AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಧ್ಯಪ್ರಾಚ್ಯದ ಇತಿಹಾಸದಲ್ಲೇ ಹಿಂದೆಂದೂ ಕಾಣದಂತಹ ಭೀಕರ ಬಾಂಬ್ ದಾಳಿ: ತೈಲ ರಫ್ತು ಕೇಂದ್ರ ಖಾರ್ಗ್ ದ್ವೀಪ ಧ್ವಂಸ

ಅಮೆರಿಕವು ಇರಾನ್‌ನ ಖಾರ್ಗ್ ದ್ವೀಪದ ಮೇಲೆ ಭೀಕರ ಬಾಂಬ್ ದಾಳಿ ನಡೆಸಿದ್ದು, ಇರಾನ್‌ನ ತೈಲ ರಫ್ತು ಮತ್ತು ಆರ್ಥಿಕತೆಗೆ ಭಾರೀ ಹೊಡೆತ ಬಿದ್ದಿದೆ. ಡೊನಾಲ್ಡ್ ಟ್ರಂಪ್, ಹೋರ್ಮುಜ್ ಜಲಸಂಧಿಯ ಭದ್ರತೆ ಹಾಗೂ ಇರಾನ್ ಪರಮಾಣು ಅಸ್ತ್ರ ಹೊಂದದಂತೆ ಎಚ್ಚರಿಕೆ ನೀಡಿದ್ದಾರೆ. ಈ ದಾಳಿಯಿಂದ ಜಾಗತಿಕ ರಾಜಕೀಯದಲ್ಲಿ ಸಂಚಲನ ಸೃಷ್ಟಿಯಾಗಿದ್ದು, ಕಚ್ಚಾ ತೈಲ ಬೆಲೆ ಏರಿಕೆಯ ಭೀತಿ ಎದುರಾಗಿದೆ.

ಮಧ್ಯಪ್ರಾಚ್ಯದ ಇತಿಹಾಸದಲ್ಲೇ ಹಿಂದೆಂದೂ ಕಾಣದಂತಹ ಭೀಕರ ಬಾಂಬ್ ದಾಳಿ: ತೈಲ ರಫ್ತು ಕೇಂದ್ರ ಖಾರ್ಗ್ ದ್ವೀಪ ಧ್ವಂಸ
ತೈಲ ರಫ್ತು ಕೇಂದ್ರ ಖಾರ್ಗ್ ದ್ವೀಪ
ಅಕ್ಷಯ್​ ಪಲ್ಲಮಜಲು​​
|

Updated on: Mar 14, 2026 | 6:40 AM

Share

ತೆಹ್ರಾನ್, ಮಾ.14: ಮಧ್ಯಪ್ರಾಚ್ಯದ ಇತಿಹಾಸದಲ್ಲೇ ಹಿಂದೆಂದೂ ಕಾಣದಂತಹ ಭೀಕರ ಬಾಂಬ್ ದಾಳಿಯನ್ನು ಅಮೆರಿಕ ಇರಾನ್ ಮೇಲೆ ನಡೆಸಿದೆ. ಇರಾನ್‌ನ ಮಿಲಿಟರಿ ಶಕ್ತಿ ಮತ್ತು ಆರ್ಥಿಕತೆಯ ಮೇಲೆ ಅಮೆರಿಕದ ಸೇನೆ ಮರಣಾಂತಿಕ ಪೆಟ್ಟು ನೀಡಿದ್ದು, ಈ ಬಗ್ಗೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅಧಿಕೃತ ಘೋಷಣೆ ಮಾಡಿದ್ದಾರೆ. ಇರಾನ್‌ನ ಆರ್ಥಿಕತೆಯ ಬೆನ್ನೆಲುಬು ಎನ್ನಲಾದ ಖಾರ್ಗ್ ದ್ವೀಪದ (Kharg Island) ಮೇಲೆ ಅಮೆರಿಕ ಅತ್ಯಂತ ಶಕ್ತಿಶಾಲಿ ಬಾಂಬ್‌ಗಳ ಮಳೆ ಸುರಿಸಿದೆ. ಇದರಿಂದ ಇರಾನ್‌ನ ತೈಲ ರಫ್ತು ಮತ್ತು ಆರ್ಥಿಕ ವ್ಯವಸ್ಥೆಗೆ ಭಾರಿ ಹೊಡೆತ ಬಿದ್ದಿದೆ.

ಇರಾನ್‌ನ ಆರ್ಥಿಕತೆಯ ಬೆನ್ನೆಲುಬು ಎನ್ನಲಾದ ಖಾರ್ಗ್ ದ್ವೀಪದ (Kharg Island) ಮೇಲೆ ಅಮೆರಿಕ ಅತ್ಯಂತ ಶಕ್ತಿಶಾಲಿ ಬಾಂಬ್‌ಗಳ ಮಳೆ ಸುರಿಸಿದೆ. ಇದರಿಂದ ಇರಾನ್‌ನ ತೈಲ ರಫ್ತು ಮತ್ತು ಆರ್ಥಿಕ ವ್ಯವಸ್ಥೆಗೆ ಭಾರಿ ಹೊಡೆತ ಬಿದ್ದಿದೆ. ಜಾಗತಿಕ ತೈಲ ಸಾಗಣೆಯ ಪ್ರಮುಖ ಮಾರ್ಗವಾದ ಹೋರ್ಮುಜ್ ಜಲಸಂಧಿಯಲ್ಲಿ (Strait of Hormuz) ಹಡಗುಗಳ ಮುಕ್ತ ಸಂಚಾರಕ್ಕೆ ಯಾರಾದರೂ ಅಡ್ಡಿಪಡಿಸಿದರೆ ಅಮೆರಿಕ ಸುಮ್ಮನಿರುವುದಿಲ್ಲ ಎಂದು ಟ್ರಂಪ್ ಎಚ್ಚರಿಸಿದ್ದಾರೆ.

ಇದನ್ನೂ ಓದಿ: ಎಲ್​ಪಿಜಿ ಕೊರತೆ ಇನ್ನಿಲ್ಲ; ಹಾರ್ಮುಜ್ ಜಲಸಂಧಿ ದಾಟಿ ಬಂತು ಭಾರತದ 2 ಗ್ಯಾಸ್ ಟ್ಯಾಂಕರ್

“ಇರಾನ್ ಯಾವುದೇ ಕಾರಣಕ್ಕೂ ಪರಮಾಣು ಅಸ್ತ್ರ ಹೊಂದುವಂತಿಲ್ಲ. ವಿಶ್ವದ ಶಾಂತಿಗೆ ಧಕ್ಕೆ ತರುವ ಸಾಮರ್ಥ್ಯವನ್ನು ಇರಾನ್‌ಗೆ ಪಡೆಯಲು ಬಿಡುವುದಿಲ್ಲ” ಎಂದು ಟ್ರಂಪ್ ಗುಡುಗಿದ್ದಾರೆ. “ಇರಾನ್ ಮಿಲಿಟರಿ ಪಡೆಗಳು ಕೂಡಲೇ ಶರಣಾಗಬೇಕು. ಇನ್ನುಳಿದಿರುವ ದೇಶವನ್ನಾದರೂ ಉಳಿಸಿಕೊಳ್ಳಬೇಕಾದರೆ ಆಯುಧಗಳನ್ನು ಕೆಳಗಿಡಬೇಕು” ಎಂದು ಇರಾನ್‌ಗೆ ಟ್ರಂಪ್ ಅಂತಿಮ ಎಚ್ಚರಿಕೆ ನೀಡಿದ್ದಾರೆ. ಈ ದಾಳಿಯು ಜಾಗತಿಕ ರಾಜಕೀಯದಲ್ಲಿ ಭಾರಿ ಕಂಪನ ಸೃಷ್ಟಿಸಿದ್ದು, ಕಚ್ಚಾ ತೈಲ ಬೆಲೆ ಏರಿಕೆಯಾಗುವ ಭೀತಿ ಎದುರಾಗಿದೆ.

ಇನ್ನಷ್ಟು ಅಂತಾರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ 

Follow Us
ಸಿಎಂಗೆ ರಾಜೀನಾಮೆ ಪತ್ರ ಸಲ್ಲಿಸಿದ ನಾಗೇಂದ್ರ: ಮನಸಿಗೆ ನೋವಾಗಿದೆ; ಡಿಕೆಶಿ
ಸಿಎಂಗೆ ರಾಜೀನಾಮೆ ಪತ್ರ ಸಲ್ಲಿಸಿದ ನಾಗೇಂದ್ರ: ಮನಸಿಗೆ ನೋವಾಗಿದೆ; ಡಿಕೆಶಿ
ಸೈನಿಕರಿಗೆ ರಾಖಿ ಕಟ್ಟಿದ ಕಾಶ್ಮೀರಿ ಮುಸ್ಲಿಂ ಯುವತಿಯರು; ವಿಡಿಯೋ ವೈರಲ್
ಸೈನಿಕರಿಗೆ ರಾಖಿ ಕಟ್ಟಿದ ಕಾಶ್ಮೀರಿ ಮುಸ್ಲಿಂ ಯುವತಿಯರು; ವಿಡಿಯೋ ವೈರಲ್
ಮಂಡ್ಯದಲ್ಲಿ ಭಿಕ್ಷುಕರ ಬಳಿ ಕಂತೆ ಕಂತೆ ಹಣ ಪತ್ತೆ
ಮಂಡ್ಯದಲ್ಲಿ ಭಿಕ್ಷುಕರ ಬಳಿ ಕಂತೆ ಕಂತೆ ಹಣ ಪತ್ತೆ
ಅರಮನೆ ಪ್ರವೇಶಿಸುತ್ತಿದ್ದಂತೆ ಜನರನ್ನ ಕಂಡು ಗಾಬರಿಗೊಂಡ ಶ್ರೀರಾಮ ಆನೆ
ಅರಮನೆ ಪ್ರವೇಶಿಸುತ್ತಿದ್ದಂತೆ ಜನರನ್ನ ಕಂಡು ಗಾಬರಿಗೊಂಡ ಶ್ರೀರಾಮ ಆನೆ
ಬಿಗ್​​ಬಾಸ್ ಅಗ್ನಿಪರೀಕ್ಷೆ: ಗೋಲ್ಡಲ್ ಟಿಕೆಟ್ ಪಡೆಯಲು ಸ್ಪರ್ಧಿಗಳ ಹರಸಾಹಸ
ಬಿಗ್​​ಬಾಸ್ ಅಗ್ನಿಪರೀಕ್ಷೆ: ಗೋಲ್ಡಲ್ ಟಿಕೆಟ್ ಪಡೆಯಲು ಸ್ಪರ್ಧಿಗಳ ಹರಸಾಹಸ
Live: ಸಚಿವ ಸ್ಥಾನಕ್ಕೆ ಬಿ. ನಾಗೇಂದ್ರ ರಾಜೀನಾಮೆ ಘೋಷಣೆ
Live: ಸಚಿವ ಸ್ಥಾನಕ್ಕೆ ಬಿ. ನಾಗೇಂದ್ರ ರಾಜೀನಾಮೆ ಘೋಷಣೆ
ಬೆಂಗಳೂರಿನ ಮಾಲ್​​​​ ಮೇಲೆ ಜಿಬಿಎ ಅಧಿಕಾರಿಗಳು ದಾಳಿ: 85 ಸಾವಿರ ದಂಡ
ಬೆಂಗಳೂರಿನ ಮಾಲ್​​​​ ಮೇಲೆ ಜಿಬಿಎ ಅಧಿಕಾರಿಗಳು ದಾಳಿ: 85 ಸಾವಿರ ದಂಡ
ಪಕ್ಕದಲ್ಲೇ ಮಾಂಜ್ರಾ ನದಿ ಇದ್ದರೂ ಇಸ್ಲಾಂಪುರದಲ್ಲಿ ನೀರಿಗಾಗಿ ತಪ್ಪದ ಪರದಾಟ
ಪಕ್ಕದಲ್ಲೇ ಮಾಂಜ್ರಾ ನದಿ ಇದ್ದರೂ ಇಸ್ಲಾಂಪುರದಲ್ಲಿ ನೀರಿಗಾಗಿ ತಪ್ಪದ ಪರದಾಟ
ಹೈಫೈವ್, ಸಿಹಿಮುತ್ತು, ತಮಾಷೆ; ಪ್ರಧಾನಿ ಮೋದಿಯ ರಕ್ಷಾಬಂಧನದ ಸಂಭ್ರಮ
ಹೈಫೈವ್, ಸಿಹಿಮುತ್ತು, ತಮಾಷೆ; ಪ್ರಧಾನಿ ಮೋದಿಯ ರಕ್ಷಾಬಂಧನದ ಸಂಭ್ರಮ
ರೌಡಿಗಳ ಮಟ್ಟಹಾಕಲು ಸಿಎಂ ಡಿಕೆಶಿ ಮಾಸ್ಟರ್ ಪ್ಲಾನ್
ರೌಡಿಗಳ ಮಟ್ಟಹಾಕಲು ಸಿಎಂ ಡಿಕೆಶಿ ಮಾಸ್ಟರ್ ಪ್ಲಾನ್