AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇರಾನ್ ಜತೆ ಅಮೆರಿಕ ಮಾತುಕತೆ: ಮತ್ತೆ ಪಾಕಿಸ್ತಾನವೇ ಅಂಗಳ, 48 ಗಂಟೆಗಳಲ್ಲಿ ನಿರ್ಣಾಯಕ ಬೆಳವಣಿಗೆ

ಪಶ್ಚಿಮ ಏಷ್ಯಾದಲ್ಲಿ ಭುಗಿಲೆದ್ದಿರುವ ಅಮೆರಿಕ-ಇರಾನ್ ಸಂಘರ್ಷವನ್ನು ಕೊನೆಗೊಳಿಸಲು ನಿರ್ಣಾಯಕ ಶಾಂತಿ ಮಾತುಕತೆಗಳು ಮುಂದಿನ 48 ಗಂಟೆಗಳಲ್ಲಿ ಪಾಕಿಸ್ತಾನದಲ್ಲಿ ಪುನಾರಂಭಗೊಳ್ಳಲಿವೆ. ಇಸ್ಲಾಮಾಬಾದ್‌ನಲ್ಲಿ ಮೊದಲ ಸುತ್ತು ವಿಫಲವಾದರೂ, ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಪಾಕಿಸ್ತಾನದ ಮಧ್ಯಸ್ಥಿಕೆಯಲ್ಲಿ ಹಾಗೂ ಸೇನಾ ಮುಖ್ಯಸ್ಥ ಅಸಿಮ್ ಮುನೀರ್ ಅವರ ಕಾರ್ಯವೈಖರಿಯಲ್ಲಿ ಸಂಪೂರ್ಣ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಯುದ್ಧವನ್ನು ನಿಲ್ಲಿಸಿ, ಪಶ್ಚಿಮ ಏಷ್ಯಾದಲ್ಲಿ ಶಾಂತಿ ಸ್ಥಾಪಿಸುವ ಜಾಗತಿಕ ಪ್ರಯತ್ನದಲ್ಲಿ ಈ ಸಭೆ ನಿರ್ಣಾಯಕ ಪಾತ್ರ ವಹಿಸಲಿದೆ, ಜಗತ್ತಿನ ಗಮನ ಪಾಕ್‌ನತ್ತ ನೆಟ್ಟಿದೆ.

ಇರಾನ್ ಜತೆ ಅಮೆರಿಕ ಮಾತುಕತೆ: ಮತ್ತೆ ಪಾಕಿಸ್ತಾನವೇ ಅಂಗಳ, 48 ಗಂಟೆಗಳಲ್ಲಿ ನಿರ್ಣಾಯಕ ಬೆಳವಣಿಗೆ
ಡೊನಾಲ್ಡ್​ ಟ್ರಂಪ್ Image Credit source: PTI
ನಯನಾ ರಾಜೀವ್
|

Updated on: Apr 15, 2026 | 7:15 AM

Share

ಇಸ್ಲಾಮಾಬಾದ್, ಏಪ್ರಿಲ್ 15: ಪಶ್ಚಿಮ ಏಷ್ಯಾದಲ್ಲಿ ಹೊತ್ತಿ ಉರಿಯುತ್ತಿರುವ ಯುದ್ಧದ ಜ್ವಾಲೆಯನ್ನು ಆರಿಸಲು ವಿಶ್ವದ ದೊಡ್ಡಣ್ಣ ಅಮೆರಿಕ ಈಗ ಮತ್ತೊಂದು ನಿರ್ಣಾಯಕ ಹೆಜ್ಜೆಯನ್ನಿಟ್ಟಿದೆ. ಇಸ್ಲಾಮಾಬಾದ್‌ನಲ್ಲಿ ನಡೆದ ಮೊದಲ ಸುತ್ತಿನ ಮಾತುಕತೆಗಳು ಅನಿರೀಕ್ಷಿತವಾಗಿ ವಿಫಲವಾದ ಬೆನ್ನಲ್ಲೇ, ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್(Donald Trump) ಈಗ ಸಂಚಲನ ಮೂಡಿಸುವ ಹೇಳಿಕೆ ನೀಡಿದ್ದಾರೆ.”ಮುಂದಿನ ಎರಡು ದಿನಗಳಲ್ಲಿ ಅಮೆರಿಕ ಮತ್ತು ಇರಾನ್ ನಡುವಿನ ಶಾಂತಿ ಮಾತುಕತೆಗಳು ಪುನರಾರಂಭಗೊಳ್ಳಲಿವೆ” ಎಂದು ಟ್ರಂಪ್ ಘೋಷಿಸಿದ್ದು, ಇಡೀ ಜಗತ್ತಿನ ಗಮನ ಈಗ ಪಾಕಿಸ್ತಾನದತ್ತ ನೆಟ್ಟಿದೆ.

ಯುರೋಪ್ ಬೇಡ, ಪಾಕಿಸ್ತಾನವೇ ಸಾಕು ನ್ಯೂಯಾರ್ಕ್ ಪೋಸ್ಟ್ ಜೊತೆಗಿನ ವಿಶೇಷ ದೂರವಾಣಿ ಸಂದರ್ಶನದಲ್ಲಿ ಮಾತನಾಡಿದ ಟ್ರಂಪ್, ಆರಂಭದಲ್ಲಿ ಎರಡನೇ ಸುತ್ತಿನ ಮಾತುಕತೆಗಳನ್ನು ಯುರೋಪ್‌ನಲ್ಲಿ ನಡೆಸುವ ಬಗ್ಗೆ ಚಿಂತಿಸಲಾಗಿತ್ತು ಎಂದು ಒಪ್ಪಿಕೊಂಡರು. ಆದರೆ, ಕೇವಲ ಅರ್ಧ ಗಂಟೆಯ ನಂತರ ತಮ್ಮ ನಿರ್ಧಾರ ಬದಲಿಸಿದ ಅವರು, ಸ್ಥಳ ಬದಲಾವಣೆಯಿಲ್ಲ ಎಂದು ಸ್ಪಷ್ಟಪಡಿಸಿದರು. “ನಾವು ಪಾಕಿಸ್ತಾನಕ್ಕೆ ಮರಳುವ ಸಾಧ್ಯತೆಗಳೇ ದಟ್ಟವಾಗಿವೆ. ನಮಗೆ ಸಂಬಂಧವೇ ಇಲ್ಲದ ದೇಶಕ್ಕೆ ನಾವು ಏಕೆ ಹೋಗಬೇಕು?” ಎಂದು ಪ್ರಶ್ನಿಸುವ ಮೂಲಕ ಪಾಕಿಸ್ತಾನದ ಮೇಲಿನ ತಮ್ಮ ಒಲವನ್ನು ವ್ಯಕ್ತಪಡಿಸಿದರು.

ಫೀಲ್ಡ್ ಮಾರ್ಷಲ್ ಮುನೀರ್ ಕಾರ್ಯವೈಖರಿಗೆ ಟ್ರಂಪ್ ಫಿದಾ ಟ್ರಂಪ್ ಅವರ ಈ ನಿರ್ಧಾರದ ಹಿಂದೆ ಪಾಕಿಸ್ತಾನ ಸೇನಾ ಮುಖ್ಯಸ್ಥ ಅಸಿಮ್ ಮುನೀರ್ ಅವರ ಪಾತ್ರ ದೊಡ್ಡದಿದೆ. ಮುನೀರ್ ಅವರನ್ನು ‘ಫೀಲ್ಡ್ ಮಾರ್ಷಲ್’ ಎಂದು ಸಂಬೋಧಿಸಿದ ಟ್ರಂಪ್, “ಅವರು ಅದ್ಭುತವಾಗಿ ಕೆಲಸ ಮಾಡುತ್ತಿದ್ದಾರೆ. ಅವರ ಮೇಲಿನ ವಿಶ್ವಾಸದಿಂದಲೇ ನಾವು ಮತ್ತೆ ಇಸ್ಲಾಮಾಬಾದ್‌ಗೆ ಹೋಗಲು ನಿರ್ಧರಿಸಿದ್ದೇವೆ” ಎಂದಿದ್ದಾರೆ. ಪಾಕಿಸ್ತಾನದ ಮಧ್ಯಸ್ಥಿಕೆ ಮತ್ತು ಭದ್ರತಾ ವ್ಯವಸ್ಥೆಯು ಅಮೆರಿಕದ ವಿಶ್ವಾಸ ಗಳಿಸುವಲ್ಲಿ ಯಶಸ್ವಿಯಾಗಿದೆ ಎಂಬುದಕ್ಕೆ ಇದು ಸಾಕ್ಷಿ.

ಮಾತುಕತೆಯ ಉದ್ದೇಶ? ಕಳೆದ ಏಳು ವಾರಗಳಿಂದ ಇರಾನ್ ಮತ್ತು ಅಮೆರಿಕ-ಇಸ್ರೇಲ್ ಪಡೆಗಳ ನಡುವೆ ನಡೆಯುತ್ತಿರುವ ಸಂಘರ್ಷವು ಭೀಕರ ರೂಪ ಪಡೆದಿದೆ. ಇರಾನ್ ನಾಯಕತ್ವದ ಮೇಲೆ ಅಮೆರಿಕ ಮತ್ತು ಇಸ್ರೇಲ್ ನಡೆಸಿದ ಜಂಟಿ ದಾಳಿಯಿಂದ ಉದ್ವಿಗ್ನತೆ ಮಿತಿಮೀರಿದೆ. ಈ ಯುದ್ಧವನ್ನು ಕೊನೆಗೊಳಿಸಿ, ಪಶ್ಚಿಮ ಏಷ್ಯಾದಲ್ಲಿ ಶಾಂತಿ ಪುನಃಸ್ಥಾಪಿಸುವುದು ಈ ಮಾತುಕತೆಯ ಮುಖ್ಯ ಅಜೆಂಡಾ. ಏಪ್ರಿಲ್ 10 ರಿಂದ 12 ರವರೆಗೆ ಇಸ್ಲಾಮಾಬಾದ್‌ನ ಸೆರೆನಾ ಹೋಟೆಲ್‌ನಲ್ಲಿ ಮೊದಲ ಸುತ್ತಿನ ಮಾತುಕತೆ ನಡೆದಿತ್ತು. ಅದು ಯಶಸ್ವಿಯಾಗದಿದ್ದರೂ, ಎರಡನೇ ಪ್ರಯತ್ನದಲ್ಲಿ ಒಪ್ಪಂದಕ್ಕೆ ಬರಲು ಎರಡೂ ದೇಶಗಳು ಉತ್ಸುಕವಾಗಿವೆ.

ಮತ್ತಷ್ಟು ಓದಿ: ಇರಾನ್ ಮತ್ತೆ ಮಾತುಕತೆಗೆ ಬರಲಿ, ಬರ್ದೇ ಇರ್ಲಿ ಡೋಂಟ್ ಕೇರ್: ಡೊನಾಲ್ಡ್​ ಟ್ರಂಪ್

ಅನಿಶ್ಚಿತತೆಯ ನಡುವೆಯೂ ನಿರೀಕ್ಷೆ ಎರಡನೇ ಸುತ್ತಿನ ಈ ಸಭೆಯಲ್ಲಿ ಯಾರ್ಯಾರು ಭಾಗವಹಿಸಲಿದ್ದಾರೆ ಎಂಬುದು ಇನ್ನೂ ನಿಗೂಢವಾಗಿದೆ. ಮೊದಲ ಸುತ್ತಿನಲ್ಲಿದ್ದ ನಾಯಕರೇ ಇರುತ್ತಾರೋ ಅಥವಾ ಹೊಸ ರಾಜತಾಂತ್ರಿಕರು ಸೇರ್ಪಡೆಯಾಗುತ್ತಾರೋ ಎಂಬುದು ಕುತೂಹಲ ಮೂಡಿಸಿದೆ. ಸ್ಥಳ ಮತ್ತು ಸಮಯದ ಬಗ್ಗೆ ವಾಷಿಂಗ್ಟನ್ ಮತ್ತು ಟೆಹ್ರಾನ್ ನಡುವೆ ಒಮ್ಮತ ಮೂಡಿದ ತಕ್ಷಣ ಅಧಿಕೃತ ಘೋಷಣೆ ಹೊರಬೀಳಲಿದೆ.

ಒಟ್ಟಾರೆಯಾಗಿ, ಮುಂದಿನ 48 ಗಂಟೆಗಳು ಅಂತಾರಾಷ್ಟ್ರೀಯ ರಾಜಕೀಯದಲ್ಲಿ ಅತ್ಯಂತ ನಿರ್ಣಾಯಕವಾಗಿದ್ದು, ಪಾಕಿಸ್ತಾನದ ನೆಲದಲ್ಲಿ ಜಾಗತಿಕ ಶಾಂತಿಯ ಹೊಸ ಹಾದಿ ತೆರೆಯುತ್ತದೆಯೇ ಎಂದು ಕಾದು ನೋಡಬೇಕಿದೆ.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಉತ್ತರ ಪ್ರದೇಶದ ಸಹರಾನ್‌ಪುರದ ವನ್ಯಜೀವಿ ಕಾರಿಡಾರ್‌ಗೆ ಪ್ರಧಾನಿ ಮೋದಿ ಭೇಟಿ
ಉತ್ತರ ಪ್ರದೇಶದ ಸಹರಾನ್‌ಪುರದ ವನ್ಯಜೀವಿ ಕಾರಿಡಾರ್‌ಗೆ ಪ್ರಧಾನಿ ಮೋದಿ ಭೇಟಿ
ಸಿದ್ದರಾಮಯ್ಯ ಜತೆ ರಹಸ್ಯ ಮಾತುಕತೆ ನಡೆಸಿ ಹೊರಟ ಜಮೀರ್, ಮಂತ್ರಿ ಕಥೆ ಏನು?
ಸಿದ್ದರಾಮಯ್ಯ ಜತೆ ರಹಸ್ಯ ಮಾತುಕತೆ ನಡೆಸಿ ಹೊರಟ ಜಮೀರ್, ಮಂತ್ರಿ ಕಥೆ ಏನು?
ಡೆಲಿವರಿ ಬಾಯ್ಸ್ ಕೆಲಸ ಗೌರವಿಸಿ; ಸ್ವಂತ ಅನುಭವ ಹಂಚಿಕೊಂಡ ಧರ್ಮ ಕೀರ್ತಿರಾಜ್
ಡೆಲಿವರಿ ಬಾಯ್ಸ್ ಕೆಲಸ ಗೌರವಿಸಿ; ಸ್ವಂತ ಅನುಭವ ಹಂಚಿಕೊಂಡ ಧರ್ಮ ಕೀರ್ತಿರಾಜ್
ಸೂಕ್ತ ಸಮಯಕ್ಕೆ ಚಿಕಿತ್ಸೆ ಸಿಕ್ಕಿದ್ರೆ ನನ್ನ ತಮ್ಮ ಬದುಕುತ್ತಿದ್ದ
ಸೂಕ್ತ ಸಮಯಕ್ಕೆ ಚಿಕಿತ್ಸೆ ಸಿಕ್ಕಿದ್ರೆ ನನ್ನ ತಮ್ಮ ಬದುಕುತ್ತಿದ್ದ
ಚಲಿಸುತ್ತಿದ್ದ ಬಸ್​​ನಿಂದ ಬಿದ್ದು ವೃದ್ಧೆ ಸಾವು
ಚಲಿಸುತ್ತಿದ್ದ ಬಸ್​​ನಿಂದ ಬಿದ್ದು ವೃದ್ಧೆ ಸಾವು
ತಮಿಳುನಾಡು ಎಲೆಕ್ಷನ್‌ ಪ್ರಚಾರದ ವೇಳೆ ಕನ್ನಡದಲ್ಲಿ ಅಶೋಕ್‌ ಮತಬೇಟೆ
ತಮಿಳುನಾಡು ಎಲೆಕ್ಷನ್‌ ಪ್ರಚಾರದ ವೇಳೆ ಕನ್ನಡದಲ್ಲಿ ಅಶೋಕ್‌ ಮತಬೇಟೆ
ನೀವು ದಲಿತ ವಿರೋಧಿ: ಶಾಸಕರ ಭಾಷಣಕ್ಕೆ ವ್ಯಕ್ತಿಯೋರ್ವನಿಂದ ಅಡ್ಡಿ
ನೀವು ದಲಿತ ವಿರೋಧಿ: ಶಾಸಕರ ಭಾಷಣಕ್ಕೆ ವ್ಯಕ್ತಿಯೋರ್ವನಿಂದ ಅಡ್ಡಿ
ಅನುಷಾ ರೈ ಜೊತೆ ಮದುವೆ ಆಗ್ತೀರಾ? ಧರ್ಮ ಕೀರ್ತಿರಾಜ್ ನೇರ ಉತ್ತರ
ಅನುಷಾ ರೈ ಜೊತೆ ಮದುವೆ ಆಗ್ತೀರಾ? ಧರ್ಮ ಕೀರ್ತಿರಾಜ್ ನೇರ ಉತ್ತರ
ಬೆಂಗಳೂರು: ಮಗಳನ್ನು ಕೊಂದು ಬಳಿಕ ತಾಯಿ ಆತ್ಮಹತ್ಯೆ, ಕಾರಣವೇನು?
ಬೆಂಗಳೂರು: ಮಗಳನ್ನು ಕೊಂದು ಬಳಿಕ ತಾಯಿ ಆತ್ಮಹತ್ಯೆ, ಕಾರಣವೇನು?
ಬಿಹಾರದ ಮುಖ್ಯಮಂತ್ರಿಯಾಗಿ ಆಯ್ಕೆಯಾದ ಸಾಮ್ರಾಟ್ ಚೌಧರಿ ಹೇಳಿದ್ದೇನು?
ಬಿಹಾರದ ಮುಖ್ಯಮಂತ್ರಿಯಾಗಿ ಆಯ್ಕೆಯಾದ ಸಾಮ್ರಾಟ್ ಚೌಧರಿ ಹೇಳಿದ್ದೇನು?