AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Ukraine War: ರಷ್ಯಾದ ದಾಳಿಯಿಂದ ಉಕ್ರೇನ್​ನಲ್ಲಿ 816 ನಾಗರಿಕರು ಸಾವು; ವಿಶ್ವಸಂಸ್ಥೆ ಮಾಹಿತಿ

ಮಾರ್ಚ್ 17 ರವರೆಗೆ ಉಕ್ರೇನ್‌ನಲ್ಲಿ ಕನಿಷ್ಠ 816 ನಾಗರಿಕರು ಸಾವನ್ನಪ್ಪಿದ್ದಾರೆ ಮತ್ತು 1,333 ಮಂದಿ ಗಾಯಗೊಂಡಿದ್ದಾರೆ ಎಂದು ವಿಶ್ವ ಸಂಸ್ಥೆ ಮಾಹಿತಿ ನೀಡಿದೆ.

Ukraine War: ರಷ್ಯಾದ ದಾಳಿಯಿಂದ ಉಕ್ರೇನ್​ನಲ್ಲಿ 816 ನಾಗರಿಕರು ಸಾವು; ವಿಶ್ವಸಂಸ್ಥೆ ಮಾಹಿತಿ
ಉಕ್ರೇನ್ ಯುದ್ಧ
TV9 Web
| Edited By: |

Updated on:Mar 18, 2022 | 8:42 PM

Share

ಕೀವ್​: ಯುದ್ಧ ಪ್ರಾರಂಭವಾದಾಗಿನಿಂದ ಉಕ್ರೇನ್‌ನಲ್ಲಿ (Ukraine) ಕನಿಷ್ಠ 816 ನಾಗರಿಕರು ಸಾವನ್ನಪ್ಪಿದ್ದಾರೆ ಎಂದು ವಿಶ್ವಸಂಸ್ಥೆ ತಿಳಿಸಿದೆ. ಮಾರ್ಚ್ 17 ರವರೆಗೆ ಉಕ್ರೇನ್‌ನಲ್ಲಿ ಕನಿಷ್ಠ 816 ನಾಗರಿಕರು ಸಾವನ್ನಪ್ಪಿದ್ದಾರೆ ಮತ್ತು 1,333 ಮಂದಿ ಗಾಯಗೊಂಡಿದ್ದಾರೆ ಎಂದು ವಿಶ್ವ ಸಂಸ್ಥೆ (United Nations) ಮಾಹಿತಿ ನೀಡಿದೆ. ಭಾರೀ ಫಿರಂಗಿ ಮತ್ತು ಶೆಲ್‌ಗಳಂತಹ ಸ್ಫೋಟಕ ಶಸ್ತ್ರಾಸ್ತ್ರಗಳಿಂದ, ಕ್ಷಿಪಣಿ ಮತ್ತು ವಾಯು ದಾಳಿಗಳಿಂದಾಗಿ ಹೆಚ್ಚಿನ ಹಾನಿಯಾಗಿದೆ ಎಂದು ತಿಳಿಸಿದೆ. ಮರಿಪೋಲ್​ನಂತಹ ಅತಿಯಾಗಿ ಹಾನಿಗೊಳಗಾದ ನಗರಗಳಿಂದ ಅಪಘಾತದ ವರದಿಗಳನ್ನು ಪರಿಶೀಲಿಸಲು ಇನ್ನೂ ಸಾಧ್ಯವಾಗದ ಕಾರಣ ಯುದ್ಧದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಇನ್ನೂ ಹೆಚ್ಚಾಗಲಿದೆ ಎಂದು ಅಂದಾಜಿಸಲಾಗಿದೆ.

ಉಕ್ರೇನ್ ಮತ್ತು ರಷ್ಯಾದ ನಡುವೆ ಯುದ್ಧ ಪ್ರಾರಂಭವಾದಾಗಿನಿಂದ 60 ನಾಗರಿಕರು ಸೇರಿದಂತೆ ಉಕ್ರೇನ್​ನ ಕೀವ್‌ನಲ್ಲಿ 222 ಮಂದಿ ಕೊಲ್ಲಲ್ಪಟ್ಟಿದ್ದಾರೆ. ಉಕ್ರೇನ್‌ನಲ್ಲಿ ರಷ್ಯಾದ ಆಕ್ರಮಣ ಪ್ರಾರಂಭವಾದಾಗಿನಿಂದ ರಾಜಧಾನಿ ಕೀವ್‌ ಒಂದರಲ್ಲೇ 60 ನಾಗರಿಕರು ಮತ್ತು ನಾಲ್ವರು ಮಕ್ಕಳು ಸೇರಿದಂತೆ 222 ಜನರು ಸಾವನ್ನಪ್ಪಿದ್ದಾರೆ ಎಂದು ಉಕ್ರೇನ್ ಅಧಿಕಾರಿಗಳು ತಿಳಿಸಿದ್ದಾರೆ. 241 ನಾಗರಿಕರು ಸೇರಿದಂತೆ ಇನ್ನೂ 889 ಜನರು ಗಾಯಗೊಂಡಿದ್ದಾರೆ ಎಂದು ಕೀವ್ ನಗರಾಡಳಿತವು ಹೇಳಿಕೆಯಲ್ಲಿ ತಿಳಿಸಿದೆ.

ಬಾಂಬ್ ದಾಳಿಗೊಳಗಾದ ಮರಿಪೋಲ್ ಥಿಯೇಟರ್‌ನಿಂದ 130 ಜನರನ್ನು ರಕ್ಷಿಸಲಾಗಿದೆ ಎಂದು ಉಕ್ರೇನ್ ಹೇಳಿದೆ. ರಷ್ಯಾದ ವೈಮಾನಿಕ ದಾಳಿಯಿಂದ ಮರಿಪೋಲ್​​ನ ಥಿಯೇಟರ್‌ನ ಅವಶೇಷಗಳಿಂದ 130 ಜನರನ್ನು ರಕ್ಷಿಸಲಾಗಿದೆ ಎಂದು ಉಕ್ರೇನಿಯನ್ ಮಾನವ ಹಕ್ಕುಗಳ ಓಂಬುಡ್ಸ್ವುಮನ್ ಲ್ಯುಡ್ಮಿಲಾ ಡೆನಿಸೋವಾ ಹೇಳಿದ್ದಾರೆ. ಉಕ್ರೇನಿಯನ್ ಅಧಿಕಾರಿಗಳ ಪ್ರಕಾರ, ಕಟ್ಟಡಕ್ಕೆ ಅಪ್ಪಳಿಸುವ ಮೊದಲು ಅನೇಕ ಜನರು ನೆಲದಡಿಯಲ್ಲಿ ಆಶ್ರಯ ಪಡೆದಿದ್ದ ಸ್ಥಳದಲ್ಲಿ ರಕ್ಷಣಾ ಕಾರ್ಯ ನಡೆಯುತ್ತಿದೆ ಎಂದು ಅವರು ಹೇಳಿದ್ದಾರೆ.

ಅಮೆರಿಕದ ಅಧ್ಯಕ್ಷ ಜೋ ಬೈಡೆನ್ ಉಕ್ರೇನ್ ಯುದ್ಧದ ಕುರಿತು ಕ್ಸಿ ಜಿನ್‌ಪಿಂಗ್ ಅವರೊಂದಿಗೆ ಮಾತುಕತೆ ನಡೆಸಿದ್ದಾರೆ. ಅಮೆರಿಕದ ಅಧ್ಯಕ್ಷ ಜೋ ಬೈಡೆನ್ ಮತ್ತು ಚೀನಾದ ಕ್ಸಿ ಜಿನ್‌ಪಿಂಗ್ ಇಂದು ಮಾತುಕತೆ ನಡೆಸಿದ್ದಾರೆ. ಶ್ವೇತಭವನವು ಉಕ್ರೇನ್‌ನ ಮೇಲೆ ರಷ್ಯಾದ ಆಕ್ರಮಣಕ್ಕೆ ಬೀಜಿಂಗ್ ಮಿಲಿಟರಿ ಅಥವಾ ಆರ್ಥಿಕ ನೆರವು ನೀಡುವುದನ್ನು ತಡೆಯಲು ಪ್ರಯತ್ನಿಸುತ್ತಿದೆ.

ಇದನ್ನೂ ಓದಿ: Russia- Ukraine Crisis: ರಷ್ಯಾದಿಂದ ಕೈಕೊಡವಿ ಎದ್ದು ಬರೋದು ಈ ಬ್ರ್ಯಾಂಡ್​ಗಳಿಗೆ ಸಲೀಸಿಲ್ಲ ಏಕೆ ಗೊತ್ತಾ?

Ukraine Crisis: ಯುದ್ಧ ನಿಲ್ಲಿಸಲು ಪುಟಿನ್ ಮುಂದಿಟ್ಟ ಬೇಡಿಕೆಗಳು ಬಹಿರಂಗ; ಉಕ್ರೇನ್​ಗೆ ಆತಂಕವೇಕೆ? ಇಲ್ಲಿದೆ ಮಾಹಿತಿ

Published On - 8:41 pm, Fri, 18 March 22

ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?
ಆಂಟಿ ಕರೆದಳೆಂದು ಹೋದ ಯುವಕ ಆಸ್ಪತ್ರೆ ಪಾಲು, ಆಗಿದ್ದೇನು?
ಆಂಟಿ ಕರೆದಳೆಂದು ಹೋದ ಯುವಕ ಆಸ್ಪತ್ರೆ ಪಾಲು, ಆಗಿದ್ದೇನು?
ಗ್ರಾಮಸ್ಥರ ಮೇಲೆ ಏಕಾಏಕಿ ದಾಳಿ ಮಾಡಿದ ಹೆಜ್ಜೇನು
ಗ್ರಾಮಸ್ಥರ ಮೇಲೆ ಏಕಾಏಕಿ ದಾಳಿ ಮಾಡಿದ ಹೆಜ್ಜೇನು
60 ಲಕ್ಷ ರೂ ಮೌಲ್ಯದ ಮೆಕ್ಕೆಜೋಳಕ್ಕೆ ಬೆಂಕಿಯಿಟ್ಟ ದುಷ್ಕರ್ಮಿಗಳು
60 ಲಕ್ಷ ರೂ ಮೌಲ್ಯದ ಮೆಕ್ಕೆಜೋಳಕ್ಕೆ ಬೆಂಕಿಯಿಟ್ಟ ದುಷ್ಕರ್ಮಿಗಳು
ಕಾಶ್ಮೀರದ ಹೈವೇಯಲ್ಲಿ ಪರ್ವತ ಕುಸಿತ; ಶ್ರೀನಗರ-ಬಾರಾಮುಲ್ಲಾ ಮಾರ್ಗ ಬಂದ್
ಕಾಶ್ಮೀರದ ಹೈವೇಯಲ್ಲಿ ಪರ್ವತ ಕುಸಿತ; ಶ್ರೀನಗರ-ಬಾರಾಮುಲ್ಲಾ ಮಾರ್ಗ ಬಂದ್
ಜನಾರ್ದನ ರೆಡ್ಡಿ ಮನೆಯತ್ತಲೇ ಫೈರ್ ಮಾಡಿದ್ದ ಖಾಸಗಿ ಗನ್​ಮ್ಯಾನ್
ಜನಾರ್ದನ ರೆಡ್ಡಿ ಮನೆಯತ್ತಲೇ ಫೈರ್ ಮಾಡಿದ್ದ ಖಾಸಗಿ ಗನ್​ಮ್ಯಾನ್
ಸಚಿವ ಜಮೀರ್ 2ನೇ ಟಿಪ್ಪು ಸುಲ್ತಾನ್ ಎಂದ ಪ್ರಮೋದ್ ಮುತಾಲಿಕ್
ಸಚಿವ ಜಮೀರ್ 2ನೇ ಟಿಪ್ಪು ಸುಲ್ತಾನ್ ಎಂದ ಪ್ರಮೋದ್ ಮುತಾಲಿಕ್
ಬ್ಯಾನರ್​​​ ಕಿತ್ತಾಟದಲ್ಲಿ ಅಮಾಯಕ ಕಾರ್ಯಕರ್ತ ಬಲಿ, ಹೆಗಲು ಕೊಟ್ಟ ಶಾಸಕರು
ಬ್ಯಾನರ್​​​ ಕಿತ್ತಾಟದಲ್ಲಿ ಅಮಾಯಕ ಕಾರ್ಯಕರ್ತ ಬಲಿ, ಹೆಗಲು ಕೊಟ್ಟ ಶಾಸಕರು