AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video: ರಷ್ಯಾದ ಯುದ್ಧ ಟ್ಯಾಂಕ್​​ಗಳಿಗೆ ಜೋತು ಬೀಳುತ್ತಿರುವ ಉಕ್ರೇನ್​ ನಾಗರಿಕರು; ಸೇನೆಯನ್ನು ತಡೆಯಲು ಇನ್ನಿಲ್ಲದ ಪ್ರಯತ್ನ

ಪೋಲೆಂಡ್, ಹಂಗೇರಿ, ಜೆಕಿಯಾ, ಸ್ಲೋವಾಕಿಯಾ ದೇಶಗಳ ಸಾಂಸ್ಕೃತಿಕ ಮತ್ತು ರಾಜಕೀಯ ಒಕ್ಕೂಟವಾದ ವಿಸೆಗ್ರಾಡ್​​ ವಿಡಿಯೋವನ್ನು ಶೇರ್ ಮಾಡಿಕೊಂಡಿದೆ. ಉತ್ತರ ಉಕ್ರೇನ್​​ನಲ್ಲಿರುವ ಬಖ್ಮಾಚ್​ ನಗರದ  ಚೆರ್ನಿಹಿವ್ ಪ್ರದೇಶದಲ್ಲಿ ಉಕ್ರೇನ್​ ನಾಗರಿಕರು ಸಾಹಸವನ್ನೇ ಮಾಡುತ್ತಿದ್ದಾರೆ ಎಂದು ಹೇಳಿದೆ.

Video: ರಷ್ಯಾದ ಯುದ್ಧ ಟ್ಯಾಂಕ್​​ಗಳಿಗೆ ಜೋತು ಬೀಳುತ್ತಿರುವ ಉಕ್ರೇನ್​ ನಾಗರಿಕರು; ಸೇನೆಯನ್ನು ತಡೆಯಲು ಇನ್ನಿಲ್ಲದ ಪ್ರಯತ್ನ
ಉಕ್ರೇನ್​ ರಸ್ತೆಗಳಲ್ಲಿ ರಷ್ಯಾದ ಯುದ್ಧ ಟ್ಯಾಂಕ್​​ಗಳು
TV9 Web
| Edited By: |

Updated on: Mar 02, 2022 | 9:29 AM

Share

ರಷ್ಯಾ ಉಕ್ರೇನ್​ ಮೇಲೆ ಆಕ್ರಮಣ (Russia Attack On Ukraine) ಮಾಡಿ ಇಂದು ಏಳನೇ ದಿನ. ಉಕ್ರೇನಿಯನ್ನರು ರಷ್ಯಾ ವಿರುದ್ಧ ಧೈರ್ಯದಿಂದ ಹೋರಾಡುತ್ತಿದ್ದಾರೆ.  ನಾಗರಿಕರೂ ಸಹ ರಷ್ಯಾ ಸೈನಿಕರನ್ನು ಹಿಮ್ಮೆಟ್ಟಿಸಲು ಕೈಲಾದ ಪ್ರಯತ್ನ ಮಾಡುತ್ತಿದ್ದಾರೆ. ಬೀದಿಬೀದಿಯಲ್ಲಿ ನಿಂತ ರಷ್ಯಾ ಯೋಧರೊಂದಿಗೆ ಮಾತಿನ ಯುದ್ಧಕ್ಕೆ ಇಳಿಯುತ್ತಿದ್ದಾರೆ.  ಈ ಮಧ್ಯೆ ಉಕ್ರೇನ್​ ನಾಗರಿಕರು ರಷ್ಯಾದ ಯುದ್ಧ ಟ್ಯಾಂಕ್​ಗಳು ಮುಂದೆ ಸಾಗದಂತೆ ತಡೆಯಲು ಅದರ ಮೇಲೆ ಹತ್ತುವ, ಅಡ್ಡಗಟ್ಟುವ ಕೆಲಸವನ್ನು ನಿರಂತರವಾಗಿ ಮಾಡುತ್ತಿದ್ದು, ವಿಡಿಯೋಗಳು ವೈರಲ್ ಆಗಿವೆ.

ಪೋಲೆಂಡ್, ಹಂಗೇರಿ, ಜೆಕಿಯಾ, ಸ್ಲೋವಾಕಿಯಾ ದೇಶಗಳ ಸಾಂಸ್ಕೃತಿಕ ಮತ್ತು ರಾಜಕೀಯ ಒಕ್ಕೂಟವಾದ ವಿಸೆಗ್ರಾಡ್​​ ವಿಡಿಯೋವನ್ನು ಶೇರ್ ಮಾಡಿಕೊಂಡಿದೆ. ಉತ್ತರ ಉಕ್ರೇನ್​​ನಲ್ಲಿರುವ ಬಖ್ಮಾಚ್​ ನಗರದ  ಚೆರ್ನಿಹಿವ್ ಪ್ರದೇಶದಲ್ಲಿ ಉಕ್ರೇನ್​ ನಾಗರಿಕರು ಸಾಹಸವನ್ನೇ ಮಾಡುತ್ತಿದ್ದಾರೆ. ಇಲ್ಲಿ ಹಾದುಹೋಗುವ ರಷ್ಯಾದ ಯುದ್ಧ ಟ್ಯಾಂಕ್​​ಗಳನ್ನು ತಡೆಯಲು, ಅವುಗಳ ಮೇಲೆ ಹತ್ತುತ್ತಿದ್ದಾರೆ. ಜೋತು ಬೀಳುತ್ತಿದ್ದಾರೆ. ಅಡ್ಡ ಹೋಗುತ್ತಿದ್ದಾರೆ ಎಂದು ವಿಸೆಗ್ರಾಡ್​ ತಿಳಿಸಿದೆ.

ಉಕ್ರೇನ್​ ರಸ್ತೆಯಲ್ಲಿ ನಿಂತಿರುವ ರಷ್ಯಾ ಸೈನಿಕರನ್ನು ಉಕ್ರೇನ್​ ನಾಗರಿಕರು ಮಾತನಾಡಿಸುತ್ತಿದ್ದಾರೆ. ಇಲ್ಲೇಕೆ ಬಂದಿರಿ? ನಿಮ್ಮದೇಶದಲ್ಲಿ ನಿಮಗೆ ಮಾಡಲು ಕೆಲಸವಿಲ್ಲವಾ? ಎಂಬಿತ್ಯಾದಿ ವ್ಯಂಗ್ಯ, ಆಕ್ರೋಶ ಭರಿತ ಪ್ರಶ್ನೆಗಳನ್ನು ಕೇಳುತ್ತಿದ್ದಾರೆ. ಹೀಗೆ ಉಕ್ರೇನ್​ ನಾಗರಿಕರು ರಷ್ಯಾ ಸೈನಿಕರನ್ನು ಮಾತನಾಡಿಸುವ ಹಲವು ದೃಶ್ಯಗಳನ್ನು ಒಳಗೊಂಡ ವಿಡಿಯೋವೊಂದನ್ನು ಉಕ್ರೇನಿಯನ್​ ವಿದೇಶಾಂಗ ವ್ಯವಹಾರಗಳ ಇಲಾಖೆ ನಿನ್ನೆ ಶೇರ್ ಮಾಡಿಕೊಂಡಿತ್ತು.

ಇದನ್ನೂ ಓದಿ: ಉಕ್ರೇನ್​ನ ಐದು ಪ್ರಮುಖ ನಗರಗಳನ್ನು ವಶಡಿಸಿಕೊಳ್ಳಲು ರಷ್ಯಾ ಯಾಕೆ ಹವಣಿಸುತ್ತಿದೆ? ಮಾಹಿತಿ ಇಲ್ಲಿದೆ

Follow Us
ಅಸ್ಸಾಂನಲ್ಲಿ 19,480 ಕೋಟಿ ರೂ. ಮೌಲ್ಯದ ಯೋಜನೆಗಳನ್ನು ಉದ್ಘಾಟಿಸಿದ ಮೋದಿ
ಅಸ್ಸಾಂನಲ್ಲಿ 19,480 ಕೋಟಿ ರೂ. ಮೌಲ್ಯದ ಯೋಜನೆಗಳನ್ನು ಉದ್ಘಾಟಿಸಿದ ಮೋದಿ
ಸಿದ್ದರಾಮಯ್ಯ ಆಪ್ತ ಶಾಸಕನ ಕೈಯಲ್ಲಿ ಮಿಂಚಿದ 18 ಲಕ್ಷ ರೂ. ವಾಚ್‌
ಸಿದ್ದರಾಮಯ್ಯ ಆಪ್ತ ಶಾಸಕನ ಕೈಯಲ್ಲಿ ಮಿಂಚಿದ 18 ಲಕ್ಷ ರೂ. ವಾಚ್‌
ಪುನೀತ್ ಇಲ್ಲದೇ ‘ಆಕಾಶ್’ ಸಿನಿಮಾ ನೋಡೋಕೆ ಕಷ್ಟ ಆಗುತ್ತದೆ: ರಾಘಣ್ಣ ಭಾವುಕ
ಪುನೀತ್ ಇಲ್ಲದೇ ‘ಆಕಾಶ್’ ಸಿನಿಮಾ ನೋಡೋಕೆ ಕಷ್ಟ ಆಗುತ್ತದೆ: ರಾಘಣ್ಣ ಭಾವುಕ
13 ವರ್ಷ ನಂತರ ಜೈಲಿನಿಂದ ರಿಲೀಸ್ ಆಗುತ್ತಿದ್ದಂತೆಯೇ ಕೈದಿ ಫುಲ್ ಖುಷ್
13 ವರ್ಷ ನಂತರ ಜೈಲಿನಿಂದ ರಿಲೀಸ್ ಆಗುತ್ತಿದ್ದಂತೆಯೇ ಕೈದಿ ಫುಲ್ ಖುಷ್
ಬೌಲರ್​ಗೆ ಬಾಲ್ ನೀಡಿ ರನೌಟ್ ಆದ ಪಾಕ್ ಬ್ಯಾಟರ್
ಬೌಲರ್​ಗೆ ಬಾಲ್ ನೀಡಿ ರನೌಟ್ ಆದ ಪಾಕ್ ಬ್ಯಾಟರ್
ಯುವಕ ಸ್ಟೇಜ್​​​​ ಮೇಲೇರಿ ಸಿದ್ದರಾಮಯ್ಯಗೆ ಹೇಳಿದ್ದೇನು ಗೊತ್ತಾ?
ಯುವಕ ಸ್ಟೇಜ್​​​​ ಮೇಲೇರಿ ಸಿದ್ದರಾಮಯ್ಯಗೆ ಹೇಳಿದ್ದೇನು ಗೊತ್ತಾ?
ಯುದ್ಧ ಕಾರ್ಮೊಡದ ನಡುವೆ ಯುಎಇಯಿಂದ ಡಾಂಬರು ಹೊತ್ತು ಕಾರವಾರಕ್ಕೆ ಬಂದ ಹಡಗು
ಯುದ್ಧ ಕಾರ್ಮೊಡದ ನಡುವೆ ಯುಎಇಯಿಂದ ಡಾಂಬರು ಹೊತ್ತು ಕಾರವಾರಕ್ಕೆ ಬಂದ ಹಡಗು
ಪಾಕ್ ಕ್ರಿಕೆಟಿಗನ ಖರೀದಿ ಬಗ್ಗೆ ಮೊದಲ ಬಾರಿಗೆ ಪ್ರತಿಕ್ರಿಯಿಸಿದ ಬಿಸಿಸಿಐ
ಪಾಕ್ ಕ್ರಿಕೆಟಿಗನ ಖರೀದಿ ಬಗ್ಗೆ ಮೊದಲ ಬಾರಿಗೆ ಪ್ರತಿಕ್ರಿಯಿಸಿದ ಬಿಸಿಸಿಐ
‘ಆಕಾಶ್’ ಸಿನಿಮಾ ಮರುಬಿಡುಗಡೆ: ಪುನೀತ್ ಕಟೌಟ್​ಗೆ ಹಾಲಿನ ಅಭಿಷೇಕ
‘ಆಕಾಶ್’ ಸಿನಿಮಾ ಮರುಬಿಡುಗಡೆ: ಪುನೀತ್ ಕಟೌಟ್​ಗೆ ಹಾಲಿನ ಅಭಿಷೇಕ
ಬಜೆಟ್​​ ಕುರಿತ ಹೇಳಿಕೆಗೆ ಇಕ್ಬಾಲ್ ಸಮರ್ಥನೆ: ರಾಮನಗರ MLA ಹೇಳಿದ್ದಿಷ್ಟು
ಬಜೆಟ್​​ ಕುರಿತ ಹೇಳಿಕೆಗೆ ಇಕ್ಬಾಲ್ ಸಮರ್ಥನೆ: ರಾಮನಗರ MLA ಹೇಳಿದ್ದಿಷ್ಟು