AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಮೆರಿಕ-ಇರಾನ್ ನಡುವೆ ಜಿದ್ದಾಜಿದ್ದಿ: ಮತ್ತೊಮ್ಮೆ ಭೀಕರ ದಾಳಿ ಮಾಡುತ್ತೇವೆ ಎಂದ ಟ್ರಂಪ್‌ಗೆ ಎಚ್ಚರಿಕೆಯಿಂದಿರಿ ಎಂದ ಇರಾನ್

ಅಮೆರಿಕ-ಇರಾನ್ ನಡುವೆ ಯುದ್ಧದ ಭೀತಿ ಹೆಚ್ಚಾಗಿದೆ. ಡೊನಾಲ್ಡ್ ಟ್ರಂಪ್ ಇರಾನ್‌ಗೆ ತೀವ್ರ ದಾಳಿ ನಡೆಸುವುದಾಗಿ ಬೆದರಿಕೆ ಹಾಕಿದ್ದು, ಅದಕ್ಕೆ ಇರಾನ್ ಕಠಿಣ ತಿರುಗೇಟು ನೀಡಿದೆ. "ನಮ್ಮ ಸಶಸ್ತ್ರ ಪಡೆಗಳು ಯಾವುದೇ ದಾಳಿಗೆ ಪ್ರತ್ಯುತ್ತರ ನೀಡಲು ಸಿದ್ಧ" ಎಂದು ಇರಾನ್ ಹೇಳಿದೆ. ಸ್ವಿಟ್ಜರ್‌ಲ್ಯಾಂಡ್‌ನಲ್ಲಿ ಶಾಂತಿ ಮಾತುಕತೆಗಳು ನಡೆಯುತ್ತಿದ್ದರೂ, ಉಭಯ ದೇಶಗಳ ವಾಗ್ದಾಳಿ ಜಾಗತಿಕ ಆತಂಕ ಸೃಷ್ಟಿಸಿದೆ. ಪಾಕಿಸ್ತಾನ ಮತ್ತು ಕತಾರ್ ಮಧ್ಯಸ್ಥಿಕೆ ವಹಿಸಿವೆ.

ಅಮೆರಿಕ-ಇರಾನ್ ನಡುವೆ ಜಿದ್ದಾಜಿದ್ದಿ: ಮತ್ತೊಮ್ಮೆ ಭೀಕರ ದಾಳಿ ಮಾಡುತ್ತೇವೆ ಎಂದ ಟ್ರಂಪ್‌ಗೆ ಎಚ್ಚರಿಕೆಯಿಂದಿರಿ ಎಂದ  ಇರಾನ್
ಡೊನಾಲ್ಡ್​ ಟ್ರಂಪ್ Image Credit source: PTI
ನಯನಾ ರಾಜೀವ್
|

Updated on: Jun 22, 2026 | 7:27 AM

Share

ಜ್ಯೂರಿಚ್ , ಜೂನ್ 22: ಒಂದು ಕಡೆ ಸ್ವಿಟ್ಜರ್‌ಲ್ಯಾಂಡ್‌ನಲ್ಲಿ ಅಮೆರಿಕ ಮತ್ತು ಇರಾನ್(Iran) ನಡುವೆ ಯುದ್ಧ ನಿಲ್ಲಿಸುವ ಕುರಿತು ಮಹತ್ವದ ಶಾಂತಿ ಮಾತುಕತೆಗಳು ಆರಂಭವಾಗಿವೆ. ಆದರೆ ಮತ್ತೊಂದೆಡೆ, ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮತ್ತು ಇರಾನ್ ನಾಯಕರ ನಡುವಿನ ವಾಗ್ದಾಳಿ ಜಗತ್ತಿನಲ್ಲಿ ತೀವ್ರ ಆತಂಕ ಮೂಡಿಸಿದೆ. ಇರಾನ್ ಮೇಲೆ ಮತ್ತೊಮ್ಮೆ ಭೀಕರ ದಾಳಿ ನಡೆಸುವುದಾಗಿ ಟ್ರಂಪ್ ಬೆದರಿಕೆ ಹಾಕಿದ್ದರೆ, ನಮ್ಮ ಸಶಸ್ತ್ರ ಪಡೆಗಳು ತಕ್ಕ ಪ್ರತ್ಯುತ್ತರ ನೀಡಲು ಸಿದ್ಧವಾಗಿವೆ ಎಂದು ಇರಾನ್ ತಿರುಗೇಟು ನೀಡಿದೆ.

ಟ್ರಂಪ್ ಹಾಕಿದ ಭೀಕರ ದಾಳಿಯ ಬೆದರಿಕೆ ಏನು? ಅಧ್ಯಕ್ಷ ಡೊನಾಲ್ಡ್ ಟ್ರಂಪ್ ತಮ್ಮ ಸಾಮಾಜಿಕ ಮಾಧ್ಯಮ ವೇದಿಕೆ ‘ಟ್ರೂತ್ ಸೋಶಿಯಲ್’ನಲ್ಲಿ ಪೋಸ್ಟ್ ಹಾಕಿ ಇರಾನ್‌ಗೆ ಕಠಿಣ ಎಚ್ಚರಿಕೆ ನೀಡಿದ್ದಾರೆ.ಲೆಬನಾನ್‌ನಲ್ಲಿರುವ ಹಿಜ್ಬುಲ್ಲಾ ಸೇರಿದಂತೆ ಇರಾನ್ ಬೆಂಬಲಿತ ಸಶಸ್ತ್ರ ಗುಂಪುಗಳು ತೊಂದರೆ ಉಂಟುಮಾಡುವುದನ್ನು ತಕ್ಷಣವೇ ನಿಲ್ಲಿಸಬೇಕು.

ಒಂದು ವೇಳೆ ಇರಾನ್ ತನ್ನ ಈ ಕೃತ್ಯವನ್ನು ನಿಲ್ಲಿಸದಿದ್ದರೆ, ಕಳೆದ ವಾರ ನಾವು ಇರಾನ್ ಮೇಲೆ ಮಾಡಿದ ದಾಳಿಗಿಂತಲೂ ನೂರು ಪಟ್ಟು ಹೆಚ್ಚು ತೀವ್ರವಾದ ಮತ್ತು ಕಠಿಣವಾದ ಮಿಲಿಟರಿ ದಾಳಿಯನ್ನು ಅಮೆರಿಕ ನಡೆಸಲಿದೆ”ಎಂದು ಟ್ರಂಪ್ ಘರ್ಜಿಸಿದ್ದಾರೆ.

ಮತ್ತಷ್ಟು ಓದಿ: ‘ಇರಾನ್ ಕತೆ ಮುಗಿಯಿತು, ಅವರಿಗೆ ಒಂದು ಪೈಸೆಯೂ ಸಿಗುವುದಿಲ್ಲ’; ಕಿಡಿಕಾರಿದ ಟ್ರಂಪ್

ನಾವು ಮಾತನಾಡುವವರಲ್ಲ, ಮಾಡಿ ತೋರಿಸುವವರು: ಇರಾನ್ ಖಡಕ್ ಉತ್ತರ ಟ್ರಂಪ್ ಅವರ ಈ ಬೆದರಿಕೆಯನ್ನು ಇರಾನ್‌ನ ಮುಖ್ಯ ಸಮಾಲೋಚಕ ಮೊಹಮ್ಮದ್ ಬಘರ್ ಗಾಲಿಬಾಫ್ ಸಂಪೂರ್ಣವಾಗಿ ತಳ್ಳಿಹಾಕಿದ್ದಾರೆ. ಅಮೆರಿಕದ ಬೆದರಿಕೆಗಳಿಗೆ ನಾವು ಯಾವುದೇ ಬೆಲೆ ಕೊಡುವುದಿಲ್ಲ. ಟ್ರಂಪ್ ತಮ್ಮ ಹೇಳಿಕೆಗಳನ್ನು ನೀಡುವಾಗ ಜಾಗರೂಕರಾಗಿರಬೇಕು. ಅವರ ಬೆದರಿಕೆಗಳು ನಿಜವಾಗಿಯೂ ಕೆಲಸ ಮಾಡುತ್ತಿದ್ದರೆ, ಇಂದು ಅಮೆರಿಕ ಈ ಮಟ್ಟದ ಹತಾಶೆಗೆ ತಲುಪುತ್ತಿರಲಿಲ್ಲ. ಅವರು ಎಷ್ಟು ಬೇಕಾದರೂ ಮಾತನಾಡಿಕೊಳ್ಳಲಿ, ನಮ್ಮ ಸಶಸ್ತ್ರ ಪಡೆಗಳು ವಿಭಿನ್ನವಾಗಿ ಪ್ರತಿಕ್ರಿಯಿಸಲು ಸಜ್ಜಾಗಿವೆ. ನಾವು ಕೇವಲ ಮಾತನಾಡುವವರಲ್ಲ, ಯುದ್ಧಭೂಮಿಯಲ್ಲಿ ಕಾರ್ಯನಿರ್ವಹಿಸುವವರು” ಎಂದು ಗಾಲಿಬಾಫ್ ಸವಾಲು ಹಾಕಿದ್ದಾರೆ.

ಈ ತೀವ್ರ ವಾಗ್ದಾಳಿಗಳ ನಡುವೆಯೂ ಸ್ವಿಟ್ಜರ್‌ಲ್ಯಾಂಡ್‌ನಲ್ಲಿ ಉಭಯ ದೇಶಗಳ ಮುಖಂಡರು ಮಾತುಕತೆ ನಡೆಸುತ್ತಿದ್ದಾರೆ. ಉಪಾಧ್ಯಕ್ಷ ಜೆಡಿ ವ್ಯಾನ್ಸ್, ಟ್ರಂಪ್ ಅವರ ಅಳಿಯ ಜೇರೆಡ್ ಕುಶ್ನರ್ ಮತ್ತು ವಿಶೇಷ ರಾಯಭಾರಿ ಸ್ಟೀವ್ ವಿಟ್ಕಾಫ್ ಚರ್ಚೆಯಲ್ಲಿದ್ದಾರೆ.

ವಿದೇಶಾಂಗ ಸಚಿವ ಅಬ್ಬಾಸ್ ಅರಘ್ಚಿ ಮತ್ತು ಮುಖ್ಯ ಸಮಾಲೋಚಕ ಮೊಹಮ್ಮದ್ ಬಘರ್ ಘಾಲಿಬಾಫ್ ಟೆಹ್ರಾನ್ ಪರವಾಗಿ ಭಾಗವಹಿಸಿದ್ದಾರೆ. ಈ ಇಡೀ ಜಾಗತಿಕ ಬಿಕ್ಕಟ್ಟನ್ನು ಬಗೆಹರಿಸಲು ಪಾಕಿಸ್ತಾನ ಮತ್ತು ಕತಾರ್ ದೇಶಗಳು ಮಧ್ಯಸ್ಥಿಕೆ ವಹಿಸಿ ಮಾತುಕತೆಯನ್ನು ಮುನ್ನಡೆಸುತ್ತಿವೆ.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ