AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಾಕಿಸ್ತಾನ: 28 ವರ್ಷಗಳ ಹಿಂದೆ ಕಾಣೆಯಾಗಿದ್ದ ವ್ಯಕ್ತಿಯ ಮೃತದೇಹ ಹಿಮನದಿಯಲ್ಲಿ ಪತ್ತೆ

ಕಳೆದ 28 ವರ್ಷಗಳ ಹಿಂದೆ ಕಾಣೆಯಾಗಿದ್ದ ವ್ಯಕ್ತಿಯ ಶವ ಹಿಮನದಿಯಲ್ಲಿ ಪತ್ತೆಯಾಗಿದೆ. ಹಿಮನದಿಯಲ್ಲಿ ಆಶ್ಚರ್ಯಕರವಾಗಿ ಚೆನ್ನಾಗಿ ಸಂರಕ್ಷಿಸಲ್ಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದೆ. ಬಿಬಿಸಿ ವರದಿ ಮಾಡಿದಂತೆ, ಹಿಂಸಾತ್ಮಕ ಸಂಘರ್ಷದಿಂದ ತಪ್ಪಿಸಿಕೊಳ್ಳಲು ನಾಸಿರುದ್ದೀನ್ ತನ್ನ ಕುಟುಂಬದೊಂದಿಗೆ ಪ್ರಯಾಣಿಸುತ್ತಿದ್ದಾಗ ಕಾಣೆಯಾಗಿದ್ದರು. ಜುಲೈ 31 ರಂದು, ಖೈಬರ್ ಪಖ್ತುನ್ಖ್ವಾ ಪ್ರಾಂತ್ಯದ ಕೊಹಿಸ್ತಾನ್ ಪ್ರದೇಶದ ನಿವಾಸಿಗಳು ಲೇಡಿ ಮೆಡೋಸ್ ಹಿಮನದಿಯಲ್ಲಿ ಅವರ ಅವಶೇಷಗಳು ಸಿಕ್ಕಿವೆ.

ಪಾಕಿಸ್ತಾನ: 28 ವರ್ಷಗಳ ಹಿಂದೆ ಕಾಣೆಯಾಗಿದ್ದ ವ್ಯಕ್ತಿಯ ಮೃತದೇಹ ಹಿಮನದಿಯಲ್ಲಿ ಪತ್ತೆ
ಮೃತ ವ್ಯಕ್ತಿಯ ಐಡಿ
ನಯನಾ ರಾಜೀವ್
|

Updated on:Aug 08, 2025 | 9:52 AM

Share

ಇಸ್ಲಾಮಾಬಾದ್, ಆಗಸ್ಟ್​ 08: ಕೆಲವೊಂದು ನಂಬಲು ಅಸಾಧ್ಯವಾಗಿದ್ದರೂ ನಂಬಲೇಬೇಕಾಗುತ್ತದೆ. ಜಗತ್ತಿನಲ್ಲಿ ಅಂತಹ ಹಲವು ವಿಚಾರಗಳಿವೆ. ಕಳೆದ 28 ವರ್ಷಗಳ ಹಿಂದೆ ಕಾಣೆಯಾಗಿದ್ದ ವ್ಯಕ್ತಿಯ ಶವ ಹಿಮನದಿಯಲ್ಲಿ ಪತ್ತೆಯಾಗಿದೆ. ಹಿಮನದಿಯಲ್ಲಿ ಆಶ್ಚರ್ಯಕರವಾಗಿ ಚೆನ್ನಾಗಿ ಸಂರಕ್ಷಿಸಲ್ಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದೆ.

ಬಿಬಿಸಿ ವರದಿ ಮಾಡಿದಂತೆ, ಹಿಂಸಾತ್ಮಕ ಸಂಘರ್ಷದಿಂದ ತಪ್ಪಿಸಿಕೊಳ್ಳಲು ನಾಸಿರುದ್ದೀನ್ ತನ್ನ ಕುಟುಂಬದೊಂದಿಗೆ ಪ್ರಯಾಣಿಸುತ್ತಿದ್ದಾಗ ಕಾಣೆಯಾಗಿದ್ದರು. ಜುಲೈ 31 ರಂದು, ಖೈಬರ್ ಪಖ್ತುನ್ಖ್ವಾ ಪ್ರಾಂತ್ಯದ ಕೊಹಿಸ್ತಾನ್ ಪ್ರದೇಶದ ನಿವಾಸಿಗಳು ಲೇಡಿ ಮೆಡೋಸ್ ಹಿಮನದಿಯಲ್ಲಿ ಅವರ ಅವಶೇಷಗಳು ಸಿಕ್ಕಿವೆ. ಶವದೊಂದಿಗೆ ದೊರೆತ ಗುರುತಿನ ಚೀಟಿಯು ಅದು ನಸೀರುದ್ದೀನ್‌ಗೆ ಸೇರಿದ್ದು ಎಂದು ದೃಢಪಡಿಸಿದೆ.

ನಾನು ನೋಡಿದ್ದು, ನಂಬಲಸಾಧ್ಯವಾಗಿತ್ತು, ದೇಹವು ಹಾಗೇ ಇತ್ತು, ಬಟ್ಟೆಗಳು ಕೂಡ ಹರಿದಿರಲಿಲ್ಲ ಎಂದು ಸ್ಥಳೀಯರಾದ ಒಮರ್ ಖಾನ್ ತಿಳಿಸಿದ್ದಾರೆ.ಪೊಲೀಸರು ಗುರುತನ್ನು ದೃಢಪಡಿಸಿದ ಬಳಿಕ ನಿವಾಸಿಗಳು ನಾಸಿರುದ್ದೀನ್ ಕಣ್ಮರೆಯಾಗಿದ್ದ ಕುರಿತು ಹೆಚ್ಚಿನ ವಿವರಗಳನ್ನು ಹಂಚಿಕೊಂಡರು. ಪೊಲೀಸರ ಪ್ರಕಾರ, ಜೂನ್ 1997ರಲ್ಲಿ ಹಿಮಬಿರುಗಾಳಿ ಸಮಯದಲ್ಲಿ ನಾಸೀರುದ್ದೀನ್ ಹಿಮನದಿಯ ಬಿರುಕಿನಲ್ಲಿ ಬಿದ್ದು ಕಾಣೆಯಾದರು.

ಮತ್ತಷ್ಟು ಓದಿ: ಗೃಹ ಸಚಿವರ ಊರಲ್ಲೇ ರಸ್ತೆಯುದ್ದಕ್ಕೂ ಶವದ ತುಂಡುಗಳು ಪತ್ತೆ, ಬೆಚ್ಚಿಬಿದ್ದ ಗ್ರಾಮಸ್ಥರು!

1997ರಲ್ಲಿ ನಾಸೀರುದ್ದೀನ್ ತನ್ನ ಸಹೋದರ ಕತಿರುದ್ದೀನ್ ಜತೆ ಕುದುರೆ ಮೇಲೆ ಪ್ರಯಾಣಿಸುತ್ತಿದ್ದಾಗ ಕಂದಕಕ್ಕೆ ಬಿದ್ದಿದ್ದರು. ಗ್ರಾಮದ ವಿವಾದಿಂದ ತಪ್ಪಿಸಿಕೊಳ್ಳಲು ಇಬ್ಬರೂ ಪರ್ವತ ಏರಿದ್ದರು. ಕತಿರುದ್ದೀನ್ ಬದುಕುಳಿದರೂ, ನಾಸಿರುದ್ದೀನ್ ಉಳಿಯಲಿಲ್ಲ. ತಮ್ಮ ಕುಟುಂಬವು ಇಷ್ಟು ವರ್ಷಗಳಲ್ಲಿ ಅವರನ್ನು ಪತ್ತೆ ಹಚ್ಚಲು ಸಾಕಷ್ಟು ಪ್ರಯತ್ನ ಮಾಡಿತ್ತು.

ಅವರ ದೇಹ ಎಲ್ಲಾದರೂ ಸಿಗಬಹುದೇ ಎಂದು ಕುಟುಂಬದ ಕೆಲವು ಸದಸ್ಯರು ಹಿಮನದಿ ಬಳಿ ತೆರಳಿದ್ದರು. ಆದರೆ ಎಲ್ಲೂ ಕಾಣದ ಕಾರಣ ಪ್ರಯತ್ನವನ್ನೇ ಬಿಟ್ಟಿದ್ದರು. ಪತ್ತೆಯಾದ ನಂತರ ಕುಟುಂಬವು ತಮ್ಮ ಕೃತಜ್ಞತೆಯನ್ನು ವ್ಯಕ್ತಪಡಿಸಿತು, ಅಂತಿಮವಾಗಿ ನಾಸಿರುದ್ದೀನ್ ದೇಹ ಸಿಕ್ಕಿರುವುದು ನೆಮ್ಮದಿಯ ಭಾವವನ್ನುಂಟು ಮಾಡಿದೆ ಎಂದು ಅವರ ಸಂಬಂಧಿ ಹೇಳಿದ್ದಾರೆ.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 9:51 am, Fri, 8 August 25

Follow Us
ಹೊಸ ರಾಜಕೀಯ ಪಕ್ಷದ ಬಗ್ಗೆ ವಿವರ ಹಂಚಿಕೊಂಡ ನಟ ಚೇತನ್ ಅಹಿಂಸ
ಹೊಸ ರಾಜಕೀಯ ಪಕ್ಷದ ಬಗ್ಗೆ ವಿವರ ಹಂಚಿಕೊಂಡ ನಟ ಚೇತನ್ ಅಹಿಂಸ
ಆರ್​ಎಸ್​ಎಸ್​ನವರು ಪುಕ್ಕಲರು, ಧೈರ್ಯವೇ ಇಲ್ಲ ಎಂದ ಹರಿಪ್ರಸಾದ್!
ಆರ್​ಎಸ್​ಎಸ್​ನವರು ಪುಕ್ಕಲರು, ಧೈರ್ಯವೇ ಇಲ್ಲ ಎಂದ ಹರಿಪ್ರಸಾದ್!
ಇನ್ಮುಂದೆ ನನ್ನನ್ನು ಕೊನೆಯ ಭಾಷಣಕಾರನನ್ನಾಗಿ ಮಾಡಬೇಡಿ ಎಂದ ಸಿದ್ದರಾಮಯ್ಯ
ಇನ್ಮುಂದೆ ನನ್ನನ್ನು ಕೊನೆಯ ಭಾಷಣಕಾರನನ್ನಾಗಿ ಮಾಡಬೇಡಿ ಎಂದ ಸಿದ್ದರಾಮಯ್ಯ
ನೀಟ್ ಪರೀಕ್ಷೆಗೆ ಬಂದ ವಿದ್ಯಾರ್ಥಿಗಳ ಚೈನ್, ಮೂಗುತಿಗೆ ಕತ್ತರಿ
ನೀಟ್ ಪರೀಕ್ಷೆಗೆ ಬಂದ ವಿದ್ಯಾರ್ಥಿಗಳ ಚೈನ್, ಮೂಗುತಿಗೆ ಕತ್ತರಿ
ಅಖಂಡ ಶ್ರೀನಿವಾಸಮೂರ್ತಿ ಘರ್ ವಾಪ್ಸಿ: ಯಾವ ಕ್ಷೇತ್ರದ ಟಿಕೆಟ್ ಆಕಾಂಕ್ಷಿ?
ಅಖಂಡ ಶ್ರೀನಿವಾಸಮೂರ್ತಿ ಘರ್ ವಾಪ್ಸಿ: ಯಾವ ಕ್ಷೇತ್ರದ ಟಿಕೆಟ್ ಆಕಾಂಕ್ಷಿ?
ಹರಿಪ್ರಸಾದ್​​​ಗೆ ಖರ್ಗೆ ಕೊಟ್ಟ ಸಲಹೆಗಳೇನು?
ಹರಿಪ್ರಸಾದ್​​​ಗೆ ಖರ್ಗೆ ಕೊಟ್ಟ ಸಲಹೆಗಳೇನು?
ಗಿಲ್ಲಿ ನಟನ ಮೊದಲ ಸಿನಿಮಾಕ್ಕೆ ಕಾವೂನೇ ನಾಯಕಿ: ಗಿಲ್ಲಿ ಹೇಳಿದ್ದೇನು?
ಗಿಲ್ಲಿ ನಟನ ಮೊದಲ ಸಿನಿಮಾಕ್ಕೆ ಕಾವೂನೇ ನಾಯಕಿ: ಗಿಲ್ಲಿ ಹೇಳಿದ್ದೇನು?
ಕರ್ನಾಟಕ ಕಾಂಗ್ರೆಸ್ ಅಧ್ಯಕ್ಷರಾಗಿ ಬಿಕೆ ಹರಿಪ್ರಸಾದ್​​​ಗೆ ಪಟ್ಟಾಭಿಷೇಕ
ಕರ್ನಾಟಕ ಕಾಂಗ್ರೆಸ್ ಅಧ್ಯಕ್ಷರಾಗಿ ಬಿಕೆ ಹರಿಪ್ರಸಾದ್​​​ಗೆ ಪಟ್ಟಾಭಿಷೇಕ
ಈ ಜನ್ಮದಲ್ಲಿ ಚುನಾವಣೆಗೆ ನಿಲ್ಲಬಾರದು ಹಾಗೇ ಮಾಡ್ತೀವಿ:ಅಶೋಕ್
ಈ ಜನ್ಮದಲ್ಲಿ ಚುನಾವಣೆಗೆ ನಿಲ್ಲಬಾರದು ಹಾಗೇ ಮಾಡ್ತೀವಿ:ಅಶೋಕ್
ಹುಲಿಗೆಮ್ಮ ದೇವಾಲಯದ ಹುಂಡಿ ಎಣಿಕೆ: 1 ಕೋಟಿಗೂ ಅಧಿಕ ದೇಣಿಗೆ ಸಂಗ್ರಹ!
ಹುಲಿಗೆಮ್ಮ ದೇವಾಲಯದ ಹುಂಡಿ ಎಣಿಕೆ: 1 ಕೋಟಿಗೂ ಅಧಿಕ ದೇಣಿಗೆ ಸಂಗ್ರಹ!