AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಧ್ಯಪ್ರಾಚ್ಯದ ಇತಿಹಾಸದಲ್ಲೇ ಹಿಂದೆಂದೂ ಕಾಣದಂತಹ ಭೀಕರ ಬಾಂಬ್ ದಾಳಿ: ತೈಲ ರಫ್ತು ಕೇಂದ್ರ ಖಾರ್ಗ್ ದ್ವೀಪ ಧ್ವಂಸ

ಅಮೆರಿಕವು ಇರಾನ್‌ನ ಖಾರ್ಗ್ ದ್ವೀಪದ ಮೇಲೆ ಭೀಕರ ಬಾಂಬ್ ದಾಳಿ ನಡೆಸಿದ್ದು, ಇರಾನ್‌ನ ತೈಲ ರಫ್ತು ಮತ್ತು ಆರ್ಥಿಕತೆಗೆ ಭಾರೀ ಹೊಡೆತ ಬಿದ್ದಿದೆ. ಡೊನಾಲ್ಡ್ ಟ್ರಂಪ್, ಹೋರ್ಮುಜ್ ಜಲಸಂಧಿಯ ಭದ್ರತೆ ಹಾಗೂ ಇರಾನ್ ಪರಮಾಣು ಅಸ್ತ್ರ ಹೊಂದದಂತೆ ಎಚ್ಚರಿಕೆ ನೀಡಿದ್ದಾರೆ. ಈ ದಾಳಿಯಿಂದ ಜಾಗತಿಕ ರಾಜಕೀಯದಲ್ಲಿ ಸಂಚಲನ ಸೃಷ್ಟಿಯಾಗಿದ್ದು, ಕಚ್ಚಾ ತೈಲ ಬೆಲೆ ಏರಿಕೆಯ ಭೀತಿ ಎದುರಾಗಿದೆ.

ಮಧ್ಯಪ್ರಾಚ್ಯದ ಇತಿಹಾಸದಲ್ಲೇ ಹಿಂದೆಂದೂ ಕಾಣದಂತಹ ಭೀಕರ ಬಾಂಬ್ ದಾಳಿ: ತೈಲ ರಫ್ತು ಕೇಂದ್ರ ಖಾರ್ಗ್ ದ್ವೀಪ ಧ್ವಂಸ
ತೈಲ ರಫ್ತು ಕೇಂದ್ರ ಖಾರ್ಗ್ ದ್ವೀಪ
ಅಕ್ಷಯ್​ ಪಲ್ಲಮಜಲು​​
|

Updated on: Mar 14, 2026 | 6:40 AM

Share

ತೆಹ್ರಾನ್, ಮಾ.14: ಮಧ್ಯಪ್ರಾಚ್ಯದ ಇತಿಹಾಸದಲ್ಲೇ ಹಿಂದೆಂದೂ ಕಾಣದಂತಹ ಭೀಕರ ಬಾಂಬ್ ದಾಳಿಯನ್ನು ಅಮೆರಿಕ ಇರಾನ್ ಮೇಲೆ ನಡೆಸಿದೆ. ಇರಾನ್‌ನ ಮಿಲಿಟರಿ ಶಕ್ತಿ ಮತ್ತು ಆರ್ಥಿಕತೆಯ ಮೇಲೆ ಅಮೆರಿಕದ ಸೇನೆ ಮರಣಾಂತಿಕ ಪೆಟ್ಟು ನೀಡಿದ್ದು, ಈ ಬಗ್ಗೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅಧಿಕೃತ ಘೋಷಣೆ ಮಾಡಿದ್ದಾರೆ. ಇರಾನ್‌ನ ಆರ್ಥಿಕತೆಯ ಬೆನ್ನೆಲುಬು ಎನ್ನಲಾದ ಖಾರ್ಗ್ ದ್ವೀಪದ (Kharg Island) ಮೇಲೆ ಅಮೆರಿಕ ಅತ್ಯಂತ ಶಕ್ತಿಶಾಲಿ ಬಾಂಬ್‌ಗಳ ಮಳೆ ಸುರಿಸಿದೆ. ಇದರಿಂದ ಇರಾನ್‌ನ ತೈಲ ರಫ್ತು ಮತ್ತು ಆರ್ಥಿಕ ವ್ಯವಸ್ಥೆಗೆ ಭಾರಿ ಹೊಡೆತ ಬಿದ್ದಿದೆ.

ಇರಾನ್‌ನ ಆರ್ಥಿಕತೆಯ ಬೆನ್ನೆಲುಬು ಎನ್ನಲಾದ ಖಾರ್ಗ್ ದ್ವೀಪದ (Kharg Island) ಮೇಲೆ ಅಮೆರಿಕ ಅತ್ಯಂತ ಶಕ್ತಿಶಾಲಿ ಬಾಂಬ್‌ಗಳ ಮಳೆ ಸುರಿಸಿದೆ. ಇದರಿಂದ ಇರಾನ್‌ನ ತೈಲ ರಫ್ತು ಮತ್ತು ಆರ್ಥಿಕ ವ್ಯವಸ್ಥೆಗೆ ಭಾರಿ ಹೊಡೆತ ಬಿದ್ದಿದೆ. ಜಾಗತಿಕ ತೈಲ ಸಾಗಣೆಯ ಪ್ರಮುಖ ಮಾರ್ಗವಾದ ಹೋರ್ಮುಜ್ ಜಲಸಂಧಿಯಲ್ಲಿ (Strait of Hormuz) ಹಡಗುಗಳ ಮುಕ್ತ ಸಂಚಾರಕ್ಕೆ ಯಾರಾದರೂ ಅಡ್ಡಿಪಡಿಸಿದರೆ ಅಮೆರಿಕ ಸುಮ್ಮನಿರುವುದಿಲ್ಲ ಎಂದು ಟ್ರಂಪ್ ಎಚ್ಚರಿಸಿದ್ದಾರೆ.

ಇದನ್ನೂ ಓದಿ: ಎಲ್​ಪಿಜಿ ಕೊರತೆ ಇನ್ನಿಲ್ಲ; ಹಾರ್ಮುಜ್ ಜಲಸಂಧಿ ದಾಟಿ ಬಂತು ಭಾರತದ 2 ಗ್ಯಾಸ್ ಟ್ಯಾಂಕರ್

“ಇರಾನ್ ಯಾವುದೇ ಕಾರಣಕ್ಕೂ ಪರಮಾಣು ಅಸ್ತ್ರ ಹೊಂದುವಂತಿಲ್ಲ. ವಿಶ್ವದ ಶಾಂತಿಗೆ ಧಕ್ಕೆ ತರುವ ಸಾಮರ್ಥ್ಯವನ್ನು ಇರಾನ್‌ಗೆ ಪಡೆಯಲು ಬಿಡುವುದಿಲ್ಲ” ಎಂದು ಟ್ರಂಪ್ ಗುಡುಗಿದ್ದಾರೆ. “ಇರಾನ್ ಮಿಲಿಟರಿ ಪಡೆಗಳು ಕೂಡಲೇ ಶರಣಾಗಬೇಕು. ಇನ್ನುಳಿದಿರುವ ದೇಶವನ್ನಾದರೂ ಉಳಿಸಿಕೊಳ್ಳಬೇಕಾದರೆ ಆಯುಧಗಳನ್ನು ಕೆಳಗಿಡಬೇಕು” ಎಂದು ಇರಾನ್‌ಗೆ ಟ್ರಂಪ್ ಅಂತಿಮ ಎಚ್ಚರಿಕೆ ನೀಡಿದ್ದಾರೆ. ಈ ದಾಳಿಯು ಜಾಗತಿಕ ರಾಜಕೀಯದಲ್ಲಿ ಭಾರಿ ಕಂಪನ ಸೃಷ್ಟಿಸಿದ್ದು, ಕಚ್ಚಾ ತೈಲ ಬೆಲೆ ಏರಿಕೆಯಾಗುವ ಭೀತಿ ಎದುರಾಗಿದೆ.

ಇನ್ನಷ್ಟು ಅಂತಾರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ 

Follow Us
Akshay Pallamajalu
Akshay Pallamajalu

ಅಕ್ಷಯ್ ಕುಮಾರ್ ಪಲ್ಲಮಜಲು ಅವರು ದಕ್ಷಿಣ ಕನ್ನಡ ಜಿಲ್ಲೆ, ಬಂಟ್ವಾಳ ತಾಲ್ಲೂಕಿನವರು. ಡಿಜಿಟಲ್ ಸುದ್ದಿ ಮಾಧ್ಯಮದಲ್ಲಿ​ 3 ವರ್ಷಗಳ ಅನುಭವ ಇದೆ. ಇದರ ಜತೆಗೆ ಸೋಶಿಯಲ್ ಮೀಡಿಯಾದ ಬಗ್ಗೆ ಹೆಚ್ಚಿನ ಆಸಕ್ತಿಯನ್ನು ಹೊಂದಿದ್ದಾರೆ, ಪ್ರಸ್ತುತ ಟಿವಿ9 ಕನ್ನಡದಲ್ಲಿ ಸೋಶಿಯಲ್​​​ ಮೀಡಿಯಾವನ್ನು ನೋಡಿಕೊಳ್ಳುತ್ತಿದ್ದಾರೆ. ಡಿಜಿಟಲ್ ಕ್ಷೇತ್ರದಲ್ಲಿ ಆಸಕ್ತಿಯನ್ನು ಹೊಂದಿದ್ದು, ಸೋಶಿಯಲ್​​​ ಮೀಡಿಯಾದಲ್ಲಿ ಇನ್ನೂ ಹೆಚ್ಚಿನ ವಿಚಾರಗಳನ್ನು ತಿಳಿದುಕೊಳ್ಳವ ಆಸಕ್ತಿ ಇದೆ. ಇದರ ಜತೆಗೆ ರಾಷ್ಟ್ರೀಯ ಸುದ್ದಿ ಮತ್ತು ಬ್ರೇಕಿಂಗ್​ ಸುದ್ದಿಗಳನ್ನು ಬರೆಯುತ್ತಾರೆ.

Read More
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ