ಪಾಕಿಸ್ತಾನ: 28 ವರ್ಷಗಳ ಹಿಂದೆ ಕಾಣೆಯಾಗಿದ್ದ ವ್ಯಕ್ತಿಯ ಮೃತದೇಹ ಹಿಮನದಿಯಲ್ಲಿ ಪತ್ತೆ

ಕಳೆದ 28 ವರ್ಷಗಳ ಹಿಂದೆ ಕಾಣೆಯಾಗಿದ್ದ ವ್ಯಕ್ತಿಯ ಶವ ಹಿಮನದಿಯಲ್ಲಿ ಪತ್ತೆಯಾಗಿದೆ. ಹಿಮನದಿಯಲ್ಲಿ ಆಶ್ಚರ್ಯಕರವಾಗಿ ಚೆನ್ನಾಗಿ ಸಂರಕ್ಷಿಸಲ್ಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದೆ. ಬಿಬಿಸಿ ವರದಿ ಮಾಡಿದಂತೆ, ಹಿಂಸಾತ್ಮಕ ಸಂಘರ್ಷದಿಂದ ತಪ್ಪಿಸಿಕೊಳ್ಳಲು ನಾಸಿರುದ್ದೀನ್ ತನ್ನ ಕುಟುಂಬದೊಂದಿಗೆ ಪ್ರಯಾಣಿಸುತ್ತಿದ್ದಾಗ ಕಾಣೆಯಾಗಿದ್ದರು. ಜುಲೈ 31 ರಂದು, ಖೈಬರ್ ಪಖ್ತುನ್ಖ್ವಾ ಪ್ರಾಂತ್ಯದ ಕೊಹಿಸ್ತಾನ್ ಪ್ರದೇಶದ ನಿವಾಸಿಗಳು ಲೇಡಿ ಮೆಡೋಸ್ ಹಿಮನದಿಯಲ್ಲಿ ಅವರ ಅವಶೇಷಗಳು ಸಿಕ್ಕಿವೆ.

ಪಾಕಿಸ್ತಾನ: 28 ವರ್ಷಗಳ ಹಿಂದೆ ಕಾಣೆಯಾಗಿದ್ದ ವ್ಯಕ್ತಿಯ ಮೃತದೇಹ ಹಿಮನದಿಯಲ್ಲಿ ಪತ್ತೆ
ಮೃತ ವ್ಯಕ್ತಿಯ ಐಡಿ

Updated on: Aug 08, 2025 | 9:52 AM

ಇಸ್ಲಾಮಾಬಾದ್, ಆಗಸ್ಟ್​ 08: ಕೆಲವೊಂದು ನಂಬಲು ಅಸಾಧ್ಯವಾಗಿದ್ದರೂ ನಂಬಲೇಬೇಕಾಗುತ್ತದೆ. ಜಗತ್ತಿನಲ್ಲಿ ಅಂತಹ ಹಲವು ವಿಚಾರಗಳಿವೆ. ಕಳೆದ 28 ವರ್ಷಗಳ ಹಿಂದೆ ಕಾಣೆಯಾಗಿದ್ದ ವ್ಯಕ್ತಿಯ ಶವ ಹಿಮನದಿಯಲ್ಲಿ ಪತ್ತೆಯಾಗಿದೆ. ಹಿಮನದಿಯಲ್ಲಿ ಆಶ್ಚರ್ಯಕರವಾಗಿ ಚೆನ್ನಾಗಿ ಸಂರಕ್ಷಿಸಲ್ಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದೆ.

ಬಿಬಿಸಿ ವರದಿ ಮಾಡಿದಂತೆ, ಹಿಂಸಾತ್ಮಕ ಸಂಘರ್ಷದಿಂದ ತಪ್ಪಿಸಿಕೊಳ್ಳಲು ನಾಸಿರುದ್ದೀನ್ ತನ್ನ ಕುಟುಂಬದೊಂದಿಗೆ ಪ್ರಯಾಣಿಸುತ್ತಿದ್ದಾಗ ಕಾಣೆಯಾಗಿದ್ದರು. ಜುಲೈ 31 ರಂದು, ಖೈಬರ್ ಪಖ್ತುನ್ಖ್ವಾ ಪ್ರಾಂತ್ಯದ ಕೊಹಿಸ್ತಾನ್ ಪ್ರದೇಶದ ನಿವಾಸಿಗಳು ಲೇಡಿ ಮೆಡೋಸ್ ಹಿಮನದಿಯಲ್ಲಿ ಅವರ ಅವಶೇಷಗಳು ಸಿಕ್ಕಿವೆ. ಶವದೊಂದಿಗೆ ದೊರೆತ ಗುರುತಿನ ಚೀಟಿಯು ಅದು ನಸೀರುದ್ದೀನ್‌ಗೆ ಸೇರಿದ್ದು ಎಂದು ದೃಢಪಡಿಸಿದೆ.

ನಾನು ನೋಡಿದ್ದು, ನಂಬಲಸಾಧ್ಯವಾಗಿತ್ತು, ದೇಹವು ಹಾಗೇ ಇತ್ತು, ಬಟ್ಟೆಗಳು ಕೂಡ ಹರಿದಿರಲಿಲ್ಲ ಎಂದು ಸ್ಥಳೀಯರಾದ ಒಮರ್ ಖಾನ್ ತಿಳಿಸಿದ್ದಾರೆ.ಪೊಲೀಸರು ಗುರುತನ್ನು ದೃಢಪಡಿಸಿದ ಬಳಿಕ ನಿವಾಸಿಗಳು ನಾಸಿರುದ್ದೀನ್ ಕಣ್ಮರೆಯಾಗಿದ್ದ ಕುರಿತು ಹೆಚ್ಚಿನ ವಿವರಗಳನ್ನು ಹಂಚಿಕೊಂಡರು. ಪೊಲೀಸರ ಪ್ರಕಾರ, ಜೂನ್ 1997ರಲ್ಲಿ ಹಿಮಬಿರುಗಾಳಿ ಸಮಯದಲ್ಲಿ ನಾಸೀರುದ್ದೀನ್ ಹಿಮನದಿಯ ಬಿರುಕಿನಲ್ಲಿ ಬಿದ್ದು ಕಾಣೆಯಾದರು.

ಮತ್ತಷ್ಟು ಓದಿ: ಗೃಹ ಸಚಿವರ ಊರಲ್ಲೇ ರಸ್ತೆಯುದ್ದಕ್ಕೂ ಶವದ ತುಂಡುಗಳು ಪತ್ತೆ, ಬೆಚ್ಚಿಬಿದ್ದ ಗ್ರಾಮಸ್ಥರು!

1997ರಲ್ಲಿ ನಾಸೀರುದ್ದೀನ್ ತನ್ನ ಸಹೋದರ ಕತಿರುದ್ದೀನ್ ಜತೆ ಕುದುರೆ ಮೇಲೆ ಪ್ರಯಾಣಿಸುತ್ತಿದ್ದಾಗ ಕಂದಕಕ್ಕೆ ಬಿದ್ದಿದ್ದರು. ಗ್ರಾಮದ ವಿವಾದಿಂದ ತಪ್ಪಿಸಿಕೊಳ್ಳಲು ಇಬ್ಬರೂ ಪರ್ವತ ಏರಿದ್ದರು. ಕತಿರುದ್ದೀನ್ ಬದುಕುಳಿದರೂ, ನಾಸಿರುದ್ದೀನ್ ಉಳಿಯಲಿಲ್ಲ. ತಮ್ಮ ಕುಟುಂಬವು ಇಷ್ಟು ವರ್ಷಗಳಲ್ಲಿ ಅವರನ್ನು ಪತ್ತೆ ಹಚ್ಚಲು ಸಾಕಷ್ಟು ಪ್ರಯತ್ನ ಮಾಡಿತ್ತು.

ಅವರ ದೇಹ ಎಲ್ಲಾದರೂ ಸಿಗಬಹುದೇ ಎಂದು ಕುಟುಂಬದ ಕೆಲವು ಸದಸ್ಯರು ಹಿಮನದಿ ಬಳಿ ತೆರಳಿದ್ದರು. ಆದರೆ ಎಲ್ಲೂ ಕಾಣದ ಕಾರಣ ಪ್ರಯತ್ನವನ್ನೇ ಬಿಟ್ಟಿದ್ದರು. ಪತ್ತೆಯಾದ ನಂತರ ಕುಟುಂಬವು ತಮ್ಮ ಕೃತಜ್ಞತೆಯನ್ನು ವ್ಯಕ್ತಪಡಿಸಿತು, ಅಂತಿಮವಾಗಿ ನಾಸಿರುದ್ದೀನ್ ದೇಹ ಸಿಕ್ಕಿರುವುದು ನೆಮ್ಮದಿಯ ಭಾವವನ್ನುಂಟು ಮಾಡಿದೆ ಎಂದು ಅವರ ಸಂಬಂಧಿ ಹೇಳಿದ್ದಾರೆ.

 

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 9:51 am, Fri, 8 August 25

Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
Follow Us