AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇರಾನ್ ಜತೆ ಚೀನಾ ಕೈಜೋಡಿಸಿದರೆ ಕಾದಿದೆ ಆಪತ್ತು, ಡೊನಾಲ್ಡ್​ ಟ್ರಂಪ್ ಅಂತಿಮ ಎಚ್ಚರಿಕೆ

ಡೊನಾಲ್ಡ್ ಟ್ರಂಪ್ ಇರಾನ್‌ಗೆ ಶಸ್ತ್ರಾಸ್ತ್ರ ನೀಡದಂತೆ ಚೀನಾಕ್ಕೆ ಕಠಿಣ ಎಚ್ಚರಿಕೆ ನೀಡಿದ್ದಾರೆ. ಇರಾನ್ ಪರ ಚೀನಾ ನಿಂತರೆ ಅಮೆರಿಕ-ಚೀನಾ ನಡುವೆ ಭೀಕರ ಸಂಘರ್ಷ ಭುಗಿಲೇಳಬಹುದು, ಇದು ಮೂರನೇ ಮಹಾಯುದ್ಧಕ್ಕೆ ಕಾರಣವಾಗುವ ಸಾಧ್ಯತೆಯಿದೆ. ಇರಾನ್ ಹಾರ್ಮುಜ್ ಜಲಸಂಧಿ ಮತ್ತು ಅಮೆರಿಕ ವಿಮಾನಗಳ ಮೇಲೆ ಚೀನಾದ ಸಹಾಯದಿಂದ ದಾಳಿ ಮಾಡುತ್ತಿದೆ ಎಂದು ಟ್ರಂಪ್ ಆರೋಪಿಸಿದ್ದಾರೆ. ಜಾಗತಿಕ ಶಾಂತಿಗೆ ಧಕ್ಕೆ ತರುತ್ತಿರುವ ಈ ನಡೆಗೆ ಚೀನಾ ಹೊಣೆಗಾರ ಎಂದು ಅಮೆರಿಕ ಹೇಳಿದೆ.

ಇರಾನ್ ಜತೆ ಚೀನಾ ಕೈಜೋಡಿಸಿದರೆ ಕಾದಿದೆ ಆಪತ್ತು, ಡೊನಾಲ್ಡ್​ ಟ್ರಂಪ್ ಅಂತಿಮ ಎಚ್ಚರಿಕೆ
ಡೊನಾಲ್ಡ್​ ಟ್ರಂಪ್ Image Credit source: Hindustan Times
ನಯನಾ ರಾಜೀವ್
|

Updated on: Apr 12, 2026 | 9:49 AM

Share

ವಾಷಿಂಗ್ಟನ್, ಏಪ್ರಿಲ್ 12: ಜಾಗತಿಕ ರಾಜಕೀಯದ ರಣರಂಗದಲ್ಲಿ ಈಗ ಅಮೆರಿಕ, ಇರಾನ್(Iran) ಮತ್ತು ಚೀನಾ ನಡುವಿನ ಸಂಘರ್ಷ ತಾರಕಕ್ಕೇರಿದೆ. ಇರಾನ್ ಬೆನ್ನಿಗೆ ನಿಂತಿರುವ ಚೀನಾಕ್ಕೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ನೀಡಿರುವ ಎಚ್ಚರಿಕೆ ಈಗ ಮೂರನೇ ಮಹಾಯುದ್ಧದ ಭೀತಿಯನ್ನು ಹುಟ್ಟುಹಾಕಿದೆ. ಪಶ್ಚಿಮ ಏಷ್ಯಾದಲ್ಲಿ ಉಲ್ಬಣಿಸಿರುವ ಬಿಕ್ಕಟ್ಟು ಈಗ ಅಮೆರಿಕ ಮತ್ತು ಡ್ರ್ಯಾಗನ್ ದೇಶ ಚೀನಾವನ್ನು ಮುಖಾಮುಖಿಯಾಗಿಸಿದೆ. ಇರಾನ್​ಗೆ ಆಧುನಿಕ ಶಸ್ತ್ರಾಸ್ತ್ರಗಳನ್ನು ಪೂರೈಸುತ್ತಿರುವ ಚೀನಾಗೆ ಡೊನಾಲ್ಡ್​ ಟ್ರಂಪ್ ಕಠಿಣ ಎಚ್ಚರಿಕೆ ನೀಡಿದ್ದಾರೆ.

ಷಿ ಜಿನ್​ಪಿಂಗ್ ಅವರೇ, ಇರಾನ್​ಗೆ ಶಸ್ತ್ರಾಸ್ತ್ರ ನೀಡುವ ಸಾಹಸ ಮಾಡಬೇಡಿ, ಇಲ್ಲದಿದ್ದರೆ ನೀವು ಊಹಿಸಲಾಗದ ಸಂಕಷ್ಟಕ್ಕೆ ಸಿಲುಕುತ್ತೀರಿ ಎಂದು ಟ್ರಂಪ್ ಗುಡುಗಿದ್ದಾರೆ. ಯಾರು ಎಷ್ಟೇ ಬಲಪ್ರಯೋಗ ಮಾಡಿದರೂ ಇರಾನ್ ವಿರುದ್ಧದ ಯುದ್ಧದಲ್ಲಿ ಅಮೆರಿಕವೇ ಗೆಲ್ಲಲಿದೆ. ಇರಾನ್ ರಾಜಿ ಮಾಡಿಕೊಳ್ಳಲು ಮಾತ್ರ ಅಸ್ತಿತ್ವದಲ್ಲಿದೆ. ಅದು ಒಪ್ಪದಿದ್ದರೆ ನಾವು ಅದನ್ನು ಸಂಪೂರ್ಣವಾಗಿ ನಾಶಪಡಿಸುತ್ತೇವೆ ಎಂದು ಟ್ರಂಪ್ ಎಚ್ಚರಿಸಿದ್ದಾರೆ.

ಇರಾನ್ ಹಾರ್ಮುಜ್ ಜಲಸಂಧಿಯಲ್ಲಿ ನೆಲಬಾಂಬ್‌ಗಳನ್ನು ಅಳವಡಿಸಿ ಜಾಗತಿಕ ತೈಲ ಸಾರಿಗೆಯನ್ನು ತಡೆಯಲು ಯತ್ನಿಸುತ್ತಿದೆ.ಆ ಮಾರ್ಗವನ್ನು ನಿರ್ಬಂಧಿಸಲು ನಾವು ಬಿಡುವುದಿಲ್ಲ ಎಂದು ಟ್ರಂಪ್ ಸ್ಪಷ್ಟಪಡಿಸಿದ್ದಾರೆ. ಇರಾನ್ ಒಪ್ಪಂದಕ್ಕೆ ಸಹಿ ಹಾಕದಂತೆ ಚೀನಾ ತೆರೆಮರೆಯಲ್ಲಿ ಪ್ರಚೋದಿಸುತ್ತಿದೆ ಎಂಬ ಆಘಾತಕಾರಿ ಮಾಹಿತಿ ಈಗ ಹೊರಬಿದ್ದಿದೆ.

ಮತ್ತಷ್ಟು ಓದಿ: ಇರಾನ್ ಬಯಸಿದರೂ ಹಾರ್ಮುಜ್ ಜಲಸಂಧಿ ತೆರೆಯಲು ಸಾಧ್ಯವಿಲ್ಲ; ಇಲ್ಲಿದೆ ಕಾರಣ

ಅಮೆರಿಕದ ಯುದ್ಧ ವಿಮಾನಗಳು ಎಲ್ಲಿದ್ದವು ಎಂಬ ನಿಖರ ಮಾಹಿತಿಯನ್ನು ಚೀನಾ ಇರಾನ್‌ಗೆ ಒದಗಿಸುತ್ತಿದೆ. ಇದರಿಂದಾಗಿ ಇರಾನ್ ಅಮೆರಿಕದ ವಿಮಾನಗಳ ಮೇಲೆ ಗುರಿ ಇಡಲು ಸಾಧ್ಯವಾಗುತ್ತಿದೆ. ಮುಂದಿನ ವಾರ ಚೀನಾ ಇರಾನ್‌ಗೆ ಅತ್ಯಾಧುನಿಕ ‘ವಾಯು ರಕ್ಷಣಾ ವ್ಯವಸ್ಥೆ’ಗಳನ್ನು ನೀಡಲಿದೆ. ವಿಶೇಷವಾಗಿ ಭುಜದ ಮೇಲೆ ಇಟ್ಟು ಹಾರಿಸುವ (MANPADS) ಕ್ಷಿಪಣಿಗಳ ಮೂಲಕ ಇರಾನ್ ಈಗಾಗಲೇ ಅಮೆರಿಕದ ಎಫ್-15 ಇ ಫೈಟರ್ ಜೆಟ್ ಮತ್ತು ಬ್ಲ್ಯಾಕ್ ಹಾಕ್ ಹೆಲಿಕಾಪ್ಟರ್‌ಗಳನ್ನು ಹೊಡೆದುರುಳಿಸಿದೆ.

ಕಳೆದ 20 ವರ್ಷಗಳಲ್ಲಿ ಅಮೆರಿಕದ ವಿಮಾನಗಳನ್ನು ಮುಟ್ಟಲು ಯಾವ ದೇಶಕ್ಕೂ ಸಾಧ್ಯವಾಗಿರಲಿಲ್ಲ, ಆದರೆ ಚೀನಾದ ತಂತ್ರಜ್ಞಾನದಿಂದ ಇರಾನ್ ಈಗ ಈ ಸಾಹಸ ಮಾಡುತ್ತಿದೆ. ಮಾರ್ಚ್ 2026 ರಲ್ಲಿ ಚೀನಾ ಎರಡು ಹಡಗುಗಳ ಮೂಲಕ ರಾಕೆಟ್ ಇಂಧನಕ್ಕೆ ಬಳಸುವ ಸೋಡಿಯಂ ಪರ್ಕ್ಲೋರೇಟ್ ಅನ್ನು ಇರಾನ್‌ಗೆ ರವಾನಿಸಿರುವುದು ಪತ್ತೆಯಾಗಿದೆ. ಇರಾನ್ ತನ್ನ ಪರಮಾಣು ಹಠ ಮತ್ತು ಚೀನಾದ ಬೆಂಬಲದಿಂದಾಗಿ ಜಾಗತಿಕ ಶಾಂತಿಗೆ ಭಂಗ ತರುತ್ತಿದೆ ಎಂದು ಅಮೆರಿಕ ಆರೋಪಿಸಿದೆ.

ಒಂದು ವೇಳೆ ಪಾಕಿಸ್ತಾನದಲ್ಲಿ ನಡೆಯುತ್ತಿರುವ ಶಾಂತಿ ಮಾತುಕತೆ ಸಂಪೂರ್ಣ ಹಳಿ ತಪ್ಪಿದರೆ, ಅದರ ಹೊಣೆಯನ್ನು ಇರಾನ್ ಮತ್ತು ಚೀನಾ ಹೊರಬೇಕಾಗುತ್ತದೆ ಎಂದು ಟ್ರಂಪ್ ಹೇಳಿದ್ದಾರೆ. ಒಂದು ಕಡೆ ರಾಜತಾಂತ್ರಿಕ ಮಾತುಕತೆ ನಡೆಯುತ್ತಿದ್ದರೆ, ಇನ್ನೊಂದು ಕಡೆ ಸಮರ ಸನ್ನದ್ಧತೆ ಭರದಿಂದ ಸಾಗಿದೆ. ಚೀನಾ ಮತ್ತು ಅಮೆರಿಕದ ನಡುವಿನ ಈ ‘ನೇರ ಸಮರ’ದ ಮುನ್ಸೂಚನೆಯು ಇಡೀ ಜಗತ್ತನ್ನು ಆತಂಕಕ್ಕೆ ತಳ್ಳಿದೆ. ಇರಾನ್-ಅಮೆರಿಕ ಸಂಘರ್ಷವು ಈಗ ದೊಡ್ಡ ಶಕ್ತಿಗಳ ನಡುವಿನ ಜಿದ್ದಾಜಿದ್ದಿಯಾಗಿ ಮಾರ್ಪಟ್ಟಿದೆ.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ಬೆಳೆ ವಿಮೆ ವಿಚಾರಕ್ಕೆ ಪ್ರಗತಿ ಪರಿಶೀಲನಾ ಸಭೆಯಲ್ಲಿ ಶಿವಲಿಂಗೇಗೌಡ ಗರಂ
ಬೆಳೆ ವಿಮೆ ವಿಚಾರಕ್ಕೆ ಪ್ರಗತಿ ಪರಿಶೀಲನಾ ಸಭೆಯಲ್ಲಿ ಶಿವಲಿಂಗೇಗೌಡ ಗರಂ
ಆಗಸ್ಟ್ 17ರಿಂದ 23ರ ವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿ ತಿಳಿದುಕೊಳ್ಳಿ
ಆಗಸ್ಟ್ 17ರಿಂದ 23ರ ವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿ ತಿಳಿದುಕೊಳ್ಳಿ
ರವಿಚಂದ್ರನ್ ಮನೆ ಮಾರಿದ್ದು ನಿಜವೇ? ಅಸಲಿ ವಿಷಯ ತೆರೆದಿಟ್ಟ ದಿಲ್ ಸೇ ದಿಲೀಪ್
ರವಿಚಂದ್ರನ್ ಮನೆ ಮಾರಿದ್ದು ನಿಜವೇ? ಅಸಲಿ ವಿಷಯ ತೆರೆದಿಟ್ಟ ದಿಲ್ ಸೇ ದಿಲೀಪ್
ಅರಣ್ಯ ಸಿಬ್ಬಂದಿ ವಿರುದ್ಧ ಕೊಲೆ ಪ್ರಕರಣ; ಯಾರ ಹೆಸರೂ ಉಲ್ಲೇಖವಿಲ್ಲ!
ಅರಣ್ಯ ಸಿಬ್ಬಂದಿ ವಿರುದ್ಧ ಕೊಲೆ ಪ್ರಕರಣ; ಯಾರ ಹೆಸರೂ ಉಲ್ಲೇಖವಿಲ್ಲ!
ಇಂದು ವಿನಾಯಕಿ ಚತುರ್ಥಿ; ಆಸೆ ಆಕಾಂಕ್ಷೆಗಳ ಸಿದ್ಧಿಗಾಗಿ ವಿಶೇಷ ವ್ರತದ ದಿನ
ಇಂದು ವಿನಾಯಕಿ ಚತುರ್ಥಿ; ಆಸೆ ಆಕಾಂಕ್ಷೆಗಳ ಸಿದ್ಧಿಗಾಗಿ ವಿಶೇಷ ವ್ರತದ ದಿನ
ಸ್ವಾತಂತ್ರ್ಯೋತ್ಸವ; HMT ನೂತನ ವಾಚ್ ಬಿಡುಗಡೆ: ಖರೀದಿಗೆ ಮುಗಿಬಿದ್ದ ಜನ
ಸ್ವಾತಂತ್ರ್ಯೋತ್ಸವ; HMT ನೂತನ ವಾಚ್ ಬಿಡುಗಡೆ: ಖರೀದಿಗೆ ಮುಗಿಬಿದ್ದ ಜನ
ದರ್ಶನ್ ಮತ್ತೆ ಜೈಲು ಸೇರಿ 1 ವರ್ಷ, ಏನೇನಾಯ್ತು? ವಿವರ ಇಲ್ಲಿದೆ
ದರ್ಶನ್ ಮತ್ತೆ ಜೈಲು ಸೇರಿ 1 ವರ್ಷ, ಏನೇನಾಯ್ತು? ವಿವರ ಇಲ್ಲಿದೆ
ಬಿಗ್​​ಬಾಸ್ ಮನೆಗೆ ಹೋಗಲು ಅಪ್ಪ-ಮಗನ ನಡುವೆಯೇ ಪೈಪೋಟಿ: ವಿಡಿಯೋ
ಬಿಗ್​​ಬಾಸ್ ಮನೆಗೆ ಹೋಗಲು ಅಪ್ಪ-ಮಗನ ನಡುವೆಯೇ ಪೈಪೋಟಿ: ವಿಡಿಯೋ
ಹೆಬ್ಬಾಳ್ಕರ್​​ ಪರ ನಿಂತ ಜಾರಕಿಹೊಳಿ, ಹಾವು ಮುಂಗುಸಿಯಂತಿದ್ದವರು ಒಂದಾದ್ರಾ?
ಹೆಬ್ಬಾಳ್ಕರ್​​ ಪರ ನಿಂತ ಜಾರಕಿಹೊಳಿ, ಹಾವು ಮುಂಗುಸಿಯಂತಿದ್ದವರು ಒಂದಾದ್ರಾ?
ಸೋಮಾವತಿ ನದಿಗೆ ಬಿದ್ದ ಕಾರು: ಬಂಡೆಯಿಂದಾಗಿ ಉಳಿದ ದಂಪತಿ ಜೀವ
ಸೋಮಾವತಿ ನದಿಗೆ ಬಿದ್ದ ಕಾರು: ಬಂಡೆಯಿಂದಾಗಿ ಉಳಿದ ದಂಪತಿ ಜೀವ