AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಧ್ಯಕ್ಷ ಝೆಲೆನ್​ಸ್ಕಿ ಹತ್ಯೆಯಾದರೂ ಹೋರಾಟ ನಿಲ್ಲುವುದಿಲ್ಲ: ಪರ್ಯಾಯ ಯೋಜನೆಗಳನ್ನು ರೂಪಿಸಿಕೊಂಡಿದೆ ಉಕ್ರೇನ್

ಒಂದು ವೇಳೆ ಅಧ್ಯಕ್ಷ ಝೆಲೆನ್​ಸ್ಕಿ ಹತ್ಯೆಯಾದರೂ ಪರಿಸ್ಥಿತಿಯನ್ನು ಹೇಗೆ ನಿರ್ವಹಿಸಬೇಕು ಎಂಬ ಬಗ್ಗೆ ಉಕ್ರೇನ್ ಅಗತ್ಯ ಸಿದ್ಧತೆ ಮಾಡಿಕೊಂಡಿದೆ.

ಅಧ್ಯಕ್ಷ ಝೆಲೆನ್​ಸ್ಕಿ ಹತ್ಯೆಯಾದರೂ ಹೋರಾಟ ನಿಲ್ಲುವುದಿಲ್ಲ: ಪರ್ಯಾಯ ಯೋಜನೆಗಳನ್ನು ರೂಪಿಸಿಕೊಂಡಿದೆ ಉಕ್ರೇನ್
ವೊಲೊಡಿಮಿರ್ ಝೆಲೆನ್ಸ್ಕಿ
TV9 Web
| Edited By: |

Updated on: Mar 07, 2022 | 11:53 AM

Share

ದೆಹಲಿ: ಉಕ್ರೇನ್ ಅಧ್ಯಕ್ಷ ವೊಲೊಡ್ಮಿರ್ ಝೆಲೆನ್​ಸ್ಕಿ (Volodymyr Zelensky) ಅವರ ಹತ್ಯೆಗೆ ರಷ್ಯಾ ಈಗಾಗಲೇ ಹಲವು ಬಾರಿ ಯತ್ನಿಸಿದೆ. ಈ ಹಿನ್ನೆಲೆಯಲ್ಲಿ ಎಚ್ಚೆತ್ತುಕೊಂಡಿರುವ ಉಕ್ರೇನ್ ಅಡಳಿತ, ಒಂದು ವೇಳೆ ಅಧ್ಯಕ್ಷ ಝೆಲೆನ್​ಸ್ಕಿ ಹತ್ಯೆಯಾದರೂ ಪರಿಸ್ಥಿತಿಯನ್ನು ಹೇಗೆ ನಿರ್ವಹಿಸಬೇಕು ಎಂಬ ಬಗ್ಗೆ ಸಿದ್ಧತೆ ಮಾಡಿಕೊಂಡಿದೆ. ರಷ್ಯಾ ತನ್ನ ಪ್ರಯತ್ನದಲ್ಲಿ ಯಶಸ್ವಿಯಾಗಿ, ಝೆಲೆನ್​ಸ್ಕಿ ಹತ್ಯೆಯಾದರೂ ಉಕ್ರೇನ್ ತನ್ನ ಹೋರಾಟ ನಿಲ್ಲಿಸುವುದಿಲ್ಲ ಎಂದು ಅಮೆರಿಕದ ವಿದೇಶಾಂಗ ವ್ಯವಹಾರಗಳ ಇಲಾಖೆ ಕಾರ್ಯದರ್ಶಿ ಆಂಟೊನಿ ಬ್ಲಿಂಕೆನ್ ಹೇಳಿದ್ದಾರೆ. ಪತ್ರಕರ್ತೆ ಮಾರ್ಗರೆಟ್ ಬ್ರೆನನ್ ಅವರ ‘ಫೇಸ್​ ದ ನೇಷನ್’ ಟಿವಿ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ‘ಒಂದು ದಿನದ ಹಿಂದಷ್ಟೇ ನಾನು ಉಕ್ರೇನ್​ನಲ್ಲಿದ್ದೆ. ಅಲ್ಲಿನ ವಿದೇಶಾಂಗ ವ್ಯವಹಾರಗಳ ಸಚಿವ ಡ್ಮಿಟ್ರೊ ಕುಲೆಬಾ ಅವರನ್ನು ಭೇಟಿಯಾಗಿದ್ದೆ. ಈ ವೇಳೆ ಅವರು ಹೆಚ್ಚೇನು ವಿವರ ಹಂಚಿಕೊಳ್ಳಲಿಲ್ಲ. ಆದರೆ, ಝೆಲೆನ್​ಸ್ಕಿ ಅಧಿಕಾರದಲ್ಲಿದ್ದಾಗ ಹೇಗೆ ಆಡಳಿತ ನಡೆದುಕೊಂಡು ಹೋಗುತ್ತಿದೆಯೋ ನಂತರವೂ ಹೆಚ್ಚೂಕಡಿಮೆ ಅದೇ ರೀತಿ ಮುಂದುವರಿಸಲು ಅವರು ವ್ಯವಸ್ಥೆ ಮಾಡಿಕೊಂಡಿದ್ದಾರೆ’ ಎಂದು ತಿಳಿಸಿದರು. ತಮ್ಮ ಸಂದರ್ಶನದಲ್ಲಿ ಬ್ಲಿಂಕೆನ್ ಉಕ್ರೇನ್ ಆಡಳಿತವನ್ನು ಹೊಗಳಿದ್ದಾರೆ. ಉಕ್ರೇನ್​ನ ಧೈರ್ಯಶಾಲಿ ಜನರ ನಿಜವಾದ ಪ್ರತಿನಿಧಿಗಳಾಗಿ ಝೆಲೆನ್​ಸ್ಕಿ ಮತ್ತು ಅವರ ಸರ್ಕಾರ ಕೆಲಸ ಮಾಡುತ್ತಿದೆ ಎಂದು ತಾರೀಪು ಮಾಡಿದ್ದಾರೆ.

ಉಕ್ರೇನ್ ಮೇಲೆ ರಷ್ಯಾ ದಾಳಿ ನಡೆಸಿದ 12 ದಿನಗಳಲ್ಲಿ ಅಧ್ಯಕ್ಷ ಝೆಲೆನ್​ಸ್ಕಿ ಹತ್ಯೆಗೆ ಈವರೆಗೆ ಮೂರು ಬಾರಿ ರಷ್ಯಾ ಪ್ರಯತ್ನಿಸಿದೆ. ಉಕ್ರೇನ್ ಅಧಿಕಾರಿಗಳು ಮತ್ತು ಗುಪ್ತಚರ ಇಲಾಖೆ ಸಕಾಲದಲ್ಲಿ ಮುನ್ಸೂಚನೆ ನೀಡಿದ್ದರಿಂದ ಈ ಸಂಚುಗಳನ್ನು ವಿಫಲಗೊಳಿಸಲಾಯಿತು. ವಾಗ್​ನರ್ ಗ್ರೂಪ್ ಮತ್ತು ಚೆಚೆನ್ಯಾ ಬಂಡುಕೋರರ ಎರಡು ಪ್ರತ್ಯೇಕ ಗುಂಪುಗಳನ್ನು ಉಕ್ರೇನ್ ಅಧ್ಯಕ್ಷರ ಹತ್ಯೆಗೆಂದು ಕಳಿಸಲಾಗಿದೆ.

ಉಕ್ರೇನ್​ ಮೇಲೆ ದಂಡೆತ್ತಿ ಬಂದು ದುಂಡಾವರ್ತಿ ನಡೆಸಿದ ಎಲ್ಲರನ್ನೂ ಶಿಕ್ಷಿಸುತ್ತೇವೆ ಎಂದು ಝೆಲೆನ್​ಸ್ಕಿ ಇತ್ತೀಚೆಗಷ್ಟೇ ಪ್ರತಿಜ್ಞೆ ಮಾಡಿದ್ದರು. ರಷ್ಯಾ ವಿರುದ್ಧದ ಹೋರಾಟದಲ್ಲಿ ಮಹಿಳೆಯರು ಮತ್ತು ಮಕ್ಕಳೂ ಸೇರಿದಂತೆ ನೂರಾರು ಜನರು ಮೃತಪಟ್ಟಿದ್ದಾರೆ. ‘ಉಕ್ರೇನ್​ಗೆ ಬಂದಿರುವ ರಷ್ಯಾ ಸೇನೆಯು ಉದ್ದೇಶಪೂರ್ವಕವಾಗಿ ಜನರನ್ನು ಕೊಲ್ಲುತ್ತಿದೆ. ಯಾವು ಯಾವುದನ್ನೂ ಮರೆಯುವುದಿಲ್ಲ, ಯಾರನ್ನೂ ಕ್ಷಮಿಸುವುದಿಲ್ಲ. ನಮ್ಮ ನೆಲಕ್ಕೆ ಬಂದು ನಮ್ಮ ಮೇಲೆ ದೌರ್ಜನ್ಯ ಎಸಗಿದ ಎಲ್ಲರನ್ನೂ ಶಿಕ್ಷಿಸುತ್ತೇವೆ’ ಎಂದು ಝೆಲೆನ್​ಸ್ಕಿ ಹೇಳಿದ್ದರು. ಈ ಭೂಮಿಯಲ್ಲಿ ಗೋರಿ ಹೊರತುಪಡಿಸಿದರೆ ಬೇರೆಲ್ಲೂ ನೆಮ್ಮದಿಯ ಸ್ಥಳ ಇಲ್ಲ’ ಎಂದು ಝೆಲೆನ್​ಸ್ಕಿ ಹೇಳಿದ್ದರು.

ಉಕ್ರೇನ್ ಮತ್ತು ರಷ್ಯಾ ನಡುವಣ 3ನೇ ಸುತ್ತಿನ ಶಾಂತಿ ಮಾತುಕತೆಯ ಸೋಮವಾರ ನಡೆಯಲಿದೆ. ಆದರೆ ರಕ್ತಸಿಕ್ತ ಹೋರಾಟ ಮಾತ್ರ ಇನ್ನೂ ನಿಂತಿಲ್ಲ.

ಕಚ್ಚಾ ತೈಲ ಬ್ಯಾರಲ್​ಗೆ 10 ಯುಎಸ್​ಡಿಗೂ ಜಾಸ್ತಿ ಹೆಚ್ಚಳ

ಉಕ್ರೇನ್- ರಷ್ಯಾ ಬಿಕ್ಕಟ್ಟು ತೀವ್ರಗೊಳ್ಳುತ್ತಿದ್ದಂತೆ ಮಾರ್ಚ್ 7ನೇ ತಾರೀಕಿನ ಸೋಮವಾರದಂದು ಪ್ರತಿ ಬ್ಯಾರೆಲ್​ಗೆ ತೈಲ ಬೆಲೆ 10 ಯುಎಸ್​ಡಿಗೂ ಹೆಚ್ಚು ಮೇಲೇರಿದೆ. ರಷ್ಯಾದ ಮೇಲೆ ಮತ್ತಷ್ಟು ಕಠಿಣ ನಿರ್ಬಂಧಗಳನ್ನು ಹೇರಬೇಕು ಎಂಬ ಕರೆ ವ್ಯಾಪಕ ಆಗುತ್ತಿರುವ ಹಿನ್ನೆಲೆಯಲ್ಲಿ ಈ ಬೆಳವಣಿಗೆ ಆಗಿದೆ. ಸೋಮವಾರ ದಿನದ ಆರಂಭದಲ್ಲಿ ಬ್ರೆಂಟ್ ಕಚ್ಚಾ ತೈಲ 10 ಯುಎಸ್​ಡಿಗೂ ಹೆಚ್ಚು ಜಿಗಿತ ಕಂಡು, 130 ಯುಎಸ್​ಡಿ ಸಮೀಪ ಮುಟ್ಟಿತು. ಯು.ಎಸ್. ಕಚ್ಚಾ ತೈಲ ಬೆಂಚ್​ಮಾರ್ಕ್ 9 ಯುಎಸ್​ಡಿಗೂ ಜಾಸ್ತಿ ಮೇಲೇರಿ, ಈಗ ಬ್ಯಾರಲ್​ಗೆ 124 ಡಾಲರ್​ಗೂ ಹೆಚ್ಚಿನ ದರದಲ್ಲಿದೆ. ರಷ್ಯಾದ ಪಡೆಗಳು ಆಯಕಟ್ಟಿನ ಸ್ಥಳಗಳನ್ನು ವಶಕ್ಕೆ ಪಡೆದಿರುವುದರಿಂದ ಉಕ್ರೇನ್​ನ ದೇಶದ ಸ್ಥಾನಮಾನ ಅಪಾಯದಲ್ಲಿದೆ ಎಂದು ರಷ್ಯಾದ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರ ಎಚ್ಚರಿಕೆ ನಂತರ ಈ ಹೆಚ್ಚಳ ಆಗಿದೆ.

ಇದನ್ನೂ ಓದಿ: ಉಕ್ರೇನ್​ನಿಂದ ಬಂದ ಎಂಬಿಬಿಎಸ್ ವಿದ್ಯಾರ್ಥಿಗಳ ಭವಿಷ್ಯವೇನು? ಮಾಜಿ ಸಿಎಂ ಹೆಚ್​ಡಿ ಕುಮಾರಸ್ವಾಮಿ ಟ್ವೀಟ್

ಇದನ್ನೂ ಓದಿ: Russia-Ukraine War: ಇಂದು ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿಯವರೊಂದಿಗೆ ಪ್ರಧಾನಿ ಮೋದಿ ಮಾತು

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್