AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಖಲಿಸ್ತಾನಿ ಉಗ್ರ ಹರ್ದೀಪ್ ಸಿಂಗ್ ನಿಜ್ಜರ್ ಹತ್ಯೆ ಕುರಿತ ತನಿಖೆಗೆ ಸಂಪೂರ್ಣವಾಗಿ ಸಹಕರಿಸಲು ಭಾರತವನ್ನು ಒತ್ತಾಯಿಸಿದ ಅಮೆರಿಕ

ಖಲಿಸ್ತಾನಿ ಉಗ್ರ ಹರ್ದೀಪ್ ಸಿಂಗ್ ನಿಜ್ಜರ್​(Hardeep Singh Nijjar) ಹತ್ಯೆಗೆ ಸಂಬಂಧಿಸಿದ ತನಿಖೆಗೆ ಸಂಪೂರ್ಣವಾಗಿ ಸಹಕಾರ ನೀಡುವಂತೆ ಅಮೆರಿಕ ಭಾರತವನ್ನು ಒತ್ತಾಯಿಸಿದೆ. ಬ್ರಿಟಿಷ್ ಕೊಲಂಬಿಯಾದಲ್ಲಿ ನಡೆದ ನಿಜ್ಜರ್ ಹತ್ಯೆಯಲ್ಲಿ ಭಾರತೀಯ ಏಜೆಂಟ್​ಗಳ ಕೈವಾಡವಿದೆ ಎಂದು ಕೆನಡಾ ಆರೋಪಿಸಿದೆ. ಈ ಕುರಿತು ಶ್ವೇತಭವನ ಕಳವಳ ವ್ಯಕ್ತಪಡಿಸಿದ್ದು, ತನಿಖೆಗೆ ಸಹಕಾರ ನೀಡುವಂತೆ ಭಾರತಕ್ಕೆ ಮನವಿ ಮಾಡಿದೆ. ಖಲಿಸ್ತಾನಿ ಉಗ್ರ ನಿಜ್ಜರ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಭಾರತವು ಕೆನಡಾದ ಬಳಿ ಪುರಾವೆಗಳನ್ನು ಕೇಳಿದೆ, ಯಾವುದೇ ಸಾಕ್ಷ್ಯಗಳಿಲ್ಲದೆ ಆರೋಪ ಮಾಡಬೇಡಿ ಎಂದು ಹೇಳಿದೆ.

ಖಲಿಸ್ತಾನಿ ಉಗ್ರ ಹರ್ದೀಪ್ ಸಿಂಗ್ ನಿಜ್ಜರ್ ಹತ್ಯೆ ಕುರಿತ ತನಿಖೆಗೆ ಸಂಪೂರ್ಣವಾಗಿ ಸಹಕರಿಸಲು ಭಾರತವನ್ನು ಒತ್ತಾಯಿಸಿದ ಅಮೆರಿಕ
ವೈಟ್​ಹೌಸ್ ಅಧಿಕಾರಿಗಳುImage Credit source: NDTV
ನಯನಾ ರಾಜೀವ್
|

Updated on: Sep 21, 2023 | 8:10 AM

Share

ಖಲಿಸ್ತಾನಿ ಉಗ್ರ ಹರ್ದೀಪ್ ಸಿಂಗ್ ನಿಜ್ಜರ್​(Hardeep Singh Nijjar) ಹತ್ಯೆಗೆ ಸಂಬಂಧಿಸಿದ ತನಿಖೆಗೆ ಸಂಪೂರ್ಣವಾಗಿ ಸಹಕಾರ ನೀಡುವಂತೆ ಅಮೆರಿಕ ಭಾರತವನ್ನು ಒತ್ತಾಯಿಸಿದೆ. ಬ್ರಿಟಿಷ್ ಕೊಲಂಬಿಯಾದಲ್ಲಿ ನಡೆದ ನಿಜ್ಜರ್ ಹತ್ಯೆಯಲ್ಲಿ ಭಾರತೀಯ ಏಜೆಂಟ್​ಗಳ ಕೈವಾಡವಿದೆ ಎಂದು ಕೆನಡಾ ಆರೋಪಿಸಿದೆ. ಈ ಕುರಿತು ಶ್ವೇತಭವನ ಕಳವಳ ವ್ಯಕ್ತಪಡಿಸಿದ್ದು, ತನಿಖೆಗೆ ಸಹಕಾರ ನೀಡುವಂತೆ ಭಾರತಕ್ಕೆ ಮನವಿ ಮಾಡಿದೆ. ಖಲಿಸ್ತಾನಿ ಉಗ್ರ ನಿಜ್ಜರ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಭಾರತವು ಕೆನಡಾದ ಬಳಿ ಪುರಾವೆಗಳನ್ನು ಕೇಳಿದೆ, ಯಾವುದೇ ಸಾಕ್ಷ್ಯಗಳಿಲ್ಲದೆ ಆರೋಪ ಮಾಡಬೇಡಿ ಎಂದು ಹೇಳಿದೆ.

ರಾಷ್ಟ್ರೀಯ ಭದ್ರತಾ ಸಲಹೆಗಾರ (ಎನ್ಎಸ್ಎ) ಅಜಿತ್ ದೋವಲ್ ಹೊಸ ಸಂಸತ್ತಿನಲ್ಲಿ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿಯಾದರು. ಅಲ್ಲದೆ, ವಿದೇಶಾಂಗ ವ್ಯವಹಾರಗಳ ಸಚಿವಾಲಯ ಮತ್ತು ರಾಷ್ಟ್ರೀಯ ಭದ್ರತಾ ಏಜೆನ್ಸಿಗಳ ನಡುವೆ ಸಭೆ ಕೂಡ ನಡೆಯಿತು. ಇದಾದ ಬಳಿಕ ಭಾರತ ಕೆನಡಾದಿಂದ ಸಾಕ್ಷ್ಯ ಕೇಳಿದೆ.

ಸಾಕ್ಷ್ಯಾಧಾರಗಳ ಆಧಾರದ ಮೇಲೆ ಕೆನಡಾ ನಡೆಸುವ ತನಿಖೆಗೆ ಸಹಕರಿಸುತ್ತೇವೆ, ಈ ಹತ್ಯೆ ಹಾಗೂ ಭಾರತದ ಗುಪ್ತಚರ ಸಂಸ್ಥೆಗಳಿಗೆ ಯಾವುದೇ ಸಂಬಂಧವಿಲ್ಲ ಹಾಗೂ ಆರೋಪಗಳು ಆಧಾರರಹಿತ ಮತ್ತು ರಾಜಕೀಯ ಪ್ರೇರಿತ ಎಂದು ಹೇಳಿದೆ.

ಮತ್ತಷ್ಟು ಓದಿ: ಕೆನಡಾದಲ್ಲಿ ಭಾರತೀಯ ಸಮುದಾಯದವರ ಸ್ಥಳಗಳ ಮೇಲೆ ಖಲಿಸ್ತಾನೀ ಉಗ್ರರಿಂದ ದಾಳಿಗೆ ಸಂಚು: ಗುಪ್ತಚರರ ಮಾಹಿತಿ

ಜೂನ್​ನಲ್ಲಿ ಹತ್ಯೆಯಾಗಿದ್ದ ಖಲಿಸ್ತಾನಿ ಉಗ್ರ ಹರ್ದೀಪ್‌ ಸಿಂಗ್‌ ನಿಜ್ಜರ್‌ ಹತ್ಯೆಯ ಹಿಂದೆ ಭಾರತದ ಕೈವಾಡವಿದೆ ಎಂದು ಕೆನಡಾ ಪ್ರಧಾನಿ ಟ್ರುಡೋ ಗಂಭೀರ ಅರೋಪ ಮಾಡಿದ್ದಾರೆ. ಈ ಬಗ್ಗೆ ಅಲ್ಲಿನ ಸಂಸತ್‌ನಲ್ಲಿ ನಡೆದ ತುರ್ತು ಅಧಿವೇಶನದಲ್ಲಿ ಮಾತನಾಡಿದ್ದ ಕೆನಡಾ ಪ್ರಧಾನಿ ಜಸ್ಟಿನ್‌ ಟ್ರುಡೋ, ನಿಜ್ಜರ್‌ ಹತ್ಯೆ ಹಿಂದೆ ಭಾರತೀಯ ಏಜೆಂಟ್‌ಗಳ ಕೈವಾಡವಿದೆ ಅನ್ನೋದಕ್ಕೆ ನಮ್ಮ ಸರ್ಕಾರದ ಬಳಿ ಸಾಕ್ಷಿಗಳಿವೆ ಎಂದು ಹೇಳಿದ್ದಾರೆ ಆ ಸಾಕ್ಷಿಗಳನ್ನು ನೀಡುವಂತೆ ಭಾರತ ಕೇಳಿದೆ.

ಕೆನಡಾದ ಆರೋಪಕ್ಕೆ ಭಾರತ ತಕ್ಕ ಪ್ರತಿಕ್ರಿಯೆ ನೀಡಿದ್ದು, ಈ ಆರೋಪಗಳು ಆಧಾರರಹಿತ ಮತ್ತು ಉದ್ದೇಶಪೂರ್ವಕ ಎಂದು ತಿರಸ್ಕರಿಸಿದ್ದಷ್ಟೇ ಅಲ್ಲದೆ,  ಕೆನಡಾದ ನಡೆಯನ್ನು ತೀವ್ರವಾಗಿ ಟೀಕಿಸಿರುವ ಭಾರತ, ಭಯೋತ್ಪಾದಕರಿಗೆ ಸಾರ್ವಜನಿಕವಾಗಿ ಸಿಂಪತಿ ತೋರಿಸೋದು ಕಳವಳಕಾರಿ ವಿಷಯ ಅಂತ ಹೇಳಿದೆ.
ಈ ರೀತಿ ಆಧಾರರಹಿತ ಆರೋಪ ಮಾಡುವ ಮೂಲಕ ಕೆನಡಾ ಖಲಿಸ್ತಾನಿ ಭಯೋತ್ಪಾದಕರು ಮತ್ತು ಉಗ್ರಗಾಮಿಗಳ ಮೇಲಿದ್ದ ಗಮನವನ್ನ ಬದಲಿಸಲು ಬಯಸುತ್ತಿದೆ. ಅಲ್ಲದೆ ಕೆನಡಾದಲ್ಲಿ ಆಶ್ರಯ ಪಡೆದಿರುವ ಈ ಉಗ್ರರಿಂದ ಭಾರತದ ಸಾರ್ವಭೌಮತೆಗೆ ಹಾಗೂ ಸಮಗ್ರತೆಗೆ ಬೆದರಿಕೆ ಹಾಕುತ್ತಿವೆ ಎಂದು ಹೇಳಿದೆ.
ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ