ಉಕ್ರೇನ್ ಎಂದೂ ಒಂಟಿಯಲ್ಲ ನಿಮ್ಮ ಜತೆ ನಾವಿದ್ದೇವೆ ಎಂದು ಅಭಯ ನೀಡಿದ ಅಮೆರಿಕ ಅಧ್ಯಕ್ಷ ಜೋ ಬೈಡನ್

ಉಕ್ರೇನ್ (Ukraine)ಎಂದೂ ಒಂಟಿಯಲ್ಲ, ನಿಮ್ಮ ಜತೆ ನಾವಿದ್ದೇವೆ ಎಂದು ಅಮೆರಿಕ ಅಧ್ಯಕ್ಷ ಜೋ ಬೈಡನ್( Joe Biden) ಭರವಸೆ ನೀಡಿದ್ದಾರೆ.

ಉಕ್ರೇನ್ ಎಂದೂ ಒಂಟಿಯಲ್ಲ ನಿಮ್ಮ ಜತೆ ನಾವಿದ್ದೇವೆ ಎಂದು ಅಭಯ ನೀಡಿದ ಅಮೆರಿಕ ಅಧ್ಯಕ್ಷ ಜೋ ಬೈಡನ್
Volodymyr Zelensky
Follow us
| Updated By: ನಯನಾ ರಾಜೀವ್

Updated on: Dec 22, 2022 | 8:39 AM

ಉಕ್ರೇನ್ (Ukraine)ಎಂದೂ ಒಂಟಿಯಲ್ಲ, ನಿಮ್ಮ ಜತೆ ನಾವಿದ್ದೇವೆ ಎಂದು ಅಮೆರಿಕ ಅಧ್ಯಕ್ಷ ಜೋ ಬೈಡನ್( Joe Biden) ಭರವಸೆ ನೀಡಿದ್ದಾರೆ. ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ(Volodymyr Zelensky) ಜತೆ ವೈಟ್​ ಹೌಸ್​ನಲ್ಲಿ ಮಾತನಾಡಿದ ಬೈಡನ್, ಉಕ್ರೇನ್ ಎಂದೂ ಏಕಾಂಗಿಯಲ್ಲ, ಅಮೆರಿಕ ಅದರ ಜತೆಗಿದೆ ಎಂದು ಅಭಯ ನೀಡಿದರು. ಉಕ್ರೇನ್‌ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ ಅವರು ಅಮೆರಿಕ ತಲುಪಿದ್ದು, ಅಧ್ಯಕ್ಷ ಜೋ ಬೈಡನ್‌ ಅವರೊಂದಿಗೆ ಮಾತುಕತೆ ನಡೆಸಿದ್ದಾರೆ. ರಷ್ಯಾ-ಉಕ್ರೇನ್‌ ಸಂಘರ್ಷ, ಉಕ್ರೇನ್‌ಗೆ ಅಮೆರಿಕದ ಸಾಮರಿಕ ನೆರವು ಮುಂದುವರಿಕೆ, ಹೀಗೆ ಹಲವು ವಿಷಯಗಳ ಕುರಿತು ಇಬ್ಬರೂ ನಾಯಕರು ಮಾತುಕತೆ ನಡೆಸಿದ್ದಾರೆ.

ಅಲ್ಲದೇ ಉಕ್ರೇನ್‌ಗೆ ಸಾಮರಿಕ ಬೆಂಬಲವನ್ನು ಅಮೆರಿಕ ಮುಂದುವರೆಸಲಿದೆ ಎಂದು ಬೈಡನ್‌ ಇದೇ ವೇಳೆ ವೊಲೊಡಿಮಿರ್ ಝೆಲೆನ್ಸ್ಕಿ ಅವರಿಗೆ ಭರವಸೆ ನೀಡಿದ್ದಾರೆ. ಅಮೆರಿಕವು ಉಕ್ರೇನ್​ನ ಪ್ರತಿ ಹೆಜ್ಜೆಯಲ್ಲೂ ಜತೆಯಾಗಿ ನಿಲ್ಲುತ್ತದೆ, ಉಕ್ರೇನ್​ನ ಹೋರಾಟ ಎಷ್ಟು ದೊಡ್ಡದಿದೆ ಎಂದು ಅಮೆರಿಕವು ಅರ್ಥಮಾಡಿಕೊಳ್ಳಬಲ್ಲದು ಎಂದರು.

ಮತ್ತಷ್ಟು ಓದಿ:ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್​​ಗೆ ದೂರವಾಣಿ ಕರೆ ಮಾಡಿದ ಮೋದಿ; ದ್ವಿಪಕ್ಷೀಯ ಸಂಬಂಧ ಬಗ್ಗೆ ಚರ್ಚೆ

ಇನ್ನು ಉಕ್ರೇನ್ ಅಧ್ಯಕ್ಷ ಝೆಲೆನ್ಸ್ಕಿಯ ಭೇಟಿಯ ಭಾಗವಾಗಿ,‌ ಅಮೆರಿಕದ ರಕ್ಷಣಾ ಇಲಾಖೆಯು ಉಕ್ರೇನ್‌ಗೆ 1.85 ಬಿಲಿಯನ್ ಅಮೆರಿಕನ್‌ ಡಾಲರ್‌ ಮೊತ್ತದ ಹೆಚ್ಚುವರಿ ಭದ್ರತಾ ನೆರವನ್ನು ಘೋಷಿಸಿದೆ

ಇದೇ ಸಂದರ್ಭದಲ್ಲಿ ಇಬ್ಬರೂ ನಾಯಕರು, ಉಕ್ರೇನ್ ಮೇಲೆ ಯುದ್ಧ ಸಾರಿರುವ ರಷ್ಯಾ ಅಧ್ಯಕ್ಷ ವ್ಲಾಡಿಮಿರ್‌ ಪುಟಿನ್‌ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು. ಅತ್ತ ಝೆಲೆನ್ಸ್ಕಿ ಅತ್ಯಂತ ಗುಪ್ತವಾಗಿ ಅಮೆರಿಕ ತಲುಪಿರುವುದನ್ನು ಕೇಳಿ, ರಷ್ಯಾ ಅಧ್ಯಕ್ಷ ಪುಟಿನ್‌ ಕೆಂಡಾಮಂಡಲರಾಗಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು
ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್
ಹೊಸ ಹಾನರ್ ಸ್ಮಾರ್ಟ್​ಫೋನ್​ನಲ್ಲಿದೆ 108 ಮೆಗಾಪಿಕ್ಸೆಲ್ ಸಖತ್ ಎಐ ಕ್ಯಾಮೆರಾ
ಹೊಸ ಹಾನರ್ ಸ್ಮಾರ್ಟ್​ಫೋನ್​ನಲ್ಲಿದೆ 108 ಮೆಗಾಪಿಕ್ಸೆಲ್ ಸಖತ್ ಎಐ ಕ್ಯಾಮೆರಾ
ಮುನಿರತ್ನ ವಿರುದ್ಧದ ಪ್ರಕರಣಗಳ ತನಿಖೆಗೆ SIT ರಚಿಸಿ: ಸಿಎಂಗೆ ಮನವಿ
ಮುನಿರತ್ನ ವಿರುದ್ಧದ ಪ್ರಕರಣಗಳ ತನಿಖೆಗೆ SIT ರಚಿಸಿ: ಸಿಎಂಗೆ ಮನವಿ
ಕಾಡಿಗೆ ಹೋಗುವ ದಾರಿ ಗೊತ್ತು ಅಂತ ಅರಣ್ಯ ಸಿಬ್ಬಂದಿ ಮೇಲೆ ತಿರುಗಿ ಬಿದ್ದ ಆನೆ
ಕಾಡಿಗೆ ಹೋಗುವ ದಾರಿ ಗೊತ್ತು ಅಂತ ಅರಣ್ಯ ಸಿಬ್ಬಂದಿ ಮೇಲೆ ತಿರುಗಿ ಬಿದ್ದ ಆನೆ