AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಮಾನ ಹೈಜಾಕ್ ಮಾಡಲು ಹೋಗಿ ಪ್ರಯಾಣಿಕನ ಗುಂಡೇಟಿಗೆ ಬಲಿಯಾದ ದಾಳಿಕೋರ

ಚಾಕು ತೋರಿಸಿ ವಿಮಾನವನ್ನು ಹೈಜಾಕ್(Hijack) ಮಾಡಲು ಯತ್ನಿಸಿದ ವ್ಯಕ್ತಿಯನ್ನು ಪ್ರಯಾಣಿಕರೊಬ್ಬರು ಗುಂಡು ಹಾರಿಸಿ ಹತ್ಯೆ ಮಾಡಿರುವ ಘಟನೆ ಬೆಲೀಜ್​ನಲ್ಲಿ ನಡೆದಿದೆ. ಅಮೆರಿಕದ ಪ್ರಜೆಯೊಬ್ಬ ಚಾಕು ತೋರಿಸಿ ವಿಮಾನ(Flight)ವನ್ನು ಹೈಜಾಕ್ ಮಾಡಲು ಯತ್ನಿಸಿದ್ದ ಕೂಡಲೇ ಪ್ರಯಾಣಿಕರೊಬ್ಬರು ಪರವಾನಗಿ ಹೊಂದಿರುವ ಪಿಸ್ತೂಲಿನಿಂದ ಆರೋಪಿಗೆ ಗುಂಡು ಹಾರಿಸಿದ ಪರಿಣಾಮ ಆತ ಮಾರ್ಗಮಧ್ಯದಲ್ಲಿಯೇ ಸಾವನ್ನಪ್ಪಿದ್ದಾನೆ.

ವಿಮಾನ ಹೈಜಾಕ್ ಮಾಡಲು ಹೋಗಿ ಪ್ರಯಾಣಿಕನ ಗುಂಡೇಟಿಗೆ ಬಲಿಯಾದ ದಾಳಿಕೋರ
ವಿಮಾನ -ಸಾಂದರ್ಭಿಕ ಚಿತ್ರImage Credit source: Shutterstock
ನಯನಾ ರಾಜೀವ್
|

Updated on: Apr 18, 2025 | 8:50 AM

Share

ಬೆಲೀಜ್, ಏಪ್ರಿಲ್ 18: ಚಾಕು ತೋರಿಸಿ ವಿಮಾನವನ್ನು ಹೈಜಾಕ್(Hijack) ಮಾಡಲು ಯತ್ನಿಸಿದ ವ್ಯಕ್ತಿಯನ್ನು ಪ್ರಯಾಣಿಕರೊಬ್ಬರು ಗುಂಡು ಹಾರಿಸಿ ಹತ್ಯೆ ಮಾಡಿರುವ ಘಟನೆ ಬೆಲೀಜ್​ನಲ್ಲಿ ನಡೆದಿದೆ. ಅಮೆರಿಕದ ಪ್ರಜೆಯೊಬ್ಬ ಚಾಕು ತೋರಿಸಿ ವಿಮಾನ(Flight)ವನ್ನು ಹೈಜಾಕ್ ಮಾಡಲು ಯತ್ನಿಸಿದ್ದ ಕೂಡಲೇ ಪ್ರಯಾಣಿಕರೊಬ್ಬರು ಪರವಾನಗಿ ಹೊಂದಿರುವ ಪಿಸ್ತೂಲಿನಿಂದ ಆರೋಪಿಗೆ ಗುಂಡು ಹಾರಿಸಿದ ಪರಿಣಾಮ ಆತ ಮಾರ್ಗಮಧ್ಯದಲ್ಲಿಯೇ ಸಾವನ್ನಪ್ಪಿದ್ದಾನೆ.

ಸ್ಯಾನ್​ ಪೆಡ್ರೋಗೆ ತೆರಳುತ್ತಿದ್ದ ವಿಮಾನ ಇದಾಗಿತ್ತು. ಈ ಘಟನೆಯನ್ನು ಮೂವರು ಗಾಯಗೊಂಡಿದ್ದಾರೆ. ಸ್ಯಾನ್ ಪೆಡ್ರೊಗೆ ತೆರಳುತ್ತಿದ್ದ ವಿಮಾನದಲ್ಲಿ ಆಕಾಶದಲ್ಲಿ ಈ ಘಟನೆ ಸಂಭವಿಸಿದೆ. 49 ವರ್ಷದ ಶಂಕಿತ ವ್ಯಕ್ತಿ ಪ್ರಯಾಣಿಕರ ಮೇಲೆ ಚಾಕುವಿನಿಂದ ದಾಳಿ ಮಾಡಲು ಪ್ರಾರಂಭಿಸಿದ್ದ.

ಬೆಲೀಜ್ ಪೊಲೀಸ್ ಆಯುಕ್ತ ಚೆಸ್ಟರ್ ವಿಲಿಯಮ್ಸ್ ಅವರ ಪ್ರಕಾರ, ದಾಳಿಕೋರನನ್ನು ನಂತರ ಅಮೆರಿಕದ ಪ್ರಜೆ ಅಕಿನ್ಯೆಲಾ ಸಾವಾ ಟೇಲರ್ ಎಂದು ಗುರುತಿಸಲಾಯಿತು. ನ್ಯೂಯಾರ್ಕ್ ಪೋಸ್ಟ್ ವರದಿ ಮಾಡಿದಂತೆ, ಕಮಿಷನರ್ ವಿಲಿಯಮ್ಸ್ ಟೇಲರ್ ಮೇಲೆ ಗುಂಡು ಹಾರಿಸಿದ ಪ್ರಯಾಣಿಕನನ್ನು ಹೊಗಳಿ ಹೀರೋ ಎಂದು ಉದ್ಘರಿಸಿದ್ದಾರೆ.

ಇದನ್ನೂ ಓದಿ
Image
ಜಾಫರ್ ಎಕ್ಸ್ ಪ್ರೆಸ್ ರೈಲ್ ಹೈಜಾಕ್ ಎಂದು 2022ರ ವಿಡಿಯೋ ವೈರಲ್
Image
ಪಾಕಿಸ್ತಾನದ ರೈಲು ಹೈಜಾಕ್; ಉಗ್ರರಿಂದ 50 ಒತ್ತೆಯಾಳುಗಳ ಹತ್ಯೆ
Image
ವಿಮಾನ ಹೈಜಾಕ್​ಗಳ ಬಗ್ಗೆ ಬಾಲಿವುಡ್​ನಲ್ಲಿ ಬಂದ ಸಿನಿಮಾಗಳಿವು
Image
ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಏರ್​ ಇಂಡಿಯಾ ವಿಮಾನ ತುರ್ತು ಭೂಸ್ಪರ್ಶ

ಟೇಲರ್ ವಿಮಾನದೊಳಗೆ ಚಾಕುವನ್ನು ಹೇಗೆ ತರುವಲ್ಲಿ ಯಶಸ್ವಿಯಾದರು ಎಂಬುದು ಇನ್ನೂ ಸ್ಪಷ್ಟವಾಗಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಘಟನೆಯ ಕುರಿತು ನಡೆಯುತ್ತಿರುವ ತನಿಖೆಗೆ ಸಹಾಯಕ್ಕಾಗಿ ಬೆಲೀಜ್ ಅಧಿಕಾರಿಗಳು ಅಮೆರಿಕ ರಾಯಭಾರ ಕಚೇರಿಯನ್ನು ಸಂಪರ್ಕಿಸಿದ್ದಾರೆ.

ಮತ್ತಷ್ಟು ಓದಿ: ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಎನ್‌ಎಸ್‌ಜಿಯಿಂದ ಆಂಟಿ-ಹೈಜಾಕ್‌ ಅಣುಕು ಪ್ರದರ್ಶನ

49 ವರ್ಷದ ದಾಳಿಕೋರ ವಿಮಾನವನ್ನು ದೇಶದಿಂದ ಹೊರಗೆ ಕರೆದೊಯ್ಯಲು ಬಯಸಿದ್ದ. ಸ್ಯಾನ್ ಪೆಡ್ರೊಗೆ ಹೋಗುವ ವಿಮಾನದೊಳಗೆ ಅಕಿನ್ಯೆಲಾ ಸಾವಾ ಟೇಲರ್ ಜನರ ಮೇಲೆ ಏಕಾಏಕಿ ಹಲ್ಲೆ ನಡೆಸಲು ಪ್ರಾರಂಭಿಸಿದ್ದ. ಪ್ರಯಾಣಿಕರೊಬ್ಬರು ಆತನ ಮೇಲೆ ಗುಂಡು ಹಾರಿಸಿದ ಬಳಿಕ ವಿಮಾನವನ್ನು ತುರ್ತಾಗಿ ಕೆಳಗಿಳಿಸಿ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು, ಅಷ್ಟೊರೊಳಗೆ ಆತ ಸಾವನ್ನಪ್ಪಿದ್ದ.

ಈ ವಾರದ ಆರಂಭದಲ್ಲಿ ಆತ ಬೆಲೀಜ್​ಗೆ ಬಂದಿದ್ದ ಎಂದು ವರದಿಯಾಗಿದೆ. ಆದರೆ ವಾರಾಂತ್ಯದಲ್ಲಿ ದೇಶಕ್ಕೆ ಪ್ರವೇಶ ನಿರಾಕರಿಸಲಾಗಿತ್ತು. ಮಧ್ಯ ಅಮೆರಿಕದಲ್ಲಿರುವ ಒಂದು ಸಣ್ಣ ರಾಷ್ಟ್ರವಾದ ಬೆಲೀಜ್‌ನಲ್ಲಿ 2023 ರ ಹೊತ್ತಿಗೆ ಸರಿಸುಮಾರು 410,825 ಜನರು ವಾಸಿಸುತ್ತಿದ್ದಾರೆ. ಜನಸಂಖ್ಯೆಯ ಅರ್ಧಕ್ಕಿಂತ ಹೆಚ್ಚು (52.9%) ಜನರು ಮೆಸ್ಟಿಜೊ ಜನಾಂಗದವರಾಗಿದ್ದು, ಸ್ಥಳೀಯ ಮಾಯಾ ಮತ್ತು ಯುರೋಪಿಯನ್ ಮೂಲದವರು.

ಇನ್ನೂ 24.9% ಕ್ರಿಯೋಲ್‌ಗಳು, 10.6% ಮಾಯಾ ಜನಾಂಗದವರು ಮತ್ತು 6.1% ಗರಿಫುನಾ ಜನಾಂಗದವರು. ಕ್ರಿಶ್ಚಿಯನ್ ಧರ್ಮವು ಪ್ರಬಲ ಧರ್ಮವಾಗಿದ್ದು, ಸುಮಾರು 80% ಜನಸಂಖ್ಯೆಯು ಕ್ರಿಶ್ಚಿಯನ್ನರೆಂದು ಗುರುತಿಸಿಕೊಳ್ಳುತ್ತದೆ. ಬೆಲೀಜ್ ಮಧ್ಯ ಅಮೆರಿಕದಲ್ಲಿ ಕಡಿಮೆ ಜನಸಂಖ್ಯೆ ಹೊಂದಿರುವ ರಾಷ್ಟ್ರವಾಗಿದೆ. ಜನಸಂಖ್ಯೆಯ ಸರಿಸುಮಾರು ನಾಲ್ಕನೇ ಒಂದು ಭಾಗದಷ್ಟು ಜನರು ಬೆಲೀಜ್ ನಗರದಲ್ಲಿ ವಾಸಿಸುತ್ತಿದ್ದಾರೆ.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
Nayana Rajeev
Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
ಬೇರೆ ಕೇಸ್ ಆರೋಪಿಗಳಿಗೆ ಜಾಮೀನು ಸಿಕ್ಕರೂ ದರ್ಶನ್​ಗೆ ಸಿಗುತ್ತಿಲ್ಲ ಯಾಕೆ?
ಬೇರೆ ಕೇಸ್ ಆರೋಪಿಗಳಿಗೆ ಜಾಮೀನು ಸಿಕ್ಕರೂ ದರ್ಶನ್​ಗೆ ಸಿಗುತ್ತಿಲ್ಲ ಯಾಕೆ?
ಟ್ರ್ಯಾಕ್ಟರ್ ಬಿದ್ದು 6 ಜನ ದುರಂತ ಅಂತ್ಯ:ಘಟನೆ ಬಗ್ಗೆ ಐಜಿಪಿ ಹೇಳಿದ್ದಿಷ್ಟು
ಟ್ರ್ಯಾಕ್ಟರ್ ಬಿದ್ದು 6 ಜನ ದುರಂತ ಅಂತ್ಯ:ಘಟನೆ ಬಗ್ಗೆ ಐಜಿಪಿ ಹೇಳಿದ್ದಿಷ್ಟು
ಆಕಾಶ್ ಸಿಂಗ್ ಪ್ರದರ್ಶಿಸಿದ ಚೀಟಿಯಲ್ಲಿ ಏನಿತ್ತು?
ಆಕಾಶ್ ಸಿಂಗ್ ಪ್ರದರ್ಶಿಸಿದ ಚೀಟಿಯಲ್ಲಿ ಏನಿತ್ತು?
ದರ್ಶನ್​ಗೆ ಇಲ್ಲ ಜಾಮೀನು; ಸುಪ್ರೀಂ ಕೋರ್ಟ್ ವಿಚಾರಣೆಯಲ್ಲಿ ನಡೆದಿದ್ದು ಏನು?
ದರ್ಶನ್​ಗೆ ಇಲ್ಲ ಜಾಮೀನು; ಸುಪ್ರೀಂ ಕೋರ್ಟ್ ವಿಚಾರಣೆಯಲ್ಲಿ ನಡೆದಿದ್ದು ಏನು?
ಪ್ಲಾಸ್ಟಿಕ್ ಕವರ್ ಸಿಲುಕಿ ಕೋತಿ ಪರದಾಟ; ವಿಡಿಯೋ ವೈರಲ್​​
ಪ್ಲಾಸ್ಟಿಕ್ ಕವರ್ ಸಿಲುಕಿ ಕೋತಿ ಪರದಾಟ; ವಿಡಿಯೋ ವೈರಲ್​​
ಯುಎಇಯಲ್ಲಿ ಪ್ರಧಾನಿ ನರೇಂದ್ರ ಮೋದಿಗೆ ಅದ್ದೂರಿ ಸ್ವಾಗತ
ಯುಎಇಯಲ್ಲಿ ಪ್ರಧಾನಿ ನರೇಂದ್ರ ಮೋದಿಗೆ ಅದ್ದೂರಿ ಸ್ವಾಗತ
ಪವಿತ್ರಾ ಗೌಡಗೆ ಜಾಮೀನು ಸಿಗುವ ಸಾಧ್ಯತೆ ಹೆಚ್ಚು: ವಕೀಲ ಬಾಲನ್
ಪವಿತ್ರಾ ಗೌಡಗೆ ಜಾಮೀನು ಸಿಗುವ ಸಾಧ್ಯತೆ ಹೆಚ್ಚು: ವಕೀಲ ಬಾಲನ್
ಪ್ರಧಾನಿಯ ಬೆಂಗಾವಲು ಪಡೆ ಕಡಿಮೆ ಮಾಡುವುದು ಸರಿಯಲ್ಲ; ಮಾಜಿ ರಾ ಮುಖ್ಯಸ್ಥ
ಪ್ರಧಾನಿಯ ಬೆಂಗಾವಲು ಪಡೆ ಕಡಿಮೆ ಮಾಡುವುದು ಸರಿಯಲ್ಲ; ಮಾಜಿ ರಾ ಮುಖ್ಯಸ್ಥ
ತುಂಗಭದ್ರಾ ಸೇತುವೆ ವೇಲೆ ಮತ್ತೊಂದು ಅಪಘಾತ: ಕಾರಿಗೆ ಗುದ್ದಿದ ಲಾರಿ
ತುಂಗಭದ್ರಾ ಸೇತುವೆ ವೇಲೆ ಮತ್ತೊಂದು ಅಪಘಾತ: ಕಾರಿಗೆ ಗುದ್ದಿದ ಲಾರಿ
ಶಾಸಕರಾದ ಬಳಿಕ ಸಮರ್ಥ್ ಮೊದಲ ಸಭೆಯಲ್ಲಿ ಏನೇನು ಆಯ್ತು?
ಶಾಸಕರಾದ ಬಳಿಕ ಸಮರ್ಥ್ ಮೊದಲ ಸಭೆಯಲ್ಲಿ ಏನೇನು ಆಯ್ತು?