AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಮೆರಿಕ-ಇರಾನ್ ಮಹತ್ವದ ಮಾತುಕತೆ ಮುಕ್ತಾಯ: ಪರಮಾಣು ಬಿಕ್ಕಟ್ಟು, ಆರ್ಥಿಕ ನಿರ್ಬಂಧಗಳ ಇತ್ಯರ್ಥಕ್ಕೆ ಜಂಟಿ ಕಾರ್ಯಪಡೆ ರಚನೆ

TV9 Kannada News: ಅಮೆರಿಕ-ಇರಾನ್ ನಡುವೆ ಸ್ವಿಟ್ಜರ್‌ಲ್ಯಾಂಡ್‌ನಲ್ಲಿ ನಡೆದ ಮಹತ್ವದ ಮಾತುಕತೆ ಯಶಸ್ವಿಯಾಗಿ ಮುಕ್ತಾಯಗೊಂಡಿವೆ. ಪರಮಾಣು ಬಿಕ್ಕಟ್ಟು ಮತ್ತು ಆರ್ಥಿಕ ನಿರ್ಬಂಧಗಳ ಇತ್ಯರ್ಥಕ್ಕೆ ಜಂಟಿ ಕಾರ್ಯಪಡೆ ರಚಿಸಲು ಉಭಯ ದೇಶಗಳು ಒಪ್ಪಿವೆ. ಅಮೆರಿಕದಿಂದ ಕೃಷಿ ಉತ್ಪನ್ನಗಳ ಖರೀದಿಗೆ ಇರಾನ್‌ನ ಹೆಪ್ಪುಗಟ್ಟಿದ ಹಣ ಬಿಡುಗಡೆ ಮಾಡಲು ಚರ್ಚಿಸಲಾಗಿದೆ. ಇದು ಭವಿಷ್ಯದ ಒಪ್ಪಂದಕ್ಕೆ ಭದ್ರ ಅಡಿಪಾಯ ಹಾಕಿದೆ. ಲೆಬನಾನ್ ಸಂಘರ್ಷವೂ ಚರ್ಚೆಯಾಗಿದೆ.

ಅಮೆರಿಕ-ಇರಾನ್ ಮಹತ್ವದ ಮಾತುಕತೆ ಮುಕ್ತಾಯ: ಪರಮಾಣು ಬಿಕ್ಕಟ್ಟು, ಆರ್ಥಿಕ ನಿರ್ಬಂಧಗಳ ಇತ್ಯರ್ಥಕ್ಕೆ ಜಂಟಿ ಕಾರ್ಯಪಡೆ ರಚನೆ
ಅಮೆರಿಕ-ಇರಾನ್Image Credit source: Reuters
ನಯನಾ ರಾಜೀವ್
| Edited By: |

Updated on:Jun 23, 2026 | 1:59 PM

Share

ಟೆಹ್ರಾನ್, ಜೂನ್ 23: ಜಾಗತಿಕವಾಗಿ ತೀವ್ರ ಕುತೂಹಲ ಮೂಡಿಸಿದ್ದ ಅಮೆರಿಕ(America) ಮತ್ತು ಇರಾನ್ ನಡುವಿನ ತಾಂತ್ರಿಕ ಮಟ್ಟದ ರಾಜತಾಂತ್ರಿಕ ಮಾತುಕತೆಗಳು ಸ್ವಿಟ್ಜರ್‌ಲ್ಯಾಂಡ್‌ನಲ್ಲಿ ಯಶಸ್ವಿಯಾಗಿ ಮುಕ್ತಾಯಗೊಂಡಿವೆ. ಉಭಯ ದೇಶಗಳ ನಡುವಿನ ಪರಮಾಣು ಬಿಕ್ಕಟ್ಟು ಮತ್ತು ಅಮೆರಿಕ ವಿಧಿಸಿರುವ ಕಠಿಣ ಆರ್ಥಿಕ ನಿರ್ಬಂಧಗಳನ್ನು ಬಗೆಹರಿಸಲು ವಿಶೇಷ ಜಂಟಿ ಕಾರ್ಯಪಡೆ ರಚಿಸಲು ಎರಡೂ ದೇಶಗಳು ಒಪ್ಪಿಗೆ ನೀಡಿವೆ ಎಂದು ಇರಾನ್ ಸರ್ಕಾರಿ ಮಾಧ್ಯಮಗಳು ಹೇಳಿವೆ.

ಪಾಕಿಸ್ತಾನ ಮತ್ತು ಕತಾರ್ ದೇಶಗಳ ಜಂಟಿ ಮಧ್ಯಸ್ಥಿಕೆಯಲ್ಲಿ ಭಾನುವಾರದಿಂದ ಸೋಮವಾರದ ಮುಂಜಾನೆಯವರೆಗೆ ಈ ಸುದೀರ್ಘ ಚರ್ಚೆಗಳು ನಡೆದಿವೆ. ಮಾತುಕತೆಯಲ್ಲಿ ಭಾಗವಹಿಸಿದ್ದ ಅಮೆರಿಕದ ಉಪಾಧ್ಯಕ್ಷ ಜೆ.ಡಿ. ವ್ಯಾನ್ಸ್ ಈ ಕುರಿತು ಪ್ರತಿಕ್ರಿಯಿಸಿದ್ದು, ಈ ಚರ್ಚೆಗಳು ಭವಿಷ್ಯದ ಅಂತಿಮ ಒಪ್ಪಂದಕ್ಕೆ ಗಟ್ಟಿಯಾದ ಅಡಿಪಾಯವನ್ನು ಹಾಕಿವೆ. ಅಂತಿಮ ಒಪ್ಪಂದ ಎನ್ನುವುದು ಒಂದು ಸುಂದರವಾದ ಮನೆ ಇದ್ದಂತೆ. ನಾವು ಸದ್ಯಕ್ಕೆ ಅದಕ್ಕೆ ಬೇಕಾದ ಅಡಿಪಾಯವನ್ನು ಮಾತ್ರ ಹಾಕಿದ್ದೇವೆ, ಇನ್ನೂ ಪೂರ್ಣ ಪ್ರಮಾಣದ ಮನೆ ನಿರ್ಮಿಸಬೇಕಾಗಿದೆ ಎಂದು ತಿಳಿಸಿದ್ದಾರೆ.

ಉಭಯ ದೇಶಗಳ ನಾಯಕರು ಒಪ್ಪಿಕೊಂಡಿರುವ 60 ದಿನಗಳ ಕಾಲಮಿತಿಯ ಮಾರ್ಗಸೂಚಿಯ ಅಡಿಯಲ್ಲಿ ಈ ಮಾತುಕತೆಗಳು ನಡೆಯುತ್ತಿವೆ. ಈ ವಾರವೂ ಚರ್ಚೆಗಳು ಮುಂದುವರೆಯಲಿವೆ. ಇರಾನ್‌ನ ಫ್ರೋಜನ್  ಆಸ್ತಿಗಳನ್ನು ಬಿಡುಗಡೆ ಮಾಡುವ ಪ್ರಮುಖ ಪ್ರಸ್ತಾಪದ ಬಗ್ಗೆ ಚರ್ಚಿಸಲಾಗಿದೆ. ಆದರೆ ಈ ಹಣವನ್ನು ಇರಾನ್ ನೇರವಾಗಿ ಬಳಸುವಂತಿಲ್ಲ. ಬದಲಿಗೆ, ಅಮೆರಿಕದಿಂದ ಸೋಯಾಬಿನ್, ಜೋಳ ಮತ್ತು ಗೋಧಿ ಸೇರಿದಂತೆ ಅಗತ್ಯ ಕೃಷಿ ಉತ್ಪನ್ನಗಳನ್ನು ಖರೀದಿಸಲು ಮಾತ್ರ ಇದನ್ನು ಬಳಸಬಹುದು ಎಂದು ಅಮೆರಿಕ ಷರತ್ತು ವಿಧಿಸಿದೆ.

ಮತ್ತಷ್ಟು ಓದಿ: ಅಮೆರಿಕ ಸೋಲೊಪ್ಪಿಕೊಂಡಿದೆ ಎಂದ ಇರಾನ್

ಇರಾನ್ ವಿದೇಶಾಂಗ ಸಚಿವ ಅಬ್ಬಾಸ್ ಅರಘ್ಚಿ ಅವರ ಪ್ರಕಾರ, ಇರಾನ್‌ಗೆ ಲೆಬನಾನ್ ಬಿಕ್ಕಟ್ಟು ಅತ್ಯಂತ ಪ್ರಮುಖವಾಗಿದೆ. ಇಸ್ರೇಲ್ ಮತ್ತು ಹೆಜ್ಬೊಲ್ಲಾ ನಡುವಿನ ಕದನ ವಿರಾಮವನ್ನು ಕಾಪಾಡಿಕೊಳ್ಳುವ ನಿಟ್ಟಿನಲ್ಲಿ ಪ್ರಮುಖ ಪ್ರಗತಿ ಸಾಧಿಸಲಾಗಿದೆ ಎಂದು ಅವರು ಹೇಳಿದ್ದಾರೆ.

ಮಾತುಕತೆಯ ಮಧ್ಯೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಲೆಬನಾನ್‌ನಲ್ಲಿ ಉಗ್ರ ಗುಂಪುಗಳನ್ನು ಬೆಂಬಲಿಸದಂತೆ ಇರಾನ್‌ಗೆ ಕಠಿಣ ಎಚ್ಚರಿಕೆ ನೀಡಿದ್ದರು. ಟ್ರಂಪ್ ಅವರ ಈ ಅವಮಾನಕರ ಸಂದೇಶದಿಂದಾಗಿ ಇರಾನ್ ಮಾತುಕತೆಯನ್ನು ಸ್ವಲ್ಪ ಸಮಯದವರೆಗೆ ಸ್ಥಗಿತಗೊಳಿಸಿತ್ತು. ಆದರೆ ಉಪಾಧ್ಯಕ್ಷ ಜೆಡಿ ವ್ಯಾನ್ಸ್ ಅವರ ಮಧ್ಯಸ್ಥಿಕೆಯಿಂದಾಗಿ ಉದ್ವಿಗ್ನತೆ ಶಮನಗೊಂಡು, ಮಾತುಕತೆಗಳು ತಡರಾತ್ರಿಯವರೆಗೂ ಮುಂದುವರೆದು ಯಶಸ್ವಿಯಾಗಿ ಮುಕ್ತಾಯಗೊಂಡವು.

ಇದರೊಂದಿಗೆ, ಜಾಗತಿಕ ತೈಲ ಸಾಗಣೆಯ ಪ್ರಮುಖ ಮಾರ್ಗವಾದ ಹಾರ್ಮುಜ್ ಜಲಸಂಧಿಯಲ್ಲಿ ಸುರಕ್ಷತೆಯನ್ನು ಕಾಯ್ದುಕೊಳ್ಳುವ ಬಗ್ಗೆಯೂ ಉಭಯ ದೇಶಗಳು ಸಹಮತ ವ್ಯಕ್ತಪಡಿಸಿವೆ.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 1:33 pm, Tue, 23 June 26

Follow Us
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್