AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸೂಡಾನ್​​ನಲ್ಲಿ ಚಿನ್ನದ ಗಣಿ ಕುಸಿತ; ಗಣಿಗಾರಿಕೆ ಕೆಲಸ ನಿರ್ಬಂಧಿಸಿದ್ದರೂ ಬಂದು ಕೆಲಸ ಮಾಡಿದ ಕಾರ್ಮಿಕರು, 38 ಮಂದಿ ಸಾವು

ಗಣಿ ಕುಸಿತದಲ್ಲಿ ಹಲವರು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ಕಂಪನಿ ತಿಳಿಸಿದೆ. ಹಾಗೇ, ಫೇಸ್​ಬುಕ್​ನಲ್ಲಿ ಪೋಸ್ಟ್​ ಕೂಡ ಹಾಕಿದೆ.

ಸೂಡಾನ್​​ನಲ್ಲಿ ಚಿನ್ನದ ಗಣಿ ಕುಸಿತ; ಗಣಿಗಾರಿಕೆ ಕೆಲಸ ನಿರ್ಬಂಧಿಸಿದ್ದರೂ ಬಂದು ಕೆಲಸ ಮಾಡಿದ ಕಾರ್ಮಿಕರು, 38 ಮಂದಿ ಸಾವು
ಚಿನ್ನದ ಗಣಿ
TV9 Web
| Edited By: |

Updated on: Dec 29, 2021 | 9:17 AM

Share

ಸೂಡಾನ್​​ನ ಪಶ್ಚಿಮ ಕೊರ್ಡೋಫಾನ್ ಪ್ರಾಂತ್ಯದಲ್ಲಿರುವ ಚಿನ್ನದ ಗಣಿಯೊಂದು ಕುಸಿದು ಸುಮಾರು 38 ಮಂದಿ ಮೃತಪಟ್ಟಿದ್ದಾಗಿ ಸ್ಥಳೀಯ ಆಡಳಿತ ತಿಳಿಸಿದೆ. ಈ ಬಗ್ಗೆ ಗಣಿಗಾರಿಕಾ ಕಂಪನಿ ಪ್ರಕಟಣೆ ಹೊರಡಿಸಿದ್ದು, ಉಮ್ಮ ದ್ರೈಸಯಾ ಎಂಬ ಚಿನ್ನದ ಗಣಿಯಲ್ಲಿ ಕುಸಿತವುಂಟಾಗಿ 38 ಜನರು ಮೃತಪಟ್ಟಿದ್ದು ತೀವ್ರ ನೋವು ತಂದಿದೆ ಎಂದು ಹೇಳಿದೆ. ಈ ಗಣಿ ಸೂಡಾನ್​ನ ರಾಜಧಾನಿ ಖರ್ತೋಮ್​​ನಿಂದ 500 ಕಿಮೀ ದೂರದಲ್ಲಿರುವ ಎಲ್ ನುಹುದ್ ಪಟ್ಟಣದ ಸಮೀಪದಲ್ಲಿದೆ. ಇದು ಗಣಿಗಾರಿಕಾ ಕೆಲಸಕ್ಕೆ ಯೋಗ್ಯವಾದ ಗಣಿಯಾಗಿರಲಿಲ್ಲ. ನಾವು ಇಲ್ಲಿ ಕಾರ್ಯಾಚರಣೆ ನಿಲ್ಲಿಸುವಂತೆ ಸೂಚಿಸಿದ್ದೆವು. ಹಾಗೇ, ಇಲ್ಲಿ ಭದ್ರತಾ ಸಿಬ್ಬಂದಿಯನ್ನೂ ನಿಯೋಜಿಸಿದ್ದೆವು. ಆದರೆ ಭದ್ರತಾ ಸಿಬ್ಬಂದಿ ಸಂಜೆ ಮನೆಗೆ ಹೋಗುತ್ತಿದ್ದಂತೆ ಇತ್ತ ಕೆಲಸಗಾರರು ಮತ್ತೆ ಗಣಿಗಾರಿಕೆ ಕೆಲಸ ಮಾಡಿದ್ದಾರೆ. ಈ ಬಗ್ಗೆ ತನಿಖೆ ನಡೆಸಲಾಗುವುದು ಎಂದು ಕಂಪನಿ ಪ್ರಕಟಣೆಯಲ್ಲಿ ಸ್ಪಷ್ಟಪಡಿಸಿದ್ದಾರೆ. 

ಗಣಿ ಕುಸಿತದಲ್ಲಿ ಹಲವರು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ಕಂಪನಿ ತಿಳಿಸಿದೆ. ಹಾಗೇ, ಫೇಸ್​ಬುಕ್​ನಲ್ಲಿ ಪೋಸ್ಟ್​ ಕೂಡ ಹಾಕಿದೆ.  ಇನ್ನು ಸೂಡಾನ್​​ನಲ್ಲಿ ಗಣಿಗಾರಿಕೆ ಅತ್ಯಂತ ಮುಖ್ಯ ಕಸುಬು. ರೆಡ್​ ಸೀ, ನಹ್ರ್​ ಅಲ್​ ನೀಲ್, ದಕ್ಷಿಣ ಕೊರ್ಡೊಫಾನ್, ಪಶ್ಚಿಮ ಕೊರ್ಡೊಫಾನ್​  ಸೇರಿ ಬಹುತೇಕ ರಾಜ್ಯಗಳಿಂದ ಸುಮಾರು 2 ಮಿಲಿಯನ್​ ಜನರು ಗಣಿಗಾರಿಕಾ ಉದ್ಯಮದಲ್ಲಿ ಕೆಲಸಗಾರರಾಗಿದ್ದಾರೆ. ಜಾಗತಿಕವಾಗಿ ಒಟ್ಟಾರೆ ಚಿನ್ನದ ಉತ್ಪಾದನೆಯಲ್ಲಿ ಶೇ.75ರಷ್ಟು ಪಾಲು ಈ ಸೂಡಾನ್​ನದ್ದೇ ಆಗಿದೆ ಎಂದೂ ಹೇಳಲಾಗಿದೆ.

ಇದನ್ನೂ ಓದಿ: ಪೌಷ್ಟಿಕಾಂಶಗಳ ಆಗರ ಗೆಣಸಿನ ಬಳಕೆಯಿರಲಿ: ಚಳಿಗಾಲದಲ್ಲಿ ಪರಿಪೂರ್ಣ ಆಹಾರವಾಗಲಿದೆ

Follow Us
Web contact
Web contact

TV9 Kannada

Read More
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ