಕೊಂಡಿದೆ. ಆದರೆ, ಉಕ್ರೇನ್ ಇದನ್ನು ರಷ್ಯಾಗೆ ಅಧಿಕೃತವಾಗಿ ಬಿಟ್ಟುಕೊಟ್ಟಿಲ್ಲ. ಈಗ ಕದನ ವಿರಾಮ ಘೋಷಣೆ ಮಾಡಿದರೆ ಈ ಎಲ್ಲಾ ಆಕ್ರಮಿತ ಪ್ರದೇಶಗಳನ್ನು ಅಧಿಕೃತವಾಗಿ ಮತ್ತು ತಾತ್ಕಾಲಿಕವಾಗಿ ರಷ್ಯಾಗೆ ಬಿಟ್ಟುಕೊಡುವುದಾಗಿ ಉಕ್ರೇನ್ ಹೇಳಿದೆ.

ಉಕ್ರೇನ್​ಗೆ ನ್ಯಾಟೋ ಸದಸ್ಯತ್ವ ಸಿಗಬೇಕು. ಆ ಬಳಿಕ ರಾಜತಾಂತ್ರಿಕ ಮಾರ್ಗದಲ್ಲಿ ಕ್ರಿಮಿಯಾ ಸೇರಿದಂತೆ ಎಲ್ಲಾ ರಷ್ಯಾ ಆಕ್ರಮಿತ ಪ್ರದೇಶಗಳನ್ನು ವಾಪಸ್ ಪಡೆಯಲು ಯತ್ನಿಸುವ ಪ್ಲಾನ್ ಅನ್ನು ಝೆಲೆನ್ಸ್​ಕಿ ಹೊಂದಿದ್ದಾರೆ.

ಇದನ್ನೂ ಓದಿ: ಹಿಂಸಾಚಾರದ ನಡುವೆ ಪಾಕ್​ನಿಂದ ಶಸ್ತ್ರಾಸ್ತ್ರಗಳ ಖರೀದಿಸಿದ ಬಾಂಗ್ಲಾದೇಶ

ರಷ್ಯಾ ಇದಕ್ಕೆ ಒಪ್ಪೀತಾ?

ಅಮೆರಿಕ ನಾಯಕತ್ವದ ನ್ಯಾಟೋ ಸಂಘಟನೆಯು ಉಕ್ರೇನ್ ಬಳಿ ನೆಲೆ ಸ್ಥಾಪಿಸಲು ಹೊರಟಿದ್ದು, ಉಕ್ರೇನ್ ಮೇಲೆ ರಷ್ಯಾ ಆಕ್ರಮಣ ಮಾಡಲು ಪ್ರಮುಖ ಕಾರಣ. ಈಗ ಉಕ್ರೇನ್​ಗೆ ನ್ಯಾಟೋ ಸದಸ್ಯತ್ವ ಸಿಕ್ಕಲ್ಲಿ ರಷ್ಯಾ ಬಗುಲಲ್ಲಿ ಪ್ರಬಲ ವೈರಿಶಕ್ತಿ ಸ್ಥಾಪಿತವಾದಂತೆ. ರಷ್ಯಾ ಈ ಷರತ್ತಿಗೆ ಒಪ್ಪದೇ ಹೋಗಬಹುದು ಎನ್ನುತ್ತಾರೆ ಕೆಲ ತಜ್ಞರು.

ಇನ್ನಷ್ಟು ಅಂತಾರಾಷ್ಟ್ರೀಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Follow Us
Vijaya Sarathy SN
Vijaya Sarathy SN

ಹುಟ್ಟೂರು ಹಾಸನ ಜಿಲ್ಲೆಯ ಶ್ರವಣಬೆಳಗೊಳ ಸಮೀಪದ ಒಂದು ಪುಟ್ಟ ಹಳ್ಳಿ. ಬೆಳದದ್ದು ಬೆಂಗಳೂರು ನಗರದಲ್ಲಿ. ಹಲವು ವರ್ಷಗಳಿಂದ ಪತ್ರಿಕಾ ರಂಗದಲ್ಲಿ ನೆಲೆ. ಬರವಣಿಗೆಯ ಆಸಕ್ತಿ ಮತ್ತು ಪರಿಣಿತಿಯ ಕ್ಷೇತ್ರಗಳು ಆರ್ಥಿಕತೆ, ಹಣಕಾಸು, ಅಂತರರಾಷ್ಟ್ರೀಯ ವಿದ್ಯಮಾನ, ಜನಕ್ರಾಂತಿ, ರಾಷ್ಟ್ರೀಯತೆ, ಸಂಸ್ಕೃತಿ, ಮಾನವ ಸಂಬಂಧ, ಕ್ರೀಡೆ ಮೊದಲಾದವು ಇವೆ. ಓದುಗರಿಗೆ ಸುಲಭವಾಗಿ ಅರ್ಥವಾಗುವಂತೆ ಸಾಧ್ಯವಾದಷ್ಟೂ ಸ್ಫುಟವಾಗಿ, ಸರಳವಾಗಿ ಬರೆಯುವ ಇಚ್ಛೆ.

Read More
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!