AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಹಾಯುದ್ಧದ ಭೀತಿ: ಇರಾನ್‌ನ ಮಕ್ಕಳ ಕ್ಯಾನ್ಸರ್ ಆಸ್ಪತ್ರೆ ಮೇಲೆ ಅಮೆರಿಕ ದಾಳಿ, MQ-9 ಡ್ರೋನ್ ಹೊಡೆದುರುಳಿಸಿದ ಇರಾನ್

ಪಶ್ಚಿಮ ಏಷ್ಯಾದಲ್ಲಿ ಅಮೆರಿಕ ಮತ್ತು ಇರಾನ್ ನಡುವಿನ ಮಿಲಿಟರಿ ಸಂಘರ್ಷ ತೀವ್ರಗೊಂಡಿದೆ. ಇರಾನ್‌ನ ಮಕ್ಕಳ ಕ್ಯಾನ್ಸರ್ ಆಸ್ಪತ್ರೆ ಮೇಲೆ ಅಮೆರಿಕ ಬಾಂಬ್ ದಾಳಿ ನಡೆಸಿದ್ದು, ಆಸ್ಪತ್ರೆ ಧ್ವಂಸಗೊಂಡಿದೆ. ಪ್ರತೀಕಾರವಾಗಿ ಇರಾನ್ ಅಮೆರಿಕದ MQ-9 ಡ್ರೋನ್ ಅನ್ನು ಹೊಡೆದುರುಳಿಸಿದೆ. ಹಾರ್ಮುಜ್ ಜಲಸಂಧಿ ಬಂದ್ ಮಾಡುವ ಇರಾನ್‌ನ ಬೆದರಿಕೆ, ಜಾಗತಿಕ ತೈಲ ಬೆಲೆ ಏರಿಕೆಗೆ ಕಾರಣವಾಗಿದೆ. ಇದು ದೊಡ್ಡ ಯುದ್ಧದ ಭೀತಿ ಸೃಷ್ಟಿಸಿದೆ.

ಮಹಾಯುದ್ಧದ ಭೀತಿ: ಇರಾನ್‌ನ ಮಕ್ಕಳ ಕ್ಯಾನ್ಸರ್ ಆಸ್ಪತ್ರೆ ಮೇಲೆ ಅಮೆರಿಕ  ದಾಳಿ, MQ-9 ಡ್ರೋನ್ ಹೊಡೆದುರುಳಿಸಿದ ಇರಾನ್
ಆಸ್ಪತ್ರೆ
ನಯನಾ ರಾಜೀವ್
|

Updated on: Jul 16, 2026 | 8:17 AM

Share

ಟೆಹ್ರಾನ್, ಜುಲೈ 16: ಪಶ್ಚಿಮ ಏಷ್ಯಾದಲ್ಲಿ ಅಮೆರಿಕ ಮತ್ತು ಇರಾನ್(Iran) ನಡುವಿನ ಮಿಲಿಟರಿ ಸಂಘರ್ಷವು ರಕ್ತಸಿಕ್ತ ಕ್ರಾಂತಿಗೆ ಕಾರಣವಾಗಿದೆ. ಕೇವಲ 24 ಗಂಟೆಗಳಲ್ಲಿ ಇರಾನ್ ಮೇಲೆ 3ನೇ ಬಾರಿಗೆ ಭೀಕರ ವಾಯುದಾಳಿ ನಡೆಸಿರುವ ಅಮೆರಿಕ ಪಡೆಗಳು, ಇರಾನ್ ಬಂದರುಗಳಿಗೆ ಕಠಿಣ ನೌಕಾ ದಿಗ್ಬಂಧನ ವಿಧಿಸಿವೆ. ಇದಕ್ಕೆ ಅತ್ಯಂತ ಕ್ರೂರವಾಗಿ ಪ್ರತಿಕ್ರಿಯಿಸಿರುವ ಇರಾನ್, ಜಾಗತಿಕ ತೈಲ ಮಾರುಕಟ್ಟೆಯ ಜೀವಾಳವಾಗಿರುವ ಹಾರ್ಮುಜ್ ಜಲಸಂಧಿಯನ್ನು ಸಂಪೂರ್ಣವಾಗಿ ಮುಚ್ಚಿಬಿಡುವುದಾಗಿ ಪಣತೊಟ್ಟಿದೆ. ಈ ಬೆನ್ನಲ್ಲೇ ಕಚ್ಚಾ ತೈಲ ಬೆಲೆಗಳು ಜಾಗತಿಕವಾಗಿ ಗಗನಕ್ಕೇರಿವೆ.

ಮಕ್ಕಳ ಕ್ಯಾನ್ಸರ್ ಆಸ್ಪತ್ರೆ ಧ್ವಂಸ: ರೋಗಿಗಳ ಕಣ್ಣೀರು

ಇರಾನ್‌ನ ಅಹ್ವಾಜ್ ನಗರದ ಮೇಲೆ ಅಮೆರಿಕ ನಡೆಸಿದ ವಾಯುದಾಳಿಯು ಇಡೀ ಮಾನವಕುಲವೇ ತಲೆತಗ್ಗಿಸುವಂತಹ ದುರಂತಕ್ಕೆ ಕಾರಣವಾಗಿದೆ. ಅಲ್ಲಿನ ಪ್ರಸಿದ್ಧ ‘ಶಾಹಿದ್ ಬಘೈ’ ಆಸ್ಪತ್ರೆಯ ಮೇಲೆ ಅಮೆರಿಕದ ಬಾಂಬ್‌ಗಳು ಬಿದ್ದಿದ್ದು, ಆಸ್ಪತ್ರೆಯ ಮಕ್ಕಳ ಕ್ಯಾನ್ಸರ್ ಚಿಕಿತ್ಸಾ ವಿಭಾಗ ಸಂಪೂರ್ಣ ಧ್ವಂಸಗೊಂಡಿದೆ. ಕೀಮೋಥೆರಪಿ ಚಿಕಿತ್ಸೆ ಪಡೆಯುತ್ತಿದ್ದ ಮಕ್ಕಳು ಹಾಗೂ ಗಂಭೀರ ಸ್ಥಿತಿಯಲ್ಲಿದ್ದ ರೋಗಿಗಳನ್ನು ಜೀವಭಯದಿಂದ ಬೇರೆಡೆಗೆ ಸ್ಥಳಾಂತರಿಸಲಾಗಿದೆ.

ಈ ಸರಣಿ ದಾಳಿಗಳಲ್ಲಿ ಇರಾನ್‌ನ ಇಡೀ ಸೇನಾ ಬ್ಯಾರಕ್‌ಗಳು ಧೂಳೀಪಟವಾಗಿದ್ದು, ಕನಿಷ್ಠ 7 ಸೈನಿಕರು ಸೇರಿ ಇದುವರೆಗೆ 35 ಕ್ಕೂ ಹೆಚ್ಚು ನಾಗರಿಕರು ಸಾವನ್ನಪ್ಪಿದ್ದಾರೆ ಮತ್ತು 300 ಕ್ಕೂ ಅಧಿಕ ಜನ ರಕ್ತಸಿಕ್ತವಾಗಿ ಗಾಯಗೊಂಡಿದ್ದಾರೆ. ಇರಾನ್‌ನ ಏಕೈಕ ನಾಗರಿಕ ಪರಮಾಣು ಸ್ಥಾವರವಿರುವ ಬುಶೆಹರ್ ಮೇಲೂ ಅಮೆರಿಕ ದಾಳಿ ನಡೆಸಿದೆ ಎಂದು ಇರಾನ್ ರಾಜ್ಯ ಮಾಧ್ಯಮಗಳು ಆಕ್ರೋಶ ವ್ಯಕ್ತಪಡಿಸಿವೆ.

ಅಮೆರಿಕದ 250 ಕೋಟಿ ರೂ. ಮೌಲ್ಯದ ‘MQ-9’ ಡ್ರೋನ್ ಧೂಳೀಪಟ

ಅಮೆರಿಕದ ವಾಯುದಾಳಿಗೆ ಇರಾನ್‌ನ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ ಅತ್ಯಂತ ಭೀಕರ ತಿರುಗೇಟು ನೀಡಿದೆ. ಅಮೆರಿಕ ಸೇನೆಯ ಹೆಮ್ಮೆಯ, ಜಗತ್ತಿನ ಅತ್ಯಂತ ಸುಧಾರಿತ ಹಾಗೂ ದುಬಾರಿ ಬೇಹುಗಾರಿಕಾ ಯುದ್ಧ ವಿಮಾನವಾದ MQ-9 ರೀಪರ್ ಡ್ರೋನ್ ಅನ್ನು ಇರಾನ್‌ನ ನೈಋತ್ಯ ನಗರವಾದ ಆಂಡಿಮೆಶ್ಕ್ ಆಕಾಶದಲ್ಲಿ ತನ್ನ ಹೊಸ ವಾಯು ರಕ್ಷಣಾ ವ್ಯವಸ್ಥೆಯ ಮೂಲಕ ಹೊಡೆದುರುಳಿಸಿದೆ. ಅಮೆರಿಕದ ಅತ್ಯಾಧುನಿಕ ಡ್ರೋನ್ ಅನ್ನು ನಾವೇ ಹೊಡೆದುರುಳಿಸಿದ್ದು ಎಂದು ಇರಾನ್ ಹೆಮ್ಮೆಯಿಂದ ಜಗತ್ತಿನೆದುರು ಘೋಷಿಸಿಕೊಂಡಿದೆ.

ಮತ್ತಷ್ಟು ಓದಿ: ಇರಾನ್ ಜಲಾಂತರ್ಗಾಮಿ ಕೇಂದ್ರದ ಮೇಲೆ ಅಮೆರಿಕದಿಂದ ಮೊದಲ ಬಾರಿ ಕಡಲ ಡ್ರೋನ್ ದಾಳಿ

ಅಲ್ಲದೆ, ಬಹ್ರೇನ್‌ನಲ್ಲಿರುವ ಅಮೆರಿಕದ ನೌಕಾಪಡೆಯ 5ನೇ ಫ್ಲೀಟ್ ಬೇಸ್ ಅನ್ನು ಗುರಿಯಾಗಿಸಿ ಇರಾನ್ ಸರಣಿ ಕ್ಷಿಪಣಿಗಳನ್ನು ಹಾರಿಸಿದ್ದು, ಅಲ್ಲಿ ಯುದ್ಧದ ಸೈರನ್‌ಗಳು ನಿರಂತರವಾಗಿ ಮೊಳಗುತ್ತಿವೆ.

ಸೌದಿ ಅರೇಬಿಯಾಕ್ಕೆ ಭಾರಿ ಆಫರ್: ಸೌದಿ ಅರೇಬಿಯಾಕ್ಕೆ ಬರೋಬ್ಬರಿ ಸುಮಾರು 16,000 ಕೋಟಿ ರೂ. ಕ್ಷಿಪಣಿ ವ್ಯವಸ್ಥೆಗಳು, ಸಿಡಿತಲೆಗಳು ಮತ್ತು ಲಾಂಚರ್‌ಗಳ ಮಾರಾಟಕ್ಕೆ ಯುಎಸ್ ಸ್ಟೇಟ್ ಡಿಪಾರ್ಟ್‌ಮೆಂಟ್ ತಕ್ಷಣದ ಅನುಮೋದನೆ ನೀಡಿದೆ.

ಕುವೈತ್‌ಗೆ ವಿಮಾನ ರಕ್ಷಣೆ: ಕುವೈತ್ ದೇಶಕ್ಕೆ ತನ್ನ C-17 ದೈತ್ಯ ಮಿಲಿಟರಿ ಸರಕು ಸಾಗಣೆ ವಿಮಾನಗಳ ಸುಸ್ಥಿರತೆಗಾಗಿ 484 ಮಿಲಿಯನ್ ಡಾಲರ್ಪ್ಯಾಕೇಜ್ ಅನ್ನು ಘೋಷಿಸಿದೆ.

ತೈಲ ಹಡಗಿನ ಮೇಲೆ ಹೆಲ್‌ಫೈರ್ ಕ್ಷಿಪಣಿ ದಾಳಿ

ಅಮೆರಿಕದ ಸೆಂಟ್ರಲ್ ಕಮಾಂಡ್ ಇರಾನ್‌ನ ಬಂದರುಗಳ ದಿಗ್ಬಂಧನವನ್ನು ಮುರಿಯಲು ಯತ್ನಿಸುತ್ತಿದ್ದ ‘ಎಂ/ಟಿ ಬೆಲ್ಮಾ’ ಎಂಬ ದೈತ್ಯ ತೈಲ ಟ್ಯಾಂಕರ್ ಹಡಗಿನ ಮೇಲೆ ಯುದ್ಧವಿಮಾನದ ಮೂಲಕ ಭೀಕರ ‘ಹೆಲ್‌ಫೈರ್’ ಕ್ಷಿಪಣಿಗಳನ್ನು ಹಾರಿಸಿ ಅದನ್ನು ಜಲಮಾರ್ಗದ ನಡುವೆಯೇ ನಿಷ್ಕ್ರಿಯಗೊಳಿಸಿದೆ.

ಇದರ ನಡುವೆಯೂ ಪೆನ್ಸಿಲ್ವೇನಿಯಾದ ರಕ್ಷಣಾ ಶೃಂಗಸಭೆಯಲ್ಲಿ ಮಾತನಾಡಿದ ಅಧ್ಯಕ್ಷ ಡೊನಾಲ್ಡ್ ಟ್ರಂಪ್, ನಮ್ಮ ದಾಳಿಗಳು ಇರಾನ್‌ಗೆ ಇಷ್ಟವಾಗುತ್ತಿಲ್ಲ, ಅವರು ಒಪ್ಪಂದಕ್ಕೆ ಬರಲು ಬಯಸುತ್ತಿದ್ದಾರೆ. ಅವರು ಮಾತುಕತೆಗೆ ಬರದಿದ್ದರೆ ಮುಂದಿನ ವಾರ ಅವರ ಇಡೀ ದೇಶದ ವಿದ್ಯುತ್ ಸ್ಥಾವರಗಳು ಮತ್ತು ಸೇತುವೆಗಳನ್ನು ಸಂಪೂರ್ಣವಾಗಿ ಕೆಡವಿಹಾಕಲಿದ್ದೇವೆ ಎಂದು ಮತ್ತೊಮ್ಮೆ ಎಚ್ಚರಿಸಿದ್ದಾರೆ.

ಸದ್ಯ ಜಾಗತಿಕ ತೈಲ ಸಾಗಣೆಯ ಶೇ. 20 ರಷ್ಟು ಭಾಗ ಹಾದುಹೋಗುವ ಹಾರ್ಮುಜ್ ಜಲಸಂಧಿ ಸಂಪೂರ್ಣ ಬಂದ್ ಆಗಿರುವುದರಿಂದ ಭಾರತ ಸೇರಿದಂತೆ ಇಡೀ ವಿಶ್ವದಲ್ಲಿ ಪೆಟ್ರೋಲ್, ಡೀಸೆಲ್ ಬೆಲೆಗಳು ತೀವ್ರವಾಗಿ ಏರಿಕೆಯಾಗುವ ಆತಂಕ ಎದುರಾಗಿದೆ.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ಸಚಿವ ಸ್ಥಾನಕ್ಕಾಗಿ ದೆಹಲಿಗೆ ದೌಡಾಯಿಸಿದ ಆಕಾಂಕ್ಷಿಗಳು
ಸಚಿವ ಸ್ಥಾನಕ್ಕಾಗಿ ದೆಹಲಿಗೆ ದೌಡಾಯಿಸಿದ ಆಕಾಂಕ್ಷಿಗಳು
ದೇವೇಗೌಡರ ಪತ್ನಿ ಚೆನ್ನಮ್ಮ ಆರೋಗ್ಯದಲ್ಲಿ ಏರುಪೇರು: ಆಸ್ಪತ್ರೆಗೆ ದಾಖಲು
ದೇವೇಗೌಡರ ಪತ್ನಿ ಚೆನ್ನಮ್ಮ ಆರೋಗ್ಯದಲ್ಲಿ ಏರುಪೇರು: ಆಸ್ಪತ್ರೆಗೆ ದಾಖಲು
ಮೇಷ ಮತ್ತು ವೃಷಭ ರಾಶಿಯವರಿಗೆ ಭಾರಿ ಧನಲಾಭದ ಯೋಗ
ಮೇಷ ಮತ್ತು ವೃಷಭ ರಾಶಿಯವರಿಗೆ ಭಾರಿ ಧನಲಾಭದ ಯೋಗ
ಸಚಿವ ಸಂಪುಟ ವಿಸ್ತರಣೆ ಜಟಾಪಟಿ: ಬಿಕೆ ಹರಿಪ್ರಸಾದ್ ಏನಂದ್ರು ನೋಡಿ​​
ಸಚಿವ ಸಂಪುಟ ವಿಸ್ತರಣೆ ಜಟಾಪಟಿ: ಬಿಕೆ ಹರಿಪ್ರಸಾದ್ ಏನಂದ್ರು ನೋಡಿ​​
ಬಿಗ್ ಬಾಸ್ ಬೆಡಗಿ ಮೋಕ್ಷಿತಾ ಪೈ ಪಾಲಿಗೆ ರಾಧಾ ಪಾತ್ರ ಒಲಿದಿದ್ದು ಹೇಗೆ?
ಬಿಗ್ ಬಾಸ್ ಬೆಡಗಿ ಮೋಕ್ಷಿತಾ ಪೈ ಪಾಲಿಗೆ ರಾಧಾ ಪಾತ್ರ ಒಲಿದಿದ್ದು ಹೇಗೆ?
ಚಿಕ್ಕಮಗಳೂರು: 60 ಅಡಿ ಆಳದ ಕೊಳವೆ ಬಾವಿಗೆ ಬಿದ್ದಿದ್ದ ಕಾರ್ಮಿಕನ ರಕ್ಷಣೆ
ಚಿಕ್ಕಮಗಳೂರು: 60 ಅಡಿ ಆಳದ ಕೊಳವೆ ಬಾವಿಗೆ ಬಿದ್ದಿದ್ದ ಕಾರ್ಮಿಕನ ರಕ್ಷಣೆ
ಸಂಪುಟ ವಿಸ್ತರಣೆ ಬಗ್ಗೆ ಸಿದ್ದರಾಮಯ್ಯ ಜೊತೆ ಡಿಕೆಶಿ ಸುದೀರ್ಘ ಚರ್ಚೆ
ಸಂಪುಟ ವಿಸ್ತರಣೆ ಬಗ್ಗೆ ಸಿದ್ದರಾಮಯ್ಯ ಜೊತೆ ಡಿಕೆಶಿ ಸುದೀರ್ಘ ಚರ್ಚೆ
ವೀಕೆಂಡ್‌ನಲ್ಲೂ ನಡೆಯಲಿದೆ ಮತದಾರರ ಪಟ್ಟಿ ಪರಿಷ್ಕರಣೆ ಅಭಿಯಾನ
ವೀಕೆಂಡ್‌ನಲ್ಲೂ ನಡೆಯಲಿದೆ ಮತದಾರರ ಪಟ್ಟಿ ಪರಿಷ್ಕರಣೆ ಅಭಿಯಾನ
ಸಿಎಂ ವಿಜಯ್​ಗೆ ಶಾಕ್; ಬಿಜೆಪಿಯಿಂದ ಟಿವಿಕೆ ನಾಯಕನ ಲಂಚದ ವಿಡಿಯೋ ಬಿಡುಗಡೆ
ಸಿಎಂ ವಿಜಯ್​ಗೆ ಶಾಕ್; ಬಿಜೆಪಿಯಿಂದ ಟಿವಿಕೆ ನಾಯಕನ ಲಂಚದ ವಿಡಿಯೋ ಬಿಡುಗಡೆ
ಸಿಎಂ ಸಭೆಗೆ ಗೈರಾದ ಬಗ್ಗೆ ಸಚಿವ ರಾಮಲಿಂಗಾರೆಡ್ಡಿ ಸ್ಪಷ್ಟನೆ
ಸಿಎಂ ಸಭೆಗೆ ಗೈರಾದ ಬಗ್ಗೆ ಸಚಿವ ರಾಮಲಿಂಗಾರೆಡ್ಡಿ ಸ್ಪಷ್ಟನೆ