Ukraine War: ರಷ್ಯಾದ ದಾಳಿಯಿಂದ ಉಕ್ರೇನ್​ನಲ್ಲಿ 816 ನಾಗರಿಕರು ಸಾವು; ವಿಶ್ವಸಂಸ್ಥೆ ಮಾಹಿತಿ

ಮಾರ್ಚ್ 17 ರವರೆಗೆ ಉಕ್ರೇನ್‌ನಲ್ಲಿ ಕನಿಷ್ಠ 816 ನಾಗರಿಕರು ಸಾವನ್ನಪ್ಪಿದ್ದಾರೆ ಮತ್ತು 1,333 ಮಂದಿ ಗಾಯಗೊಂಡಿದ್ದಾರೆ ಎಂದು ವಿಶ್ವ ಸಂಸ್ಥೆ ಮಾಹಿತಿ ನೀಡಿದೆ.

Ukraine War: ರಷ್ಯಾದ ದಾಳಿಯಿಂದ ಉಕ್ರೇನ್​ನಲ್ಲಿ 816 ನಾಗರಿಕರು ಸಾವು; ವಿಶ್ವಸಂಸ್ಥೆ ಮಾಹಿತಿ
ಉಕ್ರೇನ್ ಯುದ್ಧ
Follow us
| Updated By: ಸುಷ್ಮಾ ಚಕ್ರೆ

Updated on:Mar 18, 2022 | 8:42 PM

ಕೀವ್​: ಯುದ್ಧ ಪ್ರಾರಂಭವಾದಾಗಿನಿಂದ ಉಕ್ರೇನ್‌ನಲ್ಲಿ (Ukraine) ಕನಿಷ್ಠ 816 ನಾಗರಿಕರು ಸಾವನ್ನಪ್ಪಿದ್ದಾರೆ ಎಂದು ವಿಶ್ವಸಂಸ್ಥೆ ತಿಳಿಸಿದೆ. ಮಾರ್ಚ್ 17 ರವರೆಗೆ ಉಕ್ರೇನ್‌ನಲ್ಲಿ ಕನಿಷ್ಠ 816 ನಾಗರಿಕರು ಸಾವನ್ನಪ್ಪಿದ್ದಾರೆ ಮತ್ತು 1,333 ಮಂದಿ ಗಾಯಗೊಂಡಿದ್ದಾರೆ ಎಂದು ವಿಶ್ವ ಸಂಸ್ಥೆ (United Nations) ಮಾಹಿತಿ ನೀಡಿದೆ. ಭಾರೀ ಫಿರಂಗಿ ಮತ್ತು ಶೆಲ್‌ಗಳಂತಹ ಸ್ಫೋಟಕ ಶಸ್ತ್ರಾಸ್ತ್ರಗಳಿಂದ, ಕ್ಷಿಪಣಿ ಮತ್ತು ವಾಯು ದಾಳಿಗಳಿಂದಾಗಿ ಹೆಚ್ಚಿನ ಹಾನಿಯಾಗಿದೆ ಎಂದು ತಿಳಿಸಿದೆ. ಮರಿಪೋಲ್​ನಂತಹ ಅತಿಯಾಗಿ ಹಾನಿಗೊಳಗಾದ ನಗರಗಳಿಂದ ಅಪಘಾತದ ವರದಿಗಳನ್ನು ಪರಿಶೀಲಿಸಲು ಇನ್ನೂ ಸಾಧ್ಯವಾಗದ ಕಾರಣ ಯುದ್ಧದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಇನ್ನೂ ಹೆಚ್ಚಾಗಲಿದೆ ಎಂದು ಅಂದಾಜಿಸಲಾಗಿದೆ.

ಉಕ್ರೇನ್ ಮತ್ತು ರಷ್ಯಾದ ನಡುವೆ ಯುದ್ಧ ಪ್ರಾರಂಭವಾದಾಗಿನಿಂದ 60 ನಾಗರಿಕರು ಸೇರಿದಂತೆ ಉಕ್ರೇನ್​ನ ಕೀವ್‌ನಲ್ಲಿ 222 ಮಂದಿ ಕೊಲ್ಲಲ್ಪಟ್ಟಿದ್ದಾರೆ. ಉಕ್ರೇನ್‌ನಲ್ಲಿ ರಷ್ಯಾದ ಆಕ್ರಮಣ ಪ್ರಾರಂಭವಾದಾಗಿನಿಂದ ರಾಜಧಾನಿ ಕೀವ್‌ ಒಂದರಲ್ಲೇ 60 ನಾಗರಿಕರು ಮತ್ತು ನಾಲ್ವರು ಮಕ್ಕಳು ಸೇರಿದಂತೆ 222 ಜನರು ಸಾವನ್ನಪ್ಪಿದ್ದಾರೆ ಎಂದು ಉಕ್ರೇನ್ ಅಧಿಕಾರಿಗಳು ತಿಳಿಸಿದ್ದಾರೆ. 241 ನಾಗರಿಕರು ಸೇರಿದಂತೆ ಇನ್ನೂ 889 ಜನರು ಗಾಯಗೊಂಡಿದ್ದಾರೆ ಎಂದು ಕೀವ್ ನಗರಾಡಳಿತವು ಹೇಳಿಕೆಯಲ್ಲಿ ತಿಳಿಸಿದೆ.

ಬಾಂಬ್ ದಾಳಿಗೊಳಗಾದ ಮರಿಪೋಲ್ ಥಿಯೇಟರ್‌ನಿಂದ 130 ಜನರನ್ನು ರಕ್ಷಿಸಲಾಗಿದೆ ಎಂದು ಉಕ್ರೇನ್ ಹೇಳಿದೆ. ರಷ್ಯಾದ ವೈಮಾನಿಕ ದಾಳಿಯಿಂದ ಮರಿಪೋಲ್​​ನ ಥಿಯೇಟರ್‌ನ ಅವಶೇಷಗಳಿಂದ 130 ಜನರನ್ನು ರಕ್ಷಿಸಲಾಗಿದೆ ಎಂದು ಉಕ್ರೇನಿಯನ್ ಮಾನವ ಹಕ್ಕುಗಳ ಓಂಬುಡ್ಸ್ವುಮನ್ ಲ್ಯುಡ್ಮಿಲಾ ಡೆನಿಸೋವಾ ಹೇಳಿದ್ದಾರೆ. ಉಕ್ರೇನಿಯನ್ ಅಧಿಕಾರಿಗಳ ಪ್ರಕಾರ, ಕಟ್ಟಡಕ್ಕೆ ಅಪ್ಪಳಿಸುವ ಮೊದಲು ಅನೇಕ ಜನರು ನೆಲದಡಿಯಲ್ಲಿ ಆಶ್ರಯ ಪಡೆದಿದ್ದ ಸ್ಥಳದಲ್ಲಿ ರಕ್ಷಣಾ ಕಾರ್ಯ ನಡೆಯುತ್ತಿದೆ ಎಂದು ಅವರು ಹೇಳಿದ್ದಾರೆ.

ಅಮೆರಿಕದ ಅಧ್ಯಕ್ಷ ಜೋ ಬೈಡೆನ್ ಉಕ್ರೇನ್ ಯುದ್ಧದ ಕುರಿತು ಕ್ಸಿ ಜಿನ್‌ಪಿಂಗ್ ಅವರೊಂದಿಗೆ ಮಾತುಕತೆ ನಡೆಸಿದ್ದಾರೆ. ಅಮೆರಿಕದ ಅಧ್ಯಕ್ಷ ಜೋ ಬೈಡೆನ್ ಮತ್ತು ಚೀನಾದ ಕ್ಸಿ ಜಿನ್‌ಪಿಂಗ್ ಇಂದು ಮಾತುಕತೆ ನಡೆಸಿದ್ದಾರೆ. ಶ್ವೇತಭವನವು ಉಕ್ರೇನ್‌ನ ಮೇಲೆ ರಷ್ಯಾದ ಆಕ್ರಮಣಕ್ಕೆ ಬೀಜಿಂಗ್ ಮಿಲಿಟರಿ ಅಥವಾ ಆರ್ಥಿಕ ನೆರವು ನೀಡುವುದನ್ನು ತಡೆಯಲು ಪ್ರಯತ್ನಿಸುತ್ತಿದೆ.

ಇದನ್ನೂ ಓದಿ: Russia- Ukraine Crisis: ರಷ್ಯಾದಿಂದ ಕೈಕೊಡವಿ ಎದ್ದು ಬರೋದು ಈ ಬ್ರ್ಯಾಂಡ್​ಗಳಿಗೆ ಸಲೀಸಿಲ್ಲ ಏಕೆ ಗೊತ್ತಾ?

Ukraine Crisis: ಯುದ್ಧ ನಿಲ್ಲಿಸಲು ಪುಟಿನ್ ಮುಂದಿಟ್ಟ ಬೇಡಿಕೆಗಳು ಬಹಿರಂಗ; ಉಕ್ರೇನ್​ಗೆ ಆತಂಕವೇಕೆ? ಇಲ್ಲಿದೆ ಮಾಹಿತಿ

Published On - 8:41 pm, Fri, 18 March 22

ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ