AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Swaminarayan Temple Vandalised: ಕ್ಯಾಲಿಫೋರ್ನಿಯಾದಲ್ಲಿ BAPS ಸ್ವಾಮಿನಾರಾಯಣ ದೇವಸ್ಥಾನ ಧ್ವಂಸಗೊಳಿಸಿದ ಕಿಡಿಗೇಡಿಗಳು

ನ್ಯೂಯಾರ್ಕ್‌ನ ಬಿಎಪಿಎಸ್ ಮಂದಿರದಲ್ಲಿ ಇದೇ ರೀತಿಯ ವಿಧ್ವಂಸಕ ಕೃತ್ಯ ನಡೆದ 10 ದಿನಗಳ ನಂತರ ಸೆಪ್ಟೆಂಬರ್ 25 ರ ರಾತ್ರಿ ಕ್ಯಾಲಿಫೋರ್ನಿಯಾದ ಸ್ಯಾಕ್ರಮೆಂಟೊ ಪ್ರದೇಶದಲ್ಲಿರುವ BAPS ಶ್ರೀ ಸ್ವಾಮಿನಾರಾಯಣ ಮಂದಿರವನ್ನು ಹಿಂದೂ ವಿರೋಧಿ ಸಂದೇಶಗಳೊಂದಿಗೆ ಅಪವಿತ್ರಗೊಳಿಸಲಾಯಿತು.

Swaminarayan Temple Vandalised: ಕ್ಯಾಲಿಫೋರ್ನಿಯಾದಲ್ಲಿ BAPS ಸ್ವಾಮಿನಾರಾಯಣ ದೇವಸ್ಥಾನ ಧ್ವಂಸಗೊಳಿಸಿದ ಕಿಡಿಗೇಡಿಗಳು
ದೇವಸ್ಥಾನImage Credit source: ANI
ನಯನಾ ರಾಜೀವ್
|

Updated on: Sep 26, 2024 | 8:27 AM

Share

ಕ್ಯಾಲಿಫೋರ್ನಿಯಾದ ಸ್ಯಾಕ್ರಮೆಂಟೋದಲ್ಲಿರುವ BAPS ಸ್ವಾಮಿನಾರಾಯಣ ಮಂದಿರವನ್ನು ಕಿಡಿಗೇಡಿಗಳು ಧ್ವಂಸಗೊಳಿಸಿರುವ ಘಟನೆ ಬುಧವಾರ ರಾತ್ರಿ ನಡೆದಿದೆ. ನ್ಯೂಯಾರ್ಕ್‌ನ ದೇವಾಲಯದಲ್ಲಿ ಇದೇ ರೀತಿಯ ಘಟನೆ ನಡೆದು 10 ದಿನಗಳ ನಂತರ ಇಲ್ಲಿ ಈ ಘಟನೆ ನಡೆದಿದೆ.

ದೇವಾಲಯದ ಗೋಡೆಯ ಮೇಲೆ ಹಿಂದೂ ವಿರೋಧಿ ಬರಹಗಳು ಕಂಡುಬಂದಿದ್ದು, ಹಿಂದೂಗಳು ಹಿಂದಿರುಗಿ ಎಂದು ಬರೆದಿರುವುದು ಸ್ಥಳೀಯ ಹಿಂದೂ ಸಮುದಾಯದವರ ಆತಂಕಕ್ಕೆ ಕಾರಣವಾಗಿದೆ.

ಇದಕ್ಕೂ ಮೊದಲು, ಸೆಪ್ಟೆಂಬರ್ 17, 2024 ರಂದು ನ್ಯೂಯಾರ್ಕ್‌ನ BAPS ಸ್ವಾಮಿನಾರಾಯಣ ದೇವಸ್ಥಾನದಲ್ಲಿ ಇದೇ ರೀತಿಯ ವಿಧ್ವಂಸಕ ಘಟನೆ ನಡೆದಿತ್ತು.

ಮತ್ತಷ್ಟು ಓದಿ:Swaminarayan Temple Vandalised: ಕೆನಡಾದ ಸ್ವಾಮಿನಾರಾಯಣ ದೇವಸ್ಥಾನ ಧ್ವಂಸ, ಗೋಡೆಗಳ ಮೇಲೆ ಭಾರತ ವಿರೋಧಿ ಘೋಷಣೆ: ಭಾರತ ತೀವ್ರ ಆಕ್ರೋಶ

ನ್ಯೂಯಾರ್ಕ್‌ನಲ್ಲಿರುವ ಭಾರತದ ಕಾನ್ಸುಲೇಟ್ ಜನರಲ್ ನ್ಯೂಯಾರ್ಕ್‌ನ ಮೆಲ್‌ವಿಲ್ಲೆಯಲ್ಲಿರುವ BAPS ಸ್ವಾಮಿನಾರಾಯಣ ದೇವಸ್ಥಾನದ ವಿಧ್ವಂಸಕತೆಯನ್ನು ಖಂಡಿಸಿದರು, ಅದನ್ನು ಸ್ವೀಕಾರಾರ್ಹವಲ್ಲ ಎಂದು ಹೇಳಿದ್ದರು.

ಕೆಲವು ದಿನಗಳ ಹಿಂದಷ್ಟೇ ಖಲಿಸ್ತಾನ್ ಉಗ್ರ ಗುರುಪಂತ್ವ ಸಿಂಗ್ ಪನ್ನು ಹಿಂದೂ ದೇವಾಲಯ ಹಾಗೂ ಸಂಸ್ಥೆಗಳಿಗೆ ಇರುವ ಬೆದರಿಕೆಯ ವಿಡಿಯೋಗಳನ್ನು ಹಂಚಿಕೊಂಡಿದ್ದ.

ಸದ್ಯ ನ್ಯೂಯಾರ್ಕ್​​ನಲ್ಲಿ ಸ್ವಾಮಿ ನಾರಾಯಣ ದೇವಾಲಯದ ಮೇಲೆ ನಡೆದ ದಾಳಿಯೂ ಕೂಡ ಕ್ಯಾಲಿಫೋರ್ನಿಯಾ ಹಾಗೂ ಕೆನಡಾದಲ್ಲಿ ನಡೆದ ಮಾದರಿಯಲ್ಲಿಯೇ ನಡೆದಿದೆ. ಇದರ ಹಿಂದೆ ಖಲಿಸ್ತಾನಿ ಉಗ್ರರ ಕೈವಾಡವಿರುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
Nayana Rajeev
Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
CLP Meeting: ಡಿಕೆಶಿ ಹೆಸರು ಘೋಷಿಸಿದ ಸಿದ್ರಾಮಯ್ಯ Exclusive ವಿಡಿಯೋ
CLP Meeting: ಡಿಕೆಶಿ ಹೆಸರು ಘೋಷಿಸಿದ ಸಿದ್ರಾಮಯ್ಯ Exclusive ವಿಡಿಯೋ
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!