AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Breaking News ಯುಕೆಯ ಗೃಹ ಕಾರ್ಯದರ್ಶಿ ಹುದ್ದೆ ತೊರೆದ ಸುಯೆಲ್ಲಾ ಬ್ರಾವರ್‌ಮನ್

ಗೃಹ ಕಾರ್ಯದರ್ಶಿ ಹುದ್ದೆ ತೊರೆದಿರುವುದು ನಿಜವೇ ಆಗಿದ್ದರೆ ಶುಕ್ರವಾರ ತಮ್ಮ ಹಣಕಾಸು ಸಚಿವ ಕ್ವಾಸಿ ಕ್ವಾರ್ಟೆಂಗ್ ಅವರನ್ನು ವಜಾಗೊಳಿಸಿದ ನಂತರ ಒಂದು ವಾರದಲ್ಲಿ ಟ್ರಸ್ ಸಚಿವ ಸಂಪುಟದಿಂದ...

Breaking News ಯುಕೆಯ ಗೃಹ ಕಾರ್ಯದರ್ಶಿ ಹುದ್ದೆ ತೊರೆದ ಸುಯೆಲ್ಲಾ ಬ್ರಾವರ್‌ಮನ್
ಸುಯೆಲ್ಲಾ ಬ್ರಾವರ್‌ಮನ್
TV9 Web
| Edited By: ರಶ್ಮಿ ಕಲ್ಲಕಟ್ಟ|

Updated on:Oct 19, 2022 | 9:57 PM

Share

ಬ್ರಿಟನ್ ಪ್ರಧಾನಿ ಲಿಜ್ ಟ್ರಸ್ (Liz Truss) ಅವರ ಸರ್ಕಾರಕ್ಕೆ ಮತ್ತೊಂದು ಹೊಡೆತ ಎಂಬಂತೆ ಸುಯೆಲ್ಲಾ ಬ್ರಾವರ್‌ಮನ್ (Suella Braverman) ಗೃಹ ಕಾರ್ಯದರ್ಶಿ ಹುದ್ದೆಯನ್ನು ತೊರೆದಿದ್ದಾರೆ ಎಂದು ಗಾರ್ಡಿಯನ್ ವರದಿ ಮಾಡಿದೆ. ಟ್ರಸ್‌ನ  ಮಿನಿ-ಬಜೆಟ್‌ನ ನಂತರ ಸರ್ಕಾರದ ಆರ್ಥಿಕ ಪ್ರತಿಕ್ರಿಯೆಯ ಮೇಲೆ ಹಿಡಿತ ಸಾಧಿಸಿದ ಹೊಸ ಚಾನ್ಸಲರ್ ಜೆರೆಮಿ ಹಂಟ್ ಅವರ ಆದೇಶ ಮೇರೆಗೆ ಸುಯೆಲ್ಲಾ ಈ ನಿರ್ಧಾರ  ತೆಗೆದುಕೊಂಡಿರುವುದಾಗಿ ಮೂಲಗಳನ್ನು ಉಲ್ಲೇಖಿಸಿ ವರದಿ ಹೇಳಿದೆ.  ಶುಕ್ರವಾರ ತಮ್ಮ ಹಣಕಾಸು ಸಚಿವ ಕ್ವಾಸಿ ಕ್ವಾರ್ಟೆಂಗ್ ಅವರನ್ನು ವಜಾಗೊಳಿಸಿದ ನಂತರ ಒಂದು ವಾರದಲ್ಲಿ ಟ್ರಸ್ ಸಚಿವ ಸಂಪುಟದಿಂದ ಹೊರ ನಡೆದ ಉನ್ನತ ಸಚಿವರಲ್ಲಿ ಒಬ್ಬರಾಗಿದ್ದಾರೆ ಸುಯೆಲ್ಲಾ.

ರಾಜೀನಾಮೆ ಪತ್ರವನ್ನು ಟ್ವೀಟ್ ಮಾಡಿರುವ ಸುಯೆಲ್ಲಾ ಅವರು “ವಿಶ್ವಾಸಾರ್ಹ ಸಂಸದೀಯ ಸಹೋದ್ಯೋಗಿ” ಗೆ ಕಳುಹಿಸಿದ ಇಮೇಲ್‌ಗೆ ಸಂಬಂಧಿಸಿದ “ನಿಯಮಗಳ ತಾಂತ್ರಿಕ ಉಲ್ಲಂಘನೆ” ಯನ್ನು ಉಲ್ಲೇಖಿಸಿದ್ದಾರೆ. ವಲಸೆಯ ಕುರಿತು ಕರಡು ಲಿಖಿತ ಸಚಿವರ ಹೇಳಿಕೆಯನ್ನು ಕಳುಹಿಸಿದ್ದೇನೆ, ಅದು ಪ್ರಕಟಣೆಗೆ ಬಾಕಿಯಿದೆ. ಅದರಲ್ಲಿ ಹೆಚ್ಚಿನದನ್ನು ಸಂಸದರಿಗೆ ವಿವರಿಸಲಾಗಿದೆ. ಅದೇನೇ ಇದ್ದರೂ, ನಾನು ಹೋಗುವುದು ಸರಿಯಾಗಿದೆ” ಎಂದು ಬ್ರಾವರ್‌ಮನ್ ಪ್ರಧಾನಿಗೆ ಪತ್ರ ಬರೆದಿದ್ದಾರೆ.

ತನ್ನ ತಪ್ಪಿನ ಅರಿವಾದ ತಕ್ಷಣ ಅಧಿಕೃತ  ರೀತಿಯಲ್ಲಿ ವಿಷಯವನ್ನು ತಿಳಿಸಿದ್ದೇನೆ. ನಾನು ತಪ್ಪು ಮಾಡಿದ್ದೇನೆ, ನಾನು ಜವಾಬ್ದಾರಿಯನ್ನು ಸ್ವೀಕರಿಸುತ್ತೇನೆೆ. ನಾನು ರಾಜೀನಾಮೆ ನೀಡುತ್ತೇನೆ ಎಂದು ಅವರು ಬರೆದಿದ್ದಾರೆ.

Published On - 9:43 pm, Wed, 19 October 22

Follow Us
ಕೊಪ್ಪಳ: ಯರೇ ಹಂಚಿನಾಳ ಗ್ರಾಮದಲ್ಲಿ ಕುಡಿಯುವ ನೀರಿನ ಬಿಕ್ಕಟ್ಟು ತೀವ್ರ
ಕೊಪ್ಪಳ: ಯರೇ ಹಂಚಿನಾಳ ಗ್ರಾಮದಲ್ಲಿ ಕುಡಿಯುವ ನೀರಿನ ಬಿಕ್ಕಟ್ಟು ತೀವ್ರ
‘ಆ ಸಿನಿಮಾ ಬಳಿಕ ಮಹಿಳಾ ಫ್ಯಾನ್ಸ್ ಹೆಚ್ಚಾಗಿದ್ದಾರೆ’; ವಿನೋದ್ ರಾಜ್
‘ಆ ಸಿನಿಮಾ ಬಳಿಕ ಮಹಿಳಾ ಫ್ಯಾನ್ಸ್ ಹೆಚ್ಚಾಗಿದ್ದಾರೆ’; ವಿನೋದ್ ರಾಜ್
ದಿನ ಭವಿಷ್ಯ: ಶನಿವಾರ ಈ ಮೂರು ದೇವರ ಆರಾಧನೆಯಿಂದ ಸಿಗಲಿದೆ ಸರ್ವ ಸಿದ್ಧಿ
ದಿನ ಭವಿಷ್ಯ: ಶನಿವಾರ ಈ ಮೂರು ದೇವರ ಆರಾಧನೆಯಿಂದ ಸಿಗಲಿದೆ ಸರ್ವ ಸಿದ್ಧಿ
ಅಡವಿಟ್ಟ ಚಿನ್ನ ಬಿಡಿಸಿಕೊಳ್ಳಲು ಅಧ್ಯಾತ್ಮದಲ್ಲಿದೆ ಐಡಿಯಾ!
ಅಡವಿಟ್ಟ ಚಿನ್ನ ಬಿಡಿಸಿಕೊಳ್ಳಲು ಅಧ್ಯಾತ್ಮದಲ್ಲಿದೆ ಐಡಿಯಾ!
ಒಮ್ಮೆಯೂ ಅಯೋಧ್ಯೆಗೆ ಹೋಗದವರು ರಾಮಭಕ್ತಿಯ ನಾಟಕವಾಡುತ್ತಿದ್ದಾರೆ; ಸಿಎಂ ಯೋಗಿ
ಒಮ್ಮೆಯೂ ಅಯೋಧ್ಯೆಗೆ ಹೋಗದವರು ರಾಮಭಕ್ತಿಯ ನಾಟಕವಾಡುತ್ತಿದ್ದಾರೆ; ಸಿಎಂ ಯೋಗಿ
15 ದಿನದೊಳಗೆ ರೈತರಿಗೆ ಪರಿಹಾರ, ಇಲ್ಲಾಂದ್ರೆ ರಾಜಕೀಯ ನಿವೃತ್ತಿ: ಬಾಲಕೃಷ್ಣ
15 ದಿನದೊಳಗೆ ರೈತರಿಗೆ ಪರಿಹಾರ, ಇಲ್ಲಾಂದ್ರೆ ರಾಜಕೀಯ ನಿವೃತ್ತಿ: ಬಾಲಕೃಷ್ಣ
‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ
‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ
ಫೀಲ್ಡಿಗಿಳಿದ ಸಚಿವ: ಪಿಂಕ್ ಲೈನ್ ಮೆಟ್ರೋ ಕಾಮಗಾರಿಗೆ ಡೆಡ್​​ಲೈನ್ ಫಿಕ್ಸ್
ಫೀಲ್ಡಿಗಿಳಿದ ಸಚಿವ: ಪಿಂಕ್ ಲೈನ್ ಮೆಟ್ರೋ ಕಾಮಗಾರಿಗೆ ಡೆಡ್​​ಲೈನ್ ಫಿಕ್ಸ್
ಗ್ಯಾರಂಟಿ ಯೋಜನೆಗಳಿಗೆ ಮತ್ತೊಂದು ರೂಲ್ಸ್: ಮನೆಗೆ ಬಂದು ದಾಖಲೆ ಚೆಕ್ಕಿಂಗ್
ಗ್ಯಾರಂಟಿ ಯೋಜನೆಗಳಿಗೆ ಮತ್ತೊಂದು ರೂಲ್ಸ್: ಮನೆಗೆ ಬಂದು ದಾಖಲೆ ಚೆಕ್ಕಿಂಗ್
‘ನಾನು ಇಲ್ಲಿ ನಿಂತಿದ್ದಕ್ಕೆ ಟೈಗರ್ ಪ್ರಭಾಕರ್ ಕಾರಣ’: ವಿನೋದ್ ಪ್ರಭಾಕರ್
‘ನಾನು ಇಲ್ಲಿ ನಿಂತಿದ್ದಕ್ಕೆ ಟೈಗರ್ ಪ್ರಭಾಕರ್ ಕಾರಣ’: ವಿನೋದ್ ಪ್ರಭಾಕರ್