AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಳೆದ ವಾರ ಉಕ್ರೇನ್ ಥಿಯೇಟರ್‌ನ ಮೇಲೆ ರಷ್ಯಾ ನಡೆಸಿದ ದಾಳಿಯಲ್ಲಿ 300 ಮಂದಿ ಸಾವು: ವರದಿ

ಮಾರಿಯುಪೋಲ್ ಸಿಟಿ ಹಾಲ್ ಪ್ರಕಾರ ಶುಕ್ರವಾರ ರಷ್ಯಾದ ದಾಳಿಯಲ್ಲಿ ಥಿಯೇಟರ್ ನಾಶವಾಯಿತು ಮತ್ತು ಕಟ್ಟಡದಲ್ಲಿ ನಾಗರಿಕರು ಆಶ್ರಯ ಪಡೆಯುತ್ತಿದ್ದಾರೆ ಎಂದು ರಷ್ಯಾಕ್ಕೆ ತಿಳಿದಿದೆ.

ಕಳೆದ ವಾರ ಉಕ್ರೇನ್ ಥಿಯೇಟರ್‌ನ ಮೇಲೆ ರಷ್ಯಾ ನಡೆಸಿದ ದಾಳಿಯಲ್ಲಿ 300 ಮಂದಿ ಸಾವು: ವರದಿ
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on: Mar 25, 2022 | 6:08 PM

Share

ಕೀವ್: ನೂರಾರು ಜನರು ಆಶ್ರಯ ಪಡೆದಿದ್ದ ಥಿಯೇಟರ್‌ನ ಮೇಲೆ ಕಳೆದ ವಾರ ರಷ್ಯಾ (Russia)  ನಡೆಸಿದ ದಾಳಿಯಲ್ಲಿ 300 ಜನರು ಸಾವಿಗೀಡಾಗಿರಬಹುದು ಎಂದು ಮಾರಿಯುಪೋಲ್‌ನಲ್ಲಿರುವ (Mariupol) ಉಕ್ರೇನಿಯನ್  ಅಧಿಕಾರಿಗಳು ಶುಕ್ರವಾರ ಹೇಳಿದ್ದಾರೆ. “ರಷ್ಯಾದ ವಿಮಾನದ ದಾಳಿಯ ನಂತರ ಮಾರಿಯುಪೋಲ್ ನಾಟಕ ಥಿಯೇಟರ್‌ನಲ್ಲಿ ಸುಮಾರು 300 ಜನರು ಸಾವನ್ನಪ್ಪಿದ್ದಾರೆ ಎಂಬ ಮಾಹಿತಿಯು ಪ್ರತ್ಯಕ್ಷದರ್ಶಿಗಳಿಂದ ಲಭಿಸಿದೆ” ಎಂದು ಮಾರಿಯುಪೋಲ್ ಸಿಟಿ ಹಾಲ್ ಟೆಲಿಗ್ರಾಮ್‌ನಲ್ಲಿ ಬರೆದಿದೆ. ದಾಳಿಯ ಸಮಯದಲ್ಲಿ ಕಟ್ಟಡದಲ್ಲಿ ರಕ್ಷಣೆ ಪಡೆದಿದ್ದ ನೂರಾರು ಮಂದಿ ಸಾವಿಗೀಡಾಗಿದ್ದಾರೆ. ಇದರಲ್ಲಿ ಹೆಚ್ಚಿನವರು ಮಹಿಳೆಯರು ಮತ್ತು ಮಕ್ಕಳು ಎಂದು ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ (Volodymyr Zelensky) ಹೇಳಿದ್ದಾರೆ.  ಮಾರಿಯುಪೋಲ್ ಸಿಟಿ ಹಾಲ್ ಪ್ರಕಾರ ಶುಕ್ರವಾರ ರಷ್ಯಾದ ದಾಳಿಯಲ್ಲಿ ಥಿಯೇಟರ್ ನಾಶವಾಯಿತು ಮತ್ತು ಕಟ್ಟಡದಲ್ಲಿ ನಾಗರಿಕರು ಆಶ್ರಯ ಪಡೆಯುತ್ತಿದ್ದಾರೆ ಎಂದು ರಷ್ಯಾಕ್ಕೆ ತಿಳಿದಿದೆ. ಮುತ್ತಿಗೆ ಹಾಕಿದ ನಗರದಲ್ಲಿ ಸುಮಾರು 100,000 ಜನರು ಆಹಾರ, ನೀರು ಇಲ್ಲದೆ ಸಿಕ್ಕಿಬಿದ್ದಿದ್ದಾರೆ ಮತ್ತು ರಷ್ಯಾದ ಪಡೆಗಳ ಉಗ್ರ ಶೆಲ್ ದಾಳಿಯನ್ನು ಸಹಿಸಿಕೊಳ್ಳುತ್ತಿದ್ದಾರೆ ಎಂದು ಝೆಲೆನ್ಸ್ಕಿ ಹೇಳಿದ್ದಾರೆ.

ರಷ್ಯಾದ ದಕ್ಷಿಣ ಗಣರಾಜ್ಯದ ಚೆಚೆನ್ಯಾದ ನಾಯಕ ಗುರುವಾರ ತನ್ನ ಪ್ರದೇಶದ ಪಡೆಗಳು ಮರಿಯುಪೋಲ್ ಸಿಟಿ ಹಾಲ್ ಅನ್ನು ಹಿಡಿತಕ್ಕೆ ತೆಗೆದುಕೊಂಡಿವೆ ಮತ್ತು ರಷ್ಯಾದ ಧ್ವಜವನ್ನು ಹಾರಿಸಿದವು ಎಂದು ಹೇಳಿದರು.

ರಷ್ಯಾ ರಾಸಾಯನಿಕ ಅಸ್ತ್ರಗಳನ್ನು ಬಳಸುವುದರ ಬಗ್ಗೆ ಅಮೆರಿಕ ಮಾತನಾಡುವುದು ಗಮನವನ್ನು ಬೇರೆಡೆಗೆ ಸೆಳೆಯುವ ತಂತ್ರ ಎಂದ ರಷ್ಯಾ ರಷ್ಯಾ ಉಕ್ರೇನ್‌ನಲ್ಲಿ ರಾಸಾಯನಿಕ ಅಸ್ತ್ರಗಳನ್ನು ಆಶ್ರಯಿಸಬಹುದೆಂಬ ಅಮೆರಿಕದ ಮಾತು ವಾಷಿಂಗ್ಟನ್‌ಗೆ ವಿಚಿತ್ರವಾದ ಪ್ರಶ್ನೆಗಳಿಂದ ಗಮನವನ್ನು ಬೇರೆಡೆಗೆ ತಿರುಗಿಸುವ ತಂತ್ರವಾಗಿದೆ ಎಂದು ಕ್ರೆಮ್ಲಿನ್ ಶುಕ್ರವಾರ ಹೇಳಿದೆ.

ಕ್ರೆಮ್ಲಿನ್ ವಕ್ತಾರ ಡಿಮಿಟ್ರಿ ಪೆಸ್ಕೋವ್ ವರದಿಗಾರರೊಂದಿಗಿನ ಕಾನ್ಫರೆನ್ಸ್ ಕರೆಯಲ್ಲಿ ಮಾತನಾಡಿದ್ದು  ರಷ್ಯಾ ತನ್ನ ರಕ್ಷಣೆಯನ್ನು ಹೇಗೆ ಬಲಪಡಿಸಬೇಕು ಎಂಬುದರ ಕುರಿತು ಮಿಲಿಟರಿಯು ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರಿಗೆ ಪ್ರಸ್ತಾವನೆಗಳನ್ನು ಸಲ್ಲಿಸುತ್ತದೆ ಎಂದು ಹೇಳಿದರು.

ಇದನ್ನೂ ಓದಿ: ಇನ್ಫಿ ನಾರಾಯಣಮೂರ್ತಿ ಅಳಿಯ ರಿಷಿಗೆ ಕಸಿವಿಸಿ: ಉಕ್ರೇನ್​ ಯುದ್ಧದ ಹಿನ್ನೆಲೆ ಇಂಗ್ಲೆಂಡ್ ಪರ ರಿಷಿ ತೋರಿದ ಬದ್ಧತೆ ಏನು?

ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?
ಆಂಟಿ ಕರೆದಳೆಂದು ಹೋದ ಯುವಕ ಆಸ್ಪತ್ರೆ ಪಾಲು, ಆಗಿದ್ದೇನು?
ಆಂಟಿ ಕರೆದಳೆಂದು ಹೋದ ಯುವಕ ಆಸ್ಪತ್ರೆ ಪಾಲು, ಆಗಿದ್ದೇನು?
ಗ್ರಾಮಸ್ಥರ ಮೇಲೆ ಏಕಾಏಕಿ ದಾಳಿ ಮಾಡಿದ ಹೆಜ್ಜೇನು
ಗ್ರಾಮಸ್ಥರ ಮೇಲೆ ಏಕಾಏಕಿ ದಾಳಿ ಮಾಡಿದ ಹೆಜ್ಜೇನು
60 ಲಕ್ಷ ರೂ ಮೌಲ್ಯದ ಮೆಕ್ಕೆಜೋಳಕ್ಕೆ ಬೆಂಕಿಯಿಟ್ಟ ದುಷ್ಕರ್ಮಿಗಳು
60 ಲಕ್ಷ ರೂ ಮೌಲ್ಯದ ಮೆಕ್ಕೆಜೋಳಕ್ಕೆ ಬೆಂಕಿಯಿಟ್ಟ ದುಷ್ಕರ್ಮಿಗಳು
ಕಾಶ್ಮೀರದ ಹೈವೇಯಲ್ಲಿ ಪರ್ವತ ಕುಸಿತ; ಶ್ರೀನಗರ-ಬಾರಾಮುಲ್ಲಾ ಮಾರ್ಗ ಬಂದ್
ಕಾಶ್ಮೀರದ ಹೈವೇಯಲ್ಲಿ ಪರ್ವತ ಕುಸಿತ; ಶ್ರೀನಗರ-ಬಾರಾಮುಲ್ಲಾ ಮಾರ್ಗ ಬಂದ್
ಜನಾರ್ದನ ರೆಡ್ಡಿ ಮನೆಯತ್ತಲೇ ಫೈರ್ ಮಾಡಿದ್ದ ಖಾಸಗಿ ಗನ್​ಮ್ಯಾನ್
ಜನಾರ್ದನ ರೆಡ್ಡಿ ಮನೆಯತ್ತಲೇ ಫೈರ್ ಮಾಡಿದ್ದ ಖಾಸಗಿ ಗನ್​ಮ್ಯಾನ್
ಸಚಿವ ಜಮೀರ್ 2ನೇ ಟಿಪ್ಪು ಸುಲ್ತಾನ್ ಎಂದ ಪ್ರಮೋದ್ ಮುತಾಲಿಕ್
ಸಚಿವ ಜಮೀರ್ 2ನೇ ಟಿಪ್ಪು ಸುಲ್ತಾನ್ ಎಂದ ಪ್ರಮೋದ್ ಮುತಾಲಿಕ್
ಬ್ಯಾನರ್​​​ ಕಿತ್ತಾಟದಲ್ಲಿ ಅಮಾಯಕ ಕಾರ್ಯಕರ್ತ ಬಲಿ, ಹೆಗಲು ಕೊಟ್ಟ ಶಾಸಕರು
ಬ್ಯಾನರ್​​​ ಕಿತ್ತಾಟದಲ್ಲಿ ಅಮಾಯಕ ಕಾರ್ಯಕರ್ತ ಬಲಿ, ಹೆಗಲು ಕೊಟ್ಟ ಶಾಸಕರು