AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಗ್ ಟ್ವಿಸ್ಟ್..! ಆಕ್ರಮಿತ ಜಾಗ ರಷ್ಯಾಗೆ ಬಿಟ್ಟುಕೊಡಲು ಸಿದ್ಧ… ಆದರೆ… ಉಕ್ರೇನ್ ಅಧ್ಯಕ್ಷ ಜೆಲೆನ್ಸ್​ಕಿ ಷರುತ್ತು

Russia Ukraine war updates: ರಷ್ಯಾದಿಂದ ಆಕ್ರಮಿತವಾಗಿರುವ ಉಕ್ರೇನ್​ನ ಭೂಭಾಗವನ್ನು ರಷ್ಯಾಗೆ ಬಿಟ್ಟುಕೊಡಲು ಸಿದ್ಧ ಇರುವುದಾಗಿ ಉಕ್ರೇನ್ ಅಧ್ಯಕ್ಷ ಝೆಲೆನ್ಸ್​ಕಿ ಹೇಳಿದ್ದಾರೆ. ಆದರೆ, ಕೆಲ ಷರತ್ತುಗಳನ್ನೂ ಮುಂದಿಟ್ಟಿದ್ದಾರೆ. ರಷ್ಯಾಗೆ ಬಿಟ್ಟುಕೊಡುವುದು ತಾತ್ಕಾಲಿಕವಾಗಿ ಮಾತ್ರ ಎಂದಿದ್ದಾರೆ. ಹಾಗೆಯೇ, ಉಕ್ರೇನ್​ಗೆ ನ್ಯಾಟೋ ಸದಸ್ಯತ್ವ ನೀಡಬೇಕು ಎಂಬುದು ಅದರ ಪ್ರಮುಖ ಷರತ್ತು.

ಬಿಗ್ ಟ್ವಿಸ್ಟ್..! ಆಕ್ರಮಿತ ಜಾಗ ರಷ್ಯಾಗೆ ಬಿಟ್ಟುಕೊಡಲು ಸಿದ್ಧ... ಆದರೆ... ಉಕ್ರೇನ್ ಅಧ್ಯಕ್ಷ ಜೆಲೆನ್ಸ್​ಕಿ ಷರುತ್ತು
ವೊಲೋಡಿಮಿರ್ ಝೆಲೆನ್ಸ್​ಕಿ
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Dec 01, 2024 | 6:00 PM

Share

ನವದೆಹಲಿ, ಡಿಸೆಂಬರ್ 1: ಇಡೀ ವಿಶ್ವಕ್ಕೆ ತಲೆನೋವಾಗಿರುವ ರಷ್ಯಾ ಮತ್ತು ಉಕ್ರೇನ್ ನಡುವಿನ ಯುದ್ಧ ಅಂತ್ಯಗೊಳ್ಳುವ ಸಾಧ್ಯತೆ ತೋರತೊಡಗಿದೆ. ಈ ನಿಟ್ಟಿನಲ್ಲಿ ಉಕ್ರೇನ್ ಅಧ್ಯಕ್ಷ ವೊಲೋಡಿಮಿರ್ ಝೆಲೆನ್ಸ್​ಕಿ ಸುಳಿವು ನೀಡಿದ್ದಾರೆ. ಶಾಂತಿಗೋಸ್ಕರ ರಷ್ಯಾ ಆಕ್ರಮಿತ ಉಕ್ರೇನ್ ಜಾಗವನ್ನು ತ್ಯಾಗ ಮಾಡಲು ತಾನು ಸಿದ್ಧ ಇರುವುದಾಗಿ ಅವರು ಹೇಳಿರುವುದು ಕೆಲ ಮಾಧ್ಯಮಗಳಲ್ಲಿ ವರದಿಯಾಗಿದೆ. ಆದರೆ, ಒಂದು ಪ್ರಮುಖ ಷರತ್ತನ್ನೂ ಮುಂದಿಟ್ಟಿದ್ದಾರೆ. ಈ ಷರತ್ತು ರಷ್ಯಾಗೂ ಒಂದು ರೀತಿಯಲ್ಲಿ ನೆತ್ತಿಯ ಮೇಲಿನ ಕತ್ತಿಯಂತಾಗುವ ಸಾಧ್ಯತೆಯೂ ಇದೆ.

ಉಕ್ರೇನ್ ಅಧ್ಯಕ್ಷರು ಮುಂದಿಟ್ಟಿರುವ ಷರತ್ತೇನು?

ರಷ್ಯಾ ಆಕ್ರಮಿಸಿಕೊಂಡಿರುವ ಉಕ್ರೇನ್​ನ ಪ್ರದೇಶಗಳನ್ನು ತಾತ್ಕಾಲಿಕವಾಗಿ ರಷ್ಯಾಗೆ ಬಿಟ್ಟುಕೊಡುತ್ತೇವೆ. ಅದಕ್ಕೆ ಬದಲಾಗಿ ಉಕ್ರೇನ್ ದೇಶಕ್ಕೆ ನ್ಯಾಟೋ ಸದಸ್ಯತ್ವ ಸಿಗಬೇಕು ಎಂಬುದು ಅವರ ಷರುತ್ತು. ಇಲ್ಲಿ ಗಮನಿಸಬೇಕಾದ ಸಂಗತಿ ಎಂದರೆ, ಉಕ್ರೇನ್ ತಾತ್ಕಾಲಿಕವಾಗಿ ಮಾತ್ರ ರಷ್ಯಾಗೆ ಈ ಪ್ರದೇಶಗಳನ್ನು ನೀಡಲಿದೆ. ಮುಂದೆ ನ್ಯಾಟೋ ಭದ್ರತೆ ಸಿಕ್ಕ ಬಳಿಕ ರಾಜತಾಂತ್ರಿಕವಾಗಿ ಆ ಪ್ರದೇಶಗಳನ್ನು ವಾಪಸ್ ಪಡೆಯಲು ಪ್ರಯತ್ನಿಸಲಿದೆ ಎಂದೂ ಝೆಲೆನ್ಸ್​ಕಿ ಹೇಳಿದ್ದಾರೆ.

ಇದನ್ನೂ ಓದಿ: ಟ್ರಂಪ್ ಈಗ ಸುರಕ್ಷಿತವಾಗಿಲ್ಲ ಎಂದ ರಷ್ಯಾ ಅಧ್ಯಕ್ಷ ಪುಟಿನ್

2022ರಲ್ಲಿ ಉಕ್ರೇನ್ ಮೇಲೆ ರಷ್ಯಾ ಆಕ್ರಮಣ ಮಾಡಿದೆ. ಕಳೆದ 33 ತಿಂಗಳಿಂದ ನಿರಂತರವಾಗಿ ನಡೆಯುತ್ತಿರುವ ಈ ಯುದ್ಧದಲ್ಲಿ ಉಕ್ರೇನ್ ನಿರೀಕ್ಷೆಮೀರಿದ ರೀತಿಯಲ್ಲಿ ಪ್ರತಿರೋಧ ತೋರುತ್ತಿದೆ. ಈ ಆಕ್ರಮಣದಲ್ಲಿ ಉಕ್ರೇನ್​ನ ಡೋನೆಸ್ಕ್ ಮತ್ತು ಲುಹಾನ್ಸ್​ಕ್ ಪ್ರಾಂತ್ಯದ ಬಹುಭಾಗಗಳು ಈಗ ರಷ್ಯಾ ನಿಯಂತ್ರಣದಲ್ಲಿವೆ. ಇವು ಉಕ್ರೇನ್​ನ ಶೇ. 27 ಭೂಭಾಗದಷ್ಟಿದೆ.

2014ರಲ್ಲಿ ಉಕ್ರೇನ್​ನ ಕ್ರಿಮಿಯಾ ಪ್ರದೇಶವನ್ನು ರಷ್ಯಾ ಆಕ್ರಮಿಸಿಕೊಂಡಿದೆ. ಆದರೆ, ಉಕ್ರೇನ್ ಇದನ್ನು ರಷ್ಯಾಗೆ ಅಧಿಕೃತವಾಗಿ ಬಿಟ್ಟುಕೊಟ್ಟಿಲ್ಲ. ಈಗ ಕದನ ವಿರಾಮ ಘೋಷಣೆ ಮಾಡಿದರೆ ಈ ಎಲ್ಲಾ ಆಕ್ರಮಿತ ಪ್ರದೇಶಗಳನ್ನು ಅಧಿಕೃತವಾಗಿ ಮತ್ತು ತಾತ್ಕಾಲಿಕವಾಗಿ ರಷ್ಯಾಗೆ ಬಿಟ್ಟುಕೊಡುವುದಾಗಿ ಉಕ್ರೇನ್ ಹೇಳಿದೆ.

ಉಕ್ರೇನ್​ಗೆ ನ್ಯಾಟೋ ಸದಸ್ಯತ್ವ ಸಿಗಬೇಕು. ಆ ಬಳಿಕ ರಾಜತಾಂತ್ರಿಕ ಮಾರ್ಗದಲ್ಲಿ ಕ್ರಿಮಿಯಾ ಸೇರಿದಂತೆ ಎಲ್ಲಾ ರಷ್ಯಾ ಆಕ್ರಮಿತ ಪ್ರದೇಶಗಳನ್ನು ವಾಪಸ್ ಪಡೆಯಲು ಯತ್ನಿಸುವ ಪ್ಲಾನ್ ಅನ್ನು ಝೆಲೆನ್ಸ್​ಕಿ ಹೊಂದಿದ್ದಾರೆ.

ಇದನ್ನೂ ಓದಿ: ಹಿಂಸಾಚಾರದ ನಡುವೆ ಪಾಕ್​ನಿಂದ ಶಸ್ತ್ರಾಸ್ತ್ರಗಳ ಖರೀದಿಸಿದ ಬಾಂಗ್ಲಾದೇಶ

ರಷ್ಯಾ ಇದಕ್ಕೆ ಒಪ್ಪೀತಾ?

ಅಮೆರಿಕ ನಾಯಕತ್ವದ ನ್ಯಾಟೋ ಸಂಘಟನೆಯು ಉಕ್ರೇನ್ ಬಳಿ ನೆಲೆ ಸ್ಥಾಪಿಸಲು ಹೊರಟಿದ್ದು, ಉಕ್ರೇನ್ ಮೇಲೆ ರಷ್ಯಾ ಆಕ್ರಮಣ ಮಾಡಲು ಪ್ರಮುಖ ಕಾರಣ. ಈಗ ಉಕ್ರೇನ್​ಗೆ ನ್ಯಾಟೋ ಸದಸ್ಯತ್ವ ಸಿಕ್ಕಲ್ಲಿ ರಷ್ಯಾ ಬಗುಲಲ್ಲಿ ಪ್ರಬಲ ವೈರಿಶಕ್ತಿ ಸ್ಥಾಪಿತವಾದಂತೆ. ರಷ್ಯಾ ಈ ಷರತ್ತಿಗೆ ಒಪ್ಪದೇ ಹೋಗಬಹುದು ಎನ್ನುತ್ತಾರೆ ಕೆಲ ತಜ್ಞರು.

ಇನ್ನಷ್ಟು ಅಂತಾರಾಷ್ಟ್ರೀಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Follow Us
ಇಂದು ಈ ರಾಶಿಯವರಿಗೆ ಧನಯೋಗ!
ಇಂದು ಈ ರಾಶಿಯವರಿಗೆ ಧನಯೋಗ!
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ