AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಾಂತಿ ಮಾತುಕತೆ ನಡುವೆಯೇ ಇರಾನ್​​ನಲ್ಲಿ ಅಮೆರಿಕ ದಾಳಿ, ಕ್ಷಿಪಣಿ ಉಡಾವಣಾ ತಾಣ, ಮೈನ್ ಬೋಟ್​ಗಳೇ ಟಾರ್ಗೆಟ್

ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಇರಾನ್ ಜೊತೆ ಮಾತುಕತೆ ಸುಧಾರಿಸಿದೆ ಎಂದ ಕೆಲವೇ ಗಂಟೆಗಳಲ್ಲಿ, ಅಮೆರಿಕ ಸೇನೆಯು ಇರಾನ್‌ನ ಹಾರ್ಮುಜ್ ಜಲಸಂಧಿಯ ಬಳಿ ಕ್ಷಿಪಣಿ ಉಡಾವಣಾ ತಾಣಗಳು ಮತ್ತು ಗಣಿಗಳನ್ನು ಇರಿಸಲು ಯತ್ನಿಸುತ್ತಿದ್ದ ದೋಣಿಗಳನ್ನು ಗುರಿಯಾಗಿಸಿ ದಾಳಿ ನಡೆಸಿದೆ. ಅಮೆರಿಕದ ಸೈನಿಕರನ್ನು ರಕ್ಷಿಸಲು ಇದು 'ಸ್ವ-ರಕ್ಷಣಾ ದಾಳಿ' ಎಂದು ಯುಎಸ್ ಸೇನೆ ಘೋಷಿಸಿದ್ದು, ಈ ದಾಳಿಯು ಶಾಂತಿ ಮಾತುಕತೆಗಳ ಮೇಲೆ ಹೇಗೆ ಪರಿಣಾಮ ಬೀರುತ್ತದೆ ಎಂಬುದು ಕುತೂಹಲಕಾರಿಯಾಗಿದೆ.

ಶಾಂತಿ ಮಾತುಕತೆ ನಡುವೆಯೇ ಇರಾನ್​​ನಲ್ಲಿ ಅಮೆರಿಕ ದಾಳಿ, ಕ್ಷಿಪಣಿ ಉಡಾವಣಾ ತಾಣ, ಮೈನ್ ಬೋಟ್​ಗಳೇ ಟಾರ್ಗೆಟ್
ಡೊನಾಲ್ಡ್​ ಟ್ರಂಪ್ Image Credit source: PTI
ನಯನಾ ರಾಜೀವ್
|

Updated on: May 26, 2026 | 7:50 AM

Share

ವಾಷಿಂಗ್ಟನ್, ಮೇ 26: ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್(Donald Trump) ಇರಾನ್ ಜೊತೆಗಿನ ಮಾತುಕತೆಗಳು ಚೆನ್ನಾಗಿ ನಡೆಯುತ್ತಿದೆ ಎಂದು ಹೇಳಿದ ಕೆಲವೇ ಗಂಟೆಗಳಲ್ಲಿ, ಅಮೆರಿಕ ಸೇನೆಯು ದಕ್ಷಿಣ ಇರಾನ್‌ನಲ್ಲಿ ಭೀಕರ ದಾಳಿ ನಡೆಸಿದೆ. ಹಾರ್ಮುಜ್ ಜಲಸಂಧಿಯ ಬಳಿ ಕ್ಷಿಪಣಿ ಉಡಾವಣಾ ತಾಣಗಳು ಮತ್ತು ಗಣಿಗಳನ್ನು ಇರಿಸಲು ಯತ್ನಿಸುತ್ತಿದ್ದ ಇರಾನಿನ ದೋಣಿಗಳನ್ನು ಗುರಿಯಾಗಿಸಿಕೊಂಡು ಈ ಸ್ವ-ರಕ್ಷಣಾ ದಾಳಿಗಳನ್ನು ನಡೆಸಿರುವುದಾಗಿ ಯುಎಸ್ ಸೇನೆ ಪ್ರಕಟಿಸಿದೆ.

ಇರಾನ್ ಪಡೆಗಳಿಂದ ಎದುರಾಗಬಹುದಾದ ನೇರ ಬೆದರಿಕೆಗಳಿಂದ ಅಮೆರಿಕದ ಸೈನಿಕರನ್ನು ರಕ್ಷಿಸಲು ಈ ಕ್ರಮ ಕೈಗೊಳ್ಳಲಾಗಿದೆ ಎಂದು ಅಮೆರಿಕದ ಕೇಂದ್ರ ಕಮಾಂಡ್ (CENTCOM) ವಕ್ತಾರ ತಿಮೋತಿ ಹಾಕಿನ್ಸ್ ತಿಳಿಸಿದ್ದಾರೆ. ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (IRGC) ಗೆ ಸೇರಿದ ಎರಡು ಹಡಗುಗಳು ಹಾರ್ಮುಜ್ ಜಲಸಂಧಿಯಲ್ಲಿ ಗಣಿಗಳನ್ನು ಇಡುವುದನ್ನು ಗಮನಿಸಿದ್ದವು. ತಕ್ಷಣವೇ ಕಾರ್ಯಪ್ರವೃತ್ತರಾದ ಅಮೆರಿಕದ ಪಡೆಗಳು ಐಆರ್‌ಜಿಸಿಯ ಎರಡೂ ದೋಣಿಗಳನ್ನು ಹಾಗೂ ಆ ಕ್ಷಿಪಣಿ ನೆಲೆಯನ್ನು ಸಂಪೂರ್ಣವಾಗಿ ನಾಶಪಡಿಸಿವೆ.

ಸೋಮವಾರ ಇರಾನ್‌ನ ದಕ್ಷಿಣ ಕರಾವಳಿಯುದ್ದಕ್ಕೂ ಇರುವ ಬಂದರ್ ಅಬ್ಬಾಸ್, ಸಿರಿಕ್ ಮತ್ತು ಜಾಸ್ಕ್ ಬಳಿ ಭಾರಿ ಸ್ಫೋಟದ ಶಬ್ದಗಳು ಕೇಳಿಬಂದಿವೆ. ಈ ದಾಳಿಗಳು ಕೇವಲ ರಕ್ಷಣಾತ್ಮಕವಾಗಿದ್ದು, ಸದ್ಯಕ್ಕೆ ಕಾರ್ಯಾಚರಣೆ ಮುಗಿದಿದೆ ಎಂದು ಅಮೆರಿಕದ ಹಿರಿಯ ಅಧಿಕಾರಿ ಸ್ಪಷ್ಟಪಡಿಸಿದ್ದಾರೆ. ಅಲ್ಲದೆ, ಈ ಮಿಲಿಟರಿ ಕ್ರಮವು ಅತ್ಯಂತ ಸೀಮಿತ ವ್ಯಾಪ್ತಿಯನ್ನು ಹೊಂದಿದ್ದು, ಇರಾನ್ ಜೊತೆಗೆ ಸಾಗುತ್ತಿರುವ ಕದನ ವಿರಾಮ ಒಪ್ಪಂದದ ಕುಸಿತವನ್ನು ಇದು ಸೂಚಿಸುವುದಿಲ್ಲ ಎಂದು ಅಮೆರಿಕದ ಮೂಲಗಳು ಖಚಿತಪಡಿಸಿವೆ.

ಮತ್ತಷ್ಟು ಓದಿ: ಇಂದು ರಾತ್ರಿ ಇಡೀ ದೇಶವೇ ನಾಶವಾಗುತ್ತದೆ; ಗಡುವು ಸಮೀಪಿಸುತ್ತಿದ್ದಂತೆ ಇರಾನ್​ಗೆ ಟ್ರಂಪ್ ಬೆದರಿಕೆ

ಇರಾನ್ ಯುದ್ಧವನ್ನು ಶಾಶ್ವತವಾಗಿ ಕೊನೆಗೊಳಿಸಲು ಟ್ರಂಪ್ ಮತ್ತೊಂದು ದೊಡ್ಡ ಶರತ್ತನ್ನು ವಿಧಿಸಿದ್ದಾರೆ. ಇದರ ಪ್ರಕಾರ, ಸೌದಿ ಅರೇಬಿಯಾ, ಪಾಕಿಸ್ತಾನ, ಕತಾರ್, ಟರ್ಕಿ, ಈಜಿಪ್ಟ್ ಮತ್ತು ಜೋರ್ಡಾನ್ ದೇಶಗಳು ತಕ್ಷಣವೇ ‘ಅಬ್ರಹಾಂ ಒಪ್ಪಂದಕ್ಕೆ’ (ಇಸ್ರೇಲ್ ಜೊತೆಗಿನ ಸಂಬಂಧವನ್ನು ಸಾಮಾನ್ಯಗೊಳಿಸುವ ಒಪ್ಪಂದ) ಸಹಿ ಹಾಕಬೇಕು ಎಂದು ಟ್ರಂಪ್ ಹೇಳಿದ್ದಾರೆ. ಈ ಎಲ್ಲಾ ದೇಶಗಳು ಏಕಕಾಲದಲ್ಲಿ ಒಪ್ಪಂದಕ್ಕೆ ಸಹಿ ಹಾಕುವುದು ಕಡ್ಡಾಯವಾಗಿದ್ದು, ಆಗ ಮಾತ್ರ ಮಧ್ಯಪ್ರಾಚ್ಯದಲ್ಲಿ ಶಾಶ್ವತ ಶಾಂತಿ ನೆಲೆಸಲು ಸಾಧ್ಯ ಎಂದು ಟ್ರಂಪ್ ಅಭಿಪ್ರಾಯಪಟ್ಟಿದ್ದಾರೆ.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
Nayana Rajeev
Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
ರೇವತಿ ನಕ್ಷತ್ರಕ್ಕೆ ಶನಿ ಎಂಟ್ರಿ!
ರೇವತಿ ನಕ್ಷತ್ರಕ್ಕೆ ಶನಿ ಎಂಟ್ರಿ!
ಇಂದು ಹನುಮನಿಗೆ ಬೆಲ್ಲದ ದೀಪ ಹಚ್ಚಿದರೆ ಈ ರಾಶಿಯವರಿಗೆ ಭರ್ಜರಿ ಅದೃಷ್ಟ!
ಇಂದು ಹನುಮನಿಗೆ ಬೆಲ್ಲದ ದೀಪ ಹಚ್ಚಿದರೆ ಈ ರಾಶಿಯವರಿಗೆ ಭರ್ಜರಿ ಅದೃಷ್ಟ!
ಉತ್ತರ ಪ್ರದೇಶದ ಬುಲಂದ್‌ಶಹರ್ ಕಾರ್ಖಾನೆಯಲ್ಲಿ ಬೆಂಕಿ ದುರಂತ
ಉತ್ತರ ಪ್ರದೇಶದ ಬುಲಂದ್‌ಶಹರ್ ಕಾರ್ಖಾನೆಯಲ್ಲಿ ಬೆಂಕಿ ದುರಂತ
ಪ್ರಪೋಸಲ್ ನಿರಾಕರಿಸಿದ್ದಕ್ಕೆ ಯುವತಿಯ ಮನೆ ಮೇಲೆ ಪ್ರೇಮಿಯಿಂದ ಬಾಂಬ್ ದಾಳಿ
ಪ್ರಪೋಸಲ್ ನಿರಾಕರಿಸಿದ್ದಕ್ಕೆ ಯುವತಿಯ ಮನೆ ಮೇಲೆ ಪ್ರೇಮಿಯಿಂದ ಬಾಂಬ್ ದಾಳಿ
ಈಗ ಸ್ವಲ್ಪ ಕನ್ನಡ ಬರುತ್ತೆ, ಮುಂದಿನ ಸಲ ಜಾಸ್ತಿ ಮಾತಾಡುವೆ: ರಾಮ್ ಚರಣ್
ಈಗ ಸ್ವಲ್ಪ ಕನ್ನಡ ಬರುತ್ತೆ, ಮುಂದಿನ ಸಲ ಜಾಸ್ತಿ ಮಾತಾಡುವೆ: ರಾಮ್ ಚರಣ್
ಗುಲ್ಮಾರ್ಗ್‌ನಲ್ಲಿ ಆಕಾಶದ ಮಧ್ಯೆ ಸಿಲುಕಿದ 300 ಪ್ರವಾಸಿಗರು!
ಗುಲ್ಮಾರ್ಗ್‌ನಲ್ಲಿ ಆಕಾಶದ ಮಧ್ಯೆ ಸಿಲುಕಿದ 300 ಪ್ರವಾಸಿಗರು!
ಧರ್ಮೇಂದ್ರ ಪರವಾಗಿ ಪದ್ಮ ವಿಭೂಷಣ ಪ್ರಶಸ್ತಿ ಸ್ವೀಕರಿಸಿದ ನಟಿ ಹೇಮಾ ಮಾಲಿನಿ
ಧರ್ಮೇಂದ್ರ ಪರವಾಗಿ ಪದ್ಮ ವಿಭೂಷಣ ಪ್ರಶಸ್ತಿ ಸ್ವೀಕರಿಸಿದ ನಟಿ ಹೇಮಾ ಮಾಲಿನಿ
ಕೊಯಮತ್ತೂರು ಬಾಲಕಿ ಹತ್ಯೆ ಕುರಿತ ಸುದ್ದಿಗೋಷ್ಠಿಯಲ್ಲಿ ನಕ್ಕ ಮಹಿಳಾ ಪೊಲೀಸ್!
ಕೊಯಮತ್ತೂರು ಬಾಲಕಿ ಹತ್ಯೆ ಕುರಿತ ಸುದ್ದಿಗೋಷ್ಠಿಯಲ್ಲಿ ನಕ್ಕ ಮಹಿಳಾ ಪೊಲೀಸ್!
SIR ಸಭೆಗೆ ಗೈರಾದ ಪ್ರಧಾನ ಕಾರ್ಯದರ್ಶಿಗಳು, ಉಪಾಧ್ಯಕ್ಷರಿಗೆ ‘ಕೈ’ ಕೊಕ್
SIR ಸಭೆಗೆ ಗೈರಾದ ಪ್ರಧಾನ ಕಾರ್ಯದರ್ಶಿಗಳು, ಉಪಾಧ್ಯಕ್ಷರಿಗೆ ‘ಕೈ’ ಕೊಕ್
ಶಿವಮೊಗ್ಗ KSCA ಮೈದಾನದಲ್ಲಿ ಕ್ರಿಕೆಟ್ ಆಟಗಾರ ಅಕ್ಷಯ್ ಅಂತಿಮ ದರ್ಶನ
ಶಿವಮೊಗ್ಗ KSCA ಮೈದಾನದಲ್ಲಿ ಕ್ರಿಕೆಟ್ ಆಟಗಾರ ಅಕ್ಷಯ್ ಅಂತಿಮ ದರ್ಶನ