AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Russia-Ukraine Crisis ಬುಕಾ ಹತ್ಯೆ: ಯುದ್ಧ ಅಪರಾಧಗಳ ವಿಚಾರಣೆ ಮಾಡಬೇಕೆಂದು ಕರೆ ನೀಡಿದ ಅಮೆರಿಕ ಅಧ್ಯಕ್ಷ ಬೈಡನ್

ಶ್ವೇತಭವನದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಬೈಡನ್ , ರಷ್ಯಾದ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರನ್ನು "ಯುದ್ಧ ಅಪರಾಧಿ" ಎಂದು ಕರೆದಿದ್ದಾರೆ.

Russia-Ukraine Crisis  ಬುಕಾ ಹತ್ಯೆ: ಯುದ್ಧ ಅಪರಾಧಗಳ ವಿಚಾರಣೆ ಮಾಡಬೇಕೆಂದು ಕರೆ ನೀಡಿದ  ಅಮೆರಿಕ ಅಧ್ಯಕ್ಷ ಬೈಡನ್
ಜೋ ಬೈಡನ್
TV9 Web
| Updated By: ರಶ್ಮಿ ಕಲ್ಲಕಟ್ಟ|

Updated on: Apr 04, 2022 | 10:01 PM

Share

ಉಕ್ರೇನ್‌ನ ಬುಕಾದಲ್ಲಿ (Bucha killings) ರಷ್ಯಾದ ಪಡೆ ನಾಗರಿಕರ ಹತ್ಯೆ ಮಾಡಿದ್ದನ್ನು ಅಮೆರಿಕ ಅಧ್ಯಕ್ಷ ಜೋ ಬೈಡೆನ್ (Joe Biden) ಸೋಮವಾರ ಖಂಡಿಸಿದ್ದು, “ಯುದ್ಧ ಅಪರಾಧಗಳ ವಿಚಾರಣೆ” ಗೆ ಕರೆ ನೀಡಿದರು. ಮಾಸ್ಕೋದ ಮೇಲೆ ಹೆಚ್ಚಿನ ನಿರ್ಬಂಧಗಳನ್ನು ವಿಧಿಸಬೇಕು ಎಂದಿದ್ದಾರೆ ಬೈಡನ್. ಶ್ವೇತಭವನದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಬೈಡನ್ , ರಷ್ಯಾದ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ (Vladimir Putin) ಅವರನ್ನು “ಯುದ್ಧ ಅಪರಾಧಿ” ಎಂದು ಕರೆದಿದ್ದಾರೆ. ಉಕ್ರೇನ್​​ನ ಹಲವು ನಗರಗಳಲ್ಲಿ ಸಾಮೂಹಿಕ ಸಮಾಧಿಗಳು ಪತ್ತೆಯಾಗಿವೆ. ಉಕ್ರೇನ್ ಪ್ರಜೆಗಳ ವಿರುದ್ಧ ರಷ್ಯಾ ತೀವ್ರ ಹಿಂಸಾಚಾರ ನರಮೇಧ ನಡೆಸಿದೆ ಎಂದು ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ ದೂರಿದ್ದಾರೆ. ಇದಕ್ಕಿಂತ ಮುನ್ನ ಉಕ್ರೇನಿಯನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ ಬುಕಾ ಪಟ್ಟಣಕ್ಕೆ ಭೇಟಿ ನೀಡಿದರು. ಈ ಪಟ್ಟಣ ರಾಜಧಾನಿ ಕೈವ್‌ನ ಹೊರಭಾಗದಲ್ಲಿದೆ. ಸಾಮೂಹಿಕ ಮರಣದಂಡನೆಗಳನ್ನು ಸೂಚಿಸುವ ಇತರ ಚಿಹ್ನೆಗಳ ಜೊತೆಗೆ ಸಾಮೂಹಿಕ ಸಮಾಧಿಗಳು ಕಂಡುಬಂದ ಪ್ರದೇಶಕ್ಕೂ ಅವರು ಭೇಟಿ ನೀಡಿದರು.  ಬುಕಾದಿಂದ ದೂರದರ್ಶನದ ಭಾಷಣದಲ್ಲಿ ಮಾತನಾಡುತ್ತಾ, “ಯುದ್ಧ ಅಪರಾಧವನ್ನು ಜಗತ್ತು ನರಮೇಧವೆಂದು ಗುರುತಿಸುತ್ತದೆ” ಎಂದು ಝೆಲೆನ್ಸ್ಕಿ ಹೇಳಿದರು.ದೇಶದಲ್ಲಿ ರಷ್ಯಾದ ಪಡೆಗಳು ನಡೆಸಿದ ದೌರ್ಜನ್ಯದ ಪ್ರಮಾಣವನ್ನು ಕೈವ್ ಅರಿತುಕೊಂಡಾಗಿನಿಂದ ರಷ್ಯಾದೊಂದಿಗೆ ಮಾತುಕತೆ ನಡೆಸುವುದು ಉಕ್ರೇನ್‌ಗೆ ಈಗ ಕಷ್ಟಕರವಾಗಿದೆ ಎಂದು ಅವರು ಹೇಳಿದರು.

ಶ್ವೇತಭವನದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ  ಬೈಡೆನ್  ರಷ್ಯಾದ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರನ್ನು “ಯುದ್ಧ ಅಪರಾಧಿ” ಎಂದೂ ಕರೆದರು

ಯುರೋಪಿಯನ್ ಒಕ್ಕೂಟವು “ಈಗ ವಿಮೋಚನೆಗೊಂಡಿರುವ ಹಲವಾರು ಆಕ್ರಮಿತ ಉಕ್ರೇನಿಯನ್ ಪಟ್ಟಣಗಳಲ್ಲಿ ರಷ್ಯಾದ ಸಶಸ್ತ್ರ ಪಡೆಗಳು ಎಸಗಿದ (ಕೊಲೆಗಳನ್ನು) ಪ್ರಬಲವಾಗಿ ಖಂಡಿಸುತ್ತದೆ” ಎಂದು ಯುರೋಪಿಯನ್ ಕೌನ್ಸಿಲ್ ಹೇಳಿಕೆಯಲ್ಲಿ ತಿಳಿಸಿದೆ. ಬುಕಾ ಮತ್ತು ಇತರ ಉಕ್ರೇನಿಯನ್ ಪಟ್ಟಣಗಳಲ್ಲಿನ ಹತ್ಯಾಕಾಂಡಗಳನ್ನು ಯುರೋಪಿಯನ್ ನೆಲದಲ್ಲಿ ಮಾಡಿದ ದೌರ್ಜನ್ಯಗಳ ಪಟ್ಟಿಯಲ್ಲಿರಿಸಲಾಗುತ್ತದೆ ಎಂದು ಅದು ಹೇಳಿದೆ.

ಜರ್ಮನಿಯ ಚಾನ್ಸೆಲರ್ ಓಲಾಫ್ ಸ್ಕೋಲ್ಜ್ ಅವರು ಈ ಬಗ್ಗೆ ಪ್ರತಿಕ್ರಿಯಿಸಿದ್ದು ರಷ್ಯಾದ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಮತ್ತು ಅವರ ಬೆಂಬಲಿಗರು ಬುಕಾದಲ್ಲಿನ ಘಟನೆಗಳ “ಪರಿಣಾಮಗಳನ್ನು ಅನುಭವಿಸುತ್ತಾರೆ” ಎಂದು ಹೇಳಿದರು. ಫೆಬ್ರವರಿ 24 ರಿಂದ ನಡೆಯುತ್ತಿರುವ ಆಕ್ರಮಣಕ್ಕೆ ಯುರೋಪಿಯನ್ ಒಕ್ಕೂಟದ ಪ್ರತಿಕ್ರಿಯೆಯನ್ನು ಮುನ್ನಡೆಸುತ್ತಿರುವ ಫ್ರೆಂಚ್ ಅಧ್ಯಕ್ಷ ಎಮ್ಯಾನುಯೆಲ್ ಮ್ಯಾಕ್ರನ್, ತೈಲ ಮತ್ತು ಕಲ್ಲಿದ್ದಲು ಸೇರಿದಂತೆ ಹೆಚ್ಚಿನ ನಿರ್ಬಂಧಗಳಿಗೆ ಕರೆ ನೀಡಿದರು. ಹತ್ಯೆಗಳನ್ನು ಖಂಡಿಸಿದ ಮ್ಯಾಕ್ರನ್, ರಷ್ಯಾದ ಪಡೆಗಳಿಂದ “ಯುದ್ಧ ಅಪರಾಧಗಳನ್ನು ಸೂಚಿಸುವ ಸ್ಪಷ್ಟ ಸುಳಿವುಗಳು” ಇವೆ ಎಂದು ಹೇಳಿದರು.

ಮಾಸ್ಕೋದ ಮಿಲಿಟರಿ ಆಕ್ರಮಣವನ್ನು ಕೊನೆಗೊಳಿಸಲು ರಷ್ಯಾ ಮತ್ತು ಉಕ್ರೇನ್ ರಾಜತಾಂತ್ರಿಕ ಮಟ್ಟದಲ್ಲಿ ಮಾತುಕತೆ ನಡೆಸುತ್ತಿವೆ. ಇಲ್ಲಿಯವರೆಗೆ ಹಲವು ಸುತ್ತಿನ ಮಾತುಕತೆಗಳು ನಡೆದರೂ ಪ್ರಯೋಜನವಾಗಿಲ್ಲ. ಆದಾಗ್ಯೂ ಇತ್ತೀಚಿನ ಹತ್ಯೆ ಪ್ರಕರಣಗಳಿಂದ ಮಾತುಕತೆಗಳು ಮುಚ್ಚಿಹೋಗುವ ಸಾಧ್ಯತೆಯಿದೆ ಮತ್ತು ಶಾಂತಿ ಒಪ್ಪಂದವು ಹೆಚ್ಚು ವಿಳಂಬವಾಗಬಹುದು.

ಇದನ್ನೂ ಓದಿರಷ್ಯಾ ಸುಪರ್ದಿಯಲ್ಲಿದ್ದ ಉಕ್ರೇನ್​ ನಗರಗಳಲ್ಲಿ ನರಮೇಧದ ಸಾಕ್ಷ್ಯ ಪತ್ತೆ: ಸೇಡು ತೀರಿಸುತ್ತೇನೆಂದು ಶಪಥ ಮಾಡಿದ ಝೆಲೆನ್​ಸ್ಕಿ

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ