AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಳೆದ ವಾರ ಉಕ್ರೇನ್ ಥಿಯೇಟರ್‌ನ ಮೇಲೆ ರಷ್ಯಾ ನಡೆಸಿದ ದಾಳಿಯಲ್ಲಿ 300 ಮಂದಿ ಸಾವು: ವರದಿ

ಮಾರಿಯುಪೋಲ್ ಸಿಟಿ ಹಾಲ್ ಪ್ರಕಾರ ಶುಕ್ರವಾರ ರಷ್ಯಾದ ದಾಳಿಯಲ್ಲಿ ಥಿಯೇಟರ್ ನಾಶವಾಯಿತು ಮತ್ತು ಕಟ್ಟಡದಲ್ಲಿ ನಾಗರಿಕರು ಆಶ್ರಯ ಪಡೆಯುತ್ತಿದ್ದಾರೆ ಎಂದು ರಷ್ಯಾಕ್ಕೆ ತಿಳಿದಿದೆ.

ಕಳೆದ ವಾರ ಉಕ್ರೇನ್ ಥಿಯೇಟರ್‌ನ ಮೇಲೆ ರಷ್ಯಾ ನಡೆಸಿದ ದಾಳಿಯಲ್ಲಿ 300 ಮಂದಿ ಸಾವು: ವರದಿ
ಪ್ರಾತಿನಿಧಿಕ ಚಿತ್ರ
TV9 Web
| Updated By: ರಶ್ಮಿ ಕಲ್ಲಕಟ್ಟ|

Updated on: Mar 25, 2022 | 6:08 PM

Share

ಕೀವ್: ನೂರಾರು ಜನರು ಆಶ್ರಯ ಪಡೆದಿದ್ದ ಥಿಯೇಟರ್‌ನ ಮೇಲೆ ಕಳೆದ ವಾರ ರಷ್ಯಾ (Russia)  ನಡೆಸಿದ ದಾಳಿಯಲ್ಲಿ 300 ಜನರು ಸಾವಿಗೀಡಾಗಿರಬಹುದು ಎಂದು ಮಾರಿಯುಪೋಲ್‌ನಲ್ಲಿರುವ (Mariupol) ಉಕ್ರೇನಿಯನ್  ಅಧಿಕಾರಿಗಳು ಶುಕ್ರವಾರ ಹೇಳಿದ್ದಾರೆ. “ರಷ್ಯಾದ ವಿಮಾನದ ದಾಳಿಯ ನಂತರ ಮಾರಿಯುಪೋಲ್ ನಾಟಕ ಥಿಯೇಟರ್‌ನಲ್ಲಿ ಸುಮಾರು 300 ಜನರು ಸಾವನ್ನಪ್ಪಿದ್ದಾರೆ ಎಂಬ ಮಾಹಿತಿಯು ಪ್ರತ್ಯಕ್ಷದರ್ಶಿಗಳಿಂದ ಲಭಿಸಿದೆ” ಎಂದು ಮಾರಿಯುಪೋಲ್ ಸಿಟಿ ಹಾಲ್ ಟೆಲಿಗ್ರಾಮ್‌ನಲ್ಲಿ ಬರೆದಿದೆ. ದಾಳಿಯ ಸಮಯದಲ್ಲಿ ಕಟ್ಟಡದಲ್ಲಿ ರಕ್ಷಣೆ ಪಡೆದಿದ್ದ ನೂರಾರು ಮಂದಿ ಸಾವಿಗೀಡಾಗಿದ್ದಾರೆ. ಇದರಲ್ಲಿ ಹೆಚ್ಚಿನವರು ಮಹಿಳೆಯರು ಮತ್ತು ಮಕ್ಕಳು ಎಂದು ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ (Volodymyr Zelensky) ಹೇಳಿದ್ದಾರೆ.  ಮಾರಿಯುಪೋಲ್ ಸಿಟಿ ಹಾಲ್ ಪ್ರಕಾರ ಶುಕ್ರವಾರ ರಷ್ಯಾದ ದಾಳಿಯಲ್ಲಿ ಥಿಯೇಟರ್ ನಾಶವಾಯಿತು ಮತ್ತು ಕಟ್ಟಡದಲ್ಲಿ ನಾಗರಿಕರು ಆಶ್ರಯ ಪಡೆಯುತ್ತಿದ್ದಾರೆ ಎಂದು ರಷ್ಯಾಕ್ಕೆ ತಿಳಿದಿದೆ. ಮುತ್ತಿಗೆ ಹಾಕಿದ ನಗರದಲ್ಲಿ ಸುಮಾರು 100,000 ಜನರು ಆಹಾರ, ನೀರು ಇಲ್ಲದೆ ಸಿಕ್ಕಿಬಿದ್ದಿದ್ದಾರೆ ಮತ್ತು ರಷ್ಯಾದ ಪಡೆಗಳ ಉಗ್ರ ಶೆಲ್ ದಾಳಿಯನ್ನು ಸಹಿಸಿಕೊಳ್ಳುತ್ತಿದ್ದಾರೆ ಎಂದು ಝೆಲೆನ್ಸ್ಕಿ ಹೇಳಿದ್ದಾರೆ.

ರಷ್ಯಾದ ದಕ್ಷಿಣ ಗಣರಾಜ್ಯದ ಚೆಚೆನ್ಯಾದ ನಾಯಕ ಗುರುವಾರ ತನ್ನ ಪ್ರದೇಶದ ಪಡೆಗಳು ಮರಿಯುಪೋಲ್ ಸಿಟಿ ಹಾಲ್ ಅನ್ನು ಹಿಡಿತಕ್ಕೆ ತೆಗೆದುಕೊಂಡಿವೆ ಮತ್ತು ರಷ್ಯಾದ ಧ್ವಜವನ್ನು ಹಾರಿಸಿದವು ಎಂದು ಹೇಳಿದರು.

ರಷ್ಯಾ ರಾಸಾಯನಿಕ ಅಸ್ತ್ರಗಳನ್ನು ಬಳಸುವುದರ ಬಗ್ಗೆ ಅಮೆರಿಕ ಮಾತನಾಡುವುದು ಗಮನವನ್ನು ಬೇರೆಡೆಗೆ ಸೆಳೆಯುವ ತಂತ್ರ ಎಂದ ರಷ್ಯಾ ರಷ್ಯಾ ಉಕ್ರೇನ್‌ನಲ್ಲಿ ರಾಸಾಯನಿಕ ಅಸ್ತ್ರಗಳನ್ನು ಆಶ್ರಯಿಸಬಹುದೆಂಬ ಅಮೆರಿಕದ ಮಾತು ವಾಷಿಂಗ್ಟನ್‌ಗೆ ವಿಚಿತ್ರವಾದ ಪ್ರಶ್ನೆಗಳಿಂದ ಗಮನವನ್ನು ಬೇರೆಡೆಗೆ ತಿರುಗಿಸುವ ತಂತ್ರವಾಗಿದೆ ಎಂದು ಕ್ರೆಮ್ಲಿನ್ ಶುಕ್ರವಾರ ಹೇಳಿದೆ.

ಕ್ರೆಮ್ಲಿನ್ ವಕ್ತಾರ ಡಿಮಿಟ್ರಿ ಪೆಸ್ಕೋವ್ ವರದಿಗಾರರೊಂದಿಗಿನ ಕಾನ್ಫರೆನ್ಸ್ ಕರೆಯಲ್ಲಿ ಮಾತನಾಡಿದ್ದು  ರಷ್ಯಾ ತನ್ನ ರಕ್ಷಣೆಯನ್ನು ಹೇಗೆ ಬಲಪಡಿಸಬೇಕು ಎಂಬುದರ ಕುರಿತು ಮಿಲಿಟರಿಯು ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರಿಗೆ ಪ್ರಸ್ತಾವನೆಗಳನ್ನು ಸಲ್ಲಿಸುತ್ತದೆ ಎಂದು ಹೇಳಿದರು.

ಇದನ್ನೂ ಓದಿ: ಇನ್ಫಿ ನಾರಾಯಣಮೂರ್ತಿ ಅಳಿಯ ರಿಷಿಗೆ ಕಸಿವಿಸಿ: ಉಕ್ರೇನ್​ ಯುದ್ಧದ ಹಿನ್ನೆಲೆ ಇಂಗ್ಲೆಂಡ್ ಪರ ರಿಷಿ ತೋರಿದ ಬದ್ಧತೆ ಏನು?

ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?