AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸೂಡಾನ್​​ನಲ್ಲಿ ಚಿನ್ನದ ಗಣಿ ಕುಸಿತ; ಗಣಿಗಾರಿಕೆ ಕೆಲಸ ನಿರ್ಬಂಧಿಸಿದ್ದರೂ ಬಂದು ಕೆಲಸ ಮಾಡಿದ ಕಾರ್ಮಿಕರು, 38 ಮಂದಿ ಸಾವು

ಗಣಿ ಕುಸಿತದಲ್ಲಿ ಹಲವರು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ಕಂಪನಿ ತಿಳಿಸಿದೆ. ಹಾಗೇ, ಫೇಸ್​ಬುಕ್​ನಲ್ಲಿ ಪೋಸ್ಟ್​ ಕೂಡ ಹಾಕಿದೆ.

ಸೂಡಾನ್​​ನಲ್ಲಿ ಚಿನ್ನದ ಗಣಿ ಕುಸಿತ; ಗಣಿಗಾರಿಕೆ ಕೆಲಸ ನಿರ್ಬಂಧಿಸಿದ್ದರೂ ಬಂದು ಕೆಲಸ ಮಾಡಿದ ಕಾರ್ಮಿಕರು, 38 ಮಂದಿ ಸಾವು
ಚಿನ್ನದ ಗಣಿ
TV9 Web
| Edited By: |

Updated on: Dec 29, 2021 | 9:17 AM

Share

ಸೂಡಾನ್​​ನ ಪಶ್ಚಿಮ ಕೊರ್ಡೋಫಾನ್ ಪ್ರಾಂತ್ಯದಲ್ಲಿರುವ ಚಿನ್ನದ ಗಣಿಯೊಂದು ಕುಸಿದು ಸುಮಾರು 38 ಮಂದಿ ಮೃತಪಟ್ಟಿದ್ದಾಗಿ ಸ್ಥಳೀಯ ಆಡಳಿತ ತಿಳಿಸಿದೆ. ಈ ಬಗ್ಗೆ ಗಣಿಗಾರಿಕಾ ಕಂಪನಿ ಪ್ರಕಟಣೆ ಹೊರಡಿಸಿದ್ದು, ಉಮ್ಮ ದ್ರೈಸಯಾ ಎಂಬ ಚಿನ್ನದ ಗಣಿಯಲ್ಲಿ ಕುಸಿತವುಂಟಾಗಿ 38 ಜನರು ಮೃತಪಟ್ಟಿದ್ದು ತೀವ್ರ ನೋವು ತಂದಿದೆ ಎಂದು ಹೇಳಿದೆ. ಈ ಗಣಿ ಸೂಡಾನ್​ನ ರಾಜಧಾನಿ ಖರ್ತೋಮ್​​ನಿಂದ 500 ಕಿಮೀ ದೂರದಲ್ಲಿರುವ ಎಲ್ ನುಹುದ್ ಪಟ್ಟಣದ ಸಮೀಪದಲ್ಲಿದೆ. ಇದು ಗಣಿಗಾರಿಕಾ ಕೆಲಸಕ್ಕೆ ಯೋಗ್ಯವಾದ ಗಣಿಯಾಗಿರಲಿಲ್ಲ. ನಾವು ಇಲ್ಲಿ ಕಾರ್ಯಾಚರಣೆ ನಿಲ್ಲಿಸುವಂತೆ ಸೂಚಿಸಿದ್ದೆವು. ಹಾಗೇ, ಇಲ್ಲಿ ಭದ್ರತಾ ಸಿಬ್ಬಂದಿಯನ್ನೂ ನಿಯೋಜಿಸಿದ್ದೆವು. ಆದರೆ ಭದ್ರತಾ ಸಿಬ್ಬಂದಿ ಸಂಜೆ ಮನೆಗೆ ಹೋಗುತ್ತಿದ್ದಂತೆ ಇತ್ತ ಕೆಲಸಗಾರರು ಮತ್ತೆ ಗಣಿಗಾರಿಕೆ ಕೆಲಸ ಮಾಡಿದ್ದಾರೆ. ಈ ಬಗ್ಗೆ ತನಿಖೆ ನಡೆಸಲಾಗುವುದು ಎಂದು ಕಂಪನಿ ಪ್ರಕಟಣೆಯಲ್ಲಿ ಸ್ಪಷ್ಟಪಡಿಸಿದ್ದಾರೆ. 

ಗಣಿ ಕುಸಿತದಲ್ಲಿ ಹಲವರು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ಕಂಪನಿ ತಿಳಿಸಿದೆ. ಹಾಗೇ, ಫೇಸ್​ಬುಕ್​ನಲ್ಲಿ ಪೋಸ್ಟ್​ ಕೂಡ ಹಾಕಿದೆ.  ಇನ್ನು ಸೂಡಾನ್​​ನಲ್ಲಿ ಗಣಿಗಾರಿಕೆ ಅತ್ಯಂತ ಮುಖ್ಯ ಕಸುಬು. ರೆಡ್​ ಸೀ, ನಹ್ರ್​ ಅಲ್​ ನೀಲ್, ದಕ್ಷಿಣ ಕೊರ್ಡೊಫಾನ್, ಪಶ್ಚಿಮ ಕೊರ್ಡೊಫಾನ್​  ಸೇರಿ ಬಹುತೇಕ ರಾಜ್ಯಗಳಿಂದ ಸುಮಾರು 2 ಮಿಲಿಯನ್​ ಜನರು ಗಣಿಗಾರಿಕಾ ಉದ್ಯಮದಲ್ಲಿ ಕೆಲಸಗಾರರಾಗಿದ್ದಾರೆ. ಜಾಗತಿಕವಾಗಿ ಒಟ್ಟಾರೆ ಚಿನ್ನದ ಉತ್ಪಾದನೆಯಲ್ಲಿ ಶೇ.75ರಷ್ಟು ಪಾಲು ಈ ಸೂಡಾನ್​ನದ್ದೇ ಆಗಿದೆ ಎಂದೂ ಹೇಳಲಾಗಿದೆ.

ಇದನ್ನೂ ಓದಿ: ಪೌಷ್ಟಿಕಾಂಶಗಳ ಆಗರ ಗೆಣಸಿನ ಬಳಕೆಯಿರಲಿ: ಚಳಿಗಾಲದಲ್ಲಿ ಪರಿಪೂರ್ಣ ಆಹಾರವಾಗಲಿದೆ

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ