AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Acute Hunger: 2023ರಲ್ಲಿ ವಿಶ್ವದಲ್ಲಿ 28 ಕೋಟಿ​ ಜನರು ಹಸಿವಿನಿಂದ ನರಳಿದ್ದಾರೆ: ವಿಶ್ವಸಂಸ್ಥೆ

2023ರಲ್ಲಿ ವಿಶ್ವದಾದ್ಯಂತ ಆಹಾರ ಭದ್ರತೆ ಹದಗೆಟ್ಟಿದ್ದು 28 ಕೋಟಿ ಮಂದಿ ಹಸಿವಿನಿಂದ ಬಳಲುತ್ತಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ. ಕಳೆದ ವಿಶ್ವದಾದ್ಯಂತ ಆಹಾರ ಭದ್ರತೆ ತೀವ್ರ ಹದಗೆಟ್ಟಿತ್ತು, ಗಾಜಾ ಹಾಗೂ ಸುಡಾನ್ ಸಂಘರ್ಷದಿಂದಾಗಿ 282 ಮಿಲಿಯನ್ ಜನರು ಹಸಿವಿನಿಂದ ನರಳಿದ್ದಾರೆ ಎಂದು ವಿಶ್ವಸಂಸ್ಥೆ ಹೇಳಿದೆ. ಸತತ ಐದನೇ ವರ್ಷ 2023ರಲ್ಲಿ ಆಹಾರ ಅಭದ್ರತೆ ಎದುರಿಸುತ್ತಿರುವವರ ಸಂಖ್ಯೆ ಹೆಚ್ಚಳವಾಗಿದೆ, ಜೀವಕ್ಕೆ ಅಪಾಯಕಾರಿ ಪ್ರಮಾಣದಲ್ಲಿ ಆಹಾರ ಅಲಭ್ಯತೆಯನ್ನು ತೀವ್ರ ಅಭದ್ರತೆ ಎಂದು ಪರಿಗಣಿಸಲಾಗಿದೆ.

Acute Hunger: 2023ರಲ್ಲಿ ವಿಶ್ವದಲ್ಲಿ 28 ಕೋಟಿ​ ಜನರು ಹಸಿವಿನಿಂದ ನರಳಿದ್ದಾರೆ: ವಿಶ್ವಸಂಸ್ಥೆ
ನಯನಾ ರಾಜೀವ್
|

Updated on: Apr 25, 2024 | 9:29 AM

Share

ವಿಶ್ವದಾದ್ಯಂತ 2023ರಲ್ಲಿ 28 ಕೋಟಿ ಜನರು ಹಸಿವಿ(Hunger)ನಿಂದ ಬಳಲಿದ್ದಾರೆ ಎಂದು ವಿಶ್ವಸಂಸ್ಥೆ ಹೇಳಿದೆ. ಕಳೆದ ವಿಶ್ವದಾದ್ಯಂತ ಆಹಾರ ಭದ್ರತೆ ತೀವ್ರ ಹದಗೆಟ್ಟಿತ್ತು, ಗಾಜಾ ಹಾಗೂ ಸುಡಾನ್ ಸಂಘರ್ಷದಿಂದಾಗಿ 282 ಮಿಲಿಯನ್ ಜನರು ಹಸಿವಿನಿಂದ ನರಳಿದ್ದಾರೆ ಎಂದು ವಿಶ್ವಸಂಸ್ಥೆ ಹೇಳಿದೆ.

ಸತತ ಐದನೇ ವರ್ಷ 2023ರಲ್ಲಿ ಆಹಾರ ಅಭದ್ರತೆ ಎದುರಿಸುತ್ತಿರುವವರ ಸಂಖ್ಯೆ ಹೆಚ್ಚಳವಾಗಿದೆ, ಜೀವಕ್ಕೆ ಅಪಾಯಕಾರಿ ಪ್ರಮಾಣದಲ್ಲಿ ಆಹಾರ ಅಲಭ್ಯತೆಯನ್ನು ತೀವ್ರ ಅಭದ್ರತೆ ಎಂದು ಪರಿಗಣಿಸಲಾಗಿದೆ. ಎಲ್ ನಿನೊ ಹವಾಮಾನ ವಿದ್ಯಮಾನವು ಪಶ್ಚಿಮ ಮತ್ತು ದಕ್ಷಿಣ ಆಫ್ರಿಕಾದಲ್ಲಿ ತೀವ್ರ ಬರಕ್ಕೆ ಕಾರಣವಾಗಬಹುದು ಎಂದು ಅವರು ಹೇಳಿದರು.

ಗಾಜಾದಲ್ಲಿ 6 ಲಕ್ಷ ಜನರು ಸೇರಿದಂತೆ ಸುಮಾರು 7 ಲಕ್ಷ ಜನರು ಕಳೆದ ವರ್ಷ ತೀವ್ರ ಹಸಿವಿನಿಂದ ಬಳಲಿದ್ದಾರೆ. ಪ್ಯಾಲೆಸ್ತೀನ್ ಪ್ರದೇಶದಲ್ಲಿ ಈ ಸಂಖ್ಯೆ 1.1 ಲಕ್ಷಕ್ಕೇರಿದೆ. ಈ ಜಾಗತಿಕ ವರದಿಯನ್ನು 2016ರಲ್ಲಿ ಆರಂಭಿಸಿದ ಬಳಿಕ ಇದುವರೆಗೆ ಆಹಾರ ಅಭದ್ರತೆ ಎದುರಿಸುತ್ತಿರುವವರ ಸಂಖ್ಯೆ 108 ಮಿಲಿಯನ್​ನಿಂದ 282 ಮಿಲಿಯನ್​ಗೆ ಏರಿಕೆಯಾಗಿದೆ.

ಕಾಂಗೋ ಪ್ರಜಾಸತ್ತಾತ್ಮಕ ಗಣರಾಜ್ಯ ಮತ್ತು ಉಕ್ರೇನ್ ಸೇರಿದಂತೆ 17 ದೇಶಗಳಲ್ಲಿ 2023 ರಲ್ಲಿ ಪರಿಸ್ಥಿತಿ ಸುಧಾರಿಸಿದೆ ಎಂದು ವರದಿ ಹೇಳಿದೆ.

ಮತ್ತಷ್ಟು ಓದಿ: ಆಹಾರ ಭದ್ರತೆ ಸಾಧನೆಗೆ ಆಹಾರ ಭವಿಷ್ಯತ್: ಇಲ್ಲಿದೆ ತಜ್ಞರ ಸಲಹೆ

ಅಫ್ಘಾನಿಸ್ತಾನ, ಡೆಮಾಕ್ರಟಿಕ್ ರಿಪಬ್ಲಿಕ್ ಆಫ್ ಕಾಂಗೋ, ಇಥಿಯೋಪಿಯಾ, ನೈಜೀರಿಯಾ, ಸಿರಿಯಾ ಮತ್ತು ಯೆಮೆನ್‌ನಲ್ಲಿ ದೀರ್ಘಕಾಲದ ಪ್ರಮುಖ ಆಹಾರ ಬಿಕ್ಕಟ್ಟುಗಳು ನಡೆಯುತ್ತಿವೆ.ಜಗತ್ತಿನಲ್ಲಿ ಸಾಕಷ್ಟು ಮಕ್ಕಳು ಅಪೌಷ್ಠಿಕತೆ, ಹಸಿವಿನಿಂದ ಸಾಯುತ್ತಿದ್ದಾರೆ. ಯುದ್ಧ, ಹವಾಮಾನ ಅವ್ಯವಸ್ಥೆ ಮತ್ತು ಜೀವನ ವೆಚ್ಚದ ಬಿಕ್ಕಟ್ಟಿನಿಂದಾಗಿ ಜನರು ತೊಂದರೆ ಅನುಭವಿಸುತ್ತಿದ್ದಾರೆ.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್