AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Ukraine War: ರಷ್ಯಾದ ದಾಳಿಯಿಂದ ಉಕ್ರೇನ್​ನಲ್ಲಿ 816 ನಾಗರಿಕರು ಸಾವು; ವಿಶ್ವಸಂಸ್ಥೆ ಮಾಹಿತಿ

ಮಾರ್ಚ್ 17 ರವರೆಗೆ ಉಕ್ರೇನ್‌ನಲ್ಲಿ ಕನಿಷ್ಠ 816 ನಾಗರಿಕರು ಸಾವನ್ನಪ್ಪಿದ್ದಾರೆ ಮತ್ತು 1,333 ಮಂದಿ ಗಾಯಗೊಂಡಿದ್ದಾರೆ ಎಂದು ವಿಶ್ವ ಸಂಸ್ಥೆ ಮಾಹಿತಿ ನೀಡಿದೆ.

Ukraine War: ರಷ್ಯಾದ ದಾಳಿಯಿಂದ ಉಕ್ರೇನ್​ನಲ್ಲಿ 816 ನಾಗರಿಕರು ಸಾವು; ವಿಶ್ವಸಂಸ್ಥೆ ಮಾಹಿತಿ
ಉಕ್ರೇನ್ ಯುದ್ಧ
TV9 Web
| Edited By: |

Updated on:Mar 18, 2022 | 8:42 PM

Share

ಕೀವ್​: ಯುದ್ಧ ಪ್ರಾರಂಭವಾದಾಗಿನಿಂದ ಉಕ್ರೇನ್‌ನಲ್ಲಿ (Ukraine) ಕನಿಷ್ಠ 816 ನಾಗರಿಕರು ಸಾವನ್ನಪ್ಪಿದ್ದಾರೆ ಎಂದು ವಿಶ್ವಸಂಸ್ಥೆ ತಿಳಿಸಿದೆ. ಮಾರ್ಚ್ 17 ರವರೆಗೆ ಉಕ್ರೇನ್‌ನಲ್ಲಿ ಕನಿಷ್ಠ 816 ನಾಗರಿಕರು ಸಾವನ್ನಪ್ಪಿದ್ದಾರೆ ಮತ್ತು 1,333 ಮಂದಿ ಗಾಯಗೊಂಡಿದ್ದಾರೆ ಎಂದು ವಿಶ್ವ ಸಂಸ್ಥೆ (United Nations) ಮಾಹಿತಿ ನೀಡಿದೆ. ಭಾರೀ ಫಿರಂಗಿ ಮತ್ತು ಶೆಲ್‌ಗಳಂತಹ ಸ್ಫೋಟಕ ಶಸ್ತ್ರಾಸ್ತ್ರಗಳಿಂದ, ಕ್ಷಿಪಣಿ ಮತ್ತು ವಾಯು ದಾಳಿಗಳಿಂದಾಗಿ ಹೆಚ್ಚಿನ ಹಾನಿಯಾಗಿದೆ ಎಂದು ತಿಳಿಸಿದೆ. ಮರಿಪೋಲ್​ನಂತಹ ಅತಿಯಾಗಿ ಹಾನಿಗೊಳಗಾದ ನಗರಗಳಿಂದ ಅಪಘಾತದ ವರದಿಗಳನ್ನು ಪರಿಶೀಲಿಸಲು ಇನ್ನೂ ಸಾಧ್ಯವಾಗದ ಕಾರಣ ಯುದ್ಧದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಇನ್ನೂ ಹೆಚ್ಚಾಗಲಿದೆ ಎಂದು ಅಂದಾಜಿಸಲಾಗಿದೆ.

ಉಕ್ರೇನ್ ಮತ್ತು ರಷ್ಯಾದ ನಡುವೆ ಯುದ್ಧ ಪ್ರಾರಂಭವಾದಾಗಿನಿಂದ 60 ನಾಗರಿಕರು ಸೇರಿದಂತೆ ಉಕ್ರೇನ್​ನ ಕೀವ್‌ನಲ್ಲಿ 222 ಮಂದಿ ಕೊಲ್ಲಲ್ಪಟ್ಟಿದ್ದಾರೆ. ಉಕ್ರೇನ್‌ನಲ್ಲಿ ರಷ್ಯಾದ ಆಕ್ರಮಣ ಪ್ರಾರಂಭವಾದಾಗಿನಿಂದ ರಾಜಧಾನಿ ಕೀವ್‌ ಒಂದರಲ್ಲೇ 60 ನಾಗರಿಕರು ಮತ್ತು ನಾಲ್ವರು ಮಕ್ಕಳು ಸೇರಿದಂತೆ 222 ಜನರು ಸಾವನ್ನಪ್ಪಿದ್ದಾರೆ ಎಂದು ಉಕ್ರೇನ್ ಅಧಿಕಾರಿಗಳು ತಿಳಿಸಿದ್ದಾರೆ. 241 ನಾಗರಿಕರು ಸೇರಿದಂತೆ ಇನ್ನೂ 889 ಜನರು ಗಾಯಗೊಂಡಿದ್ದಾರೆ ಎಂದು ಕೀವ್ ನಗರಾಡಳಿತವು ಹೇಳಿಕೆಯಲ್ಲಿ ತಿಳಿಸಿದೆ.

ಬಾಂಬ್ ದಾಳಿಗೊಳಗಾದ ಮರಿಪೋಲ್ ಥಿಯೇಟರ್‌ನಿಂದ 130 ಜನರನ್ನು ರಕ್ಷಿಸಲಾಗಿದೆ ಎಂದು ಉಕ್ರೇನ್ ಹೇಳಿದೆ. ರಷ್ಯಾದ ವೈಮಾನಿಕ ದಾಳಿಯಿಂದ ಮರಿಪೋಲ್​​ನ ಥಿಯೇಟರ್‌ನ ಅವಶೇಷಗಳಿಂದ 130 ಜನರನ್ನು ರಕ್ಷಿಸಲಾಗಿದೆ ಎಂದು ಉಕ್ರೇನಿಯನ್ ಮಾನವ ಹಕ್ಕುಗಳ ಓಂಬುಡ್ಸ್ವುಮನ್ ಲ್ಯುಡ್ಮಿಲಾ ಡೆನಿಸೋವಾ ಹೇಳಿದ್ದಾರೆ. ಉಕ್ರೇನಿಯನ್ ಅಧಿಕಾರಿಗಳ ಪ್ರಕಾರ, ಕಟ್ಟಡಕ್ಕೆ ಅಪ್ಪಳಿಸುವ ಮೊದಲು ಅನೇಕ ಜನರು ನೆಲದಡಿಯಲ್ಲಿ ಆಶ್ರಯ ಪಡೆದಿದ್ದ ಸ್ಥಳದಲ್ಲಿ ರಕ್ಷಣಾ ಕಾರ್ಯ ನಡೆಯುತ್ತಿದೆ ಎಂದು ಅವರು ಹೇಳಿದ್ದಾರೆ.

ಅಮೆರಿಕದ ಅಧ್ಯಕ್ಷ ಜೋ ಬೈಡೆನ್ ಉಕ್ರೇನ್ ಯುದ್ಧದ ಕುರಿತು ಕ್ಸಿ ಜಿನ್‌ಪಿಂಗ್ ಅವರೊಂದಿಗೆ ಮಾತುಕತೆ ನಡೆಸಿದ್ದಾರೆ. ಅಮೆರಿಕದ ಅಧ್ಯಕ್ಷ ಜೋ ಬೈಡೆನ್ ಮತ್ತು ಚೀನಾದ ಕ್ಸಿ ಜಿನ್‌ಪಿಂಗ್ ಇಂದು ಮಾತುಕತೆ ನಡೆಸಿದ್ದಾರೆ. ಶ್ವೇತಭವನವು ಉಕ್ರೇನ್‌ನ ಮೇಲೆ ರಷ್ಯಾದ ಆಕ್ರಮಣಕ್ಕೆ ಬೀಜಿಂಗ್ ಮಿಲಿಟರಿ ಅಥವಾ ಆರ್ಥಿಕ ನೆರವು ನೀಡುವುದನ್ನು ತಡೆಯಲು ಪ್ರಯತ್ನಿಸುತ್ತಿದೆ.

ಇದನ್ನೂ ಓದಿ: Russia- Ukraine Crisis: ರಷ್ಯಾದಿಂದ ಕೈಕೊಡವಿ ಎದ್ದು ಬರೋದು ಈ ಬ್ರ್ಯಾಂಡ್​ಗಳಿಗೆ ಸಲೀಸಿಲ್ಲ ಏಕೆ ಗೊತ್ತಾ?

Ukraine Crisis: ಯುದ್ಧ ನಿಲ್ಲಿಸಲು ಪುಟಿನ್ ಮುಂದಿಟ್ಟ ಬೇಡಿಕೆಗಳು ಬಹಿರಂಗ; ಉಕ್ರೇನ್​ಗೆ ಆತಂಕವೇಕೆ? ಇಲ್ಲಿದೆ ಮಾಹಿತಿ

Published On - 8:41 pm, Fri, 18 March 22

Follow Us
ದಿಲೀಪ್ ರಾಜ್ ನಿಧನ: ಅಂತಿಮ ದರ್ಶನ ಪಡೆದು ಕಂಬನಿ ಮಿಡಿದ ಸೆಲೆಬ್ರಿಟಿಗಳು
ದಿಲೀಪ್ ರಾಜ್ ನಿಧನ: ಅಂತಿಮ ದರ್ಶನ ಪಡೆದು ಕಂಬನಿ ಮಿಡಿದ ಸೆಲೆಬ್ರಿಟಿಗಳು
Live: ತಮಿಳುನಾಡು ಸಿಎಂ ವಿಜಯ್ ವಿಶ್ವಾಸಮತ ಯಾಚನೆ ನೇರಪ್ರಸಾರ
Live: ತಮಿಳುನಾಡು ಸಿಎಂ ವಿಜಯ್ ವಿಶ್ವಾಸಮತ ಯಾಚನೆ ನೇರಪ್ರಸಾರ
ಹಗಲು ರಾತ್ರಿ ಹಣದ ಚಿಂತೆ ಮಾಡುತ್ತಿದ್ದೀರಾ? ಇದರಿಂದ ಯಾವ ದೋಷ ಬರುತ್ತೆ?
ಹಗಲು ರಾತ್ರಿ ಹಣದ ಚಿಂತೆ ಮಾಡುತ್ತಿದ್ದೀರಾ? ಇದರಿಂದ ಯಾವ ದೋಷ ಬರುತ್ತೆ?
ಇಂದು ಈ ರಾಶಿಯವರು ಅತಿಯಾದ ಕೋಪವನ್ನು ಕೈಬಿಡಿ
ಇಂದು ಈ ರಾಶಿಯವರು ಅತಿಯಾದ ಕೋಪವನ್ನು ಕೈಬಿಡಿ
ಬೆಳಗಾವಿಯಲ್ಲಿ ಭಾರಿ ಗಾಳಿ ಮಳೆಗೆ ಧರೆಗುರುಳಿದ ಮರಗಳು: ಸಂಚಾರ ಅಸ್ತವ್ಯಸ್ತ
ಬೆಳಗಾವಿಯಲ್ಲಿ ಭಾರಿ ಗಾಳಿ ಮಳೆಗೆ ಧರೆಗುರುಳಿದ ಮರಗಳು: ಸಂಚಾರ ಅಸ್ತವ್ಯಸ್ತ
ಪ್ರಧಾನಿ ಮೋದಿ ಹಾಸನದ ಮೆಗಾ ಡೇರಿ ಉದ್ಘಾಟನೆ ಮಾಡುತ್ತಾರೆ; ಹೆಚ್​ಡಿ ದೇವೇಗೌಡ
ಪ್ರಧಾನಿ ಮೋದಿ ಹಾಸನದ ಮೆಗಾ ಡೇರಿ ಉದ್ಘಾಟನೆ ಮಾಡುತ್ತಾರೆ; ಹೆಚ್​ಡಿ ದೇವೇಗೌಡ
ಸರ್ಕಾರಿ ನ್ಯಾಯಬೆಲೆ ಅಂಗಡಿ ಸಿನಿಮಾ: ಸಿಎಂ ಸಹಕಾರ ನೆನೆದ ಕುಮಾರ್ ಬಂಗಾರಪ್ಪ
ಸರ್ಕಾರಿ ನ್ಯಾಯಬೆಲೆ ಅಂಗಡಿ ಸಿನಿಮಾ: ಸಿಎಂ ಸಹಕಾರ ನೆನೆದ ಕುಮಾರ್ ಬಂಗಾರಪ್ಪ
ಮಳೆ ಕೊರತೆ ಮಧ್ಯೆ ತೀವ್ರ ಬಿಸಿಲು: ಬರಿದಾಗುತ್ತಿದೆ ಜೀವನಾಡಿ ಕೆಆರ್‌ಎಸ್
ಮಳೆ ಕೊರತೆ ಮಧ್ಯೆ ತೀವ್ರ ಬಿಸಿಲು: ಬರಿದಾಗುತ್ತಿದೆ ಜೀವನಾಡಿ ಕೆಆರ್‌ಎಸ್
ತಾಂಡಾ, ಹಾಡಿ ನಿವಾಸಿಗಳ ದಶಕಗಳ ಕನಸು ನನಸು
ತಾಂಡಾ, ಹಾಡಿ ನಿವಾಸಿಗಳ ದಶಕಗಳ ಕನಸು ನನಸು
ಮತ್ತೆ ಸನಾತನ ನಿರ್ಮೂಲನೆಯ ಹೇಳಿಕೆ ನೀಡಿ ವಿವಾದಕ್ಕೀಡಾದ ಉದಯನಿಧಿ ಸ್ಟಾಲಿನ್
ಮತ್ತೆ ಸನಾತನ ನಿರ್ಮೂಲನೆಯ ಹೇಳಿಕೆ ನೀಡಿ ವಿವಾದಕ್ಕೀಡಾದ ಉದಯನಿಧಿ ಸ್ಟಾಲಿನ್