AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆಕ್ಸ್​​ಫರ್ಡ್​ ವಿಜ್ಞಾನಿಗಳು ಸಂಶೋಧಿಸಿರುವ ಕೊರೊನಾ ಔಷಧ ಮಾನವ ಬಳಕೆಗೆ ಸಿದ್ಧ!

ಇಂಗ್ಲೆಂಡ್​ನ ರಾಷ್ಟ್ರೀಯ ಆರೋಗ್ಯ ಸೇವಾ ವಿಭಾಗವು ಈಗಾಗಲೇ ಸಾವಿರಾರು ವೈದ್ಯರು ಹಾಗೂ ಸ್ವಯಂಸೇವಕರನ್ನು ನೇಮಕ ಮಾಡಿದೆ. ಈ ಮೂಲಕ ಔಷಧ ದೇಶದ ಪ್ರತಿ ಮೂಲೆಗೂ ತಲುಪುವ ಕೆಲಸ ಮಾಡಲು ಸಿದ್ಧತೆ ಮಾಡಿಕೊಂಡಿದೆ.

ಆಕ್ಸ್​​ಫರ್ಡ್​ ವಿಜ್ಞಾನಿಗಳು ಸಂಶೋಧಿಸಿರುವ ಕೊರೊನಾ ಔಷಧ ಮಾನವ ಬಳಕೆಗೆ ಸಿದ್ಧ!
ಸಾಂದರ್ಭಿಕ ಚಿತ್ರ
ರಾಜೇಶ್ ದುಗ್ಗುಮನೆ
| Edited By: |

Updated on: Dec 30, 2020 | 2:21 PM

Share

ಲಂಡನ್: ಇಡೀ ಮಾನವ ಕುಲವೇ ಈ ಒಂದು ಕ್ಷಣಕ್ಕಾಗಿ ಆತುರ/ಕಾತುರದಿಂದ ಕಾದುಕುಳಿತಿದೆ.. ಏನೆಂದ್ರೆ ಆಕ್ಸ್​​ಫರ್ಡ್ ವಿಶ್ವವಿದ್ಯಾಲಯದ​ ವಿಜ್ಞಾನಿಗಳು ಸಂಶೋಧಿಸಿರುವ ಹಾಗೂ ಅಸ್ಟ್ರಾಜೆನೆಕಾ ಕಂಪನಿ ಉತ್ಪಾದನೆ ಮಾಡಲಿರುವ ಕೊರೊನಾ ಔಷಧವನ್ನು ಮಾನವ ಬಳಕೆಗೆ ಇಂಗ್ಲೆಂಡ್​ನ ಔಷಧ ಮತ್ತು ಆರೋಗ್ಯ ಉತ್ಪನ್ನಗಳ ನಿಯಂತ್ರಣ ಸಂಸ್ಥೆ ಸಮ್ಮತಿಸಿದೆ. ವಿಶ್ವಾದ್ಯಂತ ಕೊರೊನಾ ಎರಡನೇ ಅಲೆ ಭೀತಿ ಶುರುವಾಗುತ್ತಿರುವಾಗಲೇ ಈ ಔಷಧ ಬಳಕೆಗೆ ಸಿಗುತ್ತಿರುವುದು ಜನರಲ್ಲಿನ ಆತಂಕ ದೂರವಾಗಿದೆ.

ಇಂಗ್ಲೆಂಡ್​ನ ರಾಷ್ಟ್ರೀಯ ಆರೋಗ್ಯ ಸೇವಾ ವಿಭಾಗವು ಈಗಾಗಲೇ ಸಾವಿರಾರು ವೈದ್ಯರು ಹಾಗೂ ಸ್ವಯಂಸೇವಕರನ್ನು ಲಸಿಕೆಗಾಗಿ ನೇಮಕ ಮಾಡಿದೆ. ಈ ಮೂಲಕ ಔಷಧವು ದೇಶದ ಪ್ರತಿ ಮೂಲೆಗೂ ತಲುಪುವ ಕೆಲಸ ಮಾಡಲು ಸಿದ್ಧತೆ ಮಾಡಿಕೊಂಡಿದೆ. ಈ ಔಷಧ ಸೀರಮ್ ಇನ್​ಸ್ಟಿಟ್ಯೂಟ್ ಆಫ್ ಇಂಡಿಯಾ ಜೊತೆಗೂ ಒಡಂಬಡಿಕೆ ಮಾಡಿಕೊಂಡಿದೆ. ​

ರೂಪಾಂತರ ಕೊರೊನಾಗೂ ಪರಿಣಾಮಕಾರಿ ಈ ಔಷಧ ಗೇಮ್​ ಚೇಂಜರ್​ ಆಗಲಿದೆ ಎಂದು ಇಂಗ್ಲೆಡ್​ನ ವಿಜ್ಞಾನಿಗಳು ಅಭಿಪ್ರಾಯಪಟ್ಟಿದ್ದಾರೆ. ಏಕೆಂದರೆ, ಈ ಔಷಧ ಪಡೆದುಕೊಂಡ ಕೆಲವೇ ವಾರಗಳಲ್ಲಿ ವ್ಯಕ್ತಿಯಲ್ಲಿನ ರೋಗ ನಿರೋಧಕ ಶಕ್ತಿ ಹೆಚ್ಚಲಿದ್ದು, ಮಾರಕ ಕೊರೊನಾ ವೈರಸ್​ನಿಂದ ರಕ್ಷಣೆ ಮಾಡಲಿದೆ. ಮಾರ್ಚ್​ ಕೊನೆ ವೇಳೆಗೆ 4 ಕೋಟಿ ಕೊರೊನಾ ಡೋಸ್​ ಸಿಗುವ ಸಾಧ್ಯತೆ ಇದೆ.

ಈಗಾಗಲೇ ಕೊರೊನಾ ವೈರಸ್​ ರೂಪಾಂತರಗೊಂಡಿರುವ ವಿಚಾರ ಸಾಕಷ್ಟು ಆತಂಕ ಸೃಷ್ಟಿಸಿದೆ. ಈ ವೈರಸ್​ ಭಾರತಕ್ಕೂ ಕಾಲಿಟ್ಟಿದೆ. ಈಗ ಸಿದ್ಧಪಡಿಸಿರುವ ಔಷಧ ರೂಪಾಂತರಗೊಂಡಿರುವ ಕೊರೊನಾಗೂ ಪರಿಣಾಮಕಾರಿಯಾಗಲಿದೆ ಎಂದು ವೈದ್ಯರು ತಿಳಿಸಿದ್ದಾರೆ.

ಮತ್ತೆ ಶುರುವಾಯ್ತು ಲಾಕ್​ಡೌನ್​: ರೂಪಾಂತರಿ ಕೊರೊನಾ ತಡೆಯಲು ಲಾಕ್​ಡೌನ್ ಘೋಷಿಸಿದ ಮಹಾರಾಷ್ಟ್ರ ಸರ್ಕಾರ

Follow Us
ಬಿರು ಬೇಸಿಗೆಯಲ್ಲೂ ಆಲಿಕಲ್ಲು ಮಳೆ: ಧಾರವಾಡ ಮಂದಿಗೆ ತಂಪೆರೆದ ವರುಣ
ಬಿರು ಬೇಸಿಗೆಯಲ್ಲೂ ಆಲಿಕಲ್ಲು ಮಳೆ: ಧಾರವಾಡ ಮಂದಿಗೆ ತಂಪೆರೆದ ವರುಣ
ನೆಲಮಂಗಲದಲ್ಲಿ 6 ನವಿಲು ಸಾವು: ವಿಷ ಪ್ರಾಶನಮಾಡಿ ಕೊಂದಿರುವ ಶಂಕೆ
ನೆಲಮಂಗಲದಲ್ಲಿ 6 ನವಿಲು ಸಾವು: ವಿಷ ಪ್ರಾಶನಮಾಡಿ ಕೊಂದಿರುವ ಶಂಕೆ
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಬಿಹಾರದ ಸಿಎಂ​ ಬರುವ ಮುನ್ನ ಮೈದಾನಕ್ಕೆ ನುಗ್ಗಿದ ಗೂಳಿ; ಓಡಿದ ಪೊಲೀಸರು
ಬಿಹಾರದ ಸಿಎಂ​ ಬರುವ ಮುನ್ನ ಮೈದಾನಕ್ಕೆ ನುಗ್ಗಿದ ಗೂಳಿ; ಓಡಿದ ಪೊಲೀಸರು
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ
ತಂದೆಯ ಅಂತ್ಯಸಂಸ್ಕಾರ ನೆರವೇರಿಸಿ ಲಿಂಗಸಮಾನತೆಯ ಸಂದೇಶ ಸಾರಿದ ಸಹೋದರಿಯರು
ತಂದೆಯ ಅಂತ್ಯಸಂಸ್ಕಾರ ನೆರವೇರಿಸಿ ಲಿಂಗಸಮಾನತೆಯ ಸಂದೇಶ ಸಾರಿದ ಸಹೋದರಿಯರು
ಮನೆಯ ಅಂಗಳದಲ್ಲಿ ಮಲಗಿದ್ದ ವೃದ್ಧೆಗೆ ಕಡಿದೇ ಬಿಡ್ತು ಹಾವು!
ಮನೆಯ ಅಂಗಳದಲ್ಲಿ ಮಲಗಿದ್ದ ವೃದ್ಧೆಗೆ ಕಡಿದೇ ಬಿಡ್ತು ಹಾವು!
ಗ್ಯಾಸ್ ​ಇಲ್ಲದಿದ್ರೂ ಚಾಮುಂಡಿ ಬೆಟ್ಟಕ್ಕೆ ಬರುವ ಭಕ್ತರಿಗೆ ಪ್ರಸಾದ ಲಭ್ಯ!
ಗ್ಯಾಸ್ ​ಇಲ್ಲದಿದ್ರೂ ಚಾಮುಂಡಿ ಬೆಟ್ಟಕ್ಕೆ ಬರುವ ಭಕ್ತರಿಗೆ ಪ್ರಸಾದ ಲಭ್ಯ!