AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉಕ್ರೇನ್‌ನಲ್ಲಿ ಕದನ ವಿರಾಮ ಘೋಷಿಸಬೇಕಿದೆ: ವಿಶ್ವಸಂಸ್ಥೆಯ ತುರ್ತು ವಿಶೇಷ ಸಾಮಾನ್ಯ ಸಭೆ ಅಭಿಪ್ರಾಯ

ನಮ್ಮನ್ನು ನಾವು ರಕ್ಷಿಸಿಕೊಳ್ಳಲು ರಷ್ಯಾ ವಿರುದ್ಧ ಹೋರಾಟ ಮಾಡುತ್ತಿದ್ದೇವೆ. ಚೆರ್ನೋಬಿಲ್ ಸ್ಥಾವರದಲ್ಲಿ ವಿಕಿರಣ ಸೋರಿಕೆ ಹೆಚ್ಚಾಗುತ್ತಿದೆ ಎಂದು ವಿಶ್ವಸಂಸ್ಥೆ ವಿಶೇಷ ಸಾಮಾನ್ಯ ಸಭೆಯಲ್ಲಿ ಉಕ್ರೇನ್ ಆತಂಕ ವ್ಯಕ್ತಪಡಿಸಿದೆ.

ಉಕ್ರೇನ್‌ನಲ್ಲಿ ಕದನ ವಿರಾಮ ಘೋಷಿಸಬೇಕಿದೆ: ವಿಶ್ವಸಂಸ್ಥೆಯ ತುರ್ತು ವಿಶೇಷ ಸಾಮಾನ್ಯ ಸಭೆ ಅಭಿಪ್ರಾಯ
UNGA Meet
TV9 Web
| Edited By: |

Updated on:Feb 28, 2022 | 10:59 PM

Share

ಉಕ್ರೇನ್ (Ukraine) ಮೇಲೆ ರಷ್ಯಾ (Russia) ಸೇನೆ ಯುದ್ಧ ಮುಂದುವರಿಸಿದೆ. ಈ ಮಧ್ಯೆ, ವಿಶ್ವಸಂಸ್ಥೆಯ ತುರ್ತು ವಿಶೇಷ ಸಾಮಾನ್ಯ ಸಭೆ (United Nations General Assembly) ನಡೆಸಲಾಗಿದೆ. ರಷ್ಯಾ ಆಕ್ರಮಣಕಾರಿ ನೀತಿ ಖಂಡಿಸಲು ಸಭೆ ಕರೆಯಲಾಗಿದೆ. ಶೀಘ್ರವೇ ಉಕ್ರೇನ್‌ನಲ್ಲಿ ಕದನ ವಿರಾಮ ಘೋಷಿಸಬೇಕಿದೆ ಎಂದು ವಿಶ್ವಸಂಸ್ಥೆಯ ತುರ್ತು ವಿಶೇಷ ಸಾಮಾನ್ಯ ಸಭೆ ಅಭಿಪ್ರಾಯ ವ್ಯಕ್ತಪಡಿಸಿದೆ. ಉಕ್ರೇನ್ ರಾಯಭಾರಿ ರಷ್ಯಾ ಆಕ್ರಮಣಕಾರಿ ನೀತಿಯನ್ನು ಖಂಡಿಸಿದ್ದಾರೆ. ಮಕ್ಕಳು, ಶಾಲೆಗಳ ಮೇಲೆಯೂ ರಷ್ಯಾ ದಾಳಿ ನಡೆಸುತ್ತಿದೆ. ಕೂಡಲೇ ಸೇನಾಪಡೆಯನ್ನು ರಷ್ಯಾ ವಾಪಸ್ ಪಡೆಯಲಿ ಎಂದು ಹೇಳಿದ್ದಾರೆ. ನಮ್ಮನ್ನು ನಾವು ರಕ್ಷಿಸಿಕೊಳ್ಳಲು ರಷ್ಯಾ ವಿರುದ್ಧ ಹೋರಾಟ ಮಾಡುತ್ತಿದ್ದೇವೆ. ಚೆರ್ನೋಬಿಲ್ ಸ್ಥಾವರದಲ್ಲಿ ವಿಕಿರಣ ಸೋರಿಕೆ ಹೆಚ್ಚಾಗುತ್ತಿದೆ ಎಂದು ವಿಶ್ವಸಂಸ್ಥೆ ವಿಶೇಷ ಸಾಮಾನ್ಯ ಸಭೆಯಲ್ಲಿ ಉಕ್ರೇನ್ ಆತಂಕ ವ್ಯಕ್ತಪಡಿಸಿದೆ.

ಆದರೆ ಉಕ್ರೇನ್ ಮೇಲೆ ದಾಳಿಯನ್ನು ರಷ್ಯಾ ಸಮರ್ಥಿಸಿಕೊಂಡಿದೆ. ರಷ್ಯಾ ವಿರುದ್ಧ ಉಕ್ರೇನ್‌ ಸುಳ್ಳು ಸುದ್ದಿ ಹಬ್ಬಿಸುತ್ತಿದೆ. ರಷ್ಯಾಗೆ ಉಕ್ರೇನ್‌ನನ್ನು ವಶಪಡಿಸಿಕೊಳ್ಳುವ ಉದ್ದೇಶವಿಲ್ಲ. ಡಾನ್ಬಾಸ್ ನಿವಾಸಿಗಳನ್ನು ರಕ್ಷಿಸಲು ಉಕ್ರೇನ್ ಮೇಲೆ ದಾಳಿ ಮಾಡಲಾಗುತ್ತಿದೆ. ಡಾನ್ಬಾಸ್ ನಿವಾಸಿಗಳ ಬಗ್ಗೆ ಉಕ್ರೇನ್‌ಗೆ ಸಹಾನುಭೂತಿ ಇಲ್ಲ ಎಂದು ರಷ್ಯಾ ಹೇಳಿದೆ. ಉಕ್ರೇನ್ ಮೇಲೆ ದಾಳಿ ಬಗ್ಗೆ ರಷ್ಯಾ ರಾಯಭಾರಿ ತಿಳಿಸಿದ್ದಾರೆ. ನಾಚಿಕೆ ಇಲ್ಲದೇ ಕೆಲ ದೇಶಗಳು ಶಸ್ತ್ರಾಸ್ತ್ರ ಪೂರೈಸುತ್ತಿವೆ ಎಂದು ಪಾಶ್ಚಿಮಾತ್ಯ ದೇಶಗಳ ವಿರುದ್ಧ ರಷ್ಯಾ ರಾಯಭಾರಿ ಕಿಡಿಕಾರಿದ್ದಾರೆ.

ಯುರೋಪಿಯನ್ ಒಕ್ಕೂಟದಲ್ಲಿ ಸದಸ್ಯತ್ವಕ್ಕಾಗಿ ಉಕ್ರೇನ್ ಅರ್ಜಿ ಸಲ್ಲಿಸಿದೆ. ಉಕ್ರೇನ್ ಸದಸ್ಯತ್ವಕ್ಕಾಗಿ ಅರ್ಜಿಗೆ ಝೆಲೆನ್ಸ್ಕಿ ಸಹಿ ಹಾಕಿದ್ದಾರೆ. ಈ ಮಧ್ಯೆ, ಇಂಗ್ಲೆಂಡ್ ರಷ್ಯಾಗೆ ಮತ್ತಷ್ಟು ಆರ್ಥಿಕ ನಿರ್ಬಂಧ ವಿಧಿಸಿದೆ. ಯುಕೆ ರಷ್ಯನ್ ಬ್ಯಾಂಕ್​ಗಳ ಆಸ್ತಿ ಮುಟ್ಟುಗೋಲು ಹಾಕಿದೆ. ಉಕ್ರೇನ್​ನಲ್ಲಿ ಜೀವ ಉಳಿಸಿಕೊಳ್ಳಲು ಜನರು ಪರದಾಟ ಪಡುತ್ತಿದ್ದಾರೆ. ಕೀವ್​​ನ ರೈಲ್ವೆ ನಿಲ್ದಾಣದಲ್ಲಿ ಜನರು ತುಂಬಿ ತುಳುಕುತ್ತಿದ್ದಾರೆ. ರಾಜಧಾನಿ ಕೀವ್​​ ತೊರೆಯಲು ಜನ ಮುಂದಾಗಿದ್ದಾರೆ. ಕೀವ್​​ ನಗರದ ಹೊರವಲಯದಲ್ಲಿ ಭಾರಿ ಸ್ಫೋಟ ಆಗಿರುವ ಬಗ್ಗೆಯೂ ಮಾಹಿತಿ ಲಭಿಸಿದೆ.

ರಷ್ಯಾ- ಉಕ್ರೇನ್ ನಿಯೋಗಗಳ ಮಧ್ಯೆ ಶಾಂತಿ ಸಭೆ ಅಂತ್ಯವಾಗಿದೆ. ಬೆಲಾರಸ್​​ನಲ್ಲಿ ಇಂದು ಒಂದೇ ದಿನ 3 ಸಭೆ ನಡೆಸಲಾಗಿದೆ. ಇಂದು ನಡೆದ ಸಭೆ ಒಂದು ಉತ್ತಮ ಬೆಳೆವಣಿಗೆಯಾಗಲಿದೆ. ಮುಂದಿನ 2 ದಿನಗಳಲ್ಲಿ ಮತ್ತೊಂದು ಸುತ್ತಿನ ಸಭೆಗೆ ನಿರ್ಧಾರ ಮಾಡಲಾಗಿದೆ ಎಂದು ಮಾಹಿತಿ ಲಭಿಸಿದೆ. ಈ ನಡುವೆ, ಉಕ್ರೇನ್​ ದೇಶಕ್ಕೆ ಫಿನ್​ಲ್ಯಾಂಡ್​ ನೆರವಿನ ಹಸ್ತ ಚಾಚಿದೆ. ಶಸ್ತ್ರಾಸ್ತ್ರ ಪೂರೈಸುವುದಾಗಿ ಫಿನ್​ಲ್ಯಾಂಡ್​ ಘೋಷಣೆ ಮಾಡಿದೆ.

ಇದನ್ನೂ ಓದಿ: Russia Ukraine War: ಊಟ, ನೀರು ಇಲ್ಲದೇ ಉಕ್ರೇನ್​ನಲ್ಲಿ ಮುಂದುವರೆದ ರಾಜ್ಯದ ವಿದ್ಯಾರ್ಥಿಗಳ ಪರದಾಟ

ಇದನ್ನೂ ಓದಿ: Russia-Ukraine Crisis: ಉಕ್ರೇನ್ ಮತ್ತು ರಷ್ಯಾ ಯುದ್ಧದ ನಡುವೆ ಹೆಚ್ಚು ಹಾನಿಗೊಳಗಾದ ನಗರಗಳು ಯಾವವು ಗೊತ್ತಾ..! ಇಲ್ಲಿದೆ ಮಾಹಿತಿ

Published On - 10:50 pm, Mon, 28 February 22

ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ