AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತನಗಿಷ್ಟವಿಲ್ಲದ ಹೇರ್​ಕಟ್ ಮಾಡಿಸಿದ್ದಕ್ಕೆ ಪ್ರೇಯಸಿಯನ್ನು ಇರಿದು ಕೊಂದ ಪಾಗಲ್ ಪ್ರೇಮಿ

ಗೆಳತಿಯ ಹೊಸ ಹೇರ್​ಕಟ್​ ಅನ್ನು ಇಷ್ಟಪಡದ ಕಾರಣ ಅಮೆರಿಕದ ಮಹಿಳೆಯೊಬ್ಬರನ್ನು ಆಕೆಯ ಪ್ರೇಮಿ ಇರಿದು ಸಾಯಿಸಿದ್ದಾನೆ. ಪೆನ್ಸಿಲ್ವೇನಿಯಾದಲ್ಲಿ ಹೊಸ ಹೇರ್​ಕಟ್ ಮಾಡಿಕೊಂಡ 50 ವರ್ಷದ ಮಹಿಳೆಯನ್ನು ವ್ಯಕ್ತಿಯೊಬ್ಬ ಕೊಂದಿದ್ದಾನೆ.

ತನಗಿಷ್ಟವಿಲ್ಲದ ಹೇರ್​ಕಟ್ ಮಾಡಿಸಿದ್ದಕ್ಕೆ ಪ್ರೇಯಸಿಯನ್ನು ಇರಿದು ಕೊಂದ ಪಾಗಲ್ ಪ್ರೇಮಿ
ಬೆಂಜಮಿನ್ ಗುಯಲ್
ಸುಷ್ಮಾ ಚಕ್ರೆ
|

Updated on: Nov 07, 2024 | 9:15 PM

Share

ಪೆನ್ಸಿಲ್ವೇನಿಯಾದ ವ್ಯಕ್ತಿಯೊಬ್ಬ ತನಗೆ ಇಷ್ಟವಿಲ್ಲದ ಹೇರ್​ಕಟ್ ಮಾಡಿಕೊಂಡ ನಂತರ ತನ್ನ ಗೆಳತಿಯನ್ನು ಇರಿದು ಕೊಂದಿದ್ದಾನೆ. ರಕ್ತಸಿಕ್ತ ಚಾಕುವಿನ ಜೊತೆಗಿದ್ದ ಆತನನ್ನು ಘಟನಾ ಸ್ಥಳದಲ್ಲಿ ಬಂಧಿಸಲಾಯಿತು. ಹಿಂಸಾತ್ಮಕ ದಾಳಿಯಲ್ಲಿ ತನ್ನ ಗೆಳತಿಯನ್ನು ಮಾರಣಾಂತಿಕವಾಗಿ ಇರಿದ ನಂತರ ಪೆನ್ಸಿಲ್ವೇನಿಯಾದ ವ್ಯಕ್ತಿಯನ್ನು ಬಂಧಿಸಲಾಗಿದೆ.

ಬೆಂಜಮಿನ್ ಗುಯಲ್ ಎಂಬ 49 ವರ್ಷದ ವ್ಯಕ್ತಿ ತನ್ನ 50 ವರ್ಷದ ಗೆಳತಿ ತನಗಿಷ್ಟವಿಲ್ಲದ ಹೇರ್​ಕಟ್ ಮಾಡಿಸಿಕೊಂಡು ಬಂದಿದ್ದಕ್ಕೆ ಅಸಮಾಧಾನಗೊಂಡು ಆಕೆಯನ್ನು ಚಾಕುವಿನಿಂದ ಇರಿದು ಕೊಂದಿದ್ದಾನೆ. ತನ್ನ ತಾಯಿಯ ಹೊಸ ಹೇರ್​ಕಟ್ ಕಾರಣಕ್ಕೆ ಈ ಕೊಲೆಯಾಗಿದೆ ಎಂದು ಮೃತ ಮಹಿಳೆಯ ಮಗಳು ಪೊಲೀಸರಿಗೆ ತಿಳಿಸಿದ್ದಾರೆ.

ಇದನ್ನೂ ಓದಿ: ಡ್ರಮ್​ನಲ್ಲಿ ರಾಕೆಟ್ ಇಟ್ಟು ಪಟಾಕಿ ಸಿಡಿಸಿದ ಐಐಟಿ ವಿದ್ಯಾರ್ಥಿಗಳು; ಶಾಕಿಂಗ್ ವಿಡಿಯೋ ವೈರಲ್

ಈ ವೇಳೆ ಚಾಕುವಿನ ಇರಿತವನ್ನು ತಡೆಯಲೆತ್ನಿಸಿದ ಆ ಮಹಿಳೆಯ ಸಹೋದರರಿಗೂ ಆರೋಪಿ ಇರಿದಿದ್ದಾನೆ. ಬಳಿಕ ರಕ್ತಸಿಕ್ತವಾದ ಚಾಕುವಿನ ಜೊತೆಗೆ ಆರೋಪಿಯನ್ನು ಬಂಧಿಸಲಾಗಿದೆ. ಹೊಸ ಹೇರ್​ಕಟ್ ಮಾಡಿಸಿಕೊಂಡು ಬಂದಾಗ ಆಕೆಯನ್ನು ನೋಡಿದ ಆರೋಪಿ ಕೋಪಗೊಂಡಿದ್ದ. ಆ ಹೇರ್​ಕಟ್ ಬದಲಿಸಿಕೊಳ್ಳದಿದ್ದರೆ ಕೊಲ್ಲುವುದಾಗಿ ಬೆದರಿಕೆ ಹಾಕಿದ್ದ. ಇದರಿಂದ ಗಾಬರಿಯಾಗಿದ್ದ ಆ ಮಹಿಳೆ ಆತನಿಗೆ ಕಾಣದಂತೆ ಅಡಗಿದ್ದಳು. ಆದರೆ, ಆತ ಆಕೆಯನ್ನು ಹುಡುಕಿ ಕೊಂದಿದ್ದಾನೆ.

ಇನ್ನಷ್ಟು ಅಂತಾರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು