Sign In

By signing in or creating an account, you agree with Associated Broadcasting Company's Terms & Conditions and Privacy Policy.

US Judge: ಶಾಲೆಯನ್ನು ಅರ್ಧಕ್ಕೆ ಬಿಟ್ಟು, ಬೀಡಿ ಕಟ್ಟುತ್ತಿದ್ದ ಕೇರಳದ ವ್ಯಕ್ತಿ ಇದೀಗ ಅಮೆರಿಕದಲ್ಲಿ ನ್ಯಾಯಾಧೀಶ

ಮನಸ್ಸಿದ್ದರೆ ಮಾರ್ಗ, ಸಾಧಿಸುವ ಛಲವೊಂದಿದ್ದರೆ ಯಾವುದೂ ಅಸಾಧ್ಯವಲ್ಲ ಎಂಬುದು ಮತ್ತೊಮ್ಮೆ ಸಾಬೀತಾಗಿದೆ. ಒಂದು ಸಮಯದಲ್ಲಿ ಕೇರಳದಲ್ಲಿ ಶಾಲೆಯನ್ನು ಅರ್ಧಕ್ಕೆ ಬಿಟ್ಟು, ಬೀಡಿ ಕಟ್ಟುತ್ತಿದ್ದ ಬಾಲಕನೊಬ್ಬ ಇದೀಗ ಅಮೆರಿಕದ ಟೆಕ್ಸಾಸ್​ನ ಜಿಲ್ಲಾ ನ್ಯಾಯಾಧೀಶರಾಗಿದ್ದು, ಎಲ್ಲರೂ ಬಾಯಿ ಮೇಲೆ ಬೆರಳಿಡುವಂತೆ ಮಾಡಿದೆ.

US Judge: ಶಾಲೆಯನ್ನು ಅರ್ಧಕ್ಕೆ ಬಿಟ್ಟು, ಬೀಡಿ ಕಟ್ಟುತ್ತಿದ್ದ ಕೇರಳದ ವ್ಯಕ್ತಿ ಇದೀಗ ಅಮೆರಿಕದಲ್ಲಿ ನ್ಯಾಯಾಧೀಶ
ಸುರೇಂದ್ರನ್Image Credit source: NDTV
Follow us
TV9 Web
| Updated By: ನಯನಾ ರಾಜೀವ್

Updated on:Jan 08, 2023 | 11:40 AM

ಮನಸ್ಸಿದ್ದರೆ ಮಾರ್ಗ, ಸಾಧಿಸುವ ಛಲವೊಂದಿದ್ದರೆ ಯಾವುದೂ ಅಸಾಧ್ಯವಲ್ಲ ಎಂಬುದು ಮತ್ತೊಮ್ಮೆ ಸಾಬೀತಾಗಿದೆ. ಒಂದು ಸಮಯದಲ್ಲಿ ಕೇರಳದಲ್ಲಿ ಶಾಲೆಯನ್ನು ಅರ್ಧಕ್ಕೆ ಬಿಟ್ಟು, ಬೀಡಿ ಕಟ್ಟುತ್ತಿದ್ದ ಬಾಲಕನೊಬ್ಬ ಇದೀಗ ಅಮೆರಿಕದ ಟೆಕ್ಸಾಸ್​ನ ಜಿಲ್ಲಾ ನ್ಯಾಯಾಧೀಶರಾಗಿದ್ದು, ಈ ಸಾಧನೆಯು ಎಲ್ಲರೂ ಬಾಯಿ ಮೇಲೆ ಬೆರಳಿಡುವಂತೆ ಮಾಡಿದೆ. ಅಮೆರಿಕದ ಟೆಕ್ಸಾಸ್​ನಲ್ಲಿ ಭಾರತೀಯ ಮೂಲದ ವಕೀಲ ಸುರೇಂದ್ರನ್ ಕೆ ಪಟ್ಟೆಲ್ ನ್ಯಾಯಾಧೀಶರಾಗಿದ್ದಾರೆ. ಜನವರಿ 1 ರಂದು ಟೆಕ್ಸಾಸ್​ನ ಫೋರ್ಟ್​ ಬೆಂಡ್ ಕೌಂಟಿಯಲ್ಲಿರುವ ನ್ಯಾಯಾಲಯದ ನ್ಯಾಯಾಧೀಶರಾಗಿ ನೇಮಕಗೊಂಡಿದ್ದಾರೆ.

ಕೇರಳದ ಕಾಸರಗೋಡಿನಲ್ಲಿ ದಿನಗೂಲಿ ನೌಕರರ ದಂಪತಿಗೆ ಜನಿಸಿದ್ದರು. ಶಾಲಾ, ಕಾಲೇಜು ದಿನಗಳಲ್ಲಿ ಪೋಷಕರಿಗೆ ಹೊರೆಯಾಗಬಾರದು ಎಂಬ ಕಾರಣಕ್ಕೆ ತಾನೂ ಕೆಲಸ ಮಾಡುತ್ತಿದ್ದರು. ಬಿಡಿ ಕಟ್ಟಿ ಜೀವನ ನಡೆಸುತ್ತಿದ್ದ ವ್ಯಕ್ತಿ ಇದೀಗ ನ್ಯಾಯಾಧೀಶರಾಗಿರುವುದು ಹೆಮ್ಮೆಯ ವಿಚಾರ.

ಅವರು 10ನೇ ತರಗತಿ ಬಳಿಕ ಶಿಕ್ಷಣಕ್ಕೆ ತೆರೆ ಎಳೆದು ಬೀಡಿ ಕಟ್ಟಲು ಆರಂಭಿಸಿದ್ದರು. ಆದರೆ ಆ ಕಠಿಣ ಸಂದರ್ಭವು ಅವರ ದೃಷ್ಟಿಕೋನವನ್ನು ಸಂಪೂರ್ಣವಾಗಿ ಬದಲಾಯಿಸಿತ್ತು. ಒಂದು ವರ್ಷದ ಬಳಿಕ ಮತ್ತೆ ಓದುವ ಬಯಕೆ ವ್ಯಕ್ತಪಡಿಸಿದ್ದರು. ಬಳಿಕ ಹಂತ ಹಂತವಾಗಿ ಬೆಳೆಯುತ್ತಾ ಇದೀಗ ಅಮೆರಿಕದಲ್ಲಿ ನ್ಯಾಯಾಧೀಶರಾಗಿದ್ದಾರೆ.

ಸುರೇಂದ್ರನ್ ಅವರು, ನಯನಾರ್ ಸ್ಮಾರಕ ಸರ್ಕಾರಿ ಕಾಲೇಜಿಗೆ ಸೇರಿದರೂ ಕೆಲಸವನ್ನು ಮುಂದುವರೆಸಬೇಕಾಯಿತು. ಇದರಿಂದ ಹಾಜರಾತಿಗೆ ತೊಂದರೆಯಾಗಿ ಅವರನ್ನು ಪರೀಕ್ಷೆಗೆ ಕೂರಲು ಬಿಡಲಿಲ್ಲವಂತೆ, ಆದರೆ ಪಟ್ಟೆಲ್ ಅವರು ವಕೀಲರಾಗಲು ಬಯಸಿದ್ದು, ತನಗೆ ಒಂದೇ ಒಂದು ಅವಕಾಶ ನೀಡುವಂತೆ ಬೇಡಿಕೊಂಡಿದ್ದರು.

ಪಟ್ಟೆಲ್ ಅವರು, 1995ರಲ್ಲಿ ಕಾನೂನು ಪದವಿ ಪಡೆದು, 1996ರಲ್ಲಿ ಕೇರಳದ ಹೊಸದುರ್ಗದಲ್ಲಿ ಪ್ರಾಕ್ಟೀಸ್ ಮಾಡಲು ಶುರುಮಾಡಿದ್ದರು. ಕ್ರಮೇಣವಾಗಿ ಪ್ರಸಿದ್ಧ ವಕೀಲರಾದರು. ಸುಮಾರು 1 ದಶಕದ ನಂತರ ಅವರು ಸುಪ್ರೀಂಕೋರ್ಟ್​ನಲ್ಲಿ ಪ್ರಾಕ್ಟೀಸ್ ಆರಂಭಿಸಿದ್ದರು.

2007ರಲ್ಲಿ ಅವರ ಕುಟುಂಬಕ್ಕೆ ಅಮೆರಿಕಕ್ಕೆ ಹೋಗುವ ಅವಕಾಶ ಸಿಕ್ಕಿತ್ತು, ಬಳಿಕ ನರ್ಸ್​ ಆಗಿದ್ದ ಅವರ ಪತ್ನಿಯನ್ನು ಅಮೆರಿಕದ ಪ್ರಮುಖ ವೈದ್ಯಕೀಯ ಸೌಲಭ್ಯವೊಂದರಲ್ಲಿ ಕೆಲಸ ಮಾಡಲು ಅವಕಾಶ ನೀಡಲಾಗಿತ್ತು.

ಅವರು ತಮ್ಮ ಮಗಳೊಂದಿಗೆ ಅಲ್ಲಿ ನೆಲೆಸಿದರು, ಅಮೆರಿಕಕ್ಕೆ ತೆರಳಿದ ಎರಡು ವರ್ಷಗಳ ನಂತರ, ಪಟ್ಟೆಲ್ ಟೆಕ್ಸಾಸ್​ ಬಾರ್ ಪರೀಕ್ಷೆಗೆ ಹಾಜರಾದರು. ಅವರು ತಮ್ಮ ಮೊದಲು ಪ್ರಯತ್ನದಲ್ಲಿ ಪಾಸ್ ಕೂಡ ಆದರು.

ನಾನು ಉತ್ತಮ ಸ್ಕೋರ್ ಮಾಡದಿದ್ದರೆ ಓದುವುದನ್ನೇ ನಿಲ್ಲಿಸುತ್ತೇನೆ ಎಂದು ಹೇಳಿದ್ದ ಅವರು, ಟಾಪರ್ ಆಗಿ ಹೊರಹೊಮ್ಮಿದ್ದರು. ಹೌಸ್ ಕೀಪಿಂಗ್ ಕೆಲಸ ಮಾಡುತ್ತಾ ಓದನ್ನು ಮುಂದುವರೆಸಿದ್ದರು.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 11:39 am, Sun, 8 January 23

ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಕಾರಿಗೆ ಲಾರಿ ಡಿಕ್ಕಿ, ವಿಡಿಯೋ ನೋಡಿ
ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಕಾರಿಗೆ ಲಾರಿ ಡಿಕ್ಕಿ, ವಿಡಿಯೋ ನೋಡಿ
ಉತ್ತರ ಕರ್ನಾಟಕದ ಹುಲಿಗೆ ಜೈ: ಹಂಪಿ ಉತ್ಸವದಲ್ಲಿ ಹನುಮಂತನಿಗೆ ಜೈಕಾರ
ಉತ್ತರ ಕರ್ನಾಟಕದ ಹುಲಿಗೆ ಜೈ: ಹಂಪಿ ಉತ್ಸವದಲ್ಲಿ ಹನುಮಂತನಿಗೆ ಜೈಕಾರ
ಶಿವಕುಮಾರ್ ಖಾಸಗಿ ಕಾರ್ಯಕ್ರಮದಲ್ಲಿ ಭಾಗಿಯಾದರೇನು ತಪ್ಪು? ಜಾರಕಿಹೊಳಿ
ಶಿವಕುಮಾರ್ ಖಾಸಗಿ ಕಾರ್ಯಕ್ರಮದಲ್ಲಿ ಭಾಗಿಯಾದರೇನು ತಪ್ಪು? ಜಾರಕಿಹೊಳಿ
ಜಮೀರ್ ಅಹ್ಮದ್ ಆಡುವ ಮಾತಿಗೆ ಯಾವುದೇ ಬೆಲೆ ಇಲ್ಲ: ಜಗದೀಶ್ ಶೆಟ್ಟರ್
ಜಮೀರ್ ಅಹ್ಮದ್ ಆಡುವ ಮಾತಿಗೆ ಯಾವುದೇ ಬೆಲೆ ಇಲ್ಲ: ಜಗದೀಶ್ ಶೆಟ್ಟರ್
ಪಕ್ಷದಲ್ಲಿ ವಾತಾವರಣ ತಿಳಿಯಾಗುತ್ತಿದೆ ಎಂದು ವಿಜಯೇಂದ್ರ ಹೇಳುವುದು ನಿಜವೇ?
ಪಕ್ಷದಲ್ಲಿ ವಾತಾವರಣ ತಿಳಿಯಾಗುತ್ತಿದೆ ಎಂದು ವಿಜಯೇಂದ್ರ ಹೇಳುವುದು ನಿಜವೇ?
ಚಾಮುಂಡೇಶ್ವರಿ ದೇವಾಲಯದ ಒಳಗೂ ಸುದೀಪ್ ಜತೆ ಸೆಲ್ಫಿಗೆ ಮುಗಿಬಿದ್ದ ಫ್ಯಾನ್ಸ್
ಚಾಮುಂಡೇಶ್ವರಿ ದೇವಾಲಯದ ಒಳಗೂ ಸುದೀಪ್ ಜತೆ ಸೆಲ್ಫಿಗೆ ಮುಗಿಬಿದ್ದ ಫ್ಯಾನ್ಸ್
ಸರ್ಕಾರಕ್ಕೆ ಹಿನ್ನಡೆಯಾಗಲಿ ಅಂತ ನಾವು ಯಾವತ್ತೂ ಬಯಸಲ್ಲ: ಯದುವೀರ್
ಸರ್ಕಾರಕ್ಕೆ ಹಿನ್ನಡೆಯಾಗಲಿ ಅಂತ ನಾವು ಯಾವತ್ತೂ ಬಯಸಲ್ಲ: ಯದುವೀರ್
ಕಡುಗೆಂಪಗಿರುವುದೆಲ್ಲ ತಿನ್ನಲು-ಯೋಗ್ಯ ಕಲ್ಲಂಗಡಿ ಹಣ್ಣಲ್ಲ!
ಕಡುಗೆಂಪಗಿರುವುದೆಲ್ಲ ತಿನ್ನಲು-ಯೋಗ್ಯ ಕಲ್ಲಂಗಡಿ ಹಣ್ಣಲ್ಲ!
ಮಾರ್ಚ್​ 22ರಂದು ಅಖಂಡ ಕರ್ನಾಟಕ ಬಂದ್​ಗೆ ಕರೆ: ಯಾರೆಲ್ಲಾ ಬೆಂಬಲ?
ಮಾರ್ಚ್​ 22ರಂದು ಅಖಂಡ ಕರ್ನಾಟಕ ಬಂದ್​ಗೆ ಕರೆ: ಯಾರೆಲ್ಲಾ ಬೆಂಬಲ?
ವಿಶ್ವವಿಖ್ಯಾತ ಹಂಪಿ ಉತ್ಸವ ಕಳೆದ ಸಲಕ್ಕಿಂತ ಅದ್ದೂರಿಯಾಗಿದೆ: ಜಮೀರ್ ಅಹ್ಮದ್
ವಿಶ್ವವಿಖ್ಯಾತ ಹಂಪಿ ಉತ್ಸವ ಕಳೆದ ಸಲಕ್ಕಿಂತ ಅದ್ದೂರಿಯಾಗಿದೆ: ಜಮೀರ್ ಅಹ್ಮದ್