AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇರಾನ್ ಸಮರ ಅಂತ್ಯ: ಟ್ರಂಪ್ ಆಡಳಿತದ ದಿಢೀರ್ ಘೋಷಣೆ, ಸಂಸತ್ತಿನ ಹಸ್ತಕ್ಷೇಪಕ್ಕೆ ಬೀಳಲಿದೆಯೇ ಬ್ರೇಕ್?

ಟ್ರಂಪ್ ಆಡಳಿತ ಇರಾನ್ ಸಮರ 'ಅಂತ್ಯಗೊಂಡಿದೆ' ಎಂದು ಘೋಷಿಸಿದೆ. ಇದು ಅಮೆರಿಕ ಕಾಂಗ್ರೆಸ್‌ನಿಂದ ಕಡ್ಡಾಯ ಅನುಮೋದನೆ ಪಡೆಯುವುದನ್ನು ತಪ್ಪಿಸುವ ತಂತ್ರವಾಗಿದೆ. ಏಪ್ರಿಲ್ 7 ರಿಂದ ಗುಂಡಿನ ಚಕಮಕಿ ನಿಂತ ಕಾರಣ, 60 ದಿನಗಳ ಕಾಲಮಿತಿ ಸ್ಥಗಿತಗೊಳ್ಳುತ್ತದೆ ಎಂಬುದು ಶ್ವೇತಭವನದ ವಾದ. ಆದರೆ, ಡೆಮೋಕ್ರಾಟ್‌ಗಳು ಇದನ್ನು ಕಾನೂನಿನ ಉಲ್ಲಂಘನೆ ಎಂದು ತಿರಸ್ಕರಿಸಿದ್ದಾರೆ. ಇದು ಶ್ವೇತಭವನ-ಕಾಂಗ್ರೆಸ್ ನಡುವೆ ಹೊಸ ಕಾನೂನು ಬಿಕ್ಕಟ್ಟು ಸೃಷ್ಟಿಸಿದೆ.

ಇರಾನ್ ಸಮರ ಅಂತ್ಯ: ಟ್ರಂಪ್ ಆಡಳಿತದ ದಿಢೀರ್ ಘೋಷಣೆ, ಸಂಸತ್ತಿನ ಹಸ್ತಕ್ಷೇಪಕ್ಕೆ ಬೀಳಲಿದೆಯೇ ಬ್ರೇಕ್?
ಡೊನಾಲ್ಡ್​ ಟ್ರಂಪ್ Image Credit source: Observer Research Foundation
ನಯನಾ ರಾಜೀವ್
|

Updated on: May 01, 2026 | 9:58 AM

Share

ವಾಷಿಂಗ್ಟನ್, ಮೇ 1: ಅಮೆರಿಕ ಮತ್ತು ಇರಾನ್(Iran) ನಡುವಿನ ಉದ್ವಿಗ್ನತೆಯ ಮಧ್ಯೆ, ಟ್ರಂಪ್ ಆಡಳಿತವು ಮಧ್ಯಪ್ರಾಚ್ಯದ ಸಂಘರ್ಷದ ಕುರಿತು ಮಹತ್ವದ ರಾಜತಾಂತ್ರಿಕ ಮತ್ತು ಕಾನೂನು ನಿಲುವನ್ನು ಪ್ರಕಟಿಸಿದೆ. ಕಳೆದ ತಿಂಗಳು ಜಾರಿಗೆ ಬಂದ ಕದನ ವಿರಾಮದ ಹಿನ್ನೆಲೆಯಲ್ಲಿ ಇರಾನ್ ವಿರುದ್ಧದ ಯುದ್ಧವು ‘ಮುಕ್ತಾಯಗೊಂಡಿದೆ’ ಎಂದು ಟ್ರಂಪ್ ಆಡಳಿತ ಘೋಷಿಸಿದೆ. ಈ ಘೋಷಣೆಯು ಕೇವಲ ಯುದ್ಧದ ನಿಲ್ಲಿಸುವುದಷ್ಟೇ ಅಲ್ಲದೆ, ಅಮೆರಿಕದ ಸಂಸತ್ತಾದ ಕಾಂಗ್ರೆಸ್‌ನಿಂದ ಪಡೆಯಬೇಕಾದ ಕಡ್ಡಾಯ ಅನುಮೋದನೆಯನ್ನು ತಪ್ಪಿಸುವ ಒಂದು ಕಾರ್ಯತಂತ್ರ ಎಂದು ಹೇಳಲಾಗುತ್ತಿದೆ.

ಅಮೆರಿಕದ ಕಾನೂನಿನ ಪ್ರಕಾರ, ಅಧ್ಯಕ್ಷರು ಯಾವುದೇ ಸೇನಾ ಕಾರ್ಯಾಚರಣೆಯನ್ನು ಪ್ರಾರಂಭಿಸಿದ 60 ದಿನಗಳ ಒಳಗೆ ಕಾಂಗ್ರೆಸ್‌ನ ಅನುಮೋದನೆ ಪಡೆಯುವುದು ಕಡ್ಡಾಯ. ಆದರೆ, ಏಪ್ರಿಲ್ 7 ರಿಂದ ಅಮೆರಿಕ ಮತ್ತು ಇರಾನ್ ಪಡೆಗಳ ನಡುವೆ ಯಾವುದೇ ಗುಂಡಿನ ಚಕಮಕಿ ನಡೆದಿಲ್ಲ ಎಂದು ಯುದ್ಧ ಕಾರ್ಯದರ್ಶಿ ಪೀಟ್ ಹೆಗ್ಸೆತ್ ವಾದಿಸಿದ್ದಾರೆ. ಕದನ ವಿರಾಮ ಜಾರಿಯಲ್ಲಿರುವುದರಿಂದ ಈ 60 ದಿನಗಳ ಕಾಲಮಿತಿಯು ತಾತ್ಕಾಲಿಕವಾಗಿ ಸ್ಥಗಿತಗೊಳ್ಳುತ್ತದೆ ಅಥವಾ ನಿಲ್ಲುತ್ತದೆ ಎಂಬುದು ಶ್ವೇತಭವನದ ವಾದವಾಗಿದೆ.

ಟ್ರಂಪ್ ಆಡಳಿತದ ಈ ಹೊಸ ವ್ಯಾಖ್ಯಾನವನ್ನು ಡೆಮೋಕ್ರಾಟ್‌ಗಳು ತೀವ್ರವಾಗಿ ತಿರಸ್ಕರಿಸಿದ್ದಾರೆ. ಸೆನೆಟರ್ ಟಿಮ್ ಕೈನೆ ಮಾತನಾಡಿ, ಕಾನೂನಿನ ಚೌಕಟ್ಟಿನಲ್ಲಿ ಈ ವಾದಕ್ಕೆ ಮಾನ್ಯತೆ ಇಲ್ಲ ಮತ್ತು ಇದು ಯುದ್ಧದ ಕುರಿತು ಗಂಭೀರ ಕಾನೂನು ಪ್ರಶ್ನೆಗಳನ್ನು ಹುಟ್ಟುಹಾಕುತ್ತದೆ ಎಂದು ಎಚ್ಚರಿಸಿದ್ದಾರೆ. ಅಮೆರಿಕದ ಜನರ ಮೇಲೆ ಈ ಯುದ್ಧವನ್ನು ಅನಗತ್ಯವಾಗಿ ಹೇರಲಾಗಿದೆ ಎಂದು ವಿರೋಧ ಪಕ್ಷದ ನಾಯಕರು ಕಿಡಿಕಾರಿದ್ದಾರೆ.

ಮತ್ತಷ್ಟು ಓದಿ: ಹೃದಯಾಘಾತವಾಗಬಹುದು, ಟ್ರಂಪ್ ಶಾಂತಿ ಪ್ರಸ್ತಾವನೆ ತಿರಸ್ಕರಿಸಿದ ಬೆನ್ನಲ್ಲೇ ಇರಾನ್‌ನಿಂದ ಹೊಸ ಮಹಾಸ್ತ್ರ ಪ್ರಯೋಗ

ಕಾಂಗ್ರೆಸ್ ತನ್ನ ಅಧಿಕಾರವನ್ನು ಸೀಮಿತಗೊಳಿಸುತ್ತಿರುವುದನ್ನು ಆಗಾಗ ಟೀಕಿಸುವ ಅಧ್ಯಕ್ಷ ಟ್ರಂಪ್, ಮುಂದಿನ ಮಿಲಿಟರಿ ಆಯ್ಕೆಗಳ ಕುರಿತು ಶೀಘ್ರದಲ್ಲೇ ಉನ್ನತ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಲಿದ್ದಾರೆ. ಇರಾನ್ ಜೊತೆ ರಹಸ್ಯವಾಗಿ ಮಾತುಕತೆಗಳು ನಡೆಯುತ್ತಿವೆ ಮತ್ತು ಆ ದೇಶದ ಆರ್ಥಿಕತೆಯು ಅಮೆರಿಕದ ದಿಗ್ಬಂಧನದಿಂದಾಗಿ ಕುಸಿಯುತ್ತಿದೆ ಎಂದು ಟ್ರಂಪ್ ಪುನರುಚ್ಚರಿಸಿದ್ದಾರೆ.

ಶ್ವೇತಭವನ ಮತ್ತು ಕಾಂಗ್ರೆಸ್ ನಡುವಿನ ಈ ಕಾನೂನು ಸಂಘರ್ಷವು ಅಮೆರಿಕದ ವಿದೇಶಾಂಗ ನೀತಿಯಲ್ಲಿ ಹೊಸ ಬಿಕ್ಕಟ್ಟನ್ನು ಸೃಷ್ಟಿಸಿದ್ದು, ಇರಾನ್ ಜೊತೆಗಿನ ಶಾಂತಿ ಒಪ್ಪಂದವು ಯಾವ ದಿಕ್ಕಿನಲ್ಲಿ ಸಾಗಲಿದೆ ಎಂಬುದು ಇಡೀ ಜಗತ್ತಿನ ಕುತೂಹಲಕ್ಕೆ ಕಾರಣವಾಗಿದೆ.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ನಯನಾ ರಾಜೀವ್
ನಯನಾ ರಾಜೀವ್

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
ಗಂಡು ಮಕ್ಕಳಿಗೆ ಕಿವಿ ಚುಚ್ಚಿಸುವುದು ಯಾಕೆ ಗೊತ್ತಾ?
ಗಂಡು ಮಕ್ಕಳಿಗೆ ಕಿವಿ ಚುಚ್ಚಿಸುವುದು ಯಾಕೆ ಗೊತ್ತಾ?
ಇಂದು ಈ ರಾಶಿಯವರ ಆರ್ಥಿಕ ವಿಷಯದಲ್ಲಿ ಸ್ವಲ್ಪ ತೊಂದರೆ ಕಾಡಬಹುದು
ಇಂದು ಈ ರಾಶಿಯವರ ಆರ್ಥಿಕ ವಿಷಯದಲ್ಲಿ ಸ್ವಲ್ಪ ತೊಂದರೆ ಕಾಡಬಹುದು
ಎತ್ತಿನ ಬದಲು ಹೆಂಡತಿಯನ್ನೇ ನೊಗಕ್ಕೆ ಕಟ್ಟಿ ಹೊಲ ಉಳುಮೆ ಮಾಡಿದ ರೈತ!
ಎತ್ತಿನ ಬದಲು ಹೆಂಡತಿಯನ್ನೇ ನೊಗಕ್ಕೆ ಕಟ್ಟಿ ಹೊಲ ಉಳುಮೆ ಮಾಡಿದ ರೈತ!
ಧರ್ಮಸ್ಥಳಕ್ಕೆ ಕಳಂಕ ತರಲು ಗ್ಯಾಂಗ್ ಹುನ್ನಾರ:ಚಿನ್ನಯ್ಯನಿಂದ ಸ್ಫೋಟಕ ಮಾಹಿತಿ
ಧರ್ಮಸ್ಥಳಕ್ಕೆ ಕಳಂಕ ತರಲು ಗ್ಯಾಂಗ್ ಹುನ್ನಾರ:ಚಿನ್ನಯ್ಯನಿಂದ ಸ್ಫೋಟಕ ಮಾಹಿತಿ
‘ನಾಗುಗೆ ವಧು ಬೇಕಾಗಿದೆ’ ಟೈಟಲ್ ವಿಶೇಷತೆ ಬಗ್ಗೆ ವಿವರಿಸಿದ ನಿರ್ದೇಶಕ ಚೇತನ್
‘ನಾಗುಗೆ ವಧು ಬೇಕಾಗಿದೆ’ ಟೈಟಲ್ ವಿಶೇಷತೆ ಬಗ್ಗೆ ವಿವರಿಸಿದ ನಿರ್ದೇಶಕ ಚೇತನ್
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ