AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿರಿಯಾದಲ್ಲಿ ಯುಎಸ್​ ಸೇನೆಯಿಂದ ಡ್ರೋಣ್​ ದಾಳಿ; ಅಲ್​ ಖೈದಾ ಹಿರಿಯ ನಾಯಕ ಅಬ್ದುಲ್​ ಹಮೀದ್​ ಹತ್ಯೆ

ಅಲ್​-ಖೈದಾ ಉಗ್ರಸಂಘಟನೆ ಈ ಸಿರಿಯಾವನ್ನು ತಮ್ಮ ಸುರಕ್ಷಿತ ತಾಣವನ್ನಾಗಿ ರೂಪಿಸಿಕೊಳ್ಳಲು ಸಿದ್ಧತೆ ನಡೆಸುತ್ತಿದೆ. ಅಮೆರಿಕ ಮತ್ತು ನಮ್ಮ ಮೈತ್ರಿ ರಾಷ್ಟ್ರಗಳ ಜನರಿಗೆ ಬೆದರಿಕೆ ಒಡ್ಡುವುದನ್ನು ಮುಂದುವರಿಸಿದೆ ಎಂದು ಯುಎಸ್​ ಸೇನಾ ಮೇಜರ್​ ಜಾನ್ ರಿಗ್ಸ್ಬೀ ತಿಳಿಸಿದ್ದಾರೆ.

ಸಿರಿಯಾದಲ್ಲಿ ಯುಎಸ್​ ಸೇನೆಯಿಂದ ಡ್ರೋಣ್​ ದಾಳಿ; ಅಲ್​ ಖೈದಾ ಹಿರಿಯ ನಾಯಕ ಅಬ್ದುಲ್​ ಹಮೀದ್​ ಹತ್ಯೆ
ಸಾಂಕೇತಿಕ ಚಿತ್ರ
TV9 Web
| Edited By: |

Updated on:Oct 23, 2021 | 9:12 AM

Share

ಯುಎಸ್​ ಸೇನೆ ಸಿರಿಯಾದಲ್ಲಿ ನಡೆಸಿದ ಡ್ರೋಣ್​ ದಾಳಿ (Drone Strike)ಗೆ ಅಲ್​ ಖೈದಾ (al-Qaeda) ಉಗ್ರಸಂಘಟನೆಯ ಹಿರಿಯ ನಾಯಕ ಅಬ್ದುಲ್​ ಹಮೀದ್​ ಅಲ್​ ಮತಾರ್​​ ಬಲಿಯಾಗಿದ್ದಾನೆ. ಈ ಬಗ್ಗೆ ಯುಎಸ್​ ಸೆಂಟ್ರಲ್​ ಕಮಾಂಡ್​ ವಕ್ತಾರ ಮಾಹಿತಿ ನೀಡಿದ್ದಾರೆ.  ಯುಎಸ್  ಸೇನೆಯ ಮೇಜರ್ ಜಾನ್ ರಿಗ್ಸ್ಬೀ ಶುಕ್ರವಾರ ರಾತ್ರಿ ಹೇಳಿಕೆ ಬಿಡುಗಡೆ ಮಾಡಿದ್ದು, ಅಲ್​ ಖೈದಾ ಹಿರಿಯ ನಾಯಕನಾಗಿದ್ದ ಹಮೀದ್​ ಹತ್ಯೆಯಿಂದಾಗಿ ಖಂಡಿತವಾಗಿಯೂ ಆ ಉಗ್ರ ಸಂಘಟನೆಗೆ ಹಿನ್ನಡೆಯಾಗುತ್ತದೆ. ಅವರು ಮತ್ತೊಂದು ಜಾಗತಿಕ ದಾಳಿ ನಡೆಸುವುದು, ಯುಎಸ್​ ನಾಗರಿಕರ, ನಮ್ಮ ಸಹಭಾಗಿ ದೇಶಗಳ ಜನರಿಗೆ, ಮುಗ್ಧ ನಾಗರಿಕರ ಜೀವಕ್ಕೆ ಹಾನಿ ಮಾಡುವ ಅವರ ಯೋಜನೆಗೆ ಅಡ್ಡಿಯುಂಟಾಗುತ್ತದೆ ಎಂದು ಹೇಳಿದ್ದಾರೆ. ಅಲ್​-ಖೈದಾ ಹಿರಿಯ ನಾಯಕನನ್ನು ಬಿಟ್ಟರೆ ಇನ್ಯಾರೂ ಸತ್ತಿಲ್ಲ. ನಾವು MQ-9 ಏರ್​ಕ್ರಾಫ್ಟ್​ ಬಳಸಿ ದಾಳಿ ನಡೆಸಿದ್ದೆವು ಎಂದೂ ಮಾಹಿತಿ ನೀಡಿದ್ದಾರೆ. 

ದಕ್ಷಿಣ ಸಿರಿಯಾದಲ್ಲಿರುವ ಯುಎಸ್​ ಔಟ್​​ಪೋಸ್ಟ್​ ಮೇಲೆ ಅಲ್​-ಖೈದಾ ದಾಳಿ ನಡೆಸಿದ ಎರಡೇ ದಿನದಲ್ಲಿ ಯುಎಸ್ ಸೇನೆ ಪ್ರತಿದಾಳಿ ನಡೆಸಿದೆ.  ಅಲ್​-ಖೈದಾ ಉಗ್ರಸಂಘಟನೆ ಈ ಸಿರಿಯಾವನ್ನು ತಮ್ಮ ಸುರಕ್ಷಿತ ತಾಣವನ್ನಾಗಿ ರೂಪಿಸಿಕೊಳ್ಳಲು ಸಿದ್ಧತೆ ನಡೆಸುತ್ತಿದೆ. ಅಮೆರಿಕ ಮತ್ತು ನಮ್ಮ ಮೈತ್ರಿ ರಾಷ್ಟ್ರಗಳ ಜನರಿಗೆ ಬೆದರಿಕೆ ಒಡ್ಡುವುದನ್ನು ಮುಂದುವರಿಸಿದೆ ಎಂದೂ ಜಾನ್ ರಿಗ್ಸ್ಬೀ ತಿಳಿಸಿದ್ದಾರೆ. ಆದರೆ ಸಿರಿಯಾದ ಯಾವ ಭಾಗದಲ್ಲಿ ಡ್ರೋಣ್​ ದಾಳಿ ನಡೆಸಲಾಗಿದೆ ಎಂಬುದನ್ನು ಸೇನಾ ಮೇಜರ್​ ತಿಳಿಸಿಲ್ಲ.

ಇದನ್ನೂ ಓದಿ: Feng Shui: ಮನೆಯಲ್ಲಿ ಸೌಭಾಗ್ಯ ನೆಲೆಸಬೇಕೆಂದರೆ ಫೆಂಗ್ ಶೂಯಿ ಪದ್ಧತಿಯಲ್ಲಿ ಈ ಮೂರು ನಿಯಮ ಪಾಲಿಸಿ

ರಾಯನ್​ ರಾಜ್​ ಸರ್ಜಾ ಹುಟ್ಟುಹಬ್ಬದ ಫೋಟೋ ಗ್ಯಾಲರಿ; ಸೆಲೆಬ್ರಿಟಿಗಳ ಜೊತೆ ಚಿರು-ಮೇಘನಾ ಪುತ್ರ ಮಿಂಚಿಂಗ್

Published On - 9:06 am, Sat, 23 October 21

Follow Us
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ