AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆಕ್ಸ್​​ಫರ್ಡ್​ ವಿಜ್ಞಾನಿಗಳು ಸಂಶೋಧಿಸಿರುವ ಕೊರೊನಾ ಔಷಧ ಮಾನವ ಬಳಕೆಗೆ ಸಿದ್ಧ!

ಇಂಗ್ಲೆಂಡ್​ನ ರಾಷ್ಟ್ರೀಯ ಆರೋಗ್ಯ ಸೇವಾ ವಿಭಾಗವು ಈಗಾಗಲೇ ಸಾವಿರಾರು ವೈದ್ಯರು ಹಾಗೂ ಸ್ವಯಂಸೇವಕರನ್ನು ನೇಮಕ ಮಾಡಿದೆ. ಈ ಮೂಲಕ ಔಷಧ ದೇಶದ ಪ್ರತಿ ಮೂಲೆಗೂ ತಲುಪುವ ಕೆಲಸ ಮಾಡಲು ಸಿದ್ಧತೆ ಮಾಡಿಕೊಂಡಿದೆ.

ಆಕ್ಸ್​​ಫರ್ಡ್​ ವಿಜ್ಞಾನಿಗಳು ಸಂಶೋಧಿಸಿರುವ ಕೊರೊನಾ ಔಷಧ ಮಾನವ ಬಳಕೆಗೆ ಸಿದ್ಧ!
ಸಾಂದರ್ಭಿಕ ಚಿತ್ರ
ರಾಜೇಶ್ ದುಗ್ಗುಮನೆ
| Edited By: ಸಾಧು ಶ್ರೀನಾಥ್​|

Updated on: Dec 30, 2020 | 2:21 PM

Share

ಲಂಡನ್: ಇಡೀ ಮಾನವ ಕುಲವೇ ಈ ಒಂದು ಕ್ಷಣಕ್ಕಾಗಿ ಆತುರ/ಕಾತುರದಿಂದ ಕಾದುಕುಳಿತಿದೆ.. ಏನೆಂದ್ರೆ ಆಕ್ಸ್​​ಫರ್ಡ್ ವಿಶ್ವವಿದ್ಯಾಲಯದ​ ವಿಜ್ಞಾನಿಗಳು ಸಂಶೋಧಿಸಿರುವ ಹಾಗೂ ಅಸ್ಟ್ರಾಜೆನೆಕಾ ಕಂಪನಿ ಉತ್ಪಾದನೆ ಮಾಡಲಿರುವ ಕೊರೊನಾ ಔಷಧವನ್ನು ಮಾನವ ಬಳಕೆಗೆ ಇಂಗ್ಲೆಂಡ್​ನ ಔಷಧ ಮತ್ತು ಆರೋಗ್ಯ ಉತ್ಪನ್ನಗಳ ನಿಯಂತ್ರಣ ಸಂಸ್ಥೆ ಸಮ್ಮತಿಸಿದೆ. ವಿಶ್ವಾದ್ಯಂತ ಕೊರೊನಾ ಎರಡನೇ ಅಲೆ ಭೀತಿ ಶುರುವಾಗುತ್ತಿರುವಾಗಲೇ ಈ ಔಷಧ ಬಳಕೆಗೆ ಸಿಗುತ್ತಿರುವುದು ಜನರಲ್ಲಿನ ಆತಂಕ ದೂರವಾಗಿದೆ.

ಇಂಗ್ಲೆಂಡ್​ನ ರಾಷ್ಟ್ರೀಯ ಆರೋಗ್ಯ ಸೇವಾ ವಿಭಾಗವು ಈಗಾಗಲೇ ಸಾವಿರಾರು ವೈದ್ಯರು ಹಾಗೂ ಸ್ವಯಂಸೇವಕರನ್ನು ಲಸಿಕೆಗಾಗಿ ನೇಮಕ ಮಾಡಿದೆ. ಈ ಮೂಲಕ ಔಷಧವು ದೇಶದ ಪ್ರತಿ ಮೂಲೆಗೂ ತಲುಪುವ ಕೆಲಸ ಮಾಡಲು ಸಿದ್ಧತೆ ಮಾಡಿಕೊಂಡಿದೆ. ಈ ಔಷಧ ಸೀರಮ್ ಇನ್​ಸ್ಟಿಟ್ಯೂಟ್ ಆಫ್ ಇಂಡಿಯಾ ಜೊತೆಗೂ ಒಡಂಬಡಿಕೆ ಮಾಡಿಕೊಂಡಿದೆ. ​

ರೂಪಾಂತರ ಕೊರೊನಾಗೂ ಪರಿಣಾಮಕಾರಿ ಈ ಔಷಧ ಗೇಮ್​ ಚೇಂಜರ್​ ಆಗಲಿದೆ ಎಂದು ಇಂಗ್ಲೆಡ್​ನ ವಿಜ್ಞಾನಿಗಳು ಅಭಿಪ್ರಾಯಪಟ್ಟಿದ್ದಾರೆ. ಏಕೆಂದರೆ, ಈ ಔಷಧ ಪಡೆದುಕೊಂಡ ಕೆಲವೇ ವಾರಗಳಲ್ಲಿ ವ್ಯಕ್ತಿಯಲ್ಲಿನ ರೋಗ ನಿರೋಧಕ ಶಕ್ತಿ ಹೆಚ್ಚಲಿದ್ದು, ಮಾರಕ ಕೊರೊನಾ ವೈರಸ್​ನಿಂದ ರಕ್ಷಣೆ ಮಾಡಲಿದೆ. ಮಾರ್ಚ್​ ಕೊನೆ ವೇಳೆಗೆ 4 ಕೋಟಿ ಕೊರೊನಾ ಡೋಸ್​ ಸಿಗುವ ಸಾಧ್ಯತೆ ಇದೆ.

ಈಗಾಗಲೇ ಕೊರೊನಾ ವೈರಸ್​ ರೂಪಾಂತರಗೊಂಡಿರುವ ವಿಚಾರ ಸಾಕಷ್ಟು ಆತಂಕ ಸೃಷ್ಟಿಸಿದೆ. ಈ ವೈರಸ್​ ಭಾರತಕ್ಕೂ ಕಾಲಿಟ್ಟಿದೆ. ಈಗ ಸಿದ್ಧಪಡಿಸಿರುವ ಔಷಧ ರೂಪಾಂತರಗೊಂಡಿರುವ ಕೊರೊನಾಗೂ ಪರಿಣಾಮಕಾರಿಯಾಗಲಿದೆ ಎಂದು ವೈದ್ಯರು ತಿಳಿಸಿದ್ದಾರೆ.

ಮತ್ತೆ ಶುರುವಾಯ್ತು ಲಾಕ್​ಡೌನ್​: ರೂಪಾಂತರಿ ಕೊರೊನಾ ತಡೆಯಲು ಲಾಕ್​ಡೌನ್ ಘೋಷಿಸಿದ ಮಹಾರಾಷ್ಟ್ರ ಸರ್ಕಾರ

Follow Us
ಇರಾನ್ ಜಲಾಂತರ್ಗಾಮಿ ಕೇಂದ್ರದ ಮೇಲೆ ಅಮೆರಿಕದಿಂದ ಕಡಲ ಡ್ರೋನ್ ದಾಳಿ
ಇರಾನ್ ಜಲಾಂತರ್ಗಾಮಿ ಕೇಂದ್ರದ ಮೇಲೆ ಅಮೆರಿಕದಿಂದ ಕಡಲ ಡ್ರೋನ್ ದಾಳಿ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು