AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೊಜ್ತಬಾ ಖಮೇನಿ ಬದುಕಿದ್ದಾರಾ? ಶಾಂತಿ ಮಾತುಕತೆ ಯಾವ ಹಾದಿಯಲ್ಲಿದೆ, ಮಾರ್ಕೊ ರುಬಿಯೊ ಹೇಳಿದ್ದೇನು ಇಲ್ಲಿದೆ ಮಾಹಿತಿ

ಮೊಜ್ತಬಾ ಖಮೇನಿ ಜೀವಂತವಾಗಿದ್ದು ಸಕ್ರಿಯರಾಗಿದ್ದಾರೆ. ಅಮೆರಿಕ ಮತ್ತು ಇರಾನ್ ನಡುವೆ ಶಾಂತಿ ಮಾತುಕತೆಗಳು ಸಕಾರಾತ್ಮಕ ದಿಕ್ಕಿನಲ್ಲಿ ಸಾಗುತ್ತಿವೆ ಎಂದು ಮಾರ್ಕೊ ರುಬಿಯೊ ಹೇಳಿದ್ದಾರೆ. ಇರಾನ್ ಮೇಲಿನ ಆರ್ಥಿಕ ನಿರ್ಬಂಧಗಳ ತೆರವು, ಯೂರೆನಿಯಂ ಪುಷ್ಟೀಕರಣ ಮಿತಿ ಮತ್ತು ಹಾರ್ಮುಜ್ ಜಲಸಂಧಿ ಮುಕ್ತಿಗೆ ಐತಿಹಾಸಿಕ ಒಪ್ಪಂದ ಏರ್ಪಡುವ ಸಾಧ್ಯತೆ ಇದೆ. ಪಾಕಿಸ್ತಾನದ ಮಧ್ಯಸ್ಥಿಕೆಯಲ್ಲಿ ನಡೆಯುತ್ತಿರುವ ಈ ಪ್ರಯತ್ನ ಜಾಗತಿಕ ತೈಲ ಮಾರುಕಟ್ಟೆ ಹಾಗೂ ವಿಶ್ವ ಶಾಂತಿಗೆ ಆಶಾದಾಯಕವಾಗಿದೆ.

ಮೊಜ್ತಬಾ ಖಮೇನಿ ಬದುಕಿದ್ದಾರಾ? ಶಾಂತಿ ಮಾತುಕತೆ ಯಾವ ಹಾದಿಯಲ್ಲಿದೆ, ಮಾರ್ಕೊ ರುಬಿಯೊ ಹೇಳಿದ್ದೇನು ಇಲ್ಲಿದೆ ಮಾಹಿತಿ
ಮೊಜ್ತಬಾ ಖಮೇನಿ Image Credit source: PTI
ನಯನಾ ರಾಜೀವ್
|

Updated on: Jun 03, 2026 | 7:32 AM

Share

ವಾಷಿಂಗ್ಟನ್, ಜೂನ್ 03: ಅಮೆರಿಕ ಹಾಗೂ ಇರಾನ್ ನಡುವಿನ ಸಂಘರ್ಷ ಬೂದಿ ಮುಚ್ಚಿದ ಕೆಂಡದಂತಾಗಿದೆ. ಒಂದೆಡೆ ಯುದ್ಧವೂ ಇಲ್ಲ, ಮತ್ತೊಂದೆಡೆ ಶಾಂತಿಯೂ ಇಲ್ಲ. ಪಶ್ಚಿಮ ಏಷ್ಯಾದಲ್ಲಿ ದೀರ್ಘಕಾಲದ ಉದ್ವಿಗ್ನತೆಯನ್ನು ಕೊನೆಗಾಣಿಸಿ ಶಾಂತಿ ಪುನಃಸ್ಥಾಪಿಸುವ ನಿಟ್ಟಿನಲ್ಲಿ ಸಕಾರಾತ್ಮಕ ಬೆಳವಣಿಗೆಯೊಂದು ಕಂಡುಬಂದಿದೆ. ಇರಾನ್ ಸರ್ವೋಚ್ಛ ನಾಯಕ ಮೊಜ್ತಬಾ ಖಮೇನಿ (Mojtaba Khamenei) ಜೀವಂತವಾಗಿದ್ದಾರೆ ಮತ್ತು ದೇಶದ ವ್ಯವಹಾರಗಳಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳುತ್ತಿದ್ದಾರೆ ಎಂದು ಅಮೆರಿಮ ವಿದೇಶಾಂಗ ಕಾರ್ಯದರ್ಶಿ ಮಾರ್ಕೊ ರುಬಿಯೋ ಹೇಳಿದ್ದಾರೆ. ಕಳೆದ ಫೆಬ್ರವರಿಯಲ್ಲಿ ನಡೆದ ಮಿಲಿಟರಿ ದಾಳಿಯ ನಂತರ ಅವರ ಆರೋಗ್ಯದ ಕುರಿತು ಸಾಕಷ್ಟು ವದಂತಿಗಳು ಹರಡಿದ್ದವು, ಅವರು ಚೇತರಿಸಿಕೊಂಡು ಮತ್ತೆ ಆಡಳಿತಕ್ಕೆ ಮರಳಿರುವುದು ಮಾತುಕತೆಯ ಹೊಸ ಹಾದಿಯನ್ನೇ ತೆರೆದಿದೆ ಎನ್ನಬಹುದು.

ಜಾಗತಿಕ ಮಾರುಕಟ್ಟೆ ಮತ್ತು ಹಾರ್ಮುಜ್ ಜಲಸಂಧಿ ಮುಕ್ತ ಮುನ್ಸೂಚನೆ

ಮಾರ್ಕೊ ರುಬಿಯೊ ಮಾತನಾಡಿ, ಅಮೆರಿಕ ಮತ್ತು ಇರಾನ್ ನಡುವೆ ಶೀಘ್ರದಲ್ಲೇ ಐತಿಹಾಸಿಕ ಒಪ್ಪಂದವೊಂದು ಏರ್ಪಡುವ ಭರವಸೆಯನ್ನು ವ್ಯಕ್ತಪಡಿಸಿದ್ದಾರೆ. ಈ ಒಪ್ಪಂದದ ಭಾಗವಾಗಿ ಜಾಗತಿಕ ತೈಲ ಮತ್ತು ಅನಿಲ ಸಾರಿಗೆಯ ಪ್ರಮುಖ ಮಾರ್ಗವಾಗಿರುವ ‘ಹಾರ್ಮುಜ್ ಜಲಸಂಧಿ’ಯನ್ನು ಸಂಪೂರ್ಣವಾಗಿ ಮುಕ್ತಗೊಳಿಸಲು ಇರಾನ್ ಸಜ್ಜಾಗುತ್ತಿದೆ.

ನಿರ್ಬಂಧಗಳಿಗೆ ಮುಕ್ತಿ

ಇರಾನ್ ಮೇಲಿನ ಆರ್ಥಿಕ ನಿರ್ಬಂಧಗಳನ್ನು ಸಂಪೂರ್ಣವಾಗಿ ತೆಗೆದುಹಾಕಲು ಅಮೆರಿಕ ಸಿದ್ಧವಿದ್ದು, ಇದಕ್ಕೆ ಪ್ರತಿಯಾಗಿ ಇರಾನ್ ತನ್ನ ಯುರೇನಿಯಂ ಪುಷ್ಟೀಕರಣದ ಚಟುವಟಿಕೆಗಳನ್ನು ತೀವ್ರವಾಗಿ ಮಿತಿಗೊಳಿಸಲು ಅಥವಾ ರದ್ದುಗೊಳಿಸಲು ಮಾತುಕತೆ ನಡೆಸುತ್ತಿದೆ.

ಮತ್ತಷ್ಟು ಓದಿ: ಸತ್ತಿರಬಹುದು ಅಥವಾ ಕೆಟ್ಟ ಸ್ಥಿತಿಯಲ್ಲಿರಬಹುದು; ಇರಾನ್‌ ಸುಪ್ರೀಂ ನಾಯಕ ಮೊಜ್ತಬಾ ಖಮೇನಿ ಬಗ್ಗೆ ಟ್ರಂಪ್ ಶಾಕಿಂಗ್ ಹೇಳಿಕೆ

ಮಾರ್ಕೊ ರುಬಿಯೊ ಹೇಳಿಕೆ: ಈ ಶಾಂತಿ ಒಪ್ಪಂದ ಇಂದು, ನಾಳೆ ಅಥವಾ ಮುಂದಿನ ವಾರದಲ್ಲೇ ಯಶಸ್ವಿಯಾಗಬಹುದು. ಇರಾನ್ ತನ್ನ ಪರಮಾಣು ಚಟುವಟಿಕೆಗಳನ್ನು ಮಿತಿಗೊಳಿಸಲು ಒಪ್ಪಿದರೆ, ಅವರ ಮೇಲಿರುವ ಎಲ್ಲಾ ಆರ್ಥಿಕ ನಿರ್ಬಂಧಗಳಿಗೆ ದೊಡ್ಡ ಪರಿಹಾರ ಸಿಗಲಿದೆ.

ಪಾಕಿಸ್ತಾನದ ಮಧ್ಯಸ್ಥಿಕೆಯಲ್ಲಿ ನಡೆದಿರುವ ಕದನ ವಿರಾಮದ ಪ್ರಯತ್ನಗಳ ನಡುವೆ, ಅಮೆರಿಕವು ಇರಾನ್ ಜೊತೆಗೆ ಸೌಹಾರ್ದಯುತ ಒಪ್ಪಂದ ಮಾಡಿಕೊಳ್ಳಲು ತೋರಿರುವ ಈ ರಾಜತಾಂತ್ರಿಕ ಆಸಕ್ತಿಯು ಜಾಗತಿಕ ತೈಲ ಮಾರುಕಟ್ಟೆ ಹಾಗೂ ವಿಶ್ವ ಶಾಂತಿಯ ದೃಷ್ಟಿಯಿಂದ ಅತ್ಯಂತ ಆಶಾದಾಯಕ ಸುದ್ದಿಯಾಗಿದೆ.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು