AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಮಾನ ಹೈಜಾಕ್ ಮಾಡಲು ಹೋಗಿ ಪ್ರಯಾಣಿಕನ ಗುಂಡೇಟಿಗೆ ಬಲಿಯಾದ ದಾಳಿಕೋರ

ಚಾಕು ತೋರಿಸಿ ವಿಮಾನವನ್ನು ಹೈಜಾಕ್(Hijack) ಮಾಡಲು ಯತ್ನಿಸಿದ ವ್ಯಕ್ತಿಯನ್ನು ಪ್ರಯಾಣಿಕರೊಬ್ಬರು ಗುಂಡು ಹಾರಿಸಿ ಹತ್ಯೆ ಮಾಡಿರುವ ಘಟನೆ ಬೆಲೀಜ್​ನಲ್ಲಿ ನಡೆದಿದೆ. ಅಮೆರಿಕದ ಪ್ರಜೆಯೊಬ್ಬ ಚಾಕು ತೋರಿಸಿ ವಿಮಾನ(Flight)ವನ್ನು ಹೈಜಾಕ್ ಮಾಡಲು ಯತ್ನಿಸಿದ್ದ ಕೂಡಲೇ ಪ್ರಯಾಣಿಕರೊಬ್ಬರು ಪರವಾನಗಿ ಹೊಂದಿರುವ ಪಿಸ್ತೂಲಿನಿಂದ ಆರೋಪಿಗೆ ಗುಂಡು ಹಾರಿಸಿದ ಪರಿಣಾಮ ಆತ ಮಾರ್ಗಮಧ್ಯದಲ್ಲಿಯೇ ಸಾವನ್ನಪ್ಪಿದ್ದಾನೆ.

ವಿಮಾನ ಹೈಜಾಕ್ ಮಾಡಲು ಹೋಗಿ ಪ್ರಯಾಣಿಕನ ಗುಂಡೇಟಿಗೆ ಬಲಿಯಾದ ದಾಳಿಕೋರ
ವಿಮಾನ -ಸಾಂದರ್ಭಿಕ ಚಿತ್ರImage Credit source: Shutterstock
ನಯನಾ ರಾಜೀವ್
|

Updated on: Apr 18, 2025 | 8:50 AM

Share

ಬೆಲೀಜ್, ಏಪ್ರಿಲ್ 18: ಚಾಕು ತೋರಿಸಿ ವಿಮಾನವನ್ನು ಹೈಜಾಕ್(Hijack) ಮಾಡಲು ಯತ್ನಿಸಿದ ವ್ಯಕ್ತಿಯನ್ನು ಪ್ರಯಾಣಿಕರೊಬ್ಬರು ಗುಂಡು ಹಾರಿಸಿ ಹತ್ಯೆ ಮಾಡಿರುವ ಘಟನೆ ಬೆಲೀಜ್​ನಲ್ಲಿ ನಡೆದಿದೆ. ಅಮೆರಿಕದ ಪ್ರಜೆಯೊಬ್ಬ ಚಾಕು ತೋರಿಸಿ ವಿಮಾನ(Flight)ವನ್ನು ಹೈಜಾಕ್ ಮಾಡಲು ಯತ್ನಿಸಿದ್ದ ಕೂಡಲೇ ಪ್ರಯಾಣಿಕರೊಬ್ಬರು ಪರವಾನಗಿ ಹೊಂದಿರುವ ಪಿಸ್ತೂಲಿನಿಂದ ಆರೋಪಿಗೆ ಗುಂಡು ಹಾರಿಸಿದ ಪರಿಣಾಮ ಆತ ಮಾರ್ಗಮಧ್ಯದಲ್ಲಿಯೇ ಸಾವನ್ನಪ್ಪಿದ್ದಾನೆ.

ಸ್ಯಾನ್​ ಪೆಡ್ರೋಗೆ ತೆರಳುತ್ತಿದ್ದ ವಿಮಾನ ಇದಾಗಿತ್ತು. ಈ ಘಟನೆಯನ್ನು ಮೂವರು ಗಾಯಗೊಂಡಿದ್ದಾರೆ. ಸ್ಯಾನ್ ಪೆಡ್ರೊಗೆ ತೆರಳುತ್ತಿದ್ದ ವಿಮಾನದಲ್ಲಿ ಆಕಾಶದಲ್ಲಿ ಈ ಘಟನೆ ಸಂಭವಿಸಿದೆ. 49 ವರ್ಷದ ಶಂಕಿತ ವ್ಯಕ್ತಿ ಪ್ರಯಾಣಿಕರ ಮೇಲೆ ಚಾಕುವಿನಿಂದ ದಾಳಿ ಮಾಡಲು ಪ್ರಾರಂಭಿಸಿದ್ದ.

ಬೆಲೀಜ್ ಪೊಲೀಸ್ ಆಯುಕ್ತ ಚೆಸ್ಟರ್ ವಿಲಿಯಮ್ಸ್ ಅವರ ಪ್ರಕಾರ, ದಾಳಿಕೋರನನ್ನು ನಂತರ ಅಮೆರಿಕದ ಪ್ರಜೆ ಅಕಿನ್ಯೆಲಾ ಸಾವಾ ಟೇಲರ್ ಎಂದು ಗುರುತಿಸಲಾಯಿತು. ನ್ಯೂಯಾರ್ಕ್ ಪೋಸ್ಟ್ ವರದಿ ಮಾಡಿದಂತೆ, ಕಮಿಷನರ್ ವಿಲಿಯಮ್ಸ್ ಟೇಲರ್ ಮೇಲೆ ಗುಂಡು ಹಾರಿಸಿದ ಪ್ರಯಾಣಿಕನನ್ನು ಹೊಗಳಿ ಹೀರೋ ಎಂದು ಉದ್ಘರಿಸಿದ್ದಾರೆ.

ಇದನ್ನೂ ಓದಿ
Image
ಜಾಫರ್ ಎಕ್ಸ್ ಪ್ರೆಸ್ ರೈಲ್ ಹೈಜಾಕ್ ಎಂದು 2022ರ ವಿಡಿಯೋ ವೈರಲ್
Image
ಪಾಕಿಸ್ತಾನದ ರೈಲು ಹೈಜಾಕ್; ಉಗ್ರರಿಂದ 50 ಒತ್ತೆಯಾಳುಗಳ ಹತ್ಯೆ
Image
ವಿಮಾನ ಹೈಜಾಕ್​ಗಳ ಬಗ್ಗೆ ಬಾಲಿವುಡ್​ನಲ್ಲಿ ಬಂದ ಸಿನಿಮಾಗಳಿವು
Image
ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಏರ್​ ಇಂಡಿಯಾ ವಿಮಾನ ತುರ್ತು ಭೂಸ್ಪರ್ಶ

ಟೇಲರ್ ವಿಮಾನದೊಳಗೆ ಚಾಕುವನ್ನು ಹೇಗೆ ತರುವಲ್ಲಿ ಯಶಸ್ವಿಯಾದರು ಎಂಬುದು ಇನ್ನೂ ಸ್ಪಷ್ಟವಾಗಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಘಟನೆಯ ಕುರಿತು ನಡೆಯುತ್ತಿರುವ ತನಿಖೆಗೆ ಸಹಾಯಕ್ಕಾಗಿ ಬೆಲೀಜ್ ಅಧಿಕಾರಿಗಳು ಅಮೆರಿಕ ರಾಯಭಾರ ಕಚೇರಿಯನ್ನು ಸಂಪರ್ಕಿಸಿದ್ದಾರೆ.

ಮತ್ತಷ್ಟು ಓದಿ: ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಎನ್‌ಎಸ್‌ಜಿಯಿಂದ ಆಂಟಿ-ಹೈಜಾಕ್‌ ಅಣುಕು ಪ್ರದರ್ಶನ

49 ವರ್ಷದ ದಾಳಿಕೋರ ವಿಮಾನವನ್ನು ದೇಶದಿಂದ ಹೊರಗೆ ಕರೆದೊಯ್ಯಲು ಬಯಸಿದ್ದ. ಸ್ಯಾನ್ ಪೆಡ್ರೊಗೆ ಹೋಗುವ ವಿಮಾನದೊಳಗೆ ಅಕಿನ್ಯೆಲಾ ಸಾವಾ ಟೇಲರ್ ಜನರ ಮೇಲೆ ಏಕಾಏಕಿ ಹಲ್ಲೆ ನಡೆಸಲು ಪ್ರಾರಂಭಿಸಿದ್ದ. ಪ್ರಯಾಣಿಕರೊಬ್ಬರು ಆತನ ಮೇಲೆ ಗುಂಡು ಹಾರಿಸಿದ ಬಳಿಕ ವಿಮಾನವನ್ನು ತುರ್ತಾಗಿ ಕೆಳಗಿಳಿಸಿ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು, ಅಷ್ಟೊರೊಳಗೆ ಆತ ಸಾವನ್ನಪ್ಪಿದ್ದ.

ಈ ವಾರದ ಆರಂಭದಲ್ಲಿ ಆತ ಬೆಲೀಜ್​ಗೆ ಬಂದಿದ್ದ ಎಂದು ವರದಿಯಾಗಿದೆ. ಆದರೆ ವಾರಾಂತ್ಯದಲ್ಲಿ ದೇಶಕ್ಕೆ ಪ್ರವೇಶ ನಿರಾಕರಿಸಲಾಗಿತ್ತು. ಮಧ್ಯ ಅಮೆರಿಕದಲ್ಲಿರುವ ಒಂದು ಸಣ್ಣ ರಾಷ್ಟ್ರವಾದ ಬೆಲೀಜ್‌ನಲ್ಲಿ 2023 ರ ಹೊತ್ತಿಗೆ ಸರಿಸುಮಾರು 410,825 ಜನರು ವಾಸಿಸುತ್ತಿದ್ದಾರೆ. ಜನಸಂಖ್ಯೆಯ ಅರ್ಧಕ್ಕಿಂತ ಹೆಚ್ಚು (52.9%) ಜನರು ಮೆಸ್ಟಿಜೊ ಜನಾಂಗದವರಾಗಿದ್ದು, ಸ್ಥಳೀಯ ಮಾಯಾ ಮತ್ತು ಯುರೋಪಿಯನ್ ಮೂಲದವರು.

ಇನ್ನೂ 24.9% ಕ್ರಿಯೋಲ್‌ಗಳು, 10.6% ಮಾಯಾ ಜನಾಂಗದವರು ಮತ್ತು 6.1% ಗರಿಫುನಾ ಜನಾಂಗದವರು. ಕ್ರಿಶ್ಚಿಯನ್ ಧರ್ಮವು ಪ್ರಬಲ ಧರ್ಮವಾಗಿದ್ದು, ಸುಮಾರು 80% ಜನಸಂಖ್ಯೆಯು ಕ್ರಿಶ್ಚಿಯನ್ನರೆಂದು ಗುರುತಿಸಿಕೊಳ್ಳುತ್ತದೆ. ಬೆಲೀಜ್ ಮಧ್ಯ ಅಮೆರಿಕದಲ್ಲಿ ಕಡಿಮೆ ಜನಸಂಖ್ಯೆ ಹೊಂದಿರುವ ರಾಷ್ಟ್ರವಾಗಿದೆ. ಜನಸಂಖ್ಯೆಯ ಸರಿಸುಮಾರು ನಾಲ್ಕನೇ ಒಂದು ಭಾಗದಷ್ಟು ಜನರು ಬೆಲೀಜ್ ನಗರದಲ್ಲಿ ವಾಸಿಸುತ್ತಿದ್ದಾರೆ.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ