AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತನಗಿಷ್ಟವಿಲ್ಲದ ಹೇರ್​ಕಟ್ ಮಾಡಿಸಿದ್ದಕ್ಕೆ ಪ್ರೇಯಸಿಯನ್ನು ಇರಿದು ಕೊಂದ ಪಾಗಲ್ ಪ್ರೇಮಿ

ಗೆಳತಿಯ ಹೊಸ ಹೇರ್​ಕಟ್​ ಅನ್ನು ಇಷ್ಟಪಡದ ಕಾರಣ ಅಮೆರಿಕದ ಮಹಿಳೆಯೊಬ್ಬರನ್ನು ಆಕೆಯ ಪ್ರೇಮಿ ಇರಿದು ಸಾಯಿಸಿದ್ದಾನೆ. ಪೆನ್ಸಿಲ್ವೇನಿಯಾದಲ್ಲಿ ಹೊಸ ಹೇರ್​ಕಟ್ ಮಾಡಿಕೊಂಡ 50 ವರ್ಷದ ಮಹಿಳೆಯನ್ನು ವ್ಯಕ್ತಿಯೊಬ್ಬ ಕೊಂದಿದ್ದಾನೆ.

ತನಗಿಷ್ಟವಿಲ್ಲದ ಹೇರ್​ಕಟ್ ಮಾಡಿಸಿದ್ದಕ್ಕೆ ಪ್ರೇಯಸಿಯನ್ನು ಇರಿದು ಕೊಂದ ಪಾಗಲ್ ಪ್ರೇಮಿ
ಬೆಂಜಮಿನ್ ಗುಯಲ್
ಸುಷ್ಮಾ ಚಕ್ರೆ
|

Updated on: Nov 07, 2024 | 9:15 PM

Share

ಪೆನ್ಸಿಲ್ವೇನಿಯಾದ ವ್ಯಕ್ತಿಯೊಬ್ಬ ತನಗೆ ಇಷ್ಟವಿಲ್ಲದ ಹೇರ್​ಕಟ್ ಮಾಡಿಕೊಂಡ ನಂತರ ತನ್ನ ಗೆಳತಿಯನ್ನು ಇರಿದು ಕೊಂದಿದ್ದಾನೆ. ರಕ್ತಸಿಕ್ತ ಚಾಕುವಿನ ಜೊತೆಗಿದ್ದ ಆತನನ್ನು ಘಟನಾ ಸ್ಥಳದಲ್ಲಿ ಬಂಧಿಸಲಾಯಿತು. ಹಿಂಸಾತ್ಮಕ ದಾಳಿಯಲ್ಲಿ ತನ್ನ ಗೆಳತಿಯನ್ನು ಮಾರಣಾಂತಿಕವಾಗಿ ಇರಿದ ನಂತರ ಪೆನ್ಸಿಲ್ವೇನಿಯಾದ ವ್ಯಕ್ತಿಯನ್ನು ಬಂಧಿಸಲಾಗಿದೆ.

ಬೆಂಜಮಿನ್ ಗುಯಲ್ ಎಂಬ 49 ವರ್ಷದ ವ್ಯಕ್ತಿ ತನ್ನ 50 ವರ್ಷದ ಗೆಳತಿ ತನಗಿಷ್ಟವಿಲ್ಲದ ಹೇರ್​ಕಟ್ ಮಾಡಿಸಿಕೊಂಡು ಬಂದಿದ್ದಕ್ಕೆ ಅಸಮಾಧಾನಗೊಂಡು ಆಕೆಯನ್ನು ಚಾಕುವಿನಿಂದ ಇರಿದು ಕೊಂದಿದ್ದಾನೆ. ತನ್ನ ತಾಯಿಯ ಹೊಸ ಹೇರ್​ಕಟ್ ಕಾರಣಕ್ಕೆ ಈ ಕೊಲೆಯಾಗಿದೆ ಎಂದು ಮೃತ ಮಹಿಳೆಯ ಮಗಳು ಪೊಲೀಸರಿಗೆ ತಿಳಿಸಿದ್ದಾರೆ.

ಇದನ್ನೂ ಓದಿ: ಡ್ರಮ್​ನಲ್ಲಿ ರಾಕೆಟ್ ಇಟ್ಟು ಪಟಾಕಿ ಸಿಡಿಸಿದ ಐಐಟಿ ವಿದ್ಯಾರ್ಥಿಗಳು; ಶಾಕಿಂಗ್ ವಿಡಿಯೋ ವೈರಲ್

ಈ ವೇಳೆ ಚಾಕುವಿನ ಇರಿತವನ್ನು ತಡೆಯಲೆತ್ನಿಸಿದ ಆ ಮಹಿಳೆಯ ಸಹೋದರರಿಗೂ ಆರೋಪಿ ಇರಿದಿದ್ದಾನೆ. ಬಳಿಕ ರಕ್ತಸಿಕ್ತವಾದ ಚಾಕುವಿನ ಜೊತೆಗೆ ಆರೋಪಿಯನ್ನು ಬಂಧಿಸಲಾಗಿದೆ. ಹೊಸ ಹೇರ್​ಕಟ್ ಮಾಡಿಸಿಕೊಂಡು ಬಂದಾಗ ಆಕೆಯನ್ನು ನೋಡಿದ ಆರೋಪಿ ಕೋಪಗೊಂಡಿದ್ದ. ಆ ಹೇರ್​ಕಟ್ ಬದಲಿಸಿಕೊಳ್ಳದಿದ್ದರೆ ಕೊಲ್ಲುವುದಾಗಿ ಬೆದರಿಕೆ ಹಾಕಿದ್ದ. ಇದರಿಂದ ಗಾಬರಿಯಾಗಿದ್ದ ಆ ಮಹಿಳೆ ಆತನಿಗೆ ಕಾಣದಂತೆ ಅಡಗಿದ್ದಳು. ಆದರೆ, ಆತ ಆಕೆಯನ್ನು ಹುಡುಕಿ ಕೊಂದಿದ್ದಾನೆ.

ಇನ್ನಷ್ಟು ಅಂತಾರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್